Homeಮುಖಪುಟಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

- Advertisement -
- Advertisement -

ಇದು ಮುಸ್ಲಿಮರು ಒಗ್ಗಟ್ಟಾಗುವ ಮತ್ತು ತಮ್ಮ ಮೀಸಲಾತಿ ಕೇಳುವ, ತಮಗಾಗಿ ಮಾತನಾಡುವ ಸಮಯ ಎಂದು ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮರಾಠ, ಒಬಿಸಿ ಪ್ರತಿಭಟನೆಗಳು ನಡೆಯುತ್ತಿರುವಾಗ ಮುಸ್ಲಿಮರಿಗೆ ಮೀಸಲಾತಿಯ ಆಗ್ರವು ಮತ್ತೆ ಭುಗಿಲೆದ್ದಿದೆ. ಶುಭಾಂಗಿ ಖಪ್ರೆ ಅವರೊಂದಿಗಿನ ಸಂದರ್ಶನದಲ್ಲಿ ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಮುಸ್ಲಿಂ ಮೀಸಲಾತಿಯ ಬೇಡಿಕೆಯನ್ನು ಇಟ್ಟಿದ್ದಾರೆ.

ಮುಸ್ಲಿಂ ಮೀಸಲಾತಿ ಹೊಸ ವಿಚಾರವಲ್ಲ. ಈ ಹಿಂದೆಯೂ ಮುಸ್ಲಿಂ ಮೀಸಲಾತಿಯ ಆಗ್ರಹ ಕೇಳಿಬಂದಿತ್ತು. ಮೀಸಲಾತಿಯ ಬೇಡಿಕೆಯಲ್ಲಿ ಯಾವುದೇ ಸಮುದಾಯವು ಸಮರ್ಥನೆಯನ್ನು ಹೊಂದಿದ್ದರೆ ಅದು ಮುಸ್ಲಿಮರು ಎಂದು ನಾನು ಹೇಳುತ್ತೇನೆ. ನಾನು ವೈಯಕ್ತಿಕವಾಗಿ ಮರಾಠರ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸುತ್ತೇನೆ. ಅದೇ ರೀತಿ ಮುಸ್ಲಿಮರಿಗೂ ಕೂಡ ಮೀಸಲಾತಿ ಪಡೆಯುವ ಹಕ್ಕಿದೆ ಎಂದು ಹೇಳಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ ಎಂದು ಬಲಪಂಥೀಯರು ಸಾಮಾನ್ಯವಾಗಿ ಹೇಳುವ ವಾದವಾಗಿದೆ. ಆದರೆ ಇಲ್ಲಿ ವಿಷಯವೆಂದರೆ ನಾವು ಧಾರ್ಮಿಕ ಮಾನದಂಡಗಳ ಆಧಾರದ ಮೇಲೆ ಮುಸ್ಲಿಂ ಮೀಸಲಾತಿಯನ್ನು ಬಯಸುತ್ತಿಲ್ಲ. ನಾವು ಪ್ರತಿಪಾದಿಸಲು ಬಯಸುವುದು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯಾಗಿದೆ. ಮೀಸಲಾತಿಯ ಮೂಲ ಮಾನದಂಡವೆಂದರೆ ಸಾಮಾಜಿಕ ಹಿಂದುಳಿದಿರುವಿಕೆ, ಇದು ಮುಸ್ಲಿಂ ಸಮುದಾಯಕ್ಕೆ ಅನ್ವಯಿಸುತ್ತದೆ. ಸಾಚಾರ್ ಸಮಿತಿ ವರದಿ, ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಹಿಂದುಳಿದಿರುವಿಕೆಯನ್ನು ಎತ್ತಿ ತೋರಿಸಿವೆ ಎಂದು ಹೇಳಿದ್ದಾರೆ.

