Homeಮುಖಪುಟಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ, 'ಪರಿಗಣಿತ ಒಪ್ಪಿಗೆ'ಯ ಪರಿಕಲ್ಪನೆಯಿಲ್ಲ: ಸುಪ್ರೀಂ...

ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ, ‘ಪರಿಗಣಿತ ಒಪ್ಪಿಗೆ’ಯ ಪರಿಕಲ್ಪನೆಯಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಿರುವ ಉಲ್ಲೇಖಕ್ಕೆ ಉತ್ತರಿಸಿರುವ ಸುಪ್ರೀಂ ಕೋರ್ಟ್, “ಸಂವಿಧಾನದ 200/201ನೇ ವಿಧಿಗಳ ಅಡಿಯಲ್ಲಿ ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರಗಳಿಗೆ ನ್ಯಾಯಾಲಯವು ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಮಂಗಳವಾರ (ನವೆಂಬರ್ 20) ಸ್ಪಷ್ಟಪಡಿಸಿದೆ.

ರಾಷ್ಟ್ರಪತಿ ಮತ್ತು ರಾಜ್ಯಪಾಲರು ಕಾಲಮಿತಿಯನ್ನು ಉಲ್ಲಂಘಿಸಿದರೆ, ನ್ಯಾಯಾಲಯಗಳು ಮಸೂದೆಗಳಿಗೆ ‘ಪರಿಗಣಿತ ಒಪ್ಪಿಗೆ’ (ತಾನಾಗಿಯೇ ಒಪ್ಪಿಗೆ) ಎಂದು ಘೋಷಿಸುವ ಪರಿಕಲ್ಪನೆಯು ಸಂವಿಧಾನದ ಆಶಯ ಮತ್ತು ಅಧಿಕಾರಗಳ ಪ್ರತ್ಯೇಕತೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಇದು ವಾಸ್ತವಿಕವಾಗಿ ರಾಜ್ಯಪಾಲರಿಗೆ ಮೀಸಲಾಗಿರುವ ಕಾರ್ಯಗಳನ್ನು ಆಕ್ರಮಿಸಿಕೊಳ್ಳುವುದಾಗಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಿಧಾನಸಭೆಯಲ್ಲಿ ಅಂಗೀಕೃತಗೊಂಡ ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ನ್ಯಾಯಾಂಗ ಗಡುವೊಂದನ್ನು ವಿಧಿಸುವುದು, ಆ ಗಡುವು ಮೀರಿದ ನಂತರ 'ಅನುಮೋದನೆ ತಾನಾಗಿಯೇ ಸಿಕ್ಕಿತು' (deemed consent) ಎಂದು ಪರಿಗಣಿಸುವಂತೆ ಆದೇಶಿಸುವುದು ಸಂವಿಧಾನಾತ್ಮಕವಾಗಿ ತಪ್ಪು ಮತ್ತು ಅಸಾಧ್ಯ. ಏಕೆಂದರೆ, ಇಂತಹ ಆದೇಶದಿಂದ ನ್ಯಾಯಾಂಗವು ಕಾರ್ಯಾಂಗದ ಮೂಲಭೂತ ಕರ್ತವ್ಯವನ್ನೇ ಆಕ್ರಮಿಸಿಕೊಂಡಂತಾಗುತ್ತದೆ ಮತ್ತು ರಾಜ್ಯಪಾಲರು ಅಥವಾ ರಾಷ್ಟ್ರಪತಿಯ ಸ್ಥಾನವನ್ನು ಬದಲಾಯಿಸಿದಂತಾಗುತ್ತದೆ".
ಸಂವಿಧಾನದ 200 ಮತ್ತು 201ನೇ ವಿಧಿಗಳು ಈ ಅಧಿಕಾರವನ್ನು (ಮಸೂದೆಗೆ ಅನುಮೋದನೆ ನೀಡುವ) ಕೇವಲ ಕಾರ್ಯಾಂಗಕ್ಕೆ ಮಾತ್ರ ನೀಡಿವೆ, ನ್ಯಾಯಾಲಯಕ್ಕೆ ಅಲ್ಲ. ಆದ್ದರಿಂದ ಇಂತಹ 'ತಾನಾಗಿ ಅನುಮೋದನೆ' ಎಂಬ ಪರಿಕಲ್ಪನೆಯನ್ನು ಸಂವಿಧಾನದ ಚೌಕಟ್ಟಿನಲ್ಲಿ ಸಂಪೂರ್ಣ ಅನುಚಿತ ಮತ್ತು ಅನುಮತಿಸಲಾಗದ ಕ್ರಮ ಎಂದು ಸುಪ್ರೀಂ ಕೋರ್ಟ್ ದೃಢವಾಗಿ ತೀರ್ಮಾನಿಸಿದೆ.

