Homeಮುಖಪುಟಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಬ್ರಿಟಿಷರ ವಿರುದ್ಧ ಹೋರಾಡಿದವರಿಗೆ ಸ್ವಾತಂತ್ರ‍್ಯದ ಮಹತ್ವದ ಅರಿವಿದೆ. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದವರಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವದ ಅರಿವಿದೆ.

- Advertisement -
- Advertisement -
  • ಕವಿತಾ ರೆಡ್ಡಿ

ಅನುವಾದ: ನಿಖಿಲ್ ಕೋಲ್ಪೆ

ಇಂದು ಇಡೀ ದೇಶವೇ ಮಹಾತ್ಮಾ ಗಾಂಧಿಯವರು ಪ್ರತಿಪಾದಿಸಿದ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಚ್ಚೊತ್ತಿರುವ ಗುರುತು ಮತ್ತು ಮೌಲ್ಯಗಳನ್ನು ಉಳಿಸಿಕೊಳ್ಳುವ ವಿಷಮ ಹಾದಿಯಲ್ಲಿರುವ ಹೊತ್ತಿನಲ್ಲಿ, 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರ ಮತ್ತು ಗಾಂಧೀವಾದಿ ಡಾ. ಎಚ್.ಎಸ್. ದೊರೆಸ್ವಾಮಿ ಅವರು 2024ರ ಚುನಾವಣೆಯತನಕ ಪ್ರತೀ ತಿಂಗಳೂ ಪ್ರತಿಭಟನೆ ನಡೆಸಿ, ದೇಶದ ಮೇಲೆ ಪರಿಣಾಮ ಬೀರುತ್ತಿರುವ ಪ್ರಶ್ನೆಗಳನ್ನು ಎತ್ತುವ ಮೂಲಕ, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುವುದು ಮಾತ್ರವಲ್ಲದೆ, ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯಂತಹ ವಿಭಜನಕಾರಿ ಧೋರಣೆಗಳನ್ನು ತರುತ್ತಿರುವ ಫ್ಯಾಸಿಸ್ಟ್ ಸರಕಾರವನ್ನು ಕೊನೆಗೊಳಿಸುವ ಸಲುವಾಗಿ ಹೋರಾಟ ನಡೆಸುವುದಾಗಿ ಶಪಥ ಮಾಡಿದ್ದಾರೆ.

ಮೋದಿ ಸರಕಾರವು ಸಂವಿಧಾನದ ಮೂಲ ಅಡಿಪಾಯವನ್ನೇ ವ್ಯವಸ್ಥಿತವಾಗಿ ಶಿಥಿಲಗೊಳಿಸುತ್ತಿದ್ದು, ಕಳೆದ ಆರು ವರ್ಷಗಳ ಸರಕಾರದ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದೆ. ಹಿಂದೆಂದೂ ಕಾಣದ ಆರ್ಥಿಕ ಬಿಕ್ಕಟ್ಟು, 45 ವರ್ಷಗಳಲ್ಲೇ ಅತ್ಯಂತ ಹೆಚ್ಚಿನ ನಿರುದ್ಯೋಗ ದರ, ಕೃಷಿ ಬಿಕ್ಕಟ್ಟು, ಆಡಳಿತಾತ್ಮಕ ಅಧಿಕಾರಗಳ ದುರುಪಯೋಗ, ಮೂಲಭೂತ ಹಕ್ಕುಗಳ ಉಲ್ಲಂಘನೆ, ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸಿರುವುದು, ಹೆಚ್ಚುತ್ತಿರುವ ಭ್ರಷ್ಟಾಚಾರ ಇವುಗಳು ಡಾ. ಎಚ್. ಎಸ್. ದೊರೆಸ್ವಾಮಿಯವರು ಫೆಬ್ರುವರಿ 6ರಿಂದ 9ರ ತನಕ ನಡೆಸಿದ ನಾಲ್ಕು ದಿನಗಳ ಪ್ರತಿಭಟನೆಯ ವೇಳೆ ಎತ್ತಿದ ಗಂಭೀರ ಪ್ರಶ್ನೆಗಳಲ್ಲಿ ಕೆಲವು.

