Homeಮುಖಪುಟಇದುವರೆಗೂ ಬಿಜೆಪಿ ಖಾತೆ ತೆರೆಯಲಾಗದ ಕ್ಷೇತ್ರಗಳಿವು: ಕಾರಣವೇನು?

ಇದುವರೆಗೂ ಬಿಜೆಪಿ ಖಾತೆ ತೆರೆಯಲಾಗದ ಕ್ಷೇತ್ರಗಳಿವು: ಕಾರಣವೇನು?

53 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳೂ ಸಾಕಷ್ಟಿವೆ.

- Advertisement -
- Advertisement -

ಬಿಜೆಪಿ ಪಕ್ಷವು ಪ್ರಪಂಚದ ಅತ್ಯಂತ ದೊಡ್ಡ ಪಕ್ಷ ಎಂದು ಹೇಳಿಕೊಂಡಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. ಆದರೂ ದಕ್ಷಿಣದ ರಾಜ್ಯಗಳಲ್ಲಿ ಅದು ಪೂರ್ಣ ಬಹುಮತದಿಂದ ಗೆದ್ದು ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಗೋವಾ ಮತ್ತು ಕರ್ನಾಟಕದಲ್ಲಿ ಅಲ್ಪ ಸ್ವಲ್ಪ ಅಧಿಕಾರ ನಡೆಸಿದರೂ ಕೂಡ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದು ಅಧಿಕಾರದ ಹತ್ತಿರಕ್ಕೂ ಸುಳಿಯಲು ಸಾಧ್ಯವಾಗಿಲ್ಲ. ಏಕೆಂದರೆ ದಕ್ಷಿಣದ ಜನ ಅಷ್ಟು ಸುಲಭಕ್ಕೆ ಬಿಜೆಪಿಯ ರಾಷ್ಟ್ರೀಯತೆ ಮತ್ತು ಹಿಂದುತ್ವ ಸಿದ್ದಾಂತಗಳನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ.

ಇನ್ನೂ ಕರ್ನಾಟಕದಲ್ಲಿ ಬಿಜೆಪಿ 1983ರಲ್ಲಿ 18 ಸೀಟು ಗೆದ್ದು ಜನತಾಪಕ್ಷಕ್ಕೆ ಬೆಂಬಲ ನೀಡಿತ್ತು. ಆದರೆ ಅದು ಪದೇ ಪದೇ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ 1985ರಲ್ಲಿ ಸರ್ಕಾರ ವಿಸರ್ಜಿಸಿ ಮತ್ತೆ ಚುನಾವಣೆ ಎದುರಿಸಿ ಸ್ವತಂತ್ರವಾಗಿ ಜನತಾಪಕ್ಷ ಅಧಿಕಾರ ಹಿಡಿದಿತ್ತು. ಆ ನಂತರ 2004ರಲ್ಲಿ 79 ಸ್ಥಾನ ಗೆದ್ದರೂ ಪ್ರತಿಪಕ್ಷದಲ್ಲಿ ಕೂರಬೇಕಾಗಿತ್ತು. 2006ರಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಅಧಿಕಾರದಲ್ಲಿತ್ತು. ಆದರೆ ಕುಮಾರಸ್ವಾಮಿಯವರು ಕೊಟ್ಟ ಮಾತಿನಂತೆ ಅಧಿಕಾರ ಹಸ್ತಾಂತರಿಸದೇ ಸರ್ಕಾರ ವಿಸರ್ಜಿಸಿದರು. ಇದರಿಂದ ಯಡಿಯೂರಪ್ಪನವರ ಮೇಲಿನ ಅನುಕಂಪದಿಂದ 2008ರಲ್ಲಿ ಬಿಜೆಪಿ 110 ಸ್ಥಾನ ಗೆದ್ದಿತ್ತು. ಆದರೂ ಬಹುಮತಕ್ಕೆ 03 ಸೀಟುಗಳ ಕೊರತೆಯಿತ್ತು. ಆಗ ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರು.