ರಾಜ್ಯಪಾಲರು ಮಸೂದೆಗಳಿಗೆ ಸಂಬಂಧಿಸಿದಂತೆ ಯಾವುದೇ ಕಾರಣವಿಲ್ಲದೆ ಅತ್ಯಂತ ದೀರ್ಘಕಾಲ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ತಡೆಹಿಡಿದು, ವಿಧಾನಮಂಡಲದ ಕಾನೂನು ರಚನಾ ಪ್ರಕ್ರಿಯೆಯನ್ನೇ ವಿಫಲಗೊಳಿಸುತ್ತಿದ್ದರೆ, ನ್ಯಾಯಾಲಯವು ತನ್ನ ಸೀಮಿತ ನ್ಯಾಯಾಂಗ ಪರಿಶೀಲನಾ ಅಧಿಕಾರವನ್ನು (limited judicial review) ಬಳಸಿಕೊಂಡು ರಾಜ್ಯಪಾಲರಿಗೆ ‘ನಿರ್ದಿಷ್ಟ ಸಮಯದೊಳಗೆ ತೀರ್ಮಾನ ತೆಗೆದುಕೊಳ್ಳಿ’ ಎಂದು ಆದೇಶ ನೀಡಬಹುದು.

ಆದರೆ, ಈ ಆದೇಶದಲ್ಲಿ ಮಸೂದೆಯ ಒಳಿತು-ಕೆಡುಕುಗಳ ಬಗ್ಗೆ (merits of the Bill) ಏನನ್ನೂ ಹೇಳುವಂತಿಲ್ಲ ಅಥವಾ ಮಸೂದೆಗೆ ಅನುಮೋದನೆ ಕೊಡಿ/ತಡೆಯಿರಿ ಎಂದು ಆದೇಶಿಸುವಂತಿಲ್ಲ. ಕೇವಲ ‘ತೀರ್ಮಾನ ತೆಗೆದುಕೊಳ್ಳುವ ಕೆಲಸವನ್ನು ತಡೆಯಬೇಡಿ, ಸಮಯಕ್ಕೆ ಸರಿಯಾಗಿ ಮಾಡಿ’ ಎಂದು ಮಾತ್ರ ಹೇಳಬಹುದು. ಈ ರೀತಿ ನ್ಯಾಯಾಲಯವು ಕಾರ್ಯಾಂಗದ ಅಧಿಕಾರವನ್ನು ಆಕ್ರಮಿಸಿಕೊಳ್ಳದೆ, ಕೇವಲ ಕಾನೂನು ರಚನಾ ಪ್ರಕ್ರಿಯೆಯನ್ನು ರಕ್ಷಿಸುವ ಸೀಮಿತ ಹಸ್ತಕ್ಷೇಪ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಹತ್ತು ದಿನಗಳ ಕಾಲ ಈ ಪ್ರಕರಣದ ವಿಚಾರಣೆ ನಡೆಸಿ ಸೆಪ್ಟೆಂಬರ್ 11ರಂದು ತನ್ನ ಅಭಿಪ್ರಾಯವನ್ನು ಕಾಯ್ದಿರಿಸಿತ್ತು.

ತಮಿಳುನಾಡು ರಾಜ್ಯಪಾಲರ ಪ್ರಕರಣದಲ್ಲಿ ಇಬ್ಬರು ನ್ಯಾಯಾಧೀಶರ ಪೀಠವು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮಸೂದೆಗಳ ಮೇಲೆ ನಿರ್ಧಾರ ತೆಗೆದುಕೊಳ್ಳಲು ಸಮಯ ಮಿತಿಯನ್ನು ನಿಗದಿಪಡಿಸಿ ತೀರ್ಪು ನೀಡಿದ ನಂತರ, ಮೇ ತಿಂಗಳಲ್ಲಿ ರಾಷ್ಟ್ರಪತಿ ಅಪರೂಪಕ್ಕೆ ಬಳಸಲಾಗುವ ಸಂವಿಧಾನದ ವಿಧಿ 143 (1) ರ ಅಡಿಯಲ್ಲಿ ತಮ್ಮ ಅಧಿಕಾರವನ್ನು ಚಲಾಯಿಸುತ್ತಾ, ಸುಪ್ರೀಂ ಕೋರ್ಟ್‌ಗೆ 14 ನಿರ್ಣಾಯಕ ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದೆ.

Courtesy: livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....