Homeಅಂತರಾಷ್ಟ್ರೀಯಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಯುಎಸ್ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

- Advertisement -
- Advertisement -

ಟಿಕ್‌ಟಾಕ್ ಅಪ್ಲಿಕೇಷನ್ ನಿಷೇಧವನ್ನು ತಪ್ಪಿಸಲು ಟಿಕ್‌ಟಾಕ್ ಸಂಸ್ಥೆಯು ಅಮೇರಿಕಾ ಮೂಲದ ಹೂಡಿಕೆದಾರರಾದ ಜನರಲ್ ಅಟ್ಲಾಂಟಿಕ್ ಮತ್ತು ಸಿಕ್ವೊಯ ಕ್ಯಾಪಿಟಲ್‌ಗೆ ಹೆಚ್ಚಿನ ಪಾಲನ್ನು ಮಾರಾಟ ಮಾಡಬಹುದು ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ.

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಅಮೆರಿಕಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

ಟೈಗರ್ ಗ್ಲೋಬಲ್ ಮತ್ತು ಸಾಫ್ಟ್‌ಬ್ಯಾಂಕ್ ಅನ್ನು ಚೀನಾ ಒಡೆತನದ ಕಂಪನಿಯ ದೊಡ್ಡ ಹೂಡಿಕೆದಾರರು ಎಂದು ಪರಿಗಣಿಸಲಾಗುತ್ತದೆ.

“ಹೂಡಿಕೆದಾರರ ಬದಲಾವಣೆಯು ಅಪ್ಲಿಕೇಶನ್ ಅನ್ನು ಜಾಗತಿಕವಾಗಿ ಉಳಿಸಬಹುದು. ಅಮೇರಿಕಾ ಹೂಡಿಕೆದಾರರು ಅದರ ಕೆಲವು ಸ್ಪರ್ಧಾತ್ಮಕ ಪ್ಲಾಟ್‌ಫಾರ್ಮ್‌ಗಳಿಗೆ ನೇರ ಅಥವಾ ಪರೋಕ್ಷ ಸಂಪರ್ಕವನ್ನು ಹೊಂದಿರುವುದರಿಂದ ಇದು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅವಕಾಶಗಳನ್ನು ಪುನರುಜ್ಜೀವನಗೊಳಿಸಬಹುದು” ಎಂದು ಉದ್ಯಮದ ಮೂಲವೊಂದು ತಿಳಿಸಿದೆ.

ಟಿಕ್‌ಟಾಕ್ ಹೂಡಿಕೆದಾರರ ಎರಡೂ ಕಂಪನಿಗಳು ಒಂದು ರೀತಿಯಲ್ಲಿ ಆಯಾ ದೇಶಗಳಲ್ಲಿ ಮಾರುಕಟ್ಟೆ ಪಾಲನ್ನು ಪಡೆಯಲು ಟಿಕ್‌ಟಾಕ್‌ನೊಂದಿಗೆ ಸ್ಪರ್ಧಿಸುತ್ತಿವೆ. ಮಾಲೀಕತ್ವವನ್ನು ಅಮೇರಿಕಾ ಹೂಡಿಕೆದಾರರಿಗೆ ವರ್ಗಾಯಿಸಿದರೆ, ಅದು ಭಾರತದ ಕಿರು-ವಿಡಿಯೋ ವಿಭಾಗದಲ್ಲಿ ರಿಲಯನ್ಸ್ ಮತ್ತು ಅಮೇರಿಕಾ ಮಾರುಕಟ್ಟೆಯಲ್ಲಿ ಫೇಸ್‌ಬುಕ್ ಅಥವಾ ಇನ್‌ಸ್ಟಾಗ್ರಾಮ್ ಮಾರುಕಟ್ಟೆಯನ್ನು ಎತ್ತಿಹಿಡಿಯಬಹುದು.

ಮಾರುಕಟ್ಟೆಯ ಮೇಲೆ ಹಿಡಿತ ಸಾಧಿಸಲು ಹೂಡಿಕೆದಾರರು ಕೆಲವು ವಿಭಾಗಗಳಲ್ಲಿ ವಿಲೀನಗೊಳ್ಳುವಂತೆ ಒತ್ತಾಯಿಸಬಹುದು.

ನಿಷೇಧದ ನಂತರ, ಟಿಕ್‌ಟಾಕ್‌ ಚೀನಾ ಸರ್ಕಾರದೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಳ್ಳದಂತೆ ದೂರವಿತ್ತು. ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಅದು ಉತ್ತಮವಾಗಿ ಕಾರ್ಯನಿರ್ವಹಿಸುತತ್ತಿದೆ ಎಂದು ಭಾರತ ಸರ್ಕಾರಕ್ಕೆ ಭರವಸೆ ನೀಡಿತ್ತು.

