Homeಅಂತರಾಷ್ಟ್ರೀಯಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಯುಎಸ್ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

- Advertisement -
- Advertisement -

ಟಿಕ್‌ಟಾಕ್ ಅಪ್ಲಿಕೇಷನ್ ನಿಷೇಧವನ್ನು ತಪ್ಪಿಸಲು ಟಿಕ್‌ಟಾಕ್ ಸಂಸ್ಥೆಯು ಅಮೇರಿಕಾ ಮೂಲದ ಹೂಡಿಕೆದಾರರಾದ ಜನರಲ್ ಅಟ್ಲಾಂಟಿಕ್ ಮತ್ತು ಸಿಕ್ವೊಯ ಕ್ಯಾಪಿಟಲ್‌ಗೆ ಹೆಚ್ಚಿನ ಪಾಲನ್ನು ಮಾರಾಟ ಮಾಡಬಹುದು ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ.

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಅಮೆರಿಕಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

ಟೈಗರ್ ಗ್ಲೋಬಲ್ ಮತ್ತು ಸಾಫ್ಟ್‌ಬ್ಯಾಂಕ್ ಅನ್ನು ಚೀನಾ ಒಡೆತನದ ಕಂಪನಿಯ ದೊಡ್ಡ ಹೂಡಿಕೆದಾರರು ಎಂದು ಪರಿಗಣಿಸಲಾಗುತ್ತದೆ.

“ಹೂಡಿಕೆದಾರರ ಬದಲಾವಣೆಯು ಅಪ್ಲಿಕೇಶನ್ ಅನ್ನು ಜಾಗತಿಕವಾಗಿ ಉಳಿಸಬಹುದು. ಅಮೇರಿಕಾ ಹೂಡಿಕೆದಾರರು ಅದರ ಕೆಲವು ಸ್ಪರ್ಧಾತ್ಮಕ ಪ್ಲಾಟ್‌ಫಾರ್ಮ್‌ಗಳಿಗೆ ನೇರ ಅಥವಾ ಪರೋಕ್ಷ ಸಂಪರ್ಕವನ್ನು ಹೊಂದಿರುವುದರಿಂದ ಇದು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅವಕಾಶಗಳನ್ನು ಪುನರುಜ್ಜೀವನಗೊಳಿಸಬಹುದು” ಎಂದು ಉದ್ಯಮದ ಮೂಲವೊಂದು ತಿಳಿಸಿದೆ.

ಟಿಕ್‌ಟಾಕ್ ಹೂಡಿಕೆದಾರರ ಎರಡೂ ಕಂಪನಿಗಳು ಒಂದು ರೀತಿಯಲ್ಲಿ ಆಯಾ ದೇಶಗಳಲ್ಲಿ ಮಾರುಕಟ್ಟೆ ಪಾಲನ್ನು ಪಡೆಯಲು ಟಿಕ್‌ಟಾಕ್‌ನೊಂದಿಗೆ ಸ್ಪರ್ಧಿಸುತ್ತಿವೆ. ಮಾಲೀಕತ್ವವನ್ನು ಅಮೇರಿಕಾ ಹೂಡಿಕೆದಾರರಿಗೆ ವರ್ಗಾಯಿಸಿದರೆ, ಅದು ಭಾರತದ ಕಿರು-ವಿಡಿಯೋ ವಿಭಾಗದಲ್ಲಿ ರಿಲಯನ್ಸ್ ಮತ್ತು ಅಮೇರಿಕಾ ಮಾರುಕಟ್ಟೆಯಲ್ಲಿ ಫೇಸ್‌ಬುಕ್ ಅಥವಾ ಇನ್‌ಸ್ಟಾಗ್ರಾಮ್ ಮಾರುಕಟ್ಟೆಯನ್ನು ಎತ್ತಿಹಿಡಿಯಬಹುದು.

ಮಾರುಕಟ್ಟೆಯ ಮೇಲೆ ಹಿಡಿತ ಸಾಧಿಸಲು ಹೂಡಿಕೆದಾರರು ಕೆಲವು ವಿಭಾಗಗಳಲ್ಲಿ ವಿಲೀನಗೊಳ್ಳುವಂತೆ ಒತ್ತಾಯಿಸಬಹುದು.

ನಿಷೇಧದ ನಂತರ, ಟಿಕ್‌ಟಾಕ್‌ ಚೀನಾ ಸರ್ಕಾರದೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಳ್ಳದಂತೆ ದೂರವಿತ್ತು. ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಅದು ಉತ್ತಮವಾಗಿ ಕಾರ್ಯನಿರ್ವಹಿಸುತತ್ತಿದೆ ಎಂದು ಭಾರತ ಸರ್ಕಾರಕ್ಕೆ ಭರವಸೆ ನೀಡಿತ್ತು.

