Homeಮುಖಪುಟ‘ಕಾಲವೆ ಕಥೆ ಹೇಳುತ್ತದೆ!’ - ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

- Advertisement -
- Advertisement -

ತಮ್ಮ ಕಚೇರಿಗಳ ಮೇಲೆ ನಡೆದ ಆದಾಯ ತೆರಿಗೆ ವಿಚಾರದ ಬಗ್ಗೆ ನಟ ಸೋನು ಸೂದ್ ಪ್ರತಿಕ್ರಿಯೆ ನೀಡಿದ್ದು, ‘‘ಕಾಲವೆ ಕಥೆ ಹೇಳುತ್ತದೆ’’ ಎಂದು ಸೋಮವಾರ ಹೇಳಿದ್ದಾರೆ. ತಮ್ಮ ಫೌಂಡೇಷನ್‌ನಲ್ಲಿರುವ ಪ್ರತಿ ರೂಪಾಯಿಯು ಜೀವ ಉಳಿಸಲು ತನ್ನ ಸರದಿಗಾಗಿ ಕಾಯುತ್ತಿದೆ ಎಂದಿರುವ ಅವರು, “ನಾಲ್ಕು ದಿನಗಳಿಂದ ನಾನು ಅಥಿತಿಗಳನ್ನು ನೋಡಿಕೊಳ್ಳುವುದರಲ್ಲಿ ನಿರತನಾಗಿದ್ದೆ’’ ಎಂದು ಐಟಿ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮಾಜಮುಖಿ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್‌ ಅವರಿಗೆ ಸೇರಿದ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಕಳೆದ ಬುಧವಾರ ಕಾರ್ಯಾಚರಣೆ ಕೈಗೊಂಡಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಸೋನು ಸೂದ್‌ ಭೇಟಿಯಾದ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿತ್ತು.

ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಮುಂಬೈನಲ್ಲಿರುವ ಸೂನು ಸೂದ್‌ ಅವರ ನಿವಾಸ ಹಾಗೂ ಲಕ್ನೋದಲ್ಲಿನ ಸೋನು ಸೂದ್‌ ಸಂಸ್ಥೆಯ ಮೇಲೆ ಐಟಿ ಕಾರ್ಯಾಚರಣೆ ಮಾಡಿದ್ದು, ಇದನ್ನು ಐಟಿ ‘ಸರ್ವೇ’ ಎಂದು ಕರೆದಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿರುವ ಸೂನು ಸೂದ್‌, “ನೀವು ಯಾವಾಗಲೂ ನಿಮ್ಮ ಕಡೆಯ ಕತೆ ಹೇಳಬೇಕಾಗಿಲ್ಲ. ಅದಕ್ಕೊಂದು ಸಮಯ ಬರುತ್ತದೆ. ನನ್ನ ಫೌಂಡೇಷನ್‌‌‌ನ ಪ್ರತಿ ರೂಪಾಯಿಯು ಅಮೂಲ್ಯವಾದ ಜೀವವನ್ನು ಉಳಿಸಲು ಮತ್ತು ಅಗತ್ಯವಿರುವವರಿಗೆ ತಲುಪಲು ತನ್ನ ಸರದಿಗಾಗಿ ಕಾಯುತ್ತಿದೆ” ಎಂದು ಹೇಳಿದ್ದಾರೆ.

“ನಾನು ಕೆಲವು ಅತಿಥಿಗಳನ್ನು ನೋಡಿಕೊಳ್ಳುವುದರಲ್ಲಿ ನಿರತನಾಗಿದ್ದರಿಂದ, ಕಳೆದ ನಾಲ್ಕು ದಿನಗಳಿಂದ ನಿಮ್ಮ ಸೇವೆಯಲ್ಲಿ ಇರಲು ಸಾಧ್ಯವಾಗಲಿಲ್ಲ. ಈಗ ಮತ್ತೆ ಅದೇ ವಿನಮ್ರತೆಯಿಂದ ಮತ್ತೆ ಮರಳಿ ಬಂದಿದ್ದೇನೆ” ಸೋನು ಸೂದ್ ಹೇಳಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

ಈ ಹೇಳಿಕೆಯ ಜೊತೆಗೆ, “ಕಠಿಣವಾದ ದಾರಿಗಳಲ್ಲಿಯೂ ಸುಲಭವಾಗಿ ಪ್ರಯಾಣ ಮಾಡಬಹುದು,
ಪ್ರತಿಯೊಬ್ಬ ಭಾರತೀಯನ ಪ್ರಾರ್ಥನೆಗಳು ಪರಿಣಾಮಕಾರಿಯಾಗಿದೆ” ಎಂದು ಹೇಳಿರುವ ಅವರು ತಮ್ಮ ಸಂದೇಶದ ಪೋಸ್ಟ್‌‌ರ್‌ ಅನ್ನು ಟ್ವೀಟ್‌ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಸೋನು ಸೂದ್ ಅವರ ಕಚೇರಿಗಳಲ್ಲಿ ಕಾರ್ಯಾಚರಣೆ ಮಾಡಿದ್ದ ಆದಾಯ ಇಲಾಖೆ ಅಧಿಕಾರಿಗಳು, ನಟ 20 ಕೋಟಿ ರೂ. ಗೂ ಅಧಿಕ ತೆರಿಗೆಗಳನ್ನು ವಂಚಿಸಿದ್ದಾರೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ್ದ ದಾಳಿಯನ್ನು ವಿರೋಧಿಸಿ ವಿರೋಧ ಪಕ್ಷಗಳು ಕಟುವಾಗಿ ಟೀಕಿಸಿದ್ದವು. ಬಿಜೆಪಿಯ ಮಾಜಿ ಮಿತ್ರ ಪಕ್ಷ ಶಿವಸೇನೆಯು ‘ಇದು ಬಿಜೆಪಿಯ ತಾಲಿಬಾನ್ ಮನಸ್ಥಿತಿ’ ಎಂದು ಖಂಡಿಸಿತ್ತು.

ಇದನ್ನೂ ಓದಿ: ಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...