Homeಅಂತರಾಷ್ಟ್ರೀಯಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಯುಎಸ್ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

- Advertisement -
- Advertisement -

ಟಿಕ್‌ಟಾಕ್ ಅಪ್ಲಿಕೇಷನ್ ನಿಷೇಧವನ್ನು ತಪ್ಪಿಸಲು ಟಿಕ್‌ಟಾಕ್ ಸಂಸ್ಥೆಯು ಅಮೇರಿಕಾ ಮೂಲದ ಹೂಡಿಕೆದಾರರಾದ ಜನರಲ್ ಅಟ್ಲಾಂಟಿಕ್ ಮತ್ತು ಸಿಕ್ವೊಯ ಕ್ಯಾಪಿಟಲ್‌ಗೆ ಹೆಚ್ಚಿನ ಪಾಲನ್ನು ಮಾರಾಟ ಮಾಡಬಹುದು ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ.

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಅಮೆರಿಕಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

ಟೈಗರ್ ಗ್ಲೋಬಲ್ ಮತ್ತು ಸಾಫ್ಟ್‌ಬ್ಯಾಂಕ್ ಅನ್ನು ಚೀನಾ ಒಡೆತನದ ಕಂಪನಿಯ ದೊಡ್ಡ ಹೂಡಿಕೆದಾರರು ಎಂದು ಪರಿಗಣಿಸಲಾಗುತ್ತದೆ.

“ಹೂಡಿಕೆದಾರರ ಬದಲಾವಣೆಯು ಅಪ್ಲಿಕೇಶನ್ ಅನ್ನು ಜಾಗತಿಕವಾಗಿ ಉಳಿಸಬಹುದು. ಅಮೇರಿಕಾ ಹೂಡಿಕೆದಾರರು ಅದರ ಕೆಲವು ಸ್ಪರ್ಧಾತ್ಮಕ ಪ್ಲಾಟ್‌ಫಾರ್ಮ್‌ಗಳಿಗೆ ನೇರ ಅಥವಾ ಪರೋಕ್ಷ ಸಂಪರ್ಕವನ್ನು ಹೊಂದಿರುವುದರಿಂದ ಇದು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅವಕಾಶಗಳನ್ನು ಪುನರುಜ್ಜೀವನಗೊಳಿಸಬಹುದು” ಎಂದು ಉದ್ಯಮದ ಮೂಲವೊಂದು ತಿಳಿಸಿದೆ.

ಟಿಕ್‌ಟಾಕ್ ಹೂಡಿಕೆದಾರರ ಎರಡೂ ಕಂಪನಿಗಳು ಒಂದು ರೀತಿಯಲ್ಲಿ ಆಯಾ ದೇಶಗಳಲ್ಲಿ ಮಾರುಕಟ್ಟೆ ಪಾಲನ್ನು ಪಡೆಯಲು ಟಿಕ್‌ಟಾಕ್‌ನೊಂದಿಗೆ ಸ್ಪರ್ಧಿಸುತ್ತಿವೆ. ಮಾಲೀಕತ್ವವನ್ನು ಅಮೇರಿಕಾ ಹೂಡಿಕೆದಾರರಿಗೆ ವರ್ಗಾಯಿಸಿದರೆ, ಅದು ಭಾರತದ ಕಿರು-ವಿಡಿಯೋ ವಿಭಾಗದಲ್ಲಿ ರಿಲಯನ್ಸ್ ಮತ್ತು ಅಮೇರಿಕಾ ಮಾರುಕಟ್ಟೆಯಲ್ಲಿ ಫೇಸ್‌ಬುಕ್ ಅಥವಾ ಇನ್‌ಸ್ಟಾಗ್ರಾಮ್ ಮಾರುಕಟ್ಟೆಯನ್ನು ಎತ್ತಿಹಿಡಿಯಬಹುದು.

ಮಾರುಕಟ್ಟೆಯ ಮೇಲೆ ಹಿಡಿತ ಸಾಧಿಸಲು ಹೂಡಿಕೆದಾರರು ಕೆಲವು ವಿಭಾಗಗಳಲ್ಲಿ ವಿಲೀನಗೊಳ್ಳುವಂತೆ ಒತ್ತಾಯಿಸಬಹುದು.

ನಿಷೇಧದ ನಂತರ, ಟಿಕ್‌ಟಾಕ್‌ ಚೀನಾ ಸರ್ಕಾರದೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಳ್ಳದಂತೆ ದೂರವಿತ್ತು. ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಅದು ಉತ್ತಮವಾಗಿ ಕಾರ್ಯನಿರ್ವಹಿಸುತತ್ತಿದೆ ಎಂದು ಭಾರತ ಸರ್ಕಾರಕ್ಕೆ ಭರವಸೆ ನೀಡಿತ್ತು.