ಇನ್ನು 2013ರಲ್ಲಿ ಬಿಜೆಪಿ 40 ಸ್ಥಾನಗಳಿಗೆ ಕುಸಿದಿತ್ತು. 2018ರಲ್ಲಿ 104 ಸ್ಥಾನ ಗೆದ್ದರೂ ಸರಳ ಬಹುಮತ ಸಿಗದೇ ವಿರೋಧ ಪಕ್ಷವಾಗಿತ್ತು. ಆದರೆ 2019ರಲ್ಲಿ ಮತ್ತೆ ಆಪರೇ‍ಷನ್ ಕಮಲ ನಡೆಸಿ ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದಿದೆ. ಇಷ್ಟೆಲ್ಲ ಆದರೂ ಬಿಜೆಪಿ ಕರ್ನಾಟಕ ಸುಮಾರು 44 ಕ್ಷೇತ್ರಗಳಲ್ಲಿ ಒಮ್ಮೆಯೂ ಗೆದ್ದು ಖಾತೆ ತೆರೆಯಲು ಸಾಧ್ಯವಾಗಿಲ್ಲ. ಅಲ್ಲದೆ 53 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಅಂತಹ ಕ್ಷೇತ್ರಗಳ ಪಟ್ಟಿ ಇಲ್ಲಿದೆ.

ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳು

  1. ಮಂಡ್ಯ
  2. ಮದ್ದೂರು
  3. ಮೇಲುಕೋಟೆ
  4. ಶ್ರೀರಂಗಪಟ್ಟಣ
  5. ನಾಗಮಂಗಲ
  6. ಮಳವಳ್ಳಿ
  7. ಕುಣಿಗಲ್
  8. ಗುಬ್ಬಿ
  9. ಮಧುಗಿರಿ
  10. ಕೊರಟಗೆರೆ
  11. ಪಾವಗಡ
  12. ಚಿಂತಾಮಣಿ
  13. ಶಿಡ್ಲಘಟ್ಟ
  14. ಬಾಗೇಪಲ್ಲಿ
  15. ಗೌರಿಬಿದನೂರು
  16. ಮುಳಬಾಗಿಲು
  17. ಶ್ರೀನಿವಾಸಪುರ
  18. ಕೋಲಾರ
  19. ದೇವನಹಳ್ಳಿ
  20. ಹೆಚ್.ಡಿ ಕೋಟೆ
  21. ಹನೂರು
  22. ವರುಣ
  23. ಚಾಮುಂಡೇಶ್ವರಿ
  24. ಹೊಳೆನರಸೀಪುರ
  25. ಶ್ರವಣಬೆಳಗೊಳ
  26. ಅಫ್ಜಲಪುರ
  27. ಗುರುಮಠಕಲ್
  28. ಬೀದರ್ ದಕ್ಷಿಣ
  29. ಹಳಿಯಾಳ
  30. ದಾವಣಗೆರೆ ದಕ್ಷಿಣ
  31. ಶಹಾಪುರ
  32. ಮಾನ್ವಿ
  33. ಸಿಂಧನೂರು
  34. ಯಮಕನಮರಡಿ
  35. ಸಂಡೂರು
  36. ಭದ್ರಾವತಿ
  37. ಬ್ಯಾಟರಾಯಪುರ
  38. ಪುಲಿಕೇಶಿನಗರ
  39. ವಿಜಯನಗರ
  40. ಸರ್ವಜ್ಞನಗರ
  41. ಬಿಟಿಎಂ ಲೇಔಟ್
  42. ಗಾಂಧಿನಗರ
  43. ರಾಮನಗರ
  44. ಕನಕಪುರ

ಇಷ್ಟು ಕ್ಷೇತ್ರಗಳಲ್ಲಿ ಒಮ್ಮೆಯೂ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇವುಗಳಲ್ಲಿ ಬಹುತೇಕ ಹಳೇ ಮೈಸೂರು ಪ್ರಾಂತ್ಯದ ಕ್ಷೇತ್ರಗಳಾಗಿವೆ. ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ ಹೊರತು ಬಿಜೆಪಿಗೆ ಮೂರನೇ ಸ್ಥಾನ. ಬಿಜೆಪಿಗೆ ಲಿಂಗಾಯತ ಸಮುದಾಯ ಕೆಲವೊಮ್ಮೆ ಹೆಚ್ಚಿನ ಬೆಂಬಲ ನೀಡಿದೆ. ಆದರೆ ಹಳೇ ಮೈಸೂರು ಪ್ರಾಂತ್ಯದಲ್ಲಿ ಲಿಂಗಾಯತರ ಪ್ರಾಬಲ್ಯವಿಲ್ಲ. ಅದು ಕೂಡ ಬಿಜೆಪಿ ಸೋಲಿಗೆ ಒಂದು ಕಾರಣವಾಗಿದೆ.

