Homeಮುಖಪುಟಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ...

ಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ 5 ದಿನಗಳ ಗಡುವು

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕಳೆದ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪ್ರತಿಭಟನಾಕಾರರತ್ತ ತಿರುಗಿಯೂ ನೋಡುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸಿರುವ ಕ್ರೀಡಾಪಟುಗಳು, ಪ್ರತಿಭಟನೆಯ ಭಾಗವಾಗಿ ಒಲಿಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಬಂದಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿದ್ದಾರೆ.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದರು.

ಈ ಕುಸ್ತಿಪಟುಗಳು ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಭಾನುವಾರ ಸಂಸತ್‌ ಭವನಕ್ಕೆ ತೆರಳಿ ‘ಮಹಿಳಾ ಮಹಾ ಪಂಚಾಯತ್’ ನಡೆಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಮಾರ್ಗ ಮಧ್ಯೆಯೇ ತಡೆದು, ಪದಕ ವಿಜೇತ ಕ್ರೀಡಾಪುಗಳನ್ನು ದಾರಿಯಲ್ಲಿ ಎಳೆದಾಡಿ ಬಹಳ ಕೆಟ್ಟದಾಗಿ ನಡೆಸಿಕೊಂಡರು. ಅಷ್ಟೇ ಅಲ್ಲದೇ ಕ್ರೀಡಾಪಟುಗಳ ವಿರುದ್ಧ ಕೇಸ್‌ಗಳನ್ನು ಹಾಕಿ ಕೆಲ ಕಾಲ ಬಂಧನ ಕೂಡ ಮಾಡಲಾಯಿತು. ಆನಂತರ ಪೊಲೀಸರು ಅವರಿಗೆ ಜಂತ‌ ಮಂತರ್‌ಗೆ ತೆರಳಲು ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ: ಮೆಡಲ್‌ಗಳನ್ನು ಗಂಗಾ ನದಿಗೆ ಎಸೆದು, ಆಮರಣಾಂತ ಉಪವಾಸ ಕೂರುತ್ತೇವೆ: ಕುಸ್ತಿಪಟು ಸಾಕ್ಷಿ ಮಲಿಕ್

‘ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ನಮ್ಮ ಹೋರಾಟವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ’ ಎಂದು ಆರೋಪಿಸಿದ್ದ ಪ್ರತಿಭಟನಕಾರರು, ತಮ್ಮ ಸಾಧನೆಗೆ ಸಂದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕುತ್ತೇವೆ. ಬಳಿಕ ಇಂಡಿಯಾ ಗೇಟ್ ಬಳಿ ಆಮರಣ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದರು.

2016ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಈ ಬಗ್ಗೆ ಟ್ವಿಟ್ ಮಾಡಿದ್ದರು. ಇತರ ಕುಸ್ತಿಪಟುಗಳು ಈ ಟ್ವಿಟ್ ಅನ್ನು ಹಂಚಿಕೊಂಡಿದ್ದರು.

”ನಾವು ಗೆದ್ದಿಕೊಂಡಿರುವ ಈ ಪದಕಗಳು ಗಂಗೆಯಷ್ಟೇ ಪವಿತ್ರವಾಗಿವೆ” ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಸಾಕ್ಷಿ ಮಲಿಕ್ ಟ್ವೀಟ್‌ನಲ್ಲಿ ಏನು ಹೇಳಿದ್ದಾರೆ?

