Homeಮುಖಪುಟಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ, 'ಪರಿಗಣಿತ ಒಪ್ಪಿಗೆ'ಯ ಪರಿಕಲ್ಪನೆಯಿಲ್ಲ: ಸುಪ್ರೀಂ...

ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ, ‘ಪರಿಗಣಿತ ಒಪ್ಪಿಗೆ’ಯ ಪರಿಕಲ್ಪನೆಯಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಿರುವ ಉಲ್ಲೇಖಕ್ಕೆ ಉತ್ತರಿಸಿರುವ ಸುಪ್ರೀಂ ಕೋರ್ಟ್, “ಸಂವಿಧಾನದ 200/201ನೇ ವಿಧಿಗಳ ಅಡಿಯಲ್ಲಿ ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರಗಳಿಗೆ ನ್ಯಾಯಾಲಯವು ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಮಂಗಳವಾರ (ನವೆಂಬರ್ 20) ಸ್ಪಷ್ಟಪಡಿಸಿದೆ.

ರಾಷ್ಟ್ರಪತಿ ಮತ್ತು ರಾಜ್ಯಪಾಲರು ಕಾಲಮಿತಿಯನ್ನು ಉಲ್ಲಂಘಿಸಿದರೆ, ನ್ಯಾಯಾಲಯಗಳು ಮಸೂದೆಗಳಿಗೆ ‘ಪರಿಗಣಿತ ಒಪ್ಪಿಗೆ’ (ತಾನಾಗಿಯೇ ಒಪ್ಪಿಗೆ) ಎಂದು ಘೋಷಿಸುವ ಪರಿಕಲ್ಪನೆಯು ಸಂವಿಧಾನದ ಆಶಯ ಮತ್ತು ಅಧಿಕಾರಗಳ ಪ್ರತ್ಯೇಕತೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಇದು ವಾಸ್ತವಿಕವಾಗಿ ರಾಜ್ಯಪಾಲರಿಗೆ ಮೀಸಲಾಗಿರುವ ಕಾರ್ಯಗಳನ್ನು ಆಕ್ರಮಿಸಿಕೊಳ್ಳುವುದಾಗಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಿಧಾನಸಭೆಯಲ್ಲಿ ಅಂಗೀಕೃತಗೊಂಡ ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ನ್ಯಾಯಾಂಗ ಗಡುವೊಂದನ್ನು ವಿಧಿಸುವುದು, ಆ ಗಡುವು ಮೀರಿದ ನಂತರ 'ಅನುಮೋದನೆ ತಾನಾಗಿಯೇ ಸಿಕ್ಕಿತು' (deemed consent) ಎಂದು ಪರಿಗಣಿಸುವಂತೆ ಆದೇಶಿಸುವುದು ಸಂವಿಧಾನಾತ್ಮಕವಾಗಿ ತಪ್ಪು ಮತ್ತು ಅಸಾಧ್ಯ. ಏಕೆಂದರೆ, ಇಂತಹ ಆದೇಶದಿಂದ ನ್ಯಾಯಾಂಗವು ಕಾರ್ಯಾಂಗದ ಮೂಲಭೂತ ಕರ್ತವ್ಯವನ್ನೇ ಆಕ್ರಮಿಸಿಕೊಂಡಂತಾಗುತ್ತದೆ ಮತ್ತು ರಾಜ್ಯಪಾಲರು ಅಥವಾ ರಾಷ್ಟ್ರಪತಿಯ ಸ್ಥಾನವನ್ನು ಬದಲಾಯಿಸಿದಂತಾಗುತ್ತದೆ".
ಸಂವಿಧಾನದ 200 ಮತ್ತು 201ನೇ ವಿಧಿಗಳು ಈ ಅಧಿಕಾರವನ್ನು (ಮಸೂದೆಗೆ ಅನುಮೋದನೆ ನೀಡುವ) ಕೇವಲ ಕಾರ್ಯಾಂಗಕ್ಕೆ ಮಾತ್ರ ನೀಡಿವೆ, ನ್ಯಾಯಾಲಯಕ್ಕೆ ಅಲ್ಲ. ಆದ್ದರಿಂದ ಇಂತಹ 'ತಾನಾಗಿ ಅನುಮೋದನೆ' ಎಂಬ ಪರಿಕಲ್ಪನೆಯನ್ನು ಸಂವಿಧಾನದ ಚೌಕಟ್ಟಿನಲ್ಲಿ ಸಂಪೂರ್ಣ ಅನುಚಿತ ಮತ್ತು ಅನುಮತಿಸಲಾಗದ ಕ್ರಮ ಎಂದು ಸುಪ್ರೀಂ ಕೋರ್ಟ್ ದೃಢವಾಗಿ ತೀರ್ಮಾನಿಸಿದೆ.