ಆದಾಗ್ಯೂ, ಗಡಿ ಉದ್ವಿಗ್ನತೆ ಹೆಚ್ಚುತ್ತಿರುವಾಗ ಅಪ್ಲಿಕೇಷನ್ ಕುರಿತ ನಿಯಮಗಳನ್ನು ಸುಲಭಗೊಳಿಸುವಂತೆ  ಭಾರತ ಸರ್ಕಾರ ಪಟ್ಟುಹಿಡಿದಿದೆ.

ಭಾರತ ಸರ್ಕಾರ ಪ್ರತಿಕ್ರಿಯಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಉಲ್ಲಂಘನೆ ಕುರಿತು ಚೀನಾದ ಕಂಪನಿಗಳಿಗೆ 70 ಪ್ರಶ್ನೆಗಳನ್ನು ಕೇಳಿದೆ. ಪ್ರತಿಕ್ರಿಯಿಸಲು ನೀಡಲಾದ ಕಾಲಾವಧಿ ಈ ವಾರ ಕೊನೆಗೊಂಡಿದ್ದರೂ, ಕಂಪನಿಗಳು ಭಾರತ ಸರ್ಕಾರದೊಂದಿಗೆ ಸಭೆ ನಡೆಸುತ್ತಿದ್ದರೂ, ಈ ವಿಷಯವು ಇನ್ನೂ ಯಾವುದೇ ಮುನ್ನಡೆಯನ್ನೂ ಕಾಣದೇ ಹಾಗೇ ಉಳಿದಿದೆ.

ವಾಸ್ತವವಾಗಿ, ಜುಲೈ 21 ರಂದು Electronics and Information Technology ಸಚಿವಾಲಯವು ಚೀನಾದ ಸಂಸ್ಥೆಗಳಿಗೆ ಮತ್ತೊಂದು ಎಚ್ಚರಿಕೆ ನೀಡಿತು. ಇದು, ನಿಷೇಧಿತ ಅಪ್ಲಿಕೇಶನ್‌ಗಳ ಲಭ್ಯತೆ ಮತ್ತು ಕಾರ್ಯಾಚರಣೆಯು ನೇರವಾಗಿ ಅಥವಾ ಪರೋಕ್ಷವಾಗಿ ಐಟಿ ಕಾಯ್ದೆಯಡಿ ಅಪರಾಧವಾಗಿದೆ. ಹಾಗಾಗಿ ಕಾನೂನಿನ ಮೂಲಕ ವ್ಯವಹರಿಸುವಂತೆ ಕಟ್ಟುನಿಟ್ಟಾಗಿ ಹೇಳಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಟಿಕ್‌ಟಾಕ್ ಮೇಲೆ ಇದೇ ರೀತಿಯ ನಿಷೇಧವನ್ನು ತರಬೇಕೆಂದಿದ್ದಾರೆ ಎನ್ನಲಾಗಿದೆ. ಈ ಅಪ್ಲಿಕೇಶನ್ ಅಮೇರಿಕಾದಲ್ಲಿ ಸುಮಾರು 50 ಮಿಲಿಯನ್ ಬಳಕೆದಾರರನ್ನು, 800 ಮಿಲಿಯನ್ ಜಾಗತಿಕ ಬಳಕೆದಾರರನ್ನು ಮತ್ತು $ 100 ಬಿಲಿಯನ್ ಮೌಲ್ಯ ಹೊಂದಿದೆ.

ಕಳೆದ ವಾರ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಟ್ರಂಪ್ ಟಿಕ್‌ಟಾಕ್ ಅಮೆರಿಕನ್ ಬಳಕೆದಾರರ ಮೇಲೆ “ಬೇಹುಗಾರಿಕೆ” ನಡೆಸುತ್ತಿದೆ ಎಂದು ಆರೋಪಿಸಿದರು.

ಚೀನಾದ ಮಾಲೀಕತ್ವದಿಂದ ದೂರವಿರುವ ಕಾರ್ಯತಂತ್ರದ ಭಾಗವಾಗಿ ಟಿಕ್‌ಟಾಕ್ ತನ್ನ ಪ್ರಧಾನ ಕಛೇರಿಯನ್ನು ಲಂಡನ್‌ಗೆ ಸ್ಥಳಾಂತರಿಸುವ ಯೋಜನೆಯ ಬಗ್ಗೆ ವರದಿಯೊಂದು ಹೊರಬಿದ್ದಿದೆ.

ಇದರ ಮಧ್ಯೆ ಪಾಕಿಸ್ತಾನವು ಜನಪ್ರಿಯ ಆಟ PUBG ಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಜೊತೆಗೆ ಚೀನಾದ ಲೈವ್-ಸ್ಟ್ರೀಮಿಂಗ್ ಅಪ್ಲಿಕೇಶನ್ ಬಿಗೊ (Bigo)ವನ್ನು ನಿಷೇಧಿಸಿದೆ.


ಇದನ್ನೂ ಓದಿ: 59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...