Homeಮುಖಪುಟಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

- Advertisement -
- Advertisement -

ಇದು ಮುಸ್ಲಿಮರು ಒಗ್ಗಟ್ಟಾಗುವ ಮತ್ತು ತಮ್ಮ ಮೀಸಲಾತಿ ಕೇಳುವ, ತಮಗಾಗಿ ಮಾತನಾಡುವ ಸಮಯ ಎಂದು ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮರಾಠ, ಒಬಿಸಿ ಪ್ರತಿಭಟನೆಗಳು ನಡೆಯುತ್ತಿರುವಾಗ ಮುಸ್ಲಿಮರಿಗೆ ಮೀಸಲಾತಿಯ ಆಗ್ರವು ಮತ್ತೆ ಭುಗಿಲೆದ್ದಿದೆ. ಶುಭಾಂಗಿ ಖಪ್ರೆ ಅವರೊಂದಿಗಿನ ಸಂದರ್ಶನದಲ್ಲಿ ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಮುಸ್ಲಿಂ ಮೀಸಲಾತಿಯ ಬೇಡಿಕೆಯನ್ನು ಇಟ್ಟಿದ್ದಾರೆ.

ಮುಸ್ಲಿಂ ಮೀಸಲಾತಿ ಹೊಸ ವಿಚಾರವಲ್ಲ. ಈ ಹಿಂದೆಯೂ ಮುಸ್ಲಿಂ ಮೀಸಲಾತಿಯ ಆಗ್ರಹ ಕೇಳಿಬಂದಿತ್ತು. ಮೀಸಲಾತಿಯ ಬೇಡಿಕೆಯಲ್ಲಿ ಯಾವುದೇ ಸಮುದಾಯವು ಸಮರ್ಥನೆಯನ್ನು ಹೊಂದಿದ್ದರೆ ಅದು ಮುಸ್ಲಿಮರು ಎಂದು ನಾನು ಹೇಳುತ್ತೇನೆ. ನಾನು ವೈಯಕ್ತಿಕವಾಗಿ ಮರಾಠರ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸುತ್ತೇನೆ. ಅದೇ ರೀತಿ ಮುಸ್ಲಿಮರಿಗೂ ಕೂಡ ಮೀಸಲಾತಿ ಪಡೆಯುವ ಹಕ್ಕಿದೆ ಎಂದು ಹೇಳಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ ಎಂದು ಬಲಪಂಥೀಯರು ಸಾಮಾನ್ಯವಾಗಿ ಹೇಳುವ ವಾದವಾಗಿದೆ. ಆದರೆ ಇಲ್ಲಿ ವಿಷಯವೆಂದರೆ ನಾವು ಧಾರ್ಮಿಕ ಮಾನದಂಡಗಳ ಆಧಾರದ ಮೇಲೆ ಮುಸ್ಲಿಂ ಮೀಸಲಾತಿಯನ್ನು ಬಯಸುತ್ತಿಲ್ಲ. ನಾವು ಪ್ರತಿಪಾದಿಸಲು ಬಯಸುವುದು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯಾಗಿದೆ. ಮೀಸಲಾತಿಯ ಮೂಲ ಮಾನದಂಡವೆಂದರೆ ಸಾಮಾಜಿಕ ಹಿಂದುಳಿದಿರುವಿಕೆ, ಇದು ಮುಸ್ಲಿಂ ಸಮುದಾಯಕ್ಕೆ ಅನ್ವಯಿಸುತ್ತದೆ. ಸಾಚಾರ್ ಸಮಿತಿ ವರದಿ, ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಹಿಂದುಳಿದಿರುವಿಕೆಯನ್ನು ಎತ್ತಿ ತೋರಿಸಿವೆ ಎಂದು ಹೇಳಿದ್ದಾರೆ.