ರಾಜ್ಯಪಾಲರು ಮಸೂದೆಗಳಿಗೆ ಸಂಬಂಧಿಸಿದಂತೆ ಯಾವುದೇ ಕಾರಣವಿಲ್ಲದೆ ಅತ್ಯಂತ ದೀರ್ಘಕಾಲ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ತಡೆಹಿಡಿದು, ವಿಧಾನಮಂಡಲದ ಕಾನೂನು ರಚನಾ ಪ್ರಕ್ರಿಯೆಯನ್ನೇ ವಿಫಲಗೊಳಿಸುತ್ತಿದ್ದರೆ, ನ್ಯಾಯಾಲಯವು ತನ್ನ ಸೀಮಿತ ನ್ಯಾಯಾಂಗ ಪರಿಶೀಲನಾ ಅಧಿಕಾರವನ್ನು (limited judicial review) ಬಳಸಿಕೊಂಡು ರಾಜ್ಯಪಾಲರಿಗೆ ‘ನಿರ್ದಿಷ್ಟ ಸಮಯದೊಳಗೆ ತೀರ್ಮಾನ ತೆಗೆದುಕೊಳ್ಳಿ’ ಎಂದು ಆದೇಶ ನೀಡಬಹುದು.

ಆದರೆ, ಈ ಆದೇಶದಲ್ಲಿ ಮಸೂದೆಯ ಒಳಿತು-ಕೆಡುಕುಗಳ ಬಗ್ಗೆ (merits of the Bill) ಏನನ್ನೂ ಹೇಳುವಂತಿಲ್ಲ ಅಥವಾ ಮಸೂದೆಗೆ ಅನುಮೋದನೆ ಕೊಡಿ/ತಡೆಯಿರಿ ಎಂದು ಆದೇಶಿಸುವಂತಿಲ್ಲ. ಕೇವಲ ‘ತೀರ್ಮಾನ ತೆಗೆದುಕೊಳ್ಳುವ ಕೆಲಸವನ್ನು ತಡೆಯಬೇಡಿ, ಸಮಯಕ್ಕೆ ಸರಿಯಾಗಿ ಮಾಡಿ’ ಎಂದು ಮಾತ್ರ ಹೇಳಬಹುದು. ಈ ರೀತಿ ನ್ಯಾಯಾಲಯವು ಕಾರ್ಯಾಂಗದ ಅಧಿಕಾರವನ್ನು ಆಕ್ರಮಿಸಿಕೊಳ್ಳದೆ, ಕೇವಲ ಕಾನೂನು ರಚನಾ ಪ್ರಕ್ರಿಯೆಯನ್ನು ರಕ್ಷಿಸುವ ಸೀಮಿತ ಹಸ್ತಕ್ಷೇಪ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಹತ್ತು ದಿನಗಳ ಕಾಲ ಈ ಪ್ರಕರಣದ ವಿಚಾರಣೆ ನಡೆಸಿ ಸೆಪ್ಟೆಂಬರ್ 11ರಂದು ತನ್ನ ಅಭಿಪ್ರಾಯವನ್ನು ಕಾಯ್ದಿರಿಸಿತ್ತು.

ತಮಿಳುನಾಡು ರಾಜ್ಯಪಾಲರ ಪ್ರಕರಣದಲ್ಲಿ ಇಬ್ಬರು ನ್ಯಾಯಾಧೀಶರ ಪೀಠವು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮಸೂದೆಗಳ ಮೇಲೆ ನಿರ್ಧಾರ ತೆಗೆದುಕೊಳ್ಳಲು ಸಮಯ ಮಿತಿಯನ್ನು ನಿಗದಿಪಡಿಸಿ ತೀರ್ಪು ನೀಡಿದ ನಂತರ, ಮೇ ತಿಂಗಳಲ್ಲಿ ರಾಷ್ಟ್ರಪತಿ ಅಪರೂಪಕ್ಕೆ ಬಳಸಲಾಗುವ ಸಂವಿಧಾನದ ವಿಧಿ 143 (1) ರ ಅಡಿಯಲ್ಲಿ ತಮ್ಮ ಅಧಿಕಾರವನ್ನು ಚಲಾಯಿಸುತ್ತಾ, ಸುಪ್ರೀಂ ಕೋರ್ಟ್‌ಗೆ 14 ನಿರ್ಣಾಯಕ ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದೆ.

Courtesy: livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...