Homeಮುಖಪುಟಇದುವರೆಗೂ ಬಿಜೆಪಿ ಖಾತೆ ತೆರೆಯಲಾಗದ ಕ್ಷೇತ್ರಗಳಿವು: ಕಾರಣವೇನು?

ಇದುವರೆಗೂ ಬಿಜೆಪಿ ಖಾತೆ ತೆರೆಯಲಾಗದ ಕ್ಷೇತ್ರಗಳಿವು: ಕಾರಣವೇನು?

53 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳೂ ಸಾಕಷ್ಟಿವೆ.

- Advertisement -
- Advertisement -

ಬಿಜೆಪಿ ಪಕ್ಷವು ಪ್ರಪಂಚದ ಅತ್ಯಂತ ದೊಡ್ಡ ಪಕ್ಷ ಎಂದು ಹೇಳಿಕೊಂಡಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. ಆದರೂ ದಕ್ಷಿಣದ ರಾಜ್ಯಗಳಲ್ಲಿ ಅದು ಪೂರ್ಣ ಬಹುಮತದಿಂದ ಗೆದ್ದು ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಗೋವಾ ಮತ್ತು ಕರ್ನಾಟಕದಲ್ಲಿ ಅಲ್ಪ ಸ್ವಲ್ಪ ಅಧಿಕಾರ ನಡೆಸಿದರೂ ಕೂಡ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದು ಅಧಿಕಾರದ ಹತ್ತಿರಕ್ಕೂ ಸುಳಿಯಲು ಸಾಧ್ಯವಾಗಿಲ್ಲ. ಏಕೆಂದರೆ ದಕ್ಷಿಣದ ಜನ ಅಷ್ಟು ಸುಲಭಕ್ಕೆ ಬಿಜೆಪಿಯ ರಾಷ್ಟ್ರೀಯತೆ ಮತ್ತು ಹಿಂದುತ್ವ ಸಿದ್ದಾಂತಗಳನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ.

ಇನ್ನೂ ಕರ್ನಾಟಕದಲ್ಲಿ ಬಿಜೆಪಿ 1983ರಲ್ಲಿ 18 ಸೀಟು ಗೆದ್ದು ಜನತಾಪಕ್ಷಕ್ಕೆ ಬೆಂಬಲ ನೀಡಿತ್ತು. ಆದರೆ ಅದು ಪದೇ ಪದೇ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ 1985ರಲ್ಲಿ ಸರ್ಕಾರ ವಿಸರ್ಜಿಸಿ ಮತ್ತೆ ಚುನಾವಣೆ ಎದುರಿಸಿ ಸ್ವತಂತ್ರವಾಗಿ ಜನತಾಪಕ್ಷ ಅಧಿಕಾರ ಹಿಡಿದಿತ್ತು. ಆ ನಂತರ 2004ರಲ್ಲಿ 79 ಸ್ಥಾನ ಗೆದ್ದರೂ ಪ್ರತಿಪಕ್ಷದಲ್ಲಿ ಕೂರಬೇಕಾಗಿತ್ತು. 2006ರಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಅಧಿಕಾರದಲ್ಲಿತ್ತು. ಆದರೆ ಕುಮಾರಸ್ವಾಮಿಯವರು ಕೊಟ್ಟ ಮಾತಿನಂತೆ ಅಧಿಕಾರ ಹಸ್ತಾಂತರಿಸದೇ ಸರ್ಕಾರ ವಿಸರ್ಜಿಸಿದರು. ಇದರಿಂದ ಯಡಿಯೂರಪ್ಪನವರ ಮೇಲಿನ ಅನುಕಂಪದಿಂದ 2008ರಲ್ಲಿ ಬಿಜೆಪಿ 110 ಸ್ಥಾನ ಗೆದ್ದಿತ್ತು. ಆದರೂ ಬಹುಮತಕ್ಕೆ 03 ಸೀಟುಗಳ ಕೊರತೆಯಿತ್ತು. ಆಗ ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರು.