ಆದಾಗ್ಯೂ, ಗಡಿ ಉದ್ವಿಗ್ನತೆ ಹೆಚ್ಚುತ್ತಿರುವಾಗ ಅಪ್ಲಿಕೇಷನ್ ಕುರಿತ ನಿಯಮಗಳನ್ನು ಸುಲಭಗೊಳಿಸುವಂತೆ  ಭಾರತ ಸರ್ಕಾರ ಪಟ್ಟುಹಿಡಿದಿದೆ.

ಭಾರತ ಸರ್ಕಾರ ಪ್ರತಿಕ್ರಿಯಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಉಲ್ಲಂಘನೆ ಕುರಿತು ಚೀನಾದ ಕಂಪನಿಗಳಿಗೆ 70 ಪ್ರಶ್ನೆಗಳನ್ನು ಕೇಳಿದೆ. ಪ್ರತಿಕ್ರಿಯಿಸಲು ನೀಡಲಾದ ಕಾಲಾವಧಿ ಈ ವಾರ ಕೊನೆಗೊಂಡಿದ್ದರೂ, ಕಂಪನಿಗಳು ಭಾರತ ಸರ್ಕಾರದೊಂದಿಗೆ ಸಭೆ ನಡೆಸುತ್ತಿದ್ದರೂ, ಈ ವಿಷಯವು ಇನ್ನೂ ಯಾವುದೇ ಮುನ್ನಡೆಯನ್ನೂ ಕಾಣದೇ ಹಾಗೇ ಉಳಿದಿದೆ.

ವಾಸ್ತವವಾಗಿ, ಜುಲೈ 21 ರಂದು Electronics and Information Technology ಸಚಿವಾಲಯವು ಚೀನಾದ ಸಂಸ್ಥೆಗಳಿಗೆ ಮತ್ತೊಂದು ಎಚ್ಚರಿಕೆ ನೀಡಿತು. ಇದು, ನಿಷೇಧಿತ ಅಪ್ಲಿಕೇಶನ್‌ಗಳ ಲಭ್ಯತೆ ಮತ್ತು ಕಾರ್ಯಾಚರಣೆಯು ನೇರವಾಗಿ ಅಥವಾ ಪರೋಕ್ಷವಾಗಿ ಐಟಿ ಕಾಯ್ದೆಯಡಿ ಅಪರಾಧವಾಗಿದೆ. ಹಾಗಾಗಿ ಕಾನೂನಿನ ಮೂಲಕ ವ್ಯವಹರಿಸುವಂತೆ ಕಟ್ಟುನಿಟ್ಟಾಗಿ ಹೇಳಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಟಿಕ್‌ಟಾಕ್ ಮೇಲೆ ಇದೇ ರೀತಿಯ ನಿಷೇಧವನ್ನು ತರಬೇಕೆಂದಿದ್ದಾರೆ ಎನ್ನಲಾಗಿದೆ. ಈ ಅಪ್ಲಿಕೇಶನ್ ಅಮೇರಿಕಾದಲ್ಲಿ ಸುಮಾರು 50 ಮಿಲಿಯನ್ ಬಳಕೆದಾರರನ್ನು, 800 ಮಿಲಿಯನ್ ಜಾಗತಿಕ ಬಳಕೆದಾರರನ್ನು ಮತ್ತು $ 100 ಬಿಲಿಯನ್ ಮೌಲ್ಯ ಹೊಂದಿದೆ.

ಕಳೆದ ವಾರ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಟ್ರಂಪ್ ಟಿಕ್‌ಟಾಕ್ ಅಮೆರಿಕನ್ ಬಳಕೆದಾರರ ಮೇಲೆ “ಬೇಹುಗಾರಿಕೆ” ನಡೆಸುತ್ತಿದೆ ಎಂದು ಆರೋಪಿಸಿದರು.

ಚೀನಾದ ಮಾಲೀಕತ್ವದಿಂದ ದೂರವಿರುವ ಕಾರ್ಯತಂತ್ರದ ಭಾಗವಾಗಿ ಟಿಕ್‌ಟಾಕ್ ತನ್ನ ಪ್ರಧಾನ ಕಛೇರಿಯನ್ನು ಲಂಡನ್‌ಗೆ ಸ್ಥಳಾಂತರಿಸುವ ಯೋಜನೆಯ ಬಗ್ಗೆ ವರದಿಯೊಂದು ಹೊರಬಿದ್ದಿದೆ.

ಇದರ ಮಧ್ಯೆ ಪಾಕಿಸ್ತಾನವು ಜನಪ್ರಿಯ ಆಟ PUBG ಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಜೊತೆಗೆ ಚೀನಾದ ಲೈವ್-ಸ್ಟ್ರೀಮಿಂಗ್ ಅಪ್ಲಿಕೇಶನ್ ಬಿಗೊ (Bigo)ವನ್ನು ನಿಷೇಧಿಸಿದೆ.


ಇದನ್ನೂ ಓದಿ: 59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...