2014ರಲ್ಲಿ ಅಂದಿನ ಕಾಂಗ್ರೆಸ್‌ ಸರಕಾರ ಮರಾಠರಿಗೆ ಶೇ.16ರಷ್ಟು ಮೀಸಲಾತಿ ನೀಡಿತ್ತು. ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿಯನ್ನು ನೀಡಿದೆ. ಬಾಂಬೆ ಹೈಕೋರ್ಟ್ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಅನುಮೋದಿಸಲಿಲ್ಲ ಆದರೆ ಶಿಕ್ಷಣದಲ್ಲಿ ಮುಸ್ಲಿಮರ ಕೋಟಾವನ್ನು ಎತ್ತಿಹಿಡಿಯಿತು. ದುರದೃಷ್ಟವಶಾತ್ ಸರ್ಕಾರವು ಅದನ್ನು ಜಾರಿಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮೌಲಾನಾ ಆಜಾದ್ ವಿಚಾರ ಮಂಚ್ ವತಿಯಿಂದ ನಾವು ಮಹಾರಾಷ್ಟ್ರದಲ್ಲಿ ಪ್ರವಾಸ ಮಾಡುತ್ತೇವೆ ಮತ್ತು ಮುಸ್ಲಿಮರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಒಟ್ಟಾಗುಂತೆ ಮತ್ತು ಸಂಘಟಿತರಾಗುವಂತೆ ಮನವಿ ಮಾಡುತ್ತೇವೆ. ನಾವು ಯಾವುದೇ ಹಿಂಸಾಚಾರ ಅಥವಾ ಪ್ರತಿಭಟನೆಗಳನ್ನು ಬಯಸುವುದಿಲ್ಲ. ಆದರೆ ಇದು  ಮುಸ್ಲಿಮರು ಒಗ್ಗೂಡುವ ಮತ್ತು ತಮಗಾಗಿ ಮಾತನಾಡುವ ಸಮಯ ಇದು ಎಂದು ಅವರು ಹೇಳಿದ್ದಾರೆ.

ಶಿಕ್ಷಣ, ಉದ್ಯೋಗ, ಜೀವನ ಮಟ್ಟ ಎಲ್ಲದರಲ್ಲೂ ಮುಸ್ಲಿಮರು ಹಿಂದುಳಿದಿದ್ದಾರೆ. ಮುಸ್ಲಿಮರಲ್ಲಿ ಶಾಲೆ ಬಿಟ್ಟವರ ಪ್ರಮಾಣ ಶೇ.75ರಷ್ಟಿದೆ. 2 ರಿಂದ 2.5 ರಷ್ಟು ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯತ್ತಾರೆ. ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯವು ಶೇಕಡಾ 2ಕ್ಕಿಂತ ಕಡಿಮೆಯಿದೆ. ಖಾಸಗಿ ಉದ್ಯೋಗಗಳಲ್ಲಿ ಇದು ಶೇ. 3ರಷ್ಟು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಕೊಳೆಗೇರಿಗಳಲ್ಲಿ ಹೆಚ್ಚಿನ ಮುಸ್ಲಿಂ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಸ್ವಾತಂತ್ರ್ಯದ ನಂತರ ಶಿಕ್ಷಣ, ಉದ್ಯೋಗ ಮತ್ತು ಜೀವನೋಪಾಯ ಸೂಚ್ಯಂಕದಲ್ಲಿ ಮುಸ್ಲಿಮರು,  ದಲಿತರು ಮತ್ತು ಬುಡಕಟ್ಟು ಜನಾಂಗದವರಿಗಿಂತ ಕೆಳಗಿರುವುದು ಸತ್ಯ. ದಲಿತರು ಮತ್ತು ಬುಡಕಟ್ಟು ಜನರ ಜೀವನ ಚೆನ್ನಾಗಿದೆ ಎಂದು ನಾನು ಹೇಳುತ್ತಿಲ್ಲ. ನಾನು ಹೇಳಲು ಪ್ರಯತ್ನಿಸುತ್ತಿರುವ ಅಂಶವೆಂದರೆ ದಲಿತರು ಅಥವಾ ಬುಡಕಟ್ಟು ಜನಾಂಗದವರ ಪ್ರಗತಿಗೆ ಹೋಲಿಸಿದರೆ ಮುಸ್ಲಿಮರು ತುಂಬಾ ಕೆಳಮಟ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...