ಇನ್ನು 2013ರಲ್ಲಿ ಬಿಜೆಪಿ 40 ಸ್ಥಾನಗಳಿಗೆ ಕುಸಿದಿತ್ತು. 2018ರಲ್ಲಿ 104 ಸ್ಥಾನ ಗೆದ್ದರೂ ಸರಳ ಬಹುಮತ ಸಿಗದೇ ವಿರೋಧ ಪಕ್ಷವಾಗಿತ್ತು. ಆದರೆ 2019ರಲ್ಲಿ ಮತ್ತೆ ಆಪರೇ‍ಷನ್ ಕಮಲ ನಡೆಸಿ ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದಿದೆ. ಇಷ್ಟೆಲ್ಲ ಆದರೂ ಬಿಜೆಪಿ ಕರ್ನಾಟಕ ಸುಮಾರು 44 ಕ್ಷೇತ್ರಗಳಲ್ಲಿ ಒಮ್ಮೆಯೂ ಗೆದ್ದು ಖಾತೆ ತೆರೆಯಲು ಸಾಧ್ಯವಾಗಿಲ್ಲ. ಅಲ್ಲದೆ 53 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಅಂತಹ ಕ್ಷೇತ್ರಗಳ ಪಟ್ಟಿ ಇಲ್ಲಿದೆ.

ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳು

  1. ಮಂಡ್ಯ
  2. ಮದ್ದೂರು
  3. ಮೇಲುಕೋಟೆ
  4. ಶ್ರೀರಂಗಪಟ್ಟಣ
  5. ನಾಗಮಂಗಲ
  6. ಮಳವಳ್ಳಿ
  7. ಕುಣಿಗಲ್
  8. ಗುಬ್ಬಿ
  9. ಮಧುಗಿರಿ
  10. ಕೊರಟಗೆರೆ
  11. ಪಾವಗಡ
  12. ಚಿಂತಾಮಣಿ
  13. ಶಿಡ್ಲಘಟ್ಟ
  14. ಬಾಗೇಪಲ್ಲಿ
  15. ಗೌರಿಬಿದನೂರು
  16. ಮುಳಬಾಗಿಲು
  17. ಶ್ರೀನಿವಾಸಪುರ
  18. ಕೋಲಾರ
  19. ದೇವನಹಳ್ಳಿ
  20. ಹೆಚ್.ಡಿ ಕೋಟೆ
  21. ಹನೂರು
  22. ವರುಣ
  23. ಚಾಮುಂಡೇಶ್ವರಿ
  24. ಹೊಳೆನರಸೀಪುರ
  25. ಶ್ರವಣಬೆಳಗೊಳ
  26. ಅಫ್ಜಲಪುರ
  27. ಗುರುಮಠಕಲ್
  28. ಬೀದರ್ ದಕ್ಷಿಣ
  29. ಹಳಿಯಾಳ
  30. ದಾವಣಗೆರೆ ದಕ್ಷಿಣ
  31. ಶಹಾಪುರ
  32. ಮಾನ್ವಿ
  33. ಸಿಂಧನೂರು
  34. ಯಮಕನಮರಡಿ
  35. ಸಂಡೂರು
  36. ಭದ್ರಾವತಿ
  37. ಬ್ಯಾಟರಾಯಪುರ
  38. ಪುಲಿಕೇಶಿನಗರ
  39. ವಿಜಯನಗರ
  40. ಸರ್ವಜ್ಞನಗರ
  41. ಬಿಟಿಎಂ ಲೇಔಟ್
  42. ಗಾಂಧಿನಗರ
  43. ರಾಮನಗರ
  44. ಕನಕಪುರ

ಇಷ್ಟು ಕ್ಷೇತ್ರಗಳಲ್ಲಿ ಒಮ್ಮೆಯೂ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇವುಗಳಲ್ಲಿ ಬಹುತೇಕ ಹಳೇ ಮೈಸೂರು ಪ್ರಾಂತ್ಯದ ಕ್ಷೇತ್ರಗಳಾಗಿವೆ. ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ ಹೊರತು ಬಿಜೆಪಿಗೆ ಮೂರನೇ ಸ್ಥಾನ. ಬಿಜೆಪಿಗೆ ಲಿಂಗಾಯತ ಸಮುದಾಯ ಕೆಲವೊಮ್ಮೆ ಹೆಚ್ಚಿನ ಬೆಂಬಲ ನೀಡಿದೆ. ಆದರೆ ಹಳೇ ಮೈಸೂರು ಪ್ರಾಂತ್ಯದಲ್ಲಿ ಲಿಂಗಾಯತರ ಪ್ರಾಬಲ್ಯವಿಲ್ಲ. ಅದು ಕೂಡ ಬಿಜೆಪಿ ಸೋಲಿಗೆ ಒಂದು ಕಾರಣವಾಗಿದೆ.