ಬಿಜೆಪಿ ಒಮ್ಮೆ ಮಾತ್ರ ಗೆಲುವು ಕಂಡ ಕ್ಷೇತ್ರಗಳಿವು

  1. ಕೆ.ಆರ್ ಪೇಟೆ (2019 ಉಪ)
  2. ನರಸಿಂಹರಾಜ (1994)
  3. ಚನ್ನಪಟ್ಟಣ (2011 ಉಪ)
  4. ಮಾಗಡಿ (1994)
  5. ಶಾಂತಿನಗರ (2004)
  6. ಚಾಮರಾಜ ಪೇಟೆ (1994)
  7. ಮಹಾಲಕ್ಷ್ಮೀ ಲೇಔಟ್ (2019 ಉಪ)
  8. ಗೋವಿಂದರಾಜನಗರ (2018)
  9. ಅರಕಲಗೂಡು (1999)
  10. ಅರಸೀಕೆರೆ (2004)
  11. ಬೇಲೂರು (1999)
  12. ಗದಗ (2008)
  13. ಮುದ್ದೇಬಿಹಾಳ (2018)
  14. ಬಬಲೇಶ್ವರ (1999)
  15. ನಾಗಠಾಣ (2008)
  16. ಇಂಡಿ (2008)
  17. ಯಾದಗಿರಿ (2018)
  18. ಲಿಂಗಸಗೂರು (2008)
  19. ಬೆಳಗಾವಿ ಉತ್ತರ (2018)
  20. ಗೋಕಾಕ್ (2019 ಉಪ)
  21. ಆಳಂದ (2018)
  22. ಹುಮ್ನಾಬಾದ್ (1999)
  23. ಚಿಂಚೋಳ್ಳಿ (2008)
  24. ಕಂಪ್ಲಿ (2008)
  25. ಹಡಗಲಿ (2008)
  26. ಹಗರಿಬೊಮ್ಮನಹಳ್ಳಿ (2008)
  27. ಕುಂದಗೋಳ (2008)
  28. ಹರಿಹರ (2008)
  29. ಮೂಡಬಿದರೆ (2018)
  30. ಮಂಗಳೂರು ನಗರ (1994)
  31. ಶಿರಾ (2020 ಉಪಚುನಾವಣೆ)
  32. ಮೊಳಕಾಲ್ಮೂರು (2018)
  33. ಹಿರಿಯೂರು (2018)
  34. ಹೊಸದುರ್ಗ (2018)
  35. ಚಿಕ್ಕೋಡಿ (2004)
  36. ಕುಡಚಿ (2018)
  37. ಚಿಕ್ಕಬಳ್ಳಾಪುರ (2019 ಉಪ)
  38. ನೆಲಮಂಗಲ (2008)
  39. ಹೊಸಕೋಟೆ (2008)
  40. ದೊಡ್ಡಬಳ್ಳಾಪುರ (1999)
  41. ಚಾಮರಾಜನಗರ (1999)
  42. ನಂಜನಗೂಡು (2018)
  43. ಕೊಳ್ಳೇಗಾಲ (2009 ಉಪ)
  44. ಟಿ.ನರಸೀಪುರ (1999)
  45. ಗುಂಡ್ಲುಪೇಟೆ (2018)
  46. ಬಂಗಾರಪೇಟೆ (2011 ಉಪ)
  47. ಕೊಪ್ಪಳ (2011 ಉಪ)
  48. ಮಸ್ಕಿ (2008)
  49. ಪಿರಿಯಾಪಟ್ಟಣ (1999)
  50. ಚಿತ್ತಾಪುರ (2008)
  51. ಜೇವರ್ಗಿ (2008)
  52. ಕಲಬುರಗಿ ಉತ್ತರ (2004)
  53. ಖಾನಪುರ (2008)

ಈ 53 ಕ್ಷೇತ್ರಗಳಲ್ಲಿ ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಆಪರೇಷನ್ ಕಮಲ ಕಾರಣಕ್ಕಾಗಿ ನಡೆದ ಚುನಾವಣೆಗಳೇ ಹೆಚ್ಚಾಗಿವೆ. ಇನ್ನು 2008ರಲ್ಲಿ ಯಡಿಯೂರಪ್ಪನವರಿಗೆ ಸಿಎಂ ಸ್ಥಾನ ಕೊಡದೇ ಮೋಸ ಮಾಡಲಾಯಿತು ಎಂಬ ಅನುಕಂಪದಿಂದ ಬಹಳಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬಂದಿತ್ತು.

ಇದನ್ನೂ ಓದಿ: ಮುಸ್ಲಿಮರಿಗೆ ಒಂದೂ ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್‌ನ 22, ಕಾಂಗ್ರೆಸ್ 15 ಅಭ್ಯರ್ಥಿಗಳ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....