Homeಮುಖಪುಟಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

- Advertisement -
- Advertisement -

ಇದು ಮುಸ್ಲಿಮರು ಒಗ್ಗಟ್ಟಾಗುವ ಮತ್ತು ತಮ್ಮ ಮೀಸಲಾತಿ ಕೇಳುವ, ತಮಗಾಗಿ ಮಾತನಾಡುವ ಸಮಯ ಎಂದು ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮರಾಠ, ಒಬಿಸಿ ಪ್ರತಿಭಟನೆಗಳು ನಡೆಯುತ್ತಿರುವಾಗ ಮುಸ್ಲಿಮರಿಗೆ ಮೀಸಲಾತಿಯ ಆಗ್ರವು ಮತ್ತೆ ಭುಗಿಲೆದ್ದಿದೆ. ಶುಭಾಂಗಿ ಖಪ್ರೆ ಅವರೊಂದಿಗಿನ ಸಂದರ್ಶನದಲ್ಲಿ ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಮುಸ್ಲಿಂ ಮೀಸಲಾತಿಯ ಬೇಡಿಕೆಯನ್ನು ಇಟ್ಟಿದ್ದಾರೆ.

ಮುಸ್ಲಿಂ ಮೀಸಲಾತಿ ಹೊಸ ವಿಚಾರವಲ್ಲ. ಈ ಹಿಂದೆಯೂ ಮುಸ್ಲಿಂ ಮೀಸಲಾತಿಯ ಆಗ್ರಹ ಕೇಳಿಬಂದಿತ್ತು. ಮೀಸಲಾತಿಯ ಬೇಡಿಕೆಯಲ್ಲಿ ಯಾವುದೇ ಸಮುದಾಯವು ಸಮರ್ಥನೆಯನ್ನು ಹೊಂದಿದ್ದರೆ ಅದು ಮುಸ್ಲಿಮರು ಎಂದು ನಾನು ಹೇಳುತ್ತೇನೆ. ನಾನು ವೈಯಕ್ತಿಕವಾಗಿ ಮರಾಠರ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸುತ್ತೇನೆ. ಅದೇ ರೀತಿ ಮುಸ್ಲಿಮರಿಗೂ ಕೂಡ ಮೀಸಲಾತಿ ಪಡೆಯುವ ಹಕ್ಕಿದೆ ಎಂದು ಹೇಳಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ ಎಂದು ಬಲಪಂಥೀಯರು ಸಾಮಾನ್ಯವಾಗಿ ಹೇಳುವ ವಾದವಾಗಿದೆ. ಆದರೆ ಇಲ್ಲಿ ವಿಷಯವೆಂದರೆ ನಾವು ಧಾರ್ಮಿಕ ಮಾನದಂಡಗಳ ಆಧಾರದ ಮೇಲೆ ಮುಸ್ಲಿಂ ಮೀಸಲಾತಿಯನ್ನು ಬಯಸುತ್ತಿಲ್ಲ. ನಾವು ಪ್ರತಿಪಾದಿಸಲು ಬಯಸುವುದು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯಾಗಿದೆ. ಮೀಸಲಾತಿಯ ಮೂಲ ಮಾನದಂಡವೆಂದರೆ ಸಾಮಾಜಿಕ ಹಿಂದುಳಿದಿರುವಿಕೆ, ಇದು ಮುಸ್ಲಿಂ ಸಮುದಾಯಕ್ಕೆ ಅನ್ವಯಿಸುತ್ತದೆ. ಸಾಚಾರ್ ಸಮಿತಿ ವರದಿ, ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಹಿಂದುಳಿದಿರುವಿಕೆಯನ್ನು ಎತ್ತಿ ತೋರಿಸಿವೆ ಎಂದು ಹೇಳಿದ್ದಾರೆ.

