Homeಮುಖಪುಟಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

- Advertisement -
- Advertisement -

ಇದು ಮುಸ್ಲಿಮರು ಒಗ್ಗಟ್ಟಾಗುವ ಮತ್ತು ತಮ್ಮ ಮೀಸಲಾತಿ ಕೇಳುವ, ತಮಗಾಗಿ ಮಾತನಾಡುವ ಸಮಯ ಎಂದು ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮರಾಠ, ಒಬಿಸಿ ಪ್ರತಿಭಟನೆಗಳು ನಡೆಯುತ್ತಿರುವಾಗ ಮುಸ್ಲಿಮರಿಗೆ ಮೀಸಲಾತಿಯ ಆಗ್ರವು ಮತ್ತೆ ಭುಗಿಲೆದ್ದಿದೆ. ಶುಭಾಂಗಿ ಖಪ್ರೆ ಅವರೊಂದಿಗಿನ ಸಂದರ್ಶನದಲ್ಲಿ ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಮುಸ್ಲಿಂ ಮೀಸಲಾತಿಯ ಬೇಡಿಕೆಯನ್ನು ಇಟ್ಟಿದ್ದಾರೆ.

ಮುಸ್ಲಿಂ ಮೀಸಲಾತಿ ಹೊಸ ವಿಚಾರವಲ್ಲ. ಈ ಹಿಂದೆಯೂ ಮುಸ್ಲಿಂ ಮೀಸಲಾತಿಯ ಆಗ್ರಹ ಕೇಳಿಬಂದಿತ್ತು. ಮೀಸಲಾತಿಯ ಬೇಡಿಕೆಯಲ್ಲಿ ಯಾವುದೇ ಸಮುದಾಯವು ಸಮರ್ಥನೆಯನ್ನು ಹೊಂದಿದ್ದರೆ ಅದು ಮುಸ್ಲಿಮರು ಎಂದು ನಾನು ಹೇಳುತ್ತೇನೆ. ನಾನು ವೈಯಕ್ತಿಕವಾಗಿ ಮರಾಠರ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸುತ್ತೇನೆ. ಅದೇ ರೀತಿ ಮುಸ್ಲಿಮರಿಗೂ ಕೂಡ ಮೀಸಲಾತಿ ಪಡೆಯುವ ಹಕ್ಕಿದೆ ಎಂದು ಹೇಳಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ ಎಂದು ಬಲಪಂಥೀಯರು ಸಾಮಾನ್ಯವಾಗಿ ಹೇಳುವ ವಾದವಾಗಿದೆ. ಆದರೆ ಇಲ್ಲಿ ವಿಷಯವೆಂದರೆ ನಾವು ಧಾರ್ಮಿಕ ಮಾನದಂಡಗಳ ಆಧಾರದ ಮೇಲೆ ಮುಸ್ಲಿಂ ಮೀಸಲಾತಿಯನ್ನು ಬಯಸುತ್ತಿಲ್ಲ. ನಾವು ಪ್ರತಿಪಾದಿಸಲು ಬಯಸುವುದು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯಾಗಿದೆ. ಮೀಸಲಾತಿಯ ಮೂಲ ಮಾನದಂಡವೆಂದರೆ ಸಾಮಾಜಿಕ ಹಿಂದುಳಿದಿರುವಿಕೆ, ಇದು ಮುಸ್ಲಿಂ ಸಮುದಾಯಕ್ಕೆ ಅನ್ವಯಿಸುತ್ತದೆ. ಸಾಚಾರ್ ಸಮಿತಿ ವರದಿ, ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಹಿಂದುಳಿದಿರುವಿಕೆಯನ್ನು ಎತ್ತಿ ತೋರಿಸಿವೆ ಎಂದು ಹೇಳಿದ್ದಾರೆ.

