Homeಮುಖಪುಟಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಮುಂದಿನ ಚುನಾವಣೆ ತನಕವೂ ಅವಿರತ ಹೋರಾಟಕ್ಕೆ ದೊರೆಸ್ವಾಮಿಯವರ ಸಂಕಲ್ಪ..

ಬ್ರಿಟಿಷರ ವಿರುದ್ಧ ಹೋರಾಡಿದವರಿಗೆ ಸ್ವಾತಂತ್ರ‍್ಯದ ಮಹತ್ವದ ಅರಿವಿದೆ. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದವರಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವದ ಅರಿವಿದೆ.

- Advertisement -
- Advertisement -
  • ಕವಿತಾ ರೆಡ್ಡಿ

ಅನುವಾದ: ನಿಖಿಲ್ ಕೋಲ್ಪೆ

ಇಂದು ಇಡೀ ದೇಶವೇ ಮಹಾತ್ಮಾ ಗಾಂಧಿಯವರು ಪ್ರತಿಪಾದಿಸಿದ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಚ್ಚೊತ್ತಿರುವ ಗುರುತು ಮತ್ತು ಮೌಲ್ಯಗಳನ್ನು ಉಳಿಸಿಕೊಳ್ಳುವ ವಿಷಮ ಹಾದಿಯಲ್ಲಿರುವ ಹೊತ್ತಿನಲ್ಲಿ, 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರ ಮತ್ತು ಗಾಂಧೀವಾದಿ ಡಾ. ಎಚ್.ಎಸ್. ದೊರೆಸ್ವಾಮಿ ಅವರು 2024ರ ಚುನಾವಣೆಯತನಕ ಪ್ರತೀ ತಿಂಗಳೂ ಪ್ರತಿಭಟನೆ ನಡೆಸಿ, ದೇಶದ ಮೇಲೆ ಪರಿಣಾಮ ಬೀರುತ್ತಿರುವ ಪ್ರಶ್ನೆಗಳನ್ನು ಎತ್ತುವ ಮೂಲಕ, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುವುದು ಮಾತ್ರವಲ್ಲದೆ, ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯಂತಹ ವಿಭಜನಕಾರಿ ಧೋರಣೆಗಳನ್ನು ತರುತ್ತಿರುವ ಫ್ಯಾಸಿಸ್ಟ್ ಸರಕಾರವನ್ನು ಕೊನೆಗೊಳಿಸುವ ಸಲುವಾಗಿ ಹೋರಾಟ ನಡೆಸುವುದಾಗಿ ಶಪಥ ಮಾಡಿದ್ದಾರೆ.

ಮೋದಿ ಸರಕಾರವು ಸಂವಿಧಾನದ ಮೂಲ ಅಡಿಪಾಯವನ್ನೇ ವ್ಯವಸ್ಥಿತವಾಗಿ ಶಿಥಿಲಗೊಳಿಸುತ್ತಿದ್ದು, ಕಳೆದ ಆರು ವರ್ಷಗಳ ಸರಕಾರದ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದೆ. ಹಿಂದೆಂದೂ ಕಾಣದ ಆರ್ಥಿಕ ಬಿಕ್ಕಟ್ಟು, 45 ವರ್ಷಗಳಲ್ಲೇ ಅತ್ಯಂತ ಹೆಚ್ಚಿನ ನಿರುದ್ಯೋಗ ದರ, ಕೃಷಿ ಬಿಕ್ಕಟ್ಟು, ಆಡಳಿತಾತ್ಮಕ ಅಧಿಕಾರಗಳ ದುರುಪಯೋಗ, ಮೂಲಭೂತ ಹಕ್ಕುಗಳ ಉಲ್ಲಂಘನೆ, ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸಿರುವುದು, ಹೆಚ್ಚುತ್ತಿರುವ ಭ್ರಷ್ಟಾಚಾರ ಇವುಗಳು ಡಾ. ಎಚ್. ಎಸ್. ದೊರೆಸ್ವಾಮಿಯವರು ಫೆಬ್ರುವರಿ 6ರಿಂದ 9ರ ತನಕ ನಡೆಸಿದ ನಾಲ್ಕು ದಿನಗಳ ಪ್ರತಿಭಟನೆಯ ವೇಳೆ ಎತ್ತಿದ ಗಂಭೀರ ಪ್ರಶ್ನೆಗಳಲ್ಲಿ ಕೆಲವು.