”ಈ ಪದಕಗಳು ಇಡೀ ದೇಶದ ಪಾಲಿಗೂ ಪವಿತ್ರವಾಗಿವೆ. ಆದರೆ, ತಪ್ಪು ಎಸಗಿರುವ ವ್ಯಕ್ತಿಯ ಪರವಾಗಿ ನಿಲ್ಲುತ್ತಿರುವ ವ್ಯವಸ್ಥೆಯೊಂದರ ಮುಖವಾಡವಾದಂತೆ ಈ ಪದಕಗಳನ್ನು ಬಳಸುವ ಬದಲು ಅವುಗಳನ್ನು ಕೊರಳಲ್ಲಿ ಹಾಕುವ ಬದಲು ಪವಿತ್ರವಾದ ಗಂಗಾ ನದಿಯೇ ಹೆಚ್ಚು ಸೂಕ್ತವಾದ ಸ್ಥಳ” ಎಂದು ತಿಳಿಸಿದ್ದಾರೆ.

”ದೇಶಕ್ಕಾಗಿ ಹುತಾತ್ಮರಾದವರ ಸ್ಮರಣೆಗಾಗಿ ಇಂಡಿಯಾ ಗೇಟ್ ನಿರ್ಮಿಸಲಾಗಿದೆ. ಆ ಹುತಾತ್ಮರಷ್ಟು ನಾವು ಪೂಜನೀಯರಲ್ಲ. ಆದರೆ, ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾಗ, ನಮ್ಮ ಯೋಧರಷ್ಟೇ ನಾವೂ ಭಾವುಕರಾಗಿದ್ದೆವು” ಎಂದಿದ್ದಾರೆ.

”ನಮಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸುವ ಬದಲು, ವ್ಯವಸ್ಥೆಯು ಸಂತ್ರಸ್ತರನ್ನೇ ಹೆದರಿಸಲು ಮತ್ತು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ’ ಎಂದೂ ಹೇಳಿದ್ದಾರೆ.

ಕುಸ್ತಿಪಟುಗಳಿಗೆ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುವ ಅವಕಾಶ ನೀಡಲ್ಲ ಎಂದ ಪೊಲೀಸರು

”ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ. ಪ್ರತಿಭಟನೆ ನಡೆಸಲು ರಾಷ್ಟ್ರೀಯ ಸ್ಮಾರಕವು ಪ್ರತಿಭಟನೆ ನಡೆಸುವಂತಹ ಸ್ಥಳವಲ್ಲ. ಧರಣಿ ನಡೆಸಲು ಬೇರೆ ಸ್ಥಳದ ಬಗ್ಗೆ ಮಾಹಿತಿ ನೀಡಲಾಗುವುದು” ಎಂದು ಪೊಲೀಸ್ ಮೂಲಗಳು ಮಂಗಳವಾರ ಹೇಳಿವೆ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿದ್ದು, ”ಇಂಡಿಯಾ ಗೇಟ್ ಬಳಿ ಧರಣಿ ನಡೆಸುವುದಕ್ಕೆ ಅನುಮತಿ ಕೋರಿ ಅವರು (ಕುಸ್ತಿಪಟುಗಳು) ಈ ವರೆಗೆ ನಮಗೆ ಮನವಿ ಸಲ್ಲಿಸಿಲ್ಲ. ಪ್ರತಿಭಟನೆ ನಡೆಸುವ ಸಂಬಂಧ ಅವರು ಡಿಸಿಪಿಗೆ ಮನವಿ ಸಲ್ಲಿಸಿದ ನಂತರ ನಿರ್ಧಾರ ತಿಳಿಸಲಾಗುವುದು” ಎಂದು ಹೇಳಿದ್ದಾರೆ.

ರಾಮಲೀಲಾ ಮೈದಾನ ಮತ್ತು ಬುರಾರಿಯಲ್ಲಿ ಪ್ರತಿಭಟನೆ ನಡೆಸುವಂತೆ ದೆಹಲಿ ಪೊಲೀಸರು ಸಲಹೆ ನೀಡುವ ಸಾಧ್ಯತೆ ಇದೆ ಎಂದು ಇವೇ ಮೂಲಗಳು ಹೇಳಿವೆ.

ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ದೂರು:

”ಮಹಿಳಾ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಾಗಾಗಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಷ್ಟ್ರೀ ಯ ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ದೂರು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...