Homeಅಂತರಾಷ್ಟ್ರೀಯಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಯುಎಸ್ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

- Advertisement -
- Advertisement -

ಟಿಕ್‌ಟಾಕ್ ಅಪ್ಲಿಕೇಷನ್ ನಿಷೇಧವನ್ನು ತಪ್ಪಿಸಲು ಟಿಕ್‌ಟಾಕ್ ಸಂಸ್ಥೆಯು ಅಮೇರಿಕಾ ಮೂಲದ ಹೂಡಿಕೆದಾರರಾದ ಜನರಲ್ ಅಟ್ಲಾಂಟಿಕ್ ಮತ್ತು ಸಿಕ್ವೊಯ ಕ್ಯಾಪಿಟಲ್‌ಗೆ ಹೆಚ್ಚಿನ ಪಾಲನ್ನು ಮಾರಾಟ ಮಾಡಬಹುದು ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ.

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಅಮೆರಿಕಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

ಟೈಗರ್ ಗ್ಲೋಬಲ್ ಮತ್ತು ಸಾಫ್ಟ್‌ಬ್ಯಾಂಕ್ ಅನ್ನು ಚೀನಾ ಒಡೆತನದ ಕಂಪನಿಯ ದೊಡ್ಡ ಹೂಡಿಕೆದಾರರು ಎಂದು ಪರಿಗಣಿಸಲಾಗುತ್ತದೆ.

“ಹೂಡಿಕೆದಾರರ ಬದಲಾವಣೆಯು ಅಪ್ಲಿಕೇಶನ್ ಅನ್ನು ಜಾಗತಿಕವಾಗಿ ಉಳಿಸಬಹುದು. ಅಮೇರಿಕಾ ಹೂಡಿಕೆದಾರರು ಅದರ ಕೆಲವು ಸ್ಪರ್ಧಾತ್ಮಕ ಪ್ಲಾಟ್‌ಫಾರ್ಮ್‌ಗಳಿಗೆ ನೇರ ಅಥವಾ ಪರೋಕ್ಷ ಸಂಪರ್ಕವನ್ನು ಹೊಂದಿರುವುದರಿಂದ ಇದು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅವಕಾಶಗಳನ್ನು ಪುನರುಜ್ಜೀವನಗೊಳಿಸಬಹುದು” ಎಂದು ಉದ್ಯಮದ ಮೂಲವೊಂದು ತಿಳಿಸಿದೆ.

ಟಿಕ್‌ಟಾಕ್ ಹೂಡಿಕೆದಾರರ ಎರಡೂ ಕಂಪನಿಗಳು ಒಂದು ರೀತಿಯಲ್ಲಿ ಆಯಾ ದೇಶಗಳಲ್ಲಿ ಮಾರುಕಟ್ಟೆ ಪಾಲನ್ನು ಪಡೆಯಲು ಟಿಕ್‌ಟಾಕ್‌ನೊಂದಿಗೆ ಸ್ಪರ್ಧಿಸುತ್ತಿವೆ. ಮಾಲೀಕತ್ವವನ್ನು ಅಮೇರಿಕಾ ಹೂಡಿಕೆದಾರರಿಗೆ ವರ್ಗಾಯಿಸಿದರೆ, ಅದು ಭಾರತದ ಕಿರು-ವಿಡಿಯೋ ವಿಭಾಗದಲ್ಲಿ ರಿಲಯನ್ಸ್ ಮತ್ತು ಅಮೇರಿಕಾ ಮಾರುಕಟ್ಟೆಯಲ್ಲಿ ಫೇಸ್‌ಬುಕ್ ಅಥವಾ ಇನ್‌ಸ್ಟಾಗ್ರಾಮ್ ಮಾರುಕಟ್ಟೆಯನ್ನು ಎತ್ತಿಹಿಡಿಯಬಹುದು.

ಮಾರುಕಟ್ಟೆಯ ಮೇಲೆ ಹಿಡಿತ ಸಾಧಿಸಲು ಹೂಡಿಕೆದಾರರು ಕೆಲವು ವಿಭಾಗಗಳಲ್ಲಿ ವಿಲೀನಗೊಳ್ಳುವಂತೆ ಒತ್ತಾಯಿಸಬಹುದು.

ನಿಷೇಧದ ನಂತರ, ಟಿಕ್‌ಟಾಕ್‌ ಚೀನಾ ಸರ್ಕಾರದೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಳ್ಳದಂತೆ ದೂರವಿತ್ತು. ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಅದು ಉತ್ತಮವಾಗಿ ಕಾರ್ಯನಿರ್ವಹಿಸುತತ್ತಿದೆ ಎಂದು ಭಾರತ ಸರ್ಕಾರಕ್ಕೆ ಭರವಸೆ ನೀಡಿತ್ತು.

