Homeಮುಖಪುಟಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ...

ಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ 5 ದಿನಗಳ ಗಡುವು

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕಳೆದ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪ್ರತಿಭಟನಾಕಾರರತ್ತ ತಿರುಗಿಯೂ ನೋಡುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸಿರುವ ಕ್ರೀಡಾಪಟುಗಳು, ಪ್ರತಿಭಟನೆಯ ಭಾಗವಾಗಿ ಒಲಿಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಬಂದಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿದ್ದಾರೆ.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದರು.

ಈ ಕುಸ್ತಿಪಟುಗಳು ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಭಾನುವಾರ ಸಂಸತ್‌ ಭವನಕ್ಕೆ ತೆರಳಿ ‘ಮಹಿಳಾ ಮಹಾ ಪಂಚಾಯತ್’ ನಡೆಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಮಾರ್ಗ ಮಧ್ಯೆಯೇ ತಡೆದು, ಪದಕ ವಿಜೇತ ಕ್ರೀಡಾಪುಗಳನ್ನು ದಾರಿಯಲ್ಲಿ ಎಳೆದಾಡಿ ಬಹಳ ಕೆಟ್ಟದಾಗಿ ನಡೆಸಿಕೊಂಡರು. ಅಷ್ಟೇ ಅಲ್ಲದೇ ಕ್ರೀಡಾಪಟುಗಳ ವಿರುದ್ಧ ಕೇಸ್‌ಗಳನ್ನು ಹಾಕಿ ಕೆಲ ಕಾಲ ಬಂಧನ ಕೂಡ ಮಾಡಲಾಯಿತು. ಆನಂತರ ಪೊಲೀಸರು ಅವರಿಗೆ ಜಂತ‌ ಮಂತರ್‌ಗೆ ತೆರಳಲು ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ: ಮೆಡಲ್‌ಗಳನ್ನು ಗಂಗಾ ನದಿಗೆ ಎಸೆದು, ಆಮರಣಾಂತ ಉಪವಾಸ ಕೂರುತ್ತೇವೆ: ಕುಸ್ತಿಪಟು ಸಾಕ್ಷಿ ಮಲಿಕ್

‘ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ನಮ್ಮ ಹೋರಾಟವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ’ ಎಂದು ಆರೋಪಿಸಿದ್ದ ಪ್ರತಿಭಟನಕಾರರು, ತಮ್ಮ ಸಾಧನೆಗೆ ಸಂದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕುತ್ತೇವೆ. ಬಳಿಕ ಇಂಡಿಯಾ ಗೇಟ್ ಬಳಿ ಆಮರಣ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದರು.

2016ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಈ ಬಗ್ಗೆ ಟ್ವಿಟ್ ಮಾಡಿದ್ದರು. ಇತರ ಕುಸ್ತಿಪಟುಗಳು ಈ ಟ್ವಿಟ್ ಅನ್ನು ಹಂಚಿಕೊಂಡಿದ್ದರು.

”ನಾವು ಗೆದ್ದಿಕೊಂಡಿರುವ ಈ ಪದಕಗಳು ಗಂಗೆಯಷ್ಟೇ ಪವಿತ್ರವಾಗಿವೆ” ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಸಾಕ್ಷಿ ಮಲಿಕ್ ಟ್ವೀಟ್‌ನಲ್ಲಿ ಏನು ಹೇಳಿದ್ದಾರೆ?

