Homeಕರ್ನಾಟಕಹುಲಿ ಸಂರಕ್ಷಕ ಡಿವಿ ಗಿರೀಶ್‌‌ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ; ಘಟನೆ ಕ್ಯಾಮರಾದಲ್ಲಿ ಸೆರೆ

ಹುಲಿ ಸಂರಕ್ಷಕ ಡಿವಿ ಗಿರೀಶ್‌‌ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ; ಘಟನೆ ಕ್ಯಾಮರಾದಲ್ಲಿ ಸೆರೆ

- Advertisement -
- Advertisement -

ಪ್ರಖ್ಯಾತ ವನ್ಯಜೀವಿ ಕಾರ್ಯಕರ್ತ ಡಿವಿ ಗಿರೀಶ್‌ ಮತ್ತು ಅವರ ಸ್ನೇಹಿತರ ಮೇಲೆ ಆಗಸ್ಟ್ 30 ರಂದು ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಶಾಂತವೇರಿಯಲ್ಲಿ ಕುಡಿದ ಅಮಲಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಿರೀಶ್ ಹಾಗೂ ಅವರ ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಮೀಸಲು ಅರಣ್ಯದಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಮೇಲೆ ಈ ದಾಳಿ ನಡೆಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ನಾಲ್ಕು ಜನರು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಚಿಕ್ಕಮಗಳೂರು ಎಸ್‌ಪಿ ಅಕ್ಷಯ್ ಎಂಎಚ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್‌ ಹೈಕೋರ್ಟ್ ವಿವಾದಾತ್ಮಕ ನಿಲುವು

ಡಿವಿ ಗಿರೀಶ್‌ ಅವರು ವೈಲ್ಡ್ ಕ್ಯಾಟ್-ಸಿ ಎಂಬ ಎನ್‌ಜಿಒದ ಸಂಚಾಲಕರಾಗಿದ್ದು ಭದ್ರಾ ಹುಲಿ ಸಂರಕ್ಷಿತ ಪ್ರದೇಶವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು ಪ್ರತಿಷ್ಠಿತ ಆರ್‌ಬಿಎಸ್ ‘ಹುಲಿಯನ್ನು ರಕ್ಷಿಸಿ’ ಪ್ರಶಸ್ತಿಯನ್ನು ಪಡೆದಿದ್ದಾರೆ. ಅವರು ತನ್ನ ಸ್ನೇಹಿತರು ಮತ್ತು ಸ್ನೇಹಿತನ ಮಗಳೊಂದಿಗೆ ಕೆಮ್ಮನಗುಂಡಿ ಬಳಿಯ ಎಸ್ಟೇಟ್‌ನಿಂದ ಶಾಂತವೇರಿಯ ಕಡೆಗೆ ಜೀಪಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದಾರೆ.

ಶಾಂತವೇರಿಯಲ್ಲಿ, ಮದ್ಯಪಾನ ಮಾಡಿದ್ದ ಎಂಟು ಮಂದಿ ಯುವಕರು ಗಿರೀಶ್‌ ಅವರೊಂದಿಗೆ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಬಗ್ಗೆ ಅಸಭ್ಯವಾದ ಮಾತುಗಳನ್ನು ಆಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಗಿರೀಶ್‌ ಮತ್ತು ಅವರ ಸ್ನೇಹಿತ ಯುವಕರಿಗೆ ತಾಕೀತು ಮಾಡಿ ಅವರನ್ನು ಅಲ್ಲಿಂದ ಓಡಿಸಿದ್ದರು.

ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಂತರ ಆರೋಪಿಗಳು ತಮ್ಮ ಬೈಕ್‌ಗಳ ಮೂಲಕ ಗಿರೀಶ್‌ ಅವರು ಪ್ರಯಾಣಿಸುತ್ತಿದ್ದ ಜೀಪ್ ಅನ್ನು ಹಿಂಬಾಲಿಸಿ, ಅವರನ್ನು ತಡೆದು, ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಅವರನ್ನು ಹೊರಗೆಳೆದು ಹಲ್ಲೆ ಕೂಡಾ ಮಾಡಿದ್ದಾರೆ. ಹಲ್ಲೆ ನಡೆಸಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಿಡಿಯೊದಲ್ಲಿ ಆರೋಪಿಗಳು ಗಿರೀಶ್‌ ಮತ್ತು ಅವರ ಸ್ನೇಹಿತರ ಮೇಲೆ ಹಲ್ಲೆ ನಡೆಸುವುದನ್ನು ಕಾಣಬಹುದಾಗಿದೆ. ಅವರ ಮೇಲೆ ಹಲ್ಲೆ ಇನ್ನೂ ಹೆಚ್ಚಾಗುತ್ತಿದ್ದಾಗ ಸ್ಥಳೀಯರು ಮಧ್ಯಪ್ರವೇಶಿಸಿ ತಡೆದಿದ್ದಾರೆ. ಹಲ್ಲೆಯಿಂದಾಗಿ ಗಿರೀಶ್ ಮತ್ತು ಅವರ ಸ್ನೇಹಿತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

“ಆರೋಪಿಗಳು ನೆರೆಯ ಗ್ರಾಮದವರಾಗಿದ್ದಾರೆ. ಐಪಿಸಿಯ ಸೆಕ್ಷನ್‌ಗಳ ಹೊರತಾಗಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ 12 (ಲೈಂಗಿಕ ಉದ್ದೇಶದಿಂದ ವರ್ತಿಸುವುದು) ಮತ್ತು 18 (ಅಪರಾಧ ಮಾಡುವ ಪ್ರಯತ್ನ) ಅಡಿಯಲ್ಲಿ ಎಂಟು ಜನರ ವಿರುದ್ಧ  ಪ್ರಕರಣ ದಾಖಲಿಸಲಾಗಿದೆ” ಎಂದು ಚಿಕ್ಕಮಗಳೂರು ಎಸ್‌ಪಿ ಅಕ್ಷಯ್‌ ಎಂಎಚ್‌‌ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....