Homeಮುಖಪುಟಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಬ್ರಿಟಿಷರ ವಿರುದ್ಧ ಹೋರಾಡಿದವರಿಗೆ ಸ್ವಾತಂತ್ರ‍್ಯದ ಮಹತ್ವದ ಅರಿವಿದೆ. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದವರಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವದ ಅರಿವಿದೆ.

- Advertisement -
- Advertisement -
  • ಕವಿತಾ ರೆಡ್ಡಿ

ಅನುವಾದ: ನಿಖಿಲ್ ಕೋಲ್ಪೆ

ಇಂದು ಇಡೀ ದೇಶವೇ ಮಹಾತ್ಮಾ ಗಾಂಧಿಯವರು ಪ್ರತಿಪಾದಿಸಿದ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಚ್ಚೊತ್ತಿರುವ ಗುರುತು ಮತ್ತು ಮೌಲ್ಯಗಳನ್ನು ಉಳಿಸಿಕೊಳ್ಳುವ ವಿಷಮ ಹಾದಿಯಲ್ಲಿರುವ ಹೊತ್ತಿನಲ್ಲಿ, 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರ ಮತ್ತು ಗಾಂಧೀವಾದಿ ಡಾ. ಎಚ್.ಎಸ್. ದೊರೆಸ್ವಾಮಿ ಅವರು 2024ರ ಚುನಾವಣೆಯತನಕ ಪ್ರತೀ ತಿಂಗಳೂ ಪ್ರತಿಭಟನೆ ನಡೆಸಿ, ದೇಶದ ಮೇಲೆ ಪರಿಣಾಮ ಬೀರುತ್ತಿರುವ ಪ್ರಶ್ನೆಗಳನ್ನು ಎತ್ತುವ ಮೂಲಕ, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುವುದು ಮಾತ್ರವಲ್ಲದೆ, ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯಂತಹ ವಿಭಜನಕಾರಿ ಧೋರಣೆಗಳನ್ನು ತರುತ್ತಿರುವ ಫ್ಯಾಸಿಸ್ಟ್ ಸರಕಾರವನ್ನು ಕೊನೆಗೊಳಿಸುವ ಸಲುವಾಗಿ ಹೋರಾಟ ನಡೆಸುವುದಾಗಿ ಶಪಥ ಮಾಡಿದ್ದಾರೆ.

ಮೋದಿ ಸರಕಾರವು ಸಂವಿಧಾನದ ಮೂಲ ಅಡಿಪಾಯವನ್ನೇ ವ್ಯವಸ್ಥಿತವಾಗಿ ಶಿಥಿಲಗೊಳಿಸುತ್ತಿದ್ದು, ಕಳೆದ ಆರು ವರ್ಷಗಳ ಸರಕಾರದ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದೆ. ಹಿಂದೆಂದೂ ಕಾಣದ ಆರ್ಥಿಕ ಬಿಕ್ಕಟ್ಟು, 45 ವರ್ಷಗಳಲ್ಲೇ ಅತ್ಯಂತ ಹೆಚ್ಚಿನ ನಿರುದ್ಯೋಗ ದರ, ಕೃಷಿ ಬಿಕ್ಕಟ್ಟು, ಆಡಳಿತಾತ್ಮಕ ಅಧಿಕಾರಗಳ ದುರುಪಯೋಗ, ಮೂಲಭೂತ ಹಕ್ಕುಗಳ ಉಲ್ಲಂಘನೆ, ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸಿರುವುದು, ಹೆಚ್ಚುತ್ತಿರುವ ಭ್ರಷ್ಟಾಚಾರ ಇವುಗಳು ಡಾ. ಎಚ್. ಎಸ್. ದೊರೆಸ್ವಾಮಿಯವರು ಫೆಬ್ರುವರಿ 6ರಿಂದ 9ರ ತನಕ ನಡೆಸಿದ ನಾಲ್ಕು ದಿನಗಳ ಪ್ರತಿಭಟನೆಯ ವೇಳೆ ಎತ್ತಿದ ಗಂಭೀರ ಪ್ರಶ್ನೆಗಳಲ್ಲಿ ಕೆಲವು.

