Homeಮುಖಪುಟಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಬ್ರಿಟಿಷರ ವಿರುದ್ಧ ಹೋರಾಡಿದವರಿಗೆ ಸ್ವಾತಂತ್ರ‍್ಯದ ಮಹತ್ವದ ಅರಿವಿದೆ. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದವರಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವದ ಅರಿವಿದೆ.

- Advertisement -
- Advertisement -
  • ಕವಿತಾ ರೆಡ್ಡಿ

ಅನುವಾದ: ನಿಖಿಲ್ ಕೋಲ್ಪೆ

ಇಂದು ಇಡೀ ದೇಶವೇ ಮಹಾತ್ಮಾ ಗಾಂಧಿಯವರು ಪ್ರತಿಪಾದಿಸಿದ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಚ್ಚೊತ್ತಿರುವ ಗುರುತು ಮತ್ತು ಮೌಲ್ಯಗಳನ್ನು ಉಳಿಸಿಕೊಳ್ಳುವ ವಿಷಮ ಹಾದಿಯಲ್ಲಿರುವ ಹೊತ್ತಿನಲ್ಲಿ, 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರ ಮತ್ತು ಗಾಂಧೀವಾದಿ ಡಾ. ಎಚ್.ಎಸ್. ದೊರೆಸ್ವಾಮಿ ಅವರು 2024ರ ಚುನಾವಣೆಯತನಕ ಪ್ರತೀ ತಿಂಗಳೂ ಪ್ರತಿಭಟನೆ ನಡೆಸಿ, ದೇಶದ ಮೇಲೆ ಪರಿಣಾಮ ಬೀರುತ್ತಿರುವ ಪ್ರಶ್ನೆಗಳನ್ನು ಎತ್ತುವ ಮೂಲಕ, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುವುದು ಮಾತ್ರವಲ್ಲದೆ, ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯಂತಹ ವಿಭಜನಕಾರಿ ಧೋರಣೆಗಳನ್ನು ತರುತ್ತಿರುವ ಫ್ಯಾಸಿಸ್ಟ್ ಸರಕಾರವನ್ನು ಕೊನೆಗೊಳಿಸುವ ಸಲುವಾಗಿ ಹೋರಾಟ ನಡೆಸುವುದಾಗಿ ಶಪಥ ಮಾಡಿದ್ದಾರೆ.

ಮೋದಿ ಸರಕಾರವು ಸಂವಿಧಾನದ ಮೂಲ ಅಡಿಪಾಯವನ್ನೇ ವ್ಯವಸ್ಥಿತವಾಗಿ ಶಿಥಿಲಗೊಳಿಸುತ್ತಿದ್ದು, ಕಳೆದ ಆರು ವರ್ಷಗಳ ಸರಕಾರದ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದೆ. ಹಿಂದೆಂದೂ ಕಾಣದ ಆರ್ಥಿಕ ಬಿಕ್ಕಟ್ಟು, 45 ವರ್ಷಗಳಲ್ಲೇ ಅತ್ಯಂತ ಹೆಚ್ಚಿನ ನಿರುದ್ಯೋಗ ದರ, ಕೃಷಿ ಬಿಕ್ಕಟ್ಟು, ಆಡಳಿತಾತ್ಮಕ ಅಧಿಕಾರಗಳ ದುರುಪಯೋಗ, ಮೂಲಭೂತ ಹಕ್ಕುಗಳ ಉಲ್ಲಂಘನೆ, ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸಿರುವುದು, ಹೆಚ್ಚುತ್ತಿರುವ ಭ್ರಷ್ಟಾಚಾರ ಇವುಗಳು ಡಾ. ಎಚ್. ಎಸ್. ದೊರೆಸ್ವಾಮಿಯವರು ಫೆಬ್ರುವರಿ 6ರಿಂದ 9ರ ತನಕ ನಡೆಸಿದ ನಾಲ್ಕು ದಿನಗಳ ಪ್ರತಿಭಟನೆಯ ವೇಳೆ ಎತ್ತಿದ ಗಂಭೀರ ಪ್ರಶ್ನೆಗಳಲ್ಲಿ ಕೆಲವು.

