Homeಮುಖಪುಟಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ...

ಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ 5 ದಿನಗಳ ಗಡುವು

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕಳೆದ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪ್ರತಿಭಟನಾಕಾರರತ್ತ ತಿರುಗಿಯೂ ನೋಡುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸಿರುವ ಕ್ರೀಡಾಪಟುಗಳು, ಪ್ರತಿಭಟನೆಯ ಭಾಗವಾಗಿ ಒಲಿಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಬಂದಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿದ್ದಾರೆ.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದರು.

ಈ ಕುಸ್ತಿಪಟುಗಳು ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಭಾನುವಾರ ಸಂಸತ್‌ ಭವನಕ್ಕೆ ತೆರಳಿ ‘ಮಹಿಳಾ ಮಹಾ ಪಂಚಾಯತ್’ ನಡೆಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಮಾರ್ಗ ಮಧ್ಯೆಯೇ ತಡೆದು, ಪದಕ ವಿಜೇತ ಕ್ರೀಡಾಪುಗಳನ್ನು ದಾರಿಯಲ್ಲಿ ಎಳೆದಾಡಿ ಬಹಳ ಕೆಟ್ಟದಾಗಿ ನಡೆಸಿಕೊಂಡರು. ಅಷ್ಟೇ ಅಲ್ಲದೇ ಕ್ರೀಡಾಪಟುಗಳ ವಿರುದ್ಧ ಕೇಸ್‌ಗಳನ್ನು ಹಾಕಿ ಕೆಲ ಕಾಲ ಬಂಧನ ಕೂಡ ಮಾಡಲಾಯಿತು. ಆನಂತರ ಪೊಲೀಸರು ಅವರಿಗೆ ಜಂತ‌ ಮಂತರ್‌ಗೆ ತೆರಳಲು ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ: ಮೆಡಲ್‌ಗಳನ್ನು ಗಂಗಾ ನದಿಗೆ ಎಸೆದು, ಆಮರಣಾಂತ ಉಪವಾಸ ಕೂರುತ್ತೇವೆ: ಕುಸ್ತಿಪಟು ಸಾಕ್ಷಿ ಮಲಿಕ್

‘ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ನಮ್ಮ ಹೋರಾಟವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ’ ಎಂದು ಆರೋಪಿಸಿದ್ದ ಪ್ರತಿಭಟನಕಾರರು, ತಮ್ಮ ಸಾಧನೆಗೆ ಸಂದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕುತ್ತೇವೆ. ಬಳಿಕ ಇಂಡಿಯಾ ಗೇಟ್ ಬಳಿ ಆಮರಣ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದರು.

2016ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಈ ಬಗ್ಗೆ ಟ್ವಿಟ್ ಮಾಡಿದ್ದರು. ಇತರ ಕುಸ್ತಿಪಟುಗಳು ಈ ಟ್ವಿಟ್ ಅನ್ನು ಹಂಚಿಕೊಂಡಿದ್ದರು.

”ನಾವು ಗೆದ್ದಿಕೊಂಡಿರುವ ಈ ಪದಕಗಳು ಗಂಗೆಯಷ್ಟೇ ಪವಿತ್ರವಾಗಿವೆ” ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಸಾಕ್ಷಿ ಮಲಿಕ್ ಟ್ವೀಟ್‌ನಲ್ಲಿ ಏನು ಹೇಳಿದ್ದಾರೆ?

