Homeಮುಖಪುಟಇದುವರೆಗೂ ಬಿಜೆಪಿ ಖಾತೆ ತೆರೆಯಲಾಗದ ಕ್ಷೇತ್ರಗಳಿವು: ಕಾರಣವೇನು?

ಇದುವರೆಗೂ ಬಿಜೆಪಿ ಖಾತೆ ತೆರೆಯಲಾಗದ ಕ್ಷೇತ್ರಗಳಿವು: ಕಾರಣವೇನು?

53 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳೂ ಸಾಕಷ್ಟಿವೆ.

- Advertisement -
- Advertisement -

ಬಿಜೆಪಿ ಪಕ್ಷವು ಪ್ರಪಂಚದ ಅತ್ಯಂತ ದೊಡ್ಡ ಪಕ್ಷ ಎಂದು ಹೇಳಿಕೊಂಡಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. ಆದರೂ ದಕ್ಷಿಣದ ರಾಜ್ಯಗಳಲ್ಲಿ ಅದು ಪೂರ್ಣ ಬಹುಮತದಿಂದ ಗೆದ್ದು ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಗೋವಾ ಮತ್ತು ಕರ್ನಾಟಕದಲ್ಲಿ ಅಲ್ಪ ಸ್ವಲ್ಪ ಅಧಿಕಾರ ನಡೆಸಿದರೂ ಕೂಡ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದು ಅಧಿಕಾರದ ಹತ್ತಿರಕ್ಕೂ ಸುಳಿಯಲು ಸಾಧ್ಯವಾಗಿಲ್ಲ. ಏಕೆಂದರೆ ದಕ್ಷಿಣದ ಜನ ಅಷ್ಟು ಸುಲಭಕ್ಕೆ ಬಿಜೆಪಿಯ ರಾಷ್ಟ್ರೀಯತೆ ಮತ್ತು ಹಿಂದುತ್ವ ಸಿದ್ದಾಂತಗಳನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ.

ಇನ್ನೂ ಕರ್ನಾಟಕದಲ್ಲಿ ಬಿಜೆಪಿ 1983ರಲ್ಲಿ 18 ಸೀಟು ಗೆದ್ದು ಜನತಾಪಕ್ಷಕ್ಕೆ ಬೆಂಬಲ ನೀಡಿತ್ತು. ಆದರೆ ಅದು ಪದೇ ಪದೇ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ 1985ರಲ್ಲಿ ಸರ್ಕಾರ ವಿಸರ್ಜಿಸಿ ಮತ್ತೆ ಚುನಾವಣೆ ಎದುರಿಸಿ ಸ್ವತಂತ್ರವಾಗಿ ಜನತಾಪಕ್ಷ ಅಧಿಕಾರ ಹಿಡಿದಿತ್ತು. ಆ ನಂತರ 2004ರಲ್ಲಿ 79 ಸ್ಥಾನ ಗೆದ್ದರೂ ಪ್ರತಿಪಕ್ಷದಲ್ಲಿ ಕೂರಬೇಕಾಗಿತ್ತು. 2006ರಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಅಧಿಕಾರದಲ್ಲಿತ್ತು. ಆದರೆ ಕುಮಾರಸ್ವಾಮಿಯವರು ಕೊಟ್ಟ ಮಾತಿನಂತೆ ಅಧಿಕಾರ ಹಸ್ತಾಂತರಿಸದೇ ಸರ್ಕಾರ ವಿಸರ್ಜಿಸಿದರು. ಇದರಿಂದ ಯಡಿಯೂರಪ್ಪನವರ ಮೇಲಿನ ಅನುಕಂಪದಿಂದ 2008ರಲ್ಲಿ ಬಿಜೆಪಿ 110 ಸ್ಥಾನ ಗೆದ್ದಿತ್ತು. ಆದರೂ ಬಹುಮತಕ್ಕೆ 03 ಸೀಟುಗಳ ಕೊರತೆಯಿತ್ತು. ಆಗ ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರು.