ಸಿಎಎ, ಎನ್‌ಪಿಆರ್, ಎನ್‌ಆರ್‌ಸಿ ವಿರೋಧಿಸಿ ದೇಶದಾದ್ಯಂತ ಸಾವಿರಾರು ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಹೆಜ್ಜೆಹೆಜ್ಜೆಗೂ ದೇಶ ಮತ್ತು ಜನರನ್ನು ಬಾಧಿಸುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಎತ್ತುವ ಅಗತ್ಯವಿದೆ ಎಂದು ದೊರೆಸ್ವಾಮಿಯವರು ಬಲವಾಗಿ ಪ್ರತಿಪಾದಿಸಿದರು. ಮೋದಿ, ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಕಳೆದ ಆರು ವರ್ಷಗಳಲ್ಲಿ ದೇಶವು ಅನುಭವಿಸುತ್ತಿರುವ ದ್ವೇಷ ಮತ್ತು ವಿಭಜನೆಯನ್ನು ನೋಡಿದರೆ, ಅವು ಕೇವಲ ಪೊಳ್ಳು ಘೋಷಣೆಗಳೇ ಹೊರತು ಬೇರೇನಲ್ಲ.

‘ಸಿಟಿಜನ್ಸ್ ರೈಟ್ಸ್ ಏಕ್ಷನ್ ಕಮಿಟಿ’ (ನಾಗರಿಕ ಹಕ್ಕುಗಳ ಕಾರ್ಯ ಸಮಿತಿ) ಹೆಸರಿನಡಿಯಲ್ಲಿ, ವಿವಿಧ ವಿಷಯಗಳ ಕುರಿತು ಕೆಲಸ ಮಾಡುತ್ತಿರುವ ಹಲವಾರು ಸಂಘಟನೆಗಳು ಈ ಹೋರಾಟವನ್ನು ಬಲಗೊಳಿಸಲು ಜೊತೆ ಸೇರಿದ್ದು, ವಿಭಜನಕಾರಿ ಕಾನೂನು/ ಧೋರಣೆಗಳನ್ನು ಹಿಂತೆಗೆದುಕೊಳ್ಳುವ ತನಕ ರಾಜ್ಯ ಮತ್ತು ದೇಶದಲ್ಲಿ ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಬೇಕು ಮತ್ತು ಸಮಿತಿಯು ಮೋದಿ ಸರಕಾರದ ವೈಫಲ್ಯಗಳನ್ನು ಬಯಲುಗೊಳಿಸುವ ಮೂಲಕ ಪ್ರತಿಭಟನೆಯ ನೇತೃತ್ವ ವಹಿಸಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ.

ದೇಶದಲ್ಲಿನ ವಾತಾವರಣವು 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರರನ್ನು ಮತ್ತೆ ಬೀದಿಗಿಳಿದು ಪ್ರತಿಭಟಿಸುವಂತೆ ಪ್ರೇರೇಪಿಸಿರುವುದು ನಿಜಕ್ಕೂ ದುರದೃಷ್ಟಕರ. ಆದರೆ, ಅದು ದೇಶಕ್ಕಾಗಿ ಹೋರಾಡಲು ಏನು ಮಾಡಬೇಕು ಎಂಬುದನ್ನು ಕಲಿಯುವಂತೆ ಯುವಜನರನ್ನು ಪ್ರೇರೇಪಿಸುತ್ತಿದೆ. ಪೊಲೀಸ್ ಅನುಮತಿ ನಿರಾಕರಿಸುವ ಮೂಲಕ ರಾಜ್ಯ ಸರಕಾರವು ಮೊದಲಿಗೆ ದೊರೆಸ್ವಾಮಿಯವರ ಹೋರಾಟದ ಸಂಕಲ್ಪಕ್ಕೆ ಅಡ್ಡಗಾಲು ಹಾಕಲು ಯತ್ನಿಸಿತು. ಆದರೆ, ಅವರು ಫೆಬ್ರವರಿ 6ರಂದು ಟೌನ್‌ಹಾಲ್‌ನಲ್ಲಿ ತನ್ನ ಪ್ರತಿಭಟನೆ ಆರಂಭಿಸಿ, ಬಂಧನಕ್ಕೆ ಒಳಗಾದ ಬಳಿಕ ಅವರು ಪ್ರತಿಭಟಿಸಲು ಅವಕಾಶ ನೀಡುವುದು ಪೊಲೀಸ್ ಮತ್ತು ಆಡಳಿತಕ್ಕೆ ಅನಿವಾರ್ಯವಾಯಿತು. ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಡಚಣೆಯಾಗದಂತೆ, ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಎಲ್ಲಾ ಸಂಘಟನೆಗಳು, ವಿದ್ಯಾರ್ಥಿಗಳು ಮತ್ತು ಗಣ್ಯ ಪ್ರಜೆಗಳಿಗೆ ಕರೆ ನೀಡಲಾಗಿತ್ತು. ರಾಮಚಂದ್ರ ಗುಹಾ, ವಿದ್ಯಾರ್ಥಿ ನಾಯಕ ರಾಜೀವ ಗೌಡ ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಪ್ರತಿಭಟನೆಯಲ್ಲಿ ಕೈಜೋಡಿಸಿದರು.