ಸಿಎಎ, ಎನ್‌ಪಿಆರ್, ಎನ್‌ಆರ್‌ಸಿ ವಿರೋಧಿಸಿ ದೇಶದಾದ್ಯಂತ ಸಾವಿರಾರು ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಹೆಜ್ಜೆಹೆಜ್ಜೆಗೂ ದೇಶ ಮತ್ತು ಜನರನ್ನು ಬಾಧಿಸುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಎತ್ತುವ ಅಗತ್ಯವಿದೆ ಎಂದು ದೊರೆಸ್ವಾಮಿಯವರು ಬಲವಾಗಿ ಪ್ರತಿಪಾದಿಸಿದರು. ಮೋದಿ, ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಕಳೆದ ಆರು ವರ್ಷಗಳಲ್ಲಿ ದೇಶವು ಅನುಭವಿಸುತ್ತಿರುವ ದ್ವೇಷ ಮತ್ತು ವಿಭಜನೆಯನ್ನು ನೋಡಿದರೆ, ಅವು ಕೇವಲ ಪೊಳ್ಳು ಘೋಷಣೆಗಳೇ ಹೊರತು ಬೇರೇನಲ್ಲ.

‘ಸಿಟಿಜನ್ಸ್ ರೈಟ್ಸ್ ಏಕ್ಷನ್ ಕಮಿಟಿ’ (ನಾಗರಿಕ ಹಕ್ಕುಗಳ ಕಾರ್ಯ ಸಮಿತಿ) ಹೆಸರಿನಡಿಯಲ್ಲಿ, ವಿವಿಧ ವಿಷಯಗಳ ಕುರಿತು ಕೆಲಸ ಮಾಡುತ್ತಿರುವ ಹಲವಾರು ಸಂಘಟನೆಗಳು ಈ ಹೋರಾಟವನ್ನು ಬಲಗೊಳಿಸಲು ಜೊತೆ ಸೇರಿದ್ದು, ವಿಭಜನಕಾರಿ ಕಾನೂನು/ ಧೋರಣೆಗಳನ್ನು ಹಿಂತೆಗೆದುಕೊಳ್ಳುವ ತನಕ ರಾಜ್ಯ ಮತ್ತು ದೇಶದಲ್ಲಿ ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಬೇಕು ಮತ್ತು ಸಮಿತಿಯು ಮೋದಿ ಸರಕಾರದ ವೈಫಲ್ಯಗಳನ್ನು ಬಯಲುಗೊಳಿಸುವ ಮೂಲಕ ಪ್ರತಿಭಟನೆಯ ನೇತೃತ್ವ ವಹಿಸಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ.

ದೇಶದಲ್ಲಿನ ವಾತಾವರಣವು 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರರನ್ನು ಮತ್ತೆ ಬೀದಿಗಿಳಿದು ಪ್ರತಿಭಟಿಸುವಂತೆ ಪ್ರೇರೇಪಿಸಿರುವುದು ನಿಜಕ್ಕೂ ದುರದೃಷ್ಟಕರ. ಆದರೆ, ಅದು ದೇಶಕ್ಕಾಗಿ ಹೋರಾಡಲು ಏನು ಮಾಡಬೇಕು ಎಂಬುದನ್ನು ಕಲಿಯುವಂತೆ ಯುವಜನರನ್ನು ಪ್ರೇರೇಪಿಸುತ್ತಿದೆ. ಪೊಲೀಸ್ ಅನುಮತಿ ನಿರಾಕರಿಸುವ ಮೂಲಕ ರಾಜ್ಯ ಸರಕಾರವು ಮೊದಲಿಗೆ ದೊರೆಸ್ವಾಮಿಯವರ ಹೋರಾಟದ ಸಂಕಲ್ಪಕ್ಕೆ ಅಡ್ಡಗಾಲು ಹಾಕಲು ಯತ್ನಿಸಿತು. ಆದರೆ, ಅವರು ಫೆಬ್ರವರಿ 6ರಂದು ಟೌನ್‌ಹಾಲ್‌ನಲ್ಲಿ ತನ್ನ ಪ್ರತಿಭಟನೆ ಆರಂಭಿಸಿ, ಬಂಧನಕ್ಕೆ ಒಳಗಾದ ಬಳಿಕ ಅವರು ಪ್ರತಿಭಟಿಸಲು ಅವಕಾಶ ನೀಡುವುದು ಪೊಲೀಸ್ ಮತ್ತು ಆಡಳಿತಕ್ಕೆ ಅನಿವಾರ್ಯವಾಯಿತು. ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಡಚಣೆಯಾಗದಂತೆ, ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಎಲ್ಲಾ ಸಂಘಟನೆಗಳು, ವಿದ್ಯಾರ್ಥಿಗಳು ಮತ್ತು ಗಣ್ಯ ಪ್ರಜೆಗಳಿಗೆ ಕರೆ ನೀಡಲಾಗಿತ್ತು. ರಾಮಚಂದ್ರ ಗುಹಾ, ವಿದ್ಯಾರ್ಥಿ ನಾಯಕ ರಾಜೀವ ಗೌಡ ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಪ್ರತಿಭಟನೆಯಲ್ಲಿ ಕೈಜೋಡಿಸಿದರು.