”ಈ ಪದಕಗಳು ಇಡೀ ದೇಶದ ಪಾಲಿಗೂ ಪವಿತ್ರವಾಗಿವೆ. ಆದರೆ, ತಪ್ಪು ಎಸಗಿರುವ ವ್ಯಕ್ತಿಯ ಪರವಾಗಿ ನಿಲ್ಲುತ್ತಿರುವ ವ್ಯವಸ್ಥೆಯೊಂದರ ಮುಖವಾಡವಾದಂತೆ ಈ ಪದಕಗಳನ್ನು ಬಳಸುವ ಬದಲು ಅವುಗಳನ್ನು ಕೊರಳಲ್ಲಿ ಹಾಕುವ ಬದಲು ಪವಿತ್ರವಾದ ಗಂಗಾ ನದಿಯೇ ಹೆಚ್ಚು ಸೂಕ್ತವಾದ ಸ್ಥಳ” ಎಂದು ತಿಳಿಸಿದ್ದಾರೆ.

”ದೇಶಕ್ಕಾಗಿ ಹುತಾತ್ಮರಾದವರ ಸ್ಮರಣೆಗಾಗಿ ಇಂಡಿಯಾ ಗೇಟ್ ನಿರ್ಮಿಸಲಾಗಿದೆ. ಆ ಹುತಾತ್ಮರಷ್ಟು ನಾವು ಪೂಜನೀಯರಲ್ಲ. ಆದರೆ, ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾಗ, ನಮ್ಮ ಯೋಧರಷ್ಟೇ ನಾವೂ ಭಾವುಕರಾಗಿದ್ದೆವು” ಎಂದಿದ್ದಾರೆ.

”ನಮಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸುವ ಬದಲು, ವ್ಯವಸ್ಥೆಯು ಸಂತ್ರಸ್ತರನ್ನೇ ಹೆದರಿಸಲು ಮತ್ತು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ’ ಎಂದೂ ಹೇಳಿದ್ದಾರೆ.

ಕುಸ್ತಿಪಟುಗಳಿಗೆ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುವ ಅವಕಾಶ ನೀಡಲ್ಲ ಎಂದ ಪೊಲೀಸರು

”ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ. ಪ್ರತಿಭಟನೆ ನಡೆಸಲು ರಾಷ್ಟ್ರೀಯ ಸ್ಮಾರಕವು ಪ್ರತಿಭಟನೆ ನಡೆಸುವಂತಹ ಸ್ಥಳವಲ್ಲ. ಧರಣಿ ನಡೆಸಲು ಬೇರೆ ಸ್ಥಳದ ಬಗ್ಗೆ ಮಾಹಿತಿ ನೀಡಲಾಗುವುದು” ಎಂದು ಪೊಲೀಸ್ ಮೂಲಗಳು ಮಂಗಳವಾರ ಹೇಳಿವೆ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿದ್ದು, ”ಇಂಡಿಯಾ ಗೇಟ್ ಬಳಿ ಧರಣಿ ನಡೆಸುವುದಕ್ಕೆ ಅನುಮತಿ ಕೋರಿ ಅವರು (ಕುಸ್ತಿಪಟುಗಳು) ಈ ವರೆಗೆ ನಮಗೆ ಮನವಿ ಸಲ್ಲಿಸಿಲ್ಲ. ಪ್ರತಿಭಟನೆ ನಡೆಸುವ ಸಂಬಂಧ ಅವರು ಡಿಸಿಪಿಗೆ ಮನವಿ ಸಲ್ಲಿಸಿದ ನಂತರ ನಿರ್ಧಾರ ತಿಳಿಸಲಾಗುವುದು” ಎಂದು ಹೇಳಿದ್ದಾರೆ.

ರಾಮಲೀಲಾ ಮೈದಾನ ಮತ್ತು ಬುರಾರಿಯಲ್ಲಿ ಪ್ರತಿಭಟನೆ ನಡೆಸುವಂತೆ ದೆಹಲಿ ಪೊಲೀಸರು ಸಲಹೆ ನೀಡುವ ಸಾಧ್ಯತೆ ಇದೆ ಎಂದು ಇವೇ ಮೂಲಗಳು ಹೇಳಿವೆ.

ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ದೂರು:

”ಮಹಿಳಾ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಾಗಾಗಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಷ್ಟ್ರೀ ಯ ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ದೂರು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...