”ಈ ಪದಕಗಳು ಇಡೀ ದೇಶದ ಪಾಲಿಗೂ ಪವಿತ್ರವಾಗಿವೆ. ಆದರೆ, ತಪ್ಪು ಎಸಗಿರುವ ವ್ಯಕ್ತಿಯ ಪರವಾಗಿ ನಿಲ್ಲುತ್ತಿರುವ ವ್ಯವಸ್ಥೆಯೊಂದರ ಮುಖವಾಡವಾದಂತೆ ಈ ಪದಕಗಳನ್ನು ಬಳಸುವ ಬದಲು ಅವುಗಳನ್ನು ಕೊರಳಲ್ಲಿ ಹಾಕುವ ಬದಲು ಪವಿತ್ರವಾದ ಗಂಗಾ ನದಿಯೇ ಹೆಚ್ಚು ಸೂಕ್ತವಾದ ಸ್ಥಳ” ಎಂದು ತಿಳಿಸಿದ್ದಾರೆ.

”ದೇಶಕ್ಕಾಗಿ ಹುತಾತ್ಮರಾದವರ ಸ್ಮರಣೆಗಾಗಿ ಇಂಡಿಯಾ ಗೇಟ್ ನಿರ್ಮಿಸಲಾಗಿದೆ. ಆ ಹುತಾತ್ಮರಷ್ಟು ನಾವು ಪೂಜನೀಯರಲ್ಲ. ಆದರೆ, ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾಗ, ನಮ್ಮ ಯೋಧರಷ್ಟೇ ನಾವೂ ಭಾವುಕರಾಗಿದ್ದೆವು” ಎಂದಿದ್ದಾರೆ.

”ನಮಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸುವ ಬದಲು, ವ್ಯವಸ್ಥೆಯು ಸಂತ್ರಸ್ತರನ್ನೇ ಹೆದರಿಸಲು ಮತ್ತು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ’ ಎಂದೂ ಹೇಳಿದ್ದಾರೆ.

ಕುಸ್ತಿಪಟುಗಳಿಗೆ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುವ ಅವಕಾಶ ನೀಡಲ್ಲ ಎಂದ ಪೊಲೀಸರು

”ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ. ಪ್ರತಿಭಟನೆ ನಡೆಸಲು ರಾಷ್ಟ್ರೀಯ ಸ್ಮಾರಕವು ಪ್ರತಿಭಟನೆ ನಡೆಸುವಂತಹ ಸ್ಥಳವಲ್ಲ. ಧರಣಿ ನಡೆಸಲು ಬೇರೆ ಸ್ಥಳದ ಬಗ್ಗೆ ಮಾಹಿತಿ ನೀಡಲಾಗುವುದು” ಎಂದು ಪೊಲೀಸ್ ಮೂಲಗಳು ಮಂಗಳವಾರ ಹೇಳಿವೆ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿದ್ದು, ”ಇಂಡಿಯಾ ಗೇಟ್ ಬಳಿ ಧರಣಿ ನಡೆಸುವುದಕ್ಕೆ ಅನುಮತಿ ಕೋರಿ ಅವರು (ಕುಸ್ತಿಪಟುಗಳು) ಈ ವರೆಗೆ ನಮಗೆ ಮನವಿ ಸಲ್ಲಿಸಿಲ್ಲ. ಪ್ರತಿಭಟನೆ ನಡೆಸುವ ಸಂಬಂಧ ಅವರು ಡಿಸಿಪಿಗೆ ಮನವಿ ಸಲ್ಲಿಸಿದ ನಂತರ ನಿರ್ಧಾರ ತಿಳಿಸಲಾಗುವುದು” ಎಂದು ಹೇಳಿದ್ದಾರೆ.

ರಾಮಲೀಲಾ ಮೈದಾನ ಮತ್ತು ಬುರಾರಿಯಲ್ಲಿ ಪ್ರತಿಭಟನೆ ನಡೆಸುವಂತೆ ದೆಹಲಿ ಪೊಲೀಸರು ಸಲಹೆ ನೀಡುವ ಸಾಧ್ಯತೆ ಇದೆ ಎಂದು ಇವೇ ಮೂಲಗಳು ಹೇಳಿವೆ.

ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ದೂರು:

”ಮಹಿಳಾ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಾಗಾಗಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಷ್ಟ್ರೀ ಯ ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ದೂರು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...