ಇನ್ನು 2013ರಲ್ಲಿ ಬಿಜೆಪಿ 40 ಸ್ಥಾನಗಳಿಗೆ ಕುಸಿದಿತ್ತು. 2018ರಲ್ಲಿ 104 ಸ್ಥಾನ ಗೆದ್ದರೂ ಸರಳ ಬಹುಮತ ಸಿಗದೇ ವಿರೋಧ ಪಕ್ಷವಾಗಿತ್ತು. ಆದರೆ 2019ರಲ್ಲಿ ಮತ್ತೆ ಆಪರೇ‍ಷನ್ ಕಮಲ ನಡೆಸಿ ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದಿದೆ. ಇಷ್ಟೆಲ್ಲ ಆದರೂ ಬಿಜೆಪಿ ಕರ್ನಾಟಕ ಸುಮಾರು 44 ಕ್ಷೇತ್ರಗಳಲ್ಲಿ ಒಮ್ಮೆಯೂ ಗೆದ್ದು ಖಾತೆ ತೆರೆಯಲು ಸಾಧ್ಯವಾಗಿಲ್ಲ. ಅಲ್ಲದೆ 53 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಅಂತಹ ಕ್ಷೇತ್ರಗಳ ಪಟ್ಟಿ ಇಲ್ಲಿದೆ.

ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳು

  1. ಮಂಡ್ಯ
  2. ಮದ್ದೂರು
  3. ಮೇಲುಕೋಟೆ
  4. ಶ್ರೀರಂಗಪಟ್ಟಣ
  5. ನಾಗಮಂಗಲ
  6. ಮಳವಳ್ಳಿ
  7. ಕುಣಿಗಲ್
  8. ಗುಬ್ಬಿ
  9. ಮಧುಗಿರಿ
  10. ಕೊರಟಗೆರೆ
  11. ಪಾವಗಡ
  12. ಚಿಂತಾಮಣಿ
  13. ಶಿಡ್ಲಘಟ್ಟ
  14. ಬಾಗೇಪಲ್ಲಿ
  15. ಗೌರಿಬಿದನೂರು
  16. ಮುಳಬಾಗಿಲು
  17. ಶ್ರೀನಿವಾಸಪುರ
  18. ಕೋಲಾರ
  19. ದೇವನಹಳ್ಳಿ
  20. ಹೆಚ್.ಡಿ ಕೋಟೆ
  21. ಹನೂರು
  22. ವರುಣ
  23. ಚಾಮುಂಡೇಶ್ವರಿ
  24. ಹೊಳೆನರಸೀಪುರ
  25. ಶ್ರವಣಬೆಳಗೊಳ
  26. ಅಫ್ಜಲಪುರ
  27. ಗುರುಮಠಕಲ್
  28. ಬೀದರ್ ದಕ್ಷಿಣ
  29. ಹಳಿಯಾಳ
  30. ದಾವಣಗೆರೆ ದಕ್ಷಿಣ
  31. ಶಹಾಪುರ
  32. ಮಾನ್ವಿ
  33. ಸಿಂಧನೂರು
  34. ಯಮಕನಮರಡಿ
  35. ಸಂಡೂರು
  36. ಭದ್ರಾವತಿ
  37. ಬ್ಯಾಟರಾಯಪುರ
  38. ಪುಲಿಕೇಶಿನಗರ
  39. ವಿಜಯನಗರ
  40. ಸರ್ವಜ್ಞನಗರ
  41. ಬಿಟಿಎಂ ಲೇಔಟ್
  42. ಗಾಂಧಿನಗರ
  43. ರಾಮನಗರ
  44. ಕನಕಪುರ

ಇಷ್ಟು ಕ್ಷೇತ್ರಗಳಲ್ಲಿ ಒಮ್ಮೆಯೂ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇವುಗಳಲ್ಲಿ ಬಹುತೇಕ ಹಳೇ ಮೈಸೂರು ಪ್ರಾಂತ್ಯದ ಕ್ಷೇತ್ರಗಳಾಗಿವೆ. ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ ಹೊರತು ಬಿಜೆಪಿಗೆ ಮೂರನೇ ಸ್ಥಾನ. ಬಿಜೆಪಿಗೆ ಲಿಂಗಾಯತ ಸಮುದಾಯ ಕೆಲವೊಮ್ಮೆ ಹೆಚ್ಚಿನ ಬೆಂಬಲ ನೀಡಿದೆ. ಆದರೆ ಹಳೇ ಮೈಸೂರು ಪ್ರಾಂತ್ಯದಲ್ಲಿ ಲಿಂಗಾಯತರ ಪ್ರಾಬಲ್ಯವಿಲ್ಲ. ಅದು ಕೂಡ ಬಿಜೆಪಿ ಸೋಲಿಗೆ ಒಂದು ಕಾರಣವಾಗಿದೆ.