ಸಿಎಎ, ಎನ್‌ಪಿಆರ್, ಎನ್‌ಆರ್‌ಸಿ ವಿರೋಧಿಸಿ ದೇಶದಾದ್ಯಂತ ಸಾವಿರಾರು ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಹೆಜ್ಜೆಹೆಜ್ಜೆಗೂ ದೇಶ ಮತ್ತು ಜನರನ್ನು ಬಾಧಿಸುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಎತ್ತುವ ಅಗತ್ಯವಿದೆ ಎಂದು ದೊರೆಸ್ವಾಮಿಯವರು ಬಲವಾಗಿ ಪ್ರತಿಪಾದಿಸಿದರು. ಮೋದಿ, ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಕಳೆದ ಆರು ವರ್ಷಗಳಲ್ಲಿ ದೇಶವು ಅನುಭವಿಸುತ್ತಿರುವ ದ್ವೇಷ ಮತ್ತು ವಿಭಜನೆಯನ್ನು ನೋಡಿದರೆ, ಅವು ಕೇವಲ ಪೊಳ್ಳು ಘೋಷಣೆಗಳೇ ಹೊರತು ಬೇರೇನಲ್ಲ.

‘ಸಿಟಿಜನ್ಸ್ ರೈಟ್ಸ್ ಏಕ್ಷನ್ ಕಮಿಟಿ’ (ನಾಗರಿಕ ಹಕ್ಕುಗಳ ಕಾರ್ಯ ಸಮಿತಿ) ಹೆಸರಿನಡಿಯಲ್ಲಿ, ವಿವಿಧ ವಿಷಯಗಳ ಕುರಿತು ಕೆಲಸ ಮಾಡುತ್ತಿರುವ ಹಲವಾರು ಸಂಘಟನೆಗಳು ಈ ಹೋರಾಟವನ್ನು ಬಲಗೊಳಿಸಲು ಜೊತೆ ಸೇರಿದ್ದು, ವಿಭಜನಕಾರಿ ಕಾನೂನು/ ಧೋರಣೆಗಳನ್ನು ಹಿಂತೆಗೆದುಕೊಳ್ಳುವ ತನಕ ರಾಜ್ಯ ಮತ್ತು ದೇಶದಲ್ಲಿ ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಬೇಕು ಮತ್ತು ಸಮಿತಿಯು ಮೋದಿ ಸರಕಾರದ ವೈಫಲ್ಯಗಳನ್ನು ಬಯಲುಗೊಳಿಸುವ ಮೂಲಕ ಪ್ರತಿಭಟನೆಯ ನೇತೃತ್ವ ವಹಿಸಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ.

ದೇಶದಲ್ಲಿನ ವಾತಾವರಣವು 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರರನ್ನು ಮತ್ತೆ ಬೀದಿಗಿಳಿದು ಪ್ರತಿಭಟಿಸುವಂತೆ ಪ್ರೇರೇಪಿಸಿರುವುದು ನಿಜಕ್ಕೂ ದುರದೃಷ್ಟಕರ. ಆದರೆ, ಅದು ದೇಶಕ್ಕಾಗಿ ಹೋರಾಡಲು ಏನು ಮಾಡಬೇಕು ಎಂಬುದನ್ನು ಕಲಿಯುವಂತೆ ಯುವಜನರನ್ನು ಪ್ರೇರೇಪಿಸುತ್ತಿದೆ. ಪೊಲೀಸ್ ಅನುಮತಿ ನಿರಾಕರಿಸುವ ಮೂಲಕ ರಾಜ್ಯ ಸರಕಾರವು ಮೊದಲಿಗೆ ದೊರೆಸ್ವಾಮಿಯವರ ಹೋರಾಟದ ಸಂಕಲ್ಪಕ್ಕೆ ಅಡ್ಡಗಾಲು ಹಾಕಲು ಯತ್ನಿಸಿತು. ಆದರೆ, ಅವರು ಫೆಬ್ರವರಿ 6ರಂದು ಟೌನ್‌ಹಾಲ್‌ನಲ್ಲಿ ತನ್ನ ಪ್ರತಿಭಟನೆ ಆರಂಭಿಸಿ, ಬಂಧನಕ್ಕೆ ಒಳಗಾದ ಬಳಿಕ ಅವರು ಪ್ರತಿಭಟಿಸಲು ಅವಕಾಶ ನೀಡುವುದು ಪೊಲೀಸ್ ಮತ್ತು ಆಡಳಿತಕ್ಕೆ ಅನಿವಾರ್ಯವಾಯಿತು. ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಡಚಣೆಯಾಗದಂತೆ, ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಎಲ್ಲಾ ಸಂಘಟನೆಗಳು, ವಿದ್ಯಾರ್ಥಿಗಳು ಮತ್ತು ಗಣ್ಯ ಪ್ರಜೆಗಳಿಗೆ ಕರೆ ನೀಡಲಾಗಿತ್ತು. ರಾಮಚಂದ್ರ ಗುಹಾ, ವಿದ್ಯಾರ್ಥಿ ನಾಯಕ ರಾಜೀವ ಗೌಡ ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಪ್ರತಿಭಟನೆಯಲ್ಲಿ ಕೈಜೋಡಿಸಿದರು.