ಬಿಜೆಪಿ ಒಮ್ಮೆ ಮಾತ್ರ ಗೆಲುವು ಕಂಡ ಕ್ಷೇತ್ರಗಳಿವು

  1. ಕೆ.ಆರ್ ಪೇಟೆ (2019 ಉಪ)
  2. ನರಸಿಂಹರಾಜ (1994)
  3. ಚನ್ನಪಟ್ಟಣ (2011 ಉಪ)
  4. ಮಾಗಡಿ (1994)
  5. ಶಾಂತಿನಗರ (2004)
  6. ಚಾಮರಾಜ ಪೇಟೆ (1994)
  7. ಮಹಾಲಕ್ಷ್ಮೀ ಲೇಔಟ್ (2019 ಉಪ)
  8. ಗೋವಿಂದರಾಜನಗರ (2018)
  9. ಅರಕಲಗೂಡು (1999)
  10. ಅರಸೀಕೆರೆ (2004)
  11. ಬೇಲೂರು (1999)
  12. ಗದಗ (2008)
  13. ಮುದ್ದೇಬಿಹಾಳ (2018)
  14. ಬಬಲೇಶ್ವರ (1999)
  15. ನಾಗಠಾಣ (2008)
  16. ಇಂಡಿ (2008)
  17. ಯಾದಗಿರಿ (2018)
  18. ಲಿಂಗಸಗೂರು (2008)
  19. ಬೆಳಗಾವಿ ಉತ್ತರ (2018)
  20. ಗೋಕಾಕ್ (2019 ಉಪ)
  21. ಆಳಂದ (2018)
  22. ಹುಮ್ನಾಬಾದ್ (1999)
  23. ಚಿಂಚೋಳ್ಳಿ (2008)
  24. ಕಂಪ್ಲಿ (2008)
  25. ಹಡಗಲಿ (2008)
  26. ಹಗರಿಬೊಮ್ಮನಹಳ್ಳಿ (2008)
  27. ಕುಂದಗೋಳ (2008)
  28. ಹರಿಹರ (2008)
  29. ಮೂಡಬಿದರೆ (2018)
  30. ಮಂಗಳೂರು ನಗರ (1994)
  31. ಶಿರಾ (2020 ಉಪಚುನಾವಣೆ)
  32. ಮೊಳಕಾಲ್ಮೂರು (2018)
  33. ಹಿರಿಯೂರು (2018)
  34. ಹೊಸದುರ್ಗ (2018)
  35. ಚಿಕ್ಕೋಡಿ (2004)
  36. ಕುಡಚಿ (2018)
  37. ಚಿಕ್ಕಬಳ್ಳಾಪುರ (2019 ಉಪ)
  38. ನೆಲಮಂಗಲ (2008)
  39. ಹೊಸಕೋಟೆ (2008)
  40. ದೊಡ್ಡಬಳ್ಳಾಪುರ (1999)
  41. ಚಾಮರಾಜನಗರ (1999)
  42. ನಂಜನಗೂಡು (2018)
  43. ಕೊಳ್ಳೇಗಾಲ (2009 ಉಪ)
  44. ಟಿ.ನರಸೀಪುರ (1999)
  45. ಗುಂಡ್ಲುಪೇಟೆ (2018)
  46. ಬಂಗಾರಪೇಟೆ (2011 ಉಪ)
  47. ಕೊಪ್ಪಳ (2011 ಉಪ)
  48. ಮಸ್ಕಿ (2008)
  49. ಪಿರಿಯಾಪಟ್ಟಣ (1999)
  50. ಚಿತ್ತಾಪುರ (2008)
  51. ಜೇವರ್ಗಿ (2008)
  52. ಕಲಬುರಗಿ ಉತ್ತರ (2004)
  53. ಖಾನಪುರ (2008)

ಈ 53 ಕ್ಷೇತ್ರಗಳಲ್ಲಿ ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಆಪರೇಷನ್ ಕಮಲ ಕಾರಣಕ್ಕಾಗಿ ನಡೆದ ಚುನಾವಣೆಗಳೇ ಹೆಚ್ಚಾಗಿವೆ. ಇನ್ನು 2008ರಲ್ಲಿ ಯಡಿಯೂರಪ್ಪನವರಿಗೆ ಸಿಎಂ ಸ್ಥಾನ ಕೊಡದೇ ಮೋಸ ಮಾಡಲಾಯಿತು ಎಂಬ ಅನುಕಂಪದಿಂದ ಬಹಳಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬಂದಿತ್ತು.

ಇದನ್ನೂ ಓದಿ: ಮುಸ್ಲಿಮರಿಗೆ ಒಂದೂ ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್‌ನ 22, ಕಾಂಗ್ರೆಸ್ 15 ಅಭ್ಯರ್ಥಿಗಳ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...