2014ರಲ್ಲಿ ಅಂದಿನ ಕಾಂಗ್ರೆಸ್‌ ಸರಕಾರ ಮರಾಠರಿಗೆ ಶೇ.16ರಷ್ಟು ಮೀಸಲಾತಿ ನೀಡಿತ್ತು. ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿಯನ್ನು ನೀಡಿದೆ. ಬಾಂಬೆ ಹೈಕೋರ್ಟ್ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಅನುಮೋದಿಸಲಿಲ್ಲ ಆದರೆ ಶಿಕ್ಷಣದಲ್ಲಿ ಮುಸ್ಲಿಮರ ಕೋಟಾವನ್ನು ಎತ್ತಿಹಿಡಿಯಿತು. ದುರದೃಷ್ಟವಶಾತ್ ಸರ್ಕಾರವು ಅದನ್ನು ಜಾರಿಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮೌಲಾನಾ ಆಜಾದ್ ವಿಚಾರ ಮಂಚ್ ವತಿಯಿಂದ ನಾವು ಮಹಾರಾಷ್ಟ್ರದಲ್ಲಿ ಪ್ರವಾಸ ಮಾಡುತ್ತೇವೆ ಮತ್ತು ಮುಸ್ಲಿಮರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಒಟ್ಟಾಗುಂತೆ ಮತ್ತು ಸಂಘಟಿತರಾಗುವಂತೆ ಮನವಿ ಮಾಡುತ್ತೇವೆ. ನಾವು ಯಾವುದೇ ಹಿಂಸಾಚಾರ ಅಥವಾ ಪ್ರತಿಭಟನೆಗಳನ್ನು ಬಯಸುವುದಿಲ್ಲ. ಆದರೆ ಇದು  ಮುಸ್ಲಿಮರು ಒಗ್ಗೂಡುವ ಮತ್ತು ತಮಗಾಗಿ ಮಾತನಾಡುವ ಸಮಯ ಇದು ಎಂದು ಅವರು ಹೇಳಿದ್ದಾರೆ.

ಶಿಕ್ಷಣ, ಉದ್ಯೋಗ, ಜೀವನ ಮಟ್ಟ ಎಲ್ಲದರಲ್ಲೂ ಮುಸ್ಲಿಮರು ಹಿಂದುಳಿದಿದ್ದಾರೆ. ಮುಸ್ಲಿಮರಲ್ಲಿ ಶಾಲೆ ಬಿಟ್ಟವರ ಪ್ರಮಾಣ ಶೇ.75ರಷ್ಟಿದೆ. 2 ರಿಂದ 2.5 ರಷ್ಟು ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯತ್ತಾರೆ. ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯವು ಶೇಕಡಾ 2ಕ್ಕಿಂತ ಕಡಿಮೆಯಿದೆ. ಖಾಸಗಿ ಉದ್ಯೋಗಗಳಲ್ಲಿ ಇದು ಶೇ. 3ರಷ್ಟು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಕೊಳೆಗೇರಿಗಳಲ್ಲಿ ಹೆಚ್ಚಿನ ಮುಸ್ಲಿಂ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಸ್ವಾತಂತ್ರ್ಯದ ನಂತರ ಶಿಕ್ಷಣ, ಉದ್ಯೋಗ ಮತ್ತು ಜೀವನೋಪಾಯ ಸೂಚ್ಯಂಕದಲ್ಲಿ ಮುಸ್ಲಿಮರು,  ದಲಿತರು ಮತ್ತು ಬುಡಕಟ್ಟು ಜನಾಂಗದವರಿಗಿಂತ ಕೆಳಗಿರುವುದು ಸತ್ಯ. ದಲಿತರು ಮತ್ತು ಬುಡಕಟ್ಟು ಜನರ ಜೀವನ ಚೆನ್ನಾಗಿದೆ ಎಂದು ನಾನು ಹೇಳುತ್ತಿಲ್ಲ. ನಾನು ಹೇಳಲು ಪ್ರಯತ್ನಿಸುತ್ತಿರುವ ಅಂಶವೆಂದರೆ ದಲಿತರು ಅಥವಾ ಬುಡಕಟ್ಟು ಜನಾಂಗದವರ ಪ್ರಗತಿಗೆ ಹೋಲಿಸಿದರೆ ಮುಸ್ಲಿಮರು ತುಂಬಾ ಕೆಳಮಟ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...