ಸಿಎಎ, ಎನ್‌ಪಿಆರ್, ಎನ್‌ಆರ್‌ಸಿ ವಿರೋಧಿಸಿ ದೇಶದಾದ್ಯಂತ ಸಾವಿರಾರು ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಹೆಜ್ಜೆಹೆಜ್ಜೆಗೂ ದೇಶ ಮತ್ತು ಜನರನ್ನು ಬಾಧಿಸುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಎತ್ತುವ ಅಗತ್ಯವಿದೆ ಎಂದು ದೊರೆಸ್ವಾಮಿಯವರು ಬಲವಾಗಿ ಪ್ರತಿಪಾದಿಸಿದರು. ಮೋದಿ, ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಕಳೆದ ಆರು ವರ್ಷಗಳಲ್ಲಿ ದೇಶವು ಅನುಭವಿಸುತ್ತಿರುವ ದ್ವೇಷ ಮತ್ತು ವಿಭಜನೆಯನ್ನು ನೋಡಿದರೆ, ಅವು ಕೇವಲ ಪೊಳ್ಳು ಘೋಷಣೆಗಳೇ ಹೊರತು ಬೇರೇನಲ್ಲ.

‘ಸಿಟಿಜನ್ಸ್ ರೈಟ್ಸ್ ಏಕ್ಷನ್ ಕಮಿಟಿ’ (ನಾಗರಿಕ ಹಕ್ಕುಗಳ ಕಾರ್ಯ ಸಮಿತಿ) ಹೆಸರಿನಡಿಯಲ್ಲಿ, ವಿವಿಧ ವಿಷಯಗಳ ಕುರಿತು ಕೆಲಸ ಮಾಡುತ್ತಿರುವ ಹಲವಾರು ಸಂಘಟನೆಗಳು ಈ ಹೋರಾಟವನ್ನು ಬಲಗೊಳಿಸಲು ಜೊತೆ ಸೇರಿದ್ದು, ವಿಭಜನಕಾರಿ ಕಾನೂನು/ ಧೋರಣೆಗಳನ್ನು ಹಿಂತೆಗೆದುಕೊಳ್ಳುವ ತನಕ ರಾಜ್ಯ ಮತ್ತು ದೇಶದಲ್ಲಿ ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಬೇಕು ಮತ್ತು ಸಮಿತಿಯು ಮೋದಿ ಸರಕಾರದ ವೈಫಲ್ಯಗಳನ್ನು ಬಯಲುಗೊಳಿಸುವ ಮೂಲಕ ಪ್ರತಿಭಟನೆಯ ನೇತೃತ್ವ ವಹಿಸಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ.

ದೇಶದಲ್ಲಿನ ವಾತಾವರಣವು 102 ವರ್ಷ ಪ್ರಾಯದ ಸ್ವಾತಂತ್ರ‍್ಯ ಹೋರಾಟಗಾರರನ್ನು ಮತ್ತೆ ಬೀದಿಗಿಳಿದು ಪ್ರತಿಭಟಿಸುವಂತೆ ಪ್ರೇರೇಪಿಸಿರುವುದು ನಿಜಕ್ಕೂ ದುರದೃಷ್ಟಕರ. ಆದರೆ, ಅದು ದೇಶಕ್ಕಾಗಿ ಹೋರಾಡಲು ಏನು ಮಾಡಬೇಕು ಎಂಬುದನ್ನು ಕಲಿಯುವಂತೆ ಯುವಜನರನ್ನು ಪ್ರೇರೇಪಿಸುತ್ತಿದೆ. ಪೊಲೀಸ್ ಅನುಮತಿ ನಿರಾಕರಿಸುವ ಮೂಲಕ ರಾಜ್ಯ ಸರಕಾರವು ಮೊದಲಿಗೆ ದೊರೆಸ್ವಾಮಿಯವರ ಹೋರಾಟದ ಸಂಕಲ್ಪಕ್ಕೆ ಅಡ್ಡಗಾಲು ಹಾಕಲು ಯತ್ನಿಸಿತು. ಆದರೆ, ಅವರು ಫೆಬ್ರವರಿ 6ರಂದು ಟೌನ್‌ಹಾಲ್‌ನಲ್ಲಿ ತನ್ನ ಪ್ರತಿಭಟನೆ ಆರಂಭಿಸಿ, ಬಂಧನಕ್ಕೆ ಒಳಗಾದ ಬಳಿಕ ಅವರು ಪ್ರತಿಭಟಿಸಲು ಅವಕಾಶ ನೀಡುವುದು ಪೊಲೀಸ್ ಮತ್ತು ಆಡಳಿತಕ್ಕೆ ಅನಿವಾರ್ಯವಾಯಿತು. ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಡಚಣೆಯಾಗದಂತೆ, ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಎಲ್ಲಾ ಸಂಘಟನೆಗಳು, ವಿದ್ಯಾರ್ಥಿಗಳು ಮತ್ತು ಗಣ್ಯ ಪ್ರಜೆಗಳಿಗೆ ಕರೆ ನೀಡಲಾಗಿತ್ತು. ರಾಮಚಂದ್ರ ಗುಹಾ, ವಿದ್ಯಾರ್ಥಿ ನಾಯಕ ರಾಜೀವ ಗೌಡ ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಪ್ರತಿಭಟನೆಯಲ್ಲಿ ಕೈಜೋಡಿಸಿದರು.