2014ರಲ್ಲಿ ಅಂದಿನ ಕಾಂಗ್ರೆಸ್‌ ಸರಕಾರ ಮರಾಠರಿಗೆ ಶೇ.16ರಷ್ಟು ಮೀಸಲಾತಿ ನೀಡಿತ್ತು. ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿಯನ್ನು ನೀಡಿದೆ. ಬಾಂಬೆ ಹೈಕೋರ್ಟ್ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಅನುಮೋದಿಸಲಿಲ್ಲ ಆದರೆ ಶಿಕ್ಷಣದಲ್ಲಿ ಮುಸ್ಲಿಮರ ಕೋಟಾವನ್ನು ಎತ್ತಿಹಿಡಿಯಿತು. ದುರದೃಷ್ಟವಶಾತ್ ಸರ್ಕಾರವು ಅದನ್ನು ಜಾರಿಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮೌಲಾನಾ ಆಜಾದ್ ವಿಚಾರ ಮಂಚ್ ವತಿಯಿಂದ ನಾವು ಮಹಾರಾಷ್ಟ್ರದಲ್ಲಿ ಪ್ರವಾಸ ಮಾಡುತ್ತೇವೆ ಮತ್ತು ಮುಸ್ಲಿಮರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಒಟ್ಟಾಗುಂತೆ ಮತ್ತು ಸಂಘಟಿತರಾಗುವಂತೆ ಮನವಿ ಮಾಡುತ್ತೇವೆ. ನಾವು ಯಾವುದೇ ಹಿಂಸಾಚಾರ ಅಥವಾ ಪ್ರತಿಭಟನೆಗಳನ್ನು ಬಯಸುವುದಿಲ್ಲ. ಆದರೆ ಇದು  ಮುಸ್ಲಿಮರು ಒಗ್ಗೂಡುವ ಮತ್ತು ತಮಗಾಗಿ ಮಾತನಾಡುವ ಸಮಯ ಇದು ಎಂದು ಅವರು ಹೇಳಿದ್ದಾರೆ.

ಶಿಕ್ಷಣ, ಉದ್ಯೋಗ, ಜೀವನ ಮಟ್ಟ ಎಲ್ಲದರಲ್ಲೂ ಮುಸ್ಲಿಮರು ಹಿಂದುಳಿದಿದ್ದಾರೆ. ಮುಸ್ಲಿಮರಲ್ಲಿ ಶಾಲೆ ಬಿಟ್ಟವರ ಪ್ರಮಾಣ ಶೇ.75ರಷ್ಟಿದೆ. 2 ರಿಂದ 2.5 ರಷ್ಟು ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯತ್ತಾರೆ. ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯವು ಶೇಕಡಾ 2ಕ್ಕಿಂತ ಕಡಿಮೆಯಿದೆ. ಖಾಸಗಿ ಉದ್ಯೋಗಗಳಲ್ಲಿ ಇದು ಶೇ. 3ರಷ್ಟು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಕೊಳೆಗೇರಿಗಳಲ್ಲಿ ಹೆಚ್ಚಿನ ಮುಸ್ಲಿಂ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಸ್ವಾತಂತ್ರ್ಯದ ನಂತರ ಶಿಕ್ಷಣ, ಉದ್ಯೋಗ ಮತ್ತು ಜೀವನೋಪಾಯ ಸೂಚ್ಯಂಕದಲ್ಲಿ ಮುಸ್ಲಿಮರು,  ದಲಿತರು ಮತ್ತು ಬುಡಕಟ್ಟು ಜನಾಂಗದವರಿಗಿಂತ ಕೆಳಗಿರುವುದು ಸತ್ಯ. ದಲಿತರು ಮತ್ತು ಬುಡಕಟ್ಟು ಜನರ ಜೀವನ ಚೆನ್ನಾಗಿದೆ ಎಂದು ನಾನು ಹೇಳುತ್ತಿಲ್ಲ. ನಾನು ಹೇಳಲು ಪ್ರಯತ್ನಿಸುತ್ತಿರುವ ಅಂಶವೆಂದರೆ ದಲಿತರು ಅಥವಾ ಬುಡಕಟ್ಟು ಜನಾಂಗದವರ ಪ್ರಗತಿಗೆ ಹೋಲಿಸಿದರೆ ಮುಸ್ಲಿಮರು ತುಂಬಾ ಕೆಳಮಟ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...