ಆದಾಗ್ಯೂ, ಗಡಿ ಉದ್ವಿಗ್ನತೆ ಹೆಚ್ಚುತ್ತಿರುವಾಗ ಅಪ್ಲಿಕೇಷನ್ ಕುರಿತ ನಿಯಮಗಳನ್ನು ಸುಲಭಗೊಳಿಸುವಂತೆ  ಭಾರತ ಸರ್ಕಾರ ಪಟ್ಟುಹಿಡಿದಿದೆ.

ಭಾರತ ಸರ್ಕಾರ ಪ್ರತಿಕ್ರಿಯಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಉಲ್ಲಂಘನೆ ಕುರಿತು ಚೀನಾದ ಕಂಪನಿಗಳಿಗೆ 70 ಪ್ರಶ್ನೆಗಳನ್ನು ಕೇಳಿದೆ. ಪ್ರತಿಕ್ರಿಯಿಸಲು ನೀಡಲಾದ ಕಾಲಾವಧಿ ಈ ವಾರ ಕೊನೆಗೊಂಡಿದ್ದರೂ, ಕಂಪನಿಗಳು ಭಾರತ ಸರ್ಕಾರದೊಂದಿಗೆ ಸಭೆ ನಡೆಸುತ್ತಿದ್ದರೂ, ಈ ವಿಷಯವು ಇನ್ನೂ ಯಾವುದೇ ಮುನ್ನಡೆಯನ್ನೂ ಕಾಣದೇ ಹಾಗೇ ಉಳಿದಿದೆ.

ವಾಸ್ತವವಾಗಿ, ಜುಲೈ 21 ರಂದು Electronics and Information Technology ಸಚಿವಾಲಯವು ಚೀನಾದ ಸಂಸ್ಥೆಗಳಿಗೆ ಮತ್ತೊಂದು ಎಚ್ಚರಿಕೆ ನೀಡಿತು. ಇದು, ನಿಷೇಧಿತ ಅಪ್ಲಿಕೇಶನ್‌ಗಳ ಲಭ್ಯತೆ ಮತ್ತು ಕಾರ್ಯಾಚರಣೆಯು ನೇರವಾಗಿ ಅಥವಾ ಪರೋಕ್ಷವಾಗಿ ಐಟಿ ಕಾಯ್ದೆಯಡಿ ಅಪರಾಧವಾಗಿದೆ. ಹಾಗಾಗಿ ಕಾನೂನಿನ ಮೂಲಕ ವ್ಯವಹರಿಸುವಂತೆ ಕಟ್ಟುನಿಟ್ಟಾಗಿ ಹೇಳಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಟಿಕ್‌ಟಾಕ್ ಮೇಲೆ ಇದೇ ರೀತಿಯ ನಿಷೇಧವನ್ನು ತರಬೇಕೆಂದಿದ್ದಾರೆ ಎನ್ನಲಾಗಿದೆ. ಈ ಅಪ್ಲಿಕೇಶನ್ ಅಮೇರಿಕಾದಲ್ಲಿ ಸುಮಾರು 50 ಮಿಲಿಯನ್ ಬಳಕೆದಾರರನ್ನು, 800 ಮಿಲಿಯನ್ ಜಾಗತಿಕ ಬಳಕೆದಾರರನ್ನು ಮತ್ತು $ 100 ಬಿಲಿಯನ್ ಮೌಲ್ಯ ಹೊಂದಿದೆ.

ಕಳೆದ ವಾರ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಟ್ರಂಪ್ ಟಿಕ್‌ಟಾಕ್ ಅಮೆರಿಕನ್ ಬಳಕೆದಾರರ ಮೇಲೆ “ಬೇಹುಗಾರಿಕೆ” ನಡೆಸುತ್ತಿದೆ ಎಂದು ಆರೋಪಿಸಿದರು.

ಚೀನಾದ ಮಾಲೀಕತ್ವದಿಂದ ದೂರವಿರುವ ಕಾರ್ಯತಂತ್ರದ ಭಾಗವಾಗಿ ಟಿಕ್‌ಟಾಕ್ ತನ್ನ ಪ್ರಧಾನ ಕಛೇರಿಯನ್ನು ಲಂಡನ್‌ಗೆ ಸ್ಥಳಾಂತರಿಸುವ ಯೋಜನೆಯ ಬಗ್ಗೆ ವರದಿಯೊಂದು ಹೊರಬಿದ್ದಿದೆ.

ಇದರ ಮಧ್ಯೆ ಪಾಕಿಸ್ತಾನವು ಜನಪ್ರಿಯ ಆಟ PUBG ಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಜೊತೆಗೆ ಚೀನಾದ ಲೈವ್-ಸ್ಟ್ರೀಮಿಂಗ್ ಅಪ್ಲಿಕೇಶನ್ ಬಿಗೊ (Bigo)ವನ್ನು ನಿಷೇಧಿಸಿದೆ.


ಇದನ್ನೂ ಓದಿ: 59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...