ಆದಾಗ್ಯೂ, ಗಡಿ ಉದ್ವಿಗ್ನತೆ ಹೆಚ್ಚುತ್ತಿರುವಾಗ ಅಪ್ಲಿಕೇಷನ್ ಕುರಿತ ನಿಯಮಗಳನ್ನು ಸುಲಭಗೊಳಿಸುವಂತೆ  ಭಾರತ ಸರ್ಕಾರ ಪಟ್ಟುಹಿಡಿದಿದೆ.

ಭಾರತ ಸರ್ಕಾರ ಪ್ರತಿಕ್ರಿಯಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಉಲ್ಲಂಘನೆ ಕುರಿತು ಚೀನಾದ ಕಂಪನಿಗಳಿಗೆ 70 ಪ್ರಶ್ನೆಗಳನ್ನು ಕೇಳಿದೆ. ಪ್ರತಿಕ್ರಿಯಿಸಲು ನೀಡಲಾದ ಕಾಲಾವಧಿ ಈ ವಾರ ಕೊನೆಗೊಂಡಿದ್ದರೂ, ಕಂಪನಿಗಳು ಭಾರತ ಸರ್ಕಾರದೊಂದಿಗೆ ಸಭೆ ನಡೆಸುತ್ತಿದ್ದರೂ, ಈ ವಿಷಯವು ಇನ್ನೂ ಯಾವುದೇ ಮುನ್ನಡೆಯನ್ನೂ ಕಾಣದೇ ಹಾಗೇ ಉಳಿದಿದೆ.

ವಾಸ್ತವವಾಗಿ, ಜುಲೈ 21 ರಂದು Electronics and Information Technology ಸಚಿವಾಲಯವು ಚೀನಾದ ಸಂಸ್ಥೆಗಳಿಗೆ ಮತ್ತೊಂದು ಎಚ್ಚರಿಕೆ ನೀಡಿತು. ಇದು, ನಿಷೇಧಿತ ಅಪ್ಲಿಕೇಶನ್‌ಗಳ ಲಭ್ಯತೆ ಮತ್ತು ಕಾರ್ಯಾಚರಣೆಯು ನೇರವಾಗಿ ಅಥವಾ ಪರೋಕ್ಷವಾಗಿ ಐಟಿ ಕಾಯ್ದೆಯಡಿ ಅಪರಾಧವಾಗಿದೆ. ಹಾಗಾಗಿ ಕಾನೂನಿನ ಮೂಲಕ ವ್ಯವಹರಿಸುವಂತೆ ಕಟ್ಟುನಿಟ್ಟಾಗಿ ಹೇಳಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಟಿಕ್‌ಟಾಕ್ ಮೇಲೆ ಇದೇ ರೀತಿಯ ನಿಷೇಧವನ್ನು ತರಬೇಕೆಂದಿದ್ದಾರೆ ಎನ್ನಲಾಗಿದೆ. ಈ ಅಪ್ಲಿಕೇಶನ್ ಅಮೇರಿಕಾದಲ್ಲಿ ಸುಮಾರು 50 ಮಿಲಿಯನ್ ಬಳಕೆದಾರರನ್ನು, 800 ಮಿಲಿಯನ್ ಜಾಗತಿಕ ಬಳಕೆದಾರರನ್ನು ಮತ್ತು $ 100 ಬಿಲಿಯನ್ ಮೌಲ್ಯ ಹೊಂದಿದೆ.

ಕಳೆದ ವಾರ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಟ್ರಂಪ್ ಟಿಕ್‌ಟಾಕ್ ಅಮೆರಿಕನ್ ಬಳಕೆದಾರರ ಮೇಲೆ “ಬೇಹುಗಾರಿಕೆ” ನಡೆಸುತ್ತಿದೆ ಎಂದು ಆರೋಪಿಸಿದರು.

ಚೀನಾದ ಮಾಲೀಕತ್ವದಿಂದ ದೂರವಿರುವ ಕಾರ್ಯತಂತ್ರದ ಭಾಗವಾಗಿ ಟಿಕ್‌ಟಾಕ್ ತನ್ನ ಪ್ರಧಾನ ಕಛೇರಿಯನ್ನು ಲಂಡನ್‌ಗೆ ಸ್ಥಳಾಂತರಿಸುವ ಯೋಜನೆಯ ಬಗ್ಗೆ ವರದಿಯೊಂದು ಹೊರಬಿದ್ದಿದೆ.

ಇದರ ಮಧ್ಯೆ ಪಾಕಿಸ್ತಾನವು ಜನಪ್ರಿಯ ಆಟ PUBG ಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಜೊತೆಗೆ ಚೀನಾದ ಲೈವ್-ಸ್ಟ್ರೀಮಿಂಗ್ ಅಪ್ಲಿಕೇಶನ್ ಬಿಗೊ (Bigo)ವನ್ನು ನಿಷೇಧಿಸಿದೆ.


ಇದನ್ನೂ ಓದಿ: 59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....