ಮುಂದಿನ ನಾಲ್ಕು ವರ್ಷಗಳವರೆಗೆ ಅವಿರತ ಹೋರಾಟವೇ ಫ್ಯಾಸಿಸ್ಟ್ ಯುಗವನ್ನು ಕೊನೆಗೊಳಿಸುವ ಹಾದಿಯಾಗಿದ್ದು, ಫ್ಯಾಸಿಸ್ಟ್ ಶಕ್ತಿಗಳನ್ನು ತಡೆದು, ಎಲ್ಲಾ ರಂಗಗಳಲ್ಲಿ ಸೋಲಿಸುವುದರ ಮೂಲಕ, ಮಾನವ ಹಕ್ಕು, ರಾಜಕೀಯ ಹಕ್ಕು, ಆರ್ಥಿಕ ಹಕ್ಕು, ಸಾಮಾಜಿಕ ಹಕ್ಕು, ನಾಗರಿಕ ಹಕ್ಕುಗಳ ಮರುಸ್ಥಾಪನೆ ಮಾಡದಿದ್ದರೆ, ದೇಶಕ್ಕೆ ಸ್ಪಷ್ಟವಾದ ಅಪಾಯವಿದೆ. ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಸರಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಪ್ರಚೋದಿಸಿದ್ದರೂ, ದೇಶವು ಇಂದು ಎದುರಿಸುತ್ತಿರುವ ಎಲ್ಲಾ ವಿಷಯಗಳ ಬಗ್ಗೆ ಹಲವರು ಅಷ್ಟೇ ಆತಂಕಿತರಾಗಿದ್ದು, ಅವುಗಳನ್ನು ಕುರಿತು ಸರಕಾರವನ್ನು ಪ್ರಶ್ನಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗುತ್ತದೆ.

ಸುಮಾರು 130 ಕೋಟಿ ಜನರಿರುವ ದೇಶದಲ್ಲಿ 90 ಕೋಟಿ ಮತದಾರರಿದ್ದು, 22 ಕೋಟಿಗಿಂತಲೂ ಕಡಿಮೆ ಮತದಾರರು ಮೋದಿಗೆ ಮತ ಚಲಾಯಿಸಿರುವಾಗ, ಸಂಸತ್ತಿನಲ್ಲಿ ಭಾರೀ ಬಹುಮತದ ಶಕ್ತಿಯಷ್ಟೇ ಸರಕಾರಕ್ಕೆ ನಾಗರಿಕರ ಹಕ್ಕುಗಳನ್ನು ದಮನಿಸಿ, ಪ್ರತಿಯೊಬ್ಬ ಸಂಸದರು ಪ್ರತಿಜ್ಞೆ ಸ್ವೀಕರಿಸಿರುವ ಸಂವಿಧಾನವನ್ನೇ ಉಲ್ಲಂಘಿಸುವ ಅಧಿಕಾರ ನೀಡುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...