Homeಮುಖಪುಟ‘ಕಾಲವೆ ಕಥೆ ಹೇಳುತ್ತದೆ!’ - ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

- Advertisement -
- Advertisement -

ತಮ್ಮ ಕಚೇರಿಗಳ ಮೇಲೆ ನಡೆದ ಆದಾಯ ತೆರಿಗೆ ವಿಚಾರದ ಬಗ್ಗೆ ನಟ ಸೋನು ಸೂದ್ ಪ್ರತಿಕ್ರಿಯೆ ನೀಡಿದ್ದು, ‘‘ಕಾಲವೆ ಕಥೆ ಹೇಳುತ್ತದೆ’’ ಎಂದು ಸೋಮವಾರ ಹೇಳಿದ್ದಾರೆ. ತಮ್ಮ ಫೌಂಡೇಷನ್‌ನಲ್ಲಿರುವ ಪ್ರತಿ ರೂಪಾಯಿಯು ಜೀವ ಉಳಿಸಲು ತನ್ನ ಸರದಿಗಾಗಿ ಕಾಯುತ್ತಿದೆ ಎಂದಿರುವ ಅವರು, “ನಾಲ್ಕು ದಿನಗಳಿಂದ ನಾನು ಅಥಿತಿಗಳನ್ನು ನೋಡಿಕೊಳ್ಳುವುದರಲ್ಲಿ ನಿರತನಾಗಿದ್ದೆ’’ ಎಂದು ಐಟಿ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮಾಜಮುಖಿ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್‌ ಅವರಿಗೆ ಸೇರಿದ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಕಳೆದ ಬುಧವಾರ ಕಾರ್ಯಾಚರಣೆ ಕೈಗೊಂಡಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಸೋನು ಸೂದ್‌ ಭೇಟಿಯಾದ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿತ್ತು.

ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಮುಂಬೈನಲ್ಲಿರುವ ಸೂನು ಸೂದ್‌ ಅವರ ನಿವಾಸ ಹಾಗೂ ಲಕ್ನೋದಲ್ಲಿನ ಸೋನು ಸೂದ್‌ ಸಂಸ್ಥೆಯ ಮೇಲೆ ಐಟಿ ಕಾರ್ಯಾಚರಣೆ ಮಾಡಿದ್ದು, ಇದನ್ನು ಐಟಿ ‘ಸರ್ವೇ’ ಎಂದು ಕರೆದಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿರುವ ಸೂನು ಸೂದ್‌, “ನೀವು ಯಾವಾಗಲೂ ನಿಮ್ಮ ಕಡೆಯ ಕತೆ ಹೇಳಬೇಕಾಗಿಲ್ಲ. ಅದಕ್ಕೊಂದು ಸಮಯ ಬರುತ್ತದೆ. ನನ್ನ ಫೌಂಡೇಷನ್‌‌‌ನ ಪ್ರತಿ ರೂಪಾಯಿಯು ಅಮೂಲ್ಯವಾದ ಜೀವವನ್ನು ಉಳಿಸಲು ಮತ್ತು ಅಗತ್ಯವಿರುವವರಿಗೆ ತಲುಪಲು ತನ್ನ ಸರದಿಗಾಗಿ ಕಾಯುತ್ತಿದೆ” ಎಂದು ಹೇಳಿದ್ದಾರೆ.

“ನಾನು ಕೆಲವು ಅತಿಥಿಗಳನ್ನು ನೋಡಿಕೊಳ್ಳುವುದರಲ್ಲಿ ನಿರತನಾಗಿದ್ದರಿಂದ, ಕಳೆದ ನಾಲ್ಕು ದಿನಗಳಿಂದ ನಿಮ್ಮ ಸೇವೆಯಲ್ಲಿ ಇರಲು ಸಾಧ್ಯವಾಗಲಿಲ್ಲ. ಈಗ ಮತ್ತೆ ಅದೇ ವಿನಮ್ರತೆಯಿಂದ ಮತ್ತೆ ಮರಳಿ ಬಂದಿದ್ದೇನೆ” ಸೋನು ಸೂದ್ ಹೇಳಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

ಈ ಹೇಳಿಕೆಯ ಜೊತೆಗೆ, “ಕಠಿಣವಾದ ದಾರಿಗಳಲ್ಲಿಯೂ ಸುಲಭವಾಗಿ ಪ್ರಯಾಣ ಮಾಡಬಹುದು,
ಪ್ರತಿಯೊಬ್ಬ ಭಾರತೀಯನ ಪ್ರಾರ್ಥನೆಗಳು ಪರಿಣಾಮಕಾರಿಯಾಗಿದೆ” ಎಂದು ಹೇಳಿರುವ ಅವರು ತಮ್ಮ ಸಂದೇಶದ ಪೋಸ್ಟ್‌‌ರ್‌ ಅನ್ನು ಟ್ವೀಟ್‌ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಸೋನು ಸೂದ್ ಅವರ ಕಚೇರಿಗಳಲ್ಲಿ ಕಾರ್ಯಾಚರಣೆ ಮಾಡಿದ್ದ ಆದಾಯ ಇಲಾಖೆ ಅಧಿಕಾರಿಗಳು, ನಟ 20 ಕೋಟಿ ರೂ. ಗೂ ಅಧಿಕ ತೆರಿಗೆಗಳನ್ನು ವಂಚಿಸಿದ್ದಾರೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ್ದ ದಾಳಿಯನ್ನು ವಿರೋಧಿಸಿ ವಿರೋಧ ಪಕ್ಷಗಳು ಕಟುವಾಗಿ ಟೀಕಿಸಿದ್ದವು. ಬಿಜೆಪಿಯ ಮಾಜಿ ಮಿತ್ರ ಪಕ್ಷ ಶಿವಸೇನೆಯು ‘ಇದು ಬಿಜೆಪಿಯ ತಾಲಿಬಾನ್ ಮನಸ್ಥಿತಿ’ ಎಂದು ಖಂಡಿಸಿತ್ತು.

ಇದನ್ನೂ ಓದಿ: ಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...