ಮುಂದಿನ ನಾಲ್ಕು ವರ್ಷಗಳವರೆಗೆ ಅವಿರತ ಹೋರಾಟವೇ ಫ್ಯಾಸಿಸ್ಟ್ ಯುಗವನ್ನು ಕೊನೆಗೊಳಿಸುವ ಹಾದಿಯಾಗಿದ್ದು, ಫ್ಯಾಸಿಸ್ಟ್ ಶಕ್ತಿಗಳನ್ನು ತಡೆದು, ಎಲ್ಲಾ ರಂಗಗಳಲ್ಲಿ ಸೋಲಿಸುವುದರ ಮೂಲಕ, ಮಾನವ ಹಕ್ಕು, ರಾಜಕೀಯ ಹಕ್ಕು, ಆರ್ಥಿಕ ಹಕ್ಕು, ಸಾಮಾಜಿಕ ಹಕ್ಕು, ನಾಗರಿಕ ಹಕ್ಕುಗಳ ಮರುಸ್ಥಾಪನೆ ಮಾಡದಿದ್ದರೆ, ದೇಶಕ್ಕೆ ಸ್ಪಷ್ಟವಾದ ಅಪಾಯವಿದೆ. ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಸರಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಪ್ರಚೋದಿಸಿದ್ದರೂ, ದೇಶವು ಇಂದು ಎದುರಿಸುತ್ತಿರುವ ಎಲ್ಲಾ ವಿಷಯಗಳ ಬಗ್ಗೆ ಹಲವರು ಅಷ್ಟೇ ಆತಂಕಿತರಾಗಿದ್ದು, ಅವುಗಳನ್ನು ಕುರಿತು ಸರಕಾರವನ್ನು ಪ್ರಶ್ನಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗುತ್ತದೆ.

ಸುಮಾರು 130 ಕೋಟಿ ಜನರಿರುವ ದೇಶದಲ್ಲಿ 90 ಕೋಟಿ ಮತದಾರರಿದ್ದು, 22 ಕೋಟಿಗಿಂತಲೂ ಕಡಿಮೆ ಮತದಾರರು ಮೋದಿಗೆ ಮತ ಚಲಾಯಿಸಿರುವಾಗ, ಸಂಸತ್ತಿನಲ್ಲಿ ಭಾರೀ ಬಹುಮತದ ಶಕ್ತಿಯಷ್ಟೇ ಸರಕಾರಕ್ಕೆ ನಾಗರಿಕರ ಹಕ್ಕುಗಳನ್ನು ದಮನಿಸಿ, ಪ್ರತಿಯೊಬ್ಬ ಸಂಸದರು ಪ್ರತಿಜ್ಞೆ ಸ್ವೀಕರಿಸಿರುವ ಸಂವಿಧಾನವನ್ನೇ ಉಲ್ಲಂಘಿಸುವ ಅಧಿಕಾರ ನೀಡುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...