2014ರಲ್ಲಿ ಅಂದಿನ ಕಾಂಗ್ರೆಸ್‌ ಸರಕಾರ ಮರಾಠರಿಗೆ ಶೇ.16ರಷ್ಟು ಮೀಸಲಾತಿ ನೀಡಿತ್ತು. ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿಯನ್ನು ನೀಡಿದೆ. ಬಾಂಬೆ ಹೈಕೋರ್ಟ್ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಅನುಮೋದಿಸಲಿಲ್ಲ ಆದರೆ ಶಿಕ್ಷಣದಲ್ಲಿ ಮುಸ್ಲಿಮರ ಕೋಟಾವನ್ನು ಎತ್ತಿಹಿಡಿಯಿತು. ದುರದೃಷ್ಟವಶಾತ್ ಸರ್ಕಾರವು ಅದನ್ನು ಜಾರಿಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮೌಲಾನಾ ಆಜಾದ್ ವಿಚಾರ ಮಂಚ್ ವತಿಯಿಂದ ನಾವು ಮಹಾರಾಷ್ಟ್ರದಲ್ಲಿ ಪ್ರವಾಸ ಮಾಡುತ್ತೇವೆ ಮತ್ತು ಮುಸ್ಲಿಮರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಒಟ್ಟಾಗುಂತೆ ಮತ್ತು ಸಂಘಟಿತರಾಗುವಂತೆ ಮನವಿ ಮಾಡುತ್ತೇವೆ. ನಾವು ಯಾವುದೇ ಹಿಂಸಾಚಾರ ಅಥವಾ ಪ್ರತಿಭಟನೆಗಳನ್ನು ಬಯಸುವುದಿಲ್ಲ. ಆದರೆ ಇದು  ಮುಸ್ಲಿಮರು ಒಗ್ಗೂಡುವ ಮತ್ತು ತಮಗಾಗಿ ಮಾತನಾಡುವ ಸಮಯ ಇದು ಎಂದು ಅವರು ಹೇಳಿದ್ದಾರೆ.

ಶಿಕ್ಷಣ, ಉದ್ಯೋಗ, ಜೀವನ ಮಟ್ಟ ಎಲ್ಲದರಲ್ಲೂ ಮುಸ್ಲಿಮರು ಹಿಂದುಳಿದಿದ್ದಾರೆ. ಮುಸ್ಲಿಮರಲ್ಲಿ ಶಾಲೆ ಬಿಟ್ಟವರ ಪ್ರಮಾಣ ಶೇ.75ರಷ್ಟಿದೆ. 2 ರಿಂದ 2.5 ರಷ್ಟು ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯತ್ತಾರೆ. ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯವು ಶೇಕಡಾ 2ಕ್ಕಿಂತ ಕಡಿಮೆಯಿದೆ. ಖಾಸಗಿ ಉದ್ಯೋಗಗಳಲ್ಲಿ ಇದು ಶೇ. 3ರಷ್ಟು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಕೊಳೆಗೇರಿಗಳಲ್ಲಿ ಹೆಚ್ಚಿನ ಮುಸ್ಲಿಂ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಸ್ವಾತಂತ್ರ್ಯದ ನಂತರ ಶಿಕ್ಷಣ, ಉದ್ಯೋಗ ಮತ್ತು ಜೀವನೋಪಾಯ ಸೂಚ್ಯಂಕದಲ್ಲಿ ಮುಸ್ಲಿಮರು,  ದಲಿತರು ಮತ್ತು ಬುಡಕಟ್ಟು ಜನಾಂಗದವರಿಗಿಂತ ಕೆಳಗಿರುವುದು ಸತ್ಯ. ದಲಿತರು ಮತ್ತು ಬುಡಕಟ್ಟು ಜನರ ಜೀವನ ಚೆನ್ನಾಗಿದೆ ಎಂದು ನಾನು ಹೇಳುತ್ತಿಲ್ಲ. ನಾನು ಹೇಳಲು ಪ್ರಯತ್ನಿಸುತ್ತಿರುವ ಅಂಶವೆಂದರೆ ದಲಿತರು ಅಥವಾ ಬುಡಕಟ್ಟು ಜನಾಂಗದವರ ಪ್ರಗತಿಗೆ ಹೋಲಿಸಿದರೆ ಮುಸ್ಲಿಮರು ತುಂಬಾ ಕೆಳಮಟ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...