Homeಕರ್ನಾಟಕಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಪಠ್ಯದಿಂದ ಟಿಪ್ಪು ತೆಗೆಯಲು ಹೊರಟ ಬಿಜೆಪಿಗೆ ಇತಿಹಾಸದ ಪಾಠ ಮಾಡಿದ ನೆಟ್ಟಿಗರು...

- Advertisement -
- Advertisement -

“ಟಿಪ್ಪು ಕುರಿತ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುತ್ತೇವೆ. ಅಂತಹ ಯಾವುದೇ ವಿಚಾರ ಪಠ್ಯಪುಸ್ತಕದಲ್ಲಿ ಇರಕೂಡದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ರಾಜ್ಯದೆಲ್ಲಡೆ ಭಾರೀ ವಿರೋಧ ವ್ಯಕ್ತವಾಗಿದೆ.

“ಅದು ಸರಿ ಯಡಿಯೂರಪ್ಪನೋರೇ. ನೀವು ಪಠ್ಯಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದು ( ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು ಆತ ನಿಮ್ಮಲ್ಲಿ ವಿನಂತಿ ಮಾಡಿಲ್ಲ). ಆದರೆ ಇತಿಹಾಸದಿಂದ ಟಿಪ್ಪುವನ್ನು ತೆಗೆಯಲು ಸಾಧ್ಯವೇ? ಜನಮಾನಸದಿಂದ ತೆಗೆಯಲು ಸಾಧ್ಯವೇ?

ಇತಿಹಾಸ ಅಂದರೆ ಏನು ಅಂತ ನಿಮಗೆ ಗೊತ್ತಾ? ಜಗತ್ತೇ ದ್ವೇಷಿಸುವ ಹಿಟ್ಲರ್ ಕೂಡಾ ಇತಿಹಾಸದ ಭಾಗ ಗೊತ್ತಾ? ಅಂಥದ್ದರಲ್ಲಿ 200 ವರ್ಷ ದೇಶವನ್ನು ಲೂಟಿ ಮಾಡಿದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಿ, ಬೇರೆ ಅರಸರಿಗೆ ಭಿನ್ನವಾಗಿ ಯುದ್ಧ ಭೂಮಿಯಲ್ಲೇ ಮಡಿದ ಕನ್ನಡನಾಡಿನ ಹೆಮ್ಮೆಯ ಟಿಪ್ಪೂವಿಗೆ ಅದರಲ್ಲಿ ಜಾಗ ಇಲ್ಲ ಅಂತೀರಾ?

ನೀವು ಟಿಪ್ಪುವನ್ನು ದ್ವೇಷಿಸಿದಷ್ಟೂ ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ. ನೀವು ಆತನ ಇತಿಹಾಸ ಅಡಗಿಸಿಟ್ಟಷ್ಟೂ ಜನ ಅದನ್ನು ಹೊರತೆಗೆದು ಕುತೂಹಲದಿಂದ ಓದಲಾರಂಭಿಸುತ್ತಾರೆ.

ಹೋಗಲಿಬಿಡಿ, ಗೋಡ್ಸೆ ಈ ದೇಶದ ರಾಷ್ಟ್ರಪಿತ, ಗಾಂಧಿ ದೇಶದ್ರೋಹಿ ಎಂಬ ಇತಿಹಾಸ ಮರುಬರೆಯಲು ಸಿದ್ಧರಾಗಿರುವವರಿಗೆ ಇದನ್ನೆಲ್ಲ ಹೇಳಿ ಏನು ಪ್ರಯೋಜನ? ಅದೇನೋ ಗಾದೆಯಿದೆಯಲ್ಲ.. ಕೋಣನ ಮುಂದೆ..” ಎಂದು ಶ್ರೀನಿವಾಸ ಕಾರ್ಕಳರವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನನ್ನು ಶಾಲಾ ಪಠ್ಯದಿಂದ ಕೈ ಬಿಡುವುದು ಅತ್ಯಂತ ಹೀನ ರಾಜಕಾರಣ. ಇತಿಹಾಸ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವುದು ಕ್ಷಮಿಸಲಾಗದ ನಡೆ. ಯಡಿಯೂರಪ್ಪ ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಖಳನಾಯಕರಾಗಿ ದಾಖಲಾಗುತ್ತಾರೆ ಎಂದು ಅಬ್ದುಲ್ ಮುನೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಲಿ ಟಿಪ್ಪುನೇನೋ ರಬ್ಬರಿನಿಂದ ಉಜ್ಜಿಯೋ, ಪೇಜು ಹರಿದೋ ಪಠ್ಯ ಪುಸ್ತಕದಿಂದ ತೆಗೆಯಬಹುದು… ಆದರೆ, ಗೂಗಲ್ ಪಠ್ಯದಿಂದ ಈ ನಕಲಿ ಟಿಪ್ಪುಗಳನ್ನು ತೆಗೆಯುವುದು ಹ್ಯಾಂಗೆ ಮಾರ್ರೆ?! ಎಂದು ಬಿಜೆಪಿಗರು ಟಿಪ್ಪು ಸುಲ್ತಾನ್‌ ದಿನಾಚರಣೆ ಆಚರಿಸಿದ ಫೋಟೊ ಹಾಕಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಂಜು ಗಂಗೊಳ್ಳಿಯವರು ವ್ಯಂಗ್ಯವಾಡಿದ್ದಾರೆ.

ನೆರೆ ಸಮಸ್ಯೆಯನ್ನು ಟಿಪ್ಪು ಸುಲ್ತಾನ್ ಪಠ್ಯ ನುಂಗಿತ್ತಾ… ಬೋಲೋ ಭಾರತ್ ಮಾತಾಕೀ… ಎಂದು ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿಯವರು ನಿಜ ಸಮಸ್ಯೆ ಬಿಟ್ಟು ಬಿಜೆಪಿ ಟಿಪ್ಪು ಕಡೆ ನೋಡುತ್ತಿದೆ ಎಂದು ಟೀಕಿಸಿದ್ದಾರೆ.

“ಇತಿಹಾಸವನ್ನು ಅರಿಯುವುದು ಎಂದರೆ, ಅದು ಹೀಗಿತ್ತು ಎಂದು ಅರ್ಥ ಮಾಡಿಕೊಳ್ಳುವುದು,ಅದನ್ನು ವರ್ತಮಾನಕ್ಕೆ ತಂದು ಚಟ್ನಿ ಅರೆಯುವುದಲ್ಲ” ಎಂದು ಪ್ರಸಾದ್‌ ರಕ್ಷಿದಿಯವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

“ಟಿಪ್ಪು ಸಮಕಾಲೀನರು ಬೇರೆ ಯಾರೂ ಬ್ರಿಟಿಷರಿಗೆ ಪ್ರತಿರೋಧ ತೋರಲಿಲ್ಲ. ಅದನ್ನು ನೆನಪಿಸಿಕೊಳ್ಳಲು ಬಯಸದವರು ಚರಿತ್ರೆಯಲ್ಲಿ ಟಿಪ್ಪು ಮರೆಯಾಗಲು ಬಯಸುವುದು ಸಹಜ” ಎಂದು ಪಂಡಿತಾರಾದ್ಯರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...