ಮುಂದಿನ ನಾಲ್ಕು ವರ್ಷಗಳವರೆಗೆ ಅವಿರತ ಹೋರಾಟವೇ ಫ್ಯಾಸಿಸ್ಟ್ ಯುಗವನ್ನು ಕೊನೆಗೊಳಿಸುವ ಹಾದಿಯಾಗಿದ್ದು, ಫ್ಯಾಸಿಸ್ಟ್ ಶಕ್ತಿಗಳನ್ನು ತಡೆದು, ಎಲ್ಲಾ ರಂಗಗಳಲ್ಲಿ ಸೋಲಿಸುವುದರ ಮೂಲಕ, ಮಾನವ ಹಕ್ಕು, ರಾಜಕೀಯ ಹಕ್ಕು, ಆರ್ಥಿಕ ಹಕ್ಕು, ಸಾಮಾಜಿಕ ಹಕ್ಕು, ನಾಗರಿಕ ಹಕ್ಕುಗಳ ಮರುಸ್ಥಾಪನೆ ಮಾಡದಿದ್ದರೆ, ದೇಶಕ್ಕೆ ಸ್ಪಷ್ಟವಾದ ಅಪಾಯವಿದೆ. ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಸರಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಪ್ರಚೋದಿಸಿದ್ದರೂ, ದೇಶವು ಇಂದು ಎದುರಿಸುತ್ತಿರುವ ಎಲ್ಲಾ ವಿಷಯಗಳ ಬಗ್ಗೆ ಹಲವರು ಅಷ್ಟೇ ಆತಂಕಿತರಾಗಿದ್ದು, ಅವುಗಳನ್ನು ಕುರಿತು ಸರಕಾರವನ್ನು ಪ್ರಶ್ನಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗುತ್ತದೆ.

ಸುಮಾರು 130 ಕೋಟಿ ಜನರಿರುವ ದೇಶದಲ್ಲಿ 90 ಕೋಟಿ ಮತದಾರರಿದ್ದು, 22 ಕೋಟಿಗಿಂತಲೂ ಕಡಿಮೆ ಮತದಾರರು ಮೋದಿಗೆ ಮತ ಚಲಾಯಿಸಿರುವಾಗ, ಸಂಸತ್ತಿನಲ್ಲಿ ಭಾರೀ ಬಹುಮತದ ಶಕ್ತಿಯಷ್ಟೇ ಸರಕಾರಕ್ಕೆ ನಾಗರಿಕರ ಹಕ್ಕುಗಳನ್ನು ದಮನಿಸಿ, ಪ್ರತಿಯೊಬ್ಬ ಸಂಸದರು ಪ್ರತಿಜ್ಞೆ ಸ್ವೀಕರಿಸಿರುವ ಸಂವಿಧಾನವನ್ನೇ ಉಲ್ಲಂಘಿಸುವ ಅಧಿಕಾರ ನೀಡುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...