ಮುಂದಿನ ನಾಲ್ಕು ವರ್ಷಗಳವರೆಗೆ ಅವಿರತ ಹೋರಾಟವೇ ಫ್ಯಾಸಿಸ್ಟ್ ಯುಗವನ್ನು ಕೊನೆಗೊಳಿಸುವ ಹಾದಿಯಾಗಿದ್ದು, ಫ್ಯಾಸಿಸ್ಟ್ ಶಕ್ತಿಗಳನ್ನು ತಡೆದು, ಎಲ್ಲಾ ರಂಗಗಳಲ್ಲಿ ಸೋಲಿಸುವುದರ ಮೂಲಕ, ಮಾನವ ಹಕ್ಕು, ರಾಜಕೀಯ ಹಕ್ಕು, ಆರ್ಥಿಕ ಹಕ್ಕು, ಸಾಮಾಜಿಕ ಹಕ್ಕು, ನಾಗರಿಕ ಹಕ್ಕುಗಳ ಮರುಸ್ಥಾಪನೆ ಮಾಡದಿದ್ದರೆ, ದೇಶಕ್ಕೆ ಸ್ಪಷ್ಟವಾದ ಅಪಾಯವಿದೆ. ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಸರಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಪ್ರಚೋದಿಸಿದ್ದರೂ, ದೇಶವು ಇಂದು ಎದುರಿಸುತ್ತಿರುವ ಎಲ್ಲಾ ವಿಷಯಗಳ ಬಗ್ಗೆ ಹಲವರು ಅಷ್ಟೇ ಆತಂಕಿತರಾಗಿದ್ದು, ಅವುಗಳನ್ನು ಕುರಿತು ಸರಕಾರವನ್ನು ಪ್ರಶ್ನಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗುತ್ತದೆ.

ಸುಮಾರು 130 ಕೋಟಿ ಜನರಿರುವ ದೇಶದಲ್ಲಿ 90 ಕೋಟಿ ಮತದಾರರಿದ್ದು, 22 ಕೋಟಿಗಿಂತಲೂ ಕಡಿಮೆ ಮತದಾರರು ಮೋದಿಗೆ ಮತ ಚಲಾಯಿಸಿರುವಾಗ, ಸಂಸತ್ತಿನಲ್ಲಿ ಭಾರೀ ಬಹುಮತದ ಶಕ್ತಿಯಷ್ಟೇ ಸರಕಾರಕ್ಕೆ ನಾಗರಿಕರ ಹಕ್ಕುಗಳನ್ನು ದಮನಿಸಿ, ಪ್ರತಿಯೊಬ್ಬ ಸಂಸದರು ಪ್ರತಿಜ್ಞೆ ಸ್ವೀಕರಿಸಿರುವ ಸಂವಿಧಾನವನ್ನೇ ಉಲ್ಲಂಘಿಸುವ ಅಧಿಕಾರ ನೀಡುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...