ಬಿಜೆಪಿ ಒಮ್ಮೆ ಮಾತ್ರ ಗೆಲುವು ಕಂಡ ಕ್ಷೇತ್ರಗಳಿವು

  1. ಕೆ.ಆರ್ ಪೇಟೆ (2019 ಉಪ)
  2. ನರಸಿಂಹರಾಜ (1994)
  3. ಚನ್ನಪಟ್ಟಣ (2011 ಉಪ)
  4. ಮಾಗಡಿ (1994)
  5. ಶಾಂತಿನಗರ (2004)
  6. ಚಾಮರಾಜ ಪೇಟೆ (1994)
  7. ಮಹಾಲಕ್ಷ್ಮೀ ಲೇಔಟ್ (2019 ಉಪ)
  8. ಗೋವಿಂದರಾಜನಗರ (2018)
  9. ಅರಕಲಗೂಡು (1999)
  10. ಅರಸೀಕೆರೆ (2004)
  11. ಬೇಲೂರು (1999)
  12. ಗದಗ (2008)
  13. ಮುದ್ದೇಬಿಹಾಳ (2018)
  14. ಬಬಲೇಶ್ವರ (1999)
  15. ನಾಗಠಾಣ (2008)
  16. ಇಂಡಿ (2008)
  17. ಯಾದಗಿರಿ (2018)
  18. ಲಿಂಗಸಗೂರು (2008)
  19. ಬೆಳಗಾವಿ ಉತ್ತರ (2018)
  20. ಗೋಕಾಕ್ (2019 ಉಪ)
  21. ಆಳಂದ (2018)
  22. ಹುಮ್ನಾಬಾದ್ (1999)
  23. ಚಿಂಚೋಳ್ಳಿ (2008)
  24. ಕಂಪ್ಲಿ (2008)
  25. ಹಡಗಲಿ (2008)
  26. ಹಗರಿಬೊಮ್ಮನಹಳ್ಳಿ (2008)
  27. ಕುಂದಗೋಳ (2008)
  28. ಹರಿಹರ (2008)
  29. ಮೂಡಬಿದರೆ (2018)
  30. ಮಂಗಳೂರು ನಗರ (1994)
  31. ಶಿರಾ (2020 ಉಪಚುನಾವಣೆ)
  32. ಮೊಳಕಾಲ್ಮೂರು (2018)
  33. ಹಿರಿಯೂರು (2018)
  34. ಹೊಸದುರ್ಗ (2018)
  35. ಚಿಕ್ಕೋಡಿ (2004)
  36. ಕುಡಚಿ (2018)
  37. ಚಿಕ್ಕಬಳ್ಳಾಪುರ (2019 ಉಪ)
  38. ನೆಲಮಂಗಲ (2008)
  39. ಹೊಸಕೋಟೆ (2008)
  40. ದೊಡ್ಡಬಳ್ಳಾಪುರ (1999)
  41. ಚಾಮರಾಜನಗರ (1999)
  42. ನಂಜನಗೂಡು (2018)
  43. ಕೊಳ್ಳೇಗಾಲ (2009 ಉಪ)
  44. ಟಿ.ನರಸೀಪುರ (1999)
  45. ಗುಂಡ್ಲುಪೇಟೆ (2018)
  46. ಬಂಗಾರಪೇಟೆ (2011 ಉಪ)
  47. ಕೊಪ್ಪಳ (2011 ಉಪ)
  48. ಮಸ್ಕಿ (2008)
  49. ಪಿರಿಯಾಪಟ್ಟಣ (1999)
  50. ಚಿತ್ತಾಪುರ (2008)
  51. ಜೇವರ್ಗಿ (2008)
  52. ಕಲಬುರಗಿ ಉತ್ತರ (2004)
  53. ಖಾನಪುರ (2008)

ಈ 53 ಕ್ಷೇತ್ರಗಳಲ್ಲಿ ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಆಪರೇಷನ್ ಕಮಲ ಕಾರಣಕ್ಕಾಗಿ ನಡೆದ ಚುನಾವಣೆಗಳೇ ಹೆಚ್ಚಾಗಿವೆ. ಇನ್ನು 2008ರಲ್ಲಿ ಯಡಿಯೂರಪ್ಪನವರಿಗೆ ಸಿಎಂ ಸ್ಥಾನ ಕೊಡದೇ ಮೋಸ ಮಾಡಲಾಯಿತು ಎಂಬ ಅನುಕಂಪದಿಂದ ಬಹಳಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬಂದಿತ್ತು.

ಇದನ್ನೂ ಓದಿ: ಮುಸ್ಲಿಮರಿಗೆ ಒಂದೂ ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್‌ನ 22, ಕಾಂಗ್ರೆಸ್ 15 ಅಭ್ಯರ್ಥಿಗಳ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...