Homeಕರ್ನಾಟಕಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಪಠ್ಯದಿಂದ ಟಿಪ್ಪು ತೆಗೆಯಲು ಹೊರಟ ಬಿಜೆಪಿಗೆ ಇತಿಹಾಸದ ಪಾಠ ಮಾಡಿದ ನೆಟ್ಟಿಗರು...

- Advertisement -
- Advertisement -

“ಟಿಪ್ಪು ಕುರಿತ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುತ್ತೇವೆ. ಅಂತಹ ಯಾವುದೇ ವಿಚಾರ ಪಠ್ಯಪುಸ್ತಕದಲ್ಲಿ ಇರಕೂಡದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ರಾಜ್ಯದೆಲ್ಲಡೆ ಭಾರೀ ವಿರೋಧ ವ್ಯಕ್ತವಾಗಿದೆ.

“ಅದು ಸರಿ ಯಡಿಯೂರಪ್ಪನೋರೇ. ನೀವು ಪಠ್ಯಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದು ( ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು ಆತ ನಿಮ್ಮಲ್ಲಿ ವಿನಂತಿ ಮಾಡಿಲ್ಲ). ಆದರೆ ಇತಿಹಾಸದಿಂದ ಟಿಪ್ಪುವನ್ನು ತೆಗೆಯಲು ಸಾಧ್ಯವೇ? ಜನಮಾನಸದಿಂದ ತೆಗೆಯಲು ಸಾಧ್ಯವೇ?

ಇತಿಹಾಸ ಅಂದರೆ ಏನು ಅಂತ ನಿಮಗೆ ಗೊತ್ತಾ? ಜಗತ್ತೇ ದ್ವೇಷಿಸುವ ಹಿಟ್ಲರ್ ಕೂಡಾ ಇತಿಹಾಸದ ಭಾಗ ಗೊತ್ತಾ? ಅಂಥದ್ದರಲ್ಲಿ 200 ವರ್ಷ ದೇಶವನ್ನು ಲೂಟಿ ಮಾಡಿದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಿ, ಬೇರೆ ಅರಸರಿಗೆ ಭಿನ್ನವಾಗಿ ಯುದ್ಧ ಭೂಮಿಯಲ್ಲೇ ಮಡಿದ ಕನ್ನಡನಾಡಿನ ಹೆಮ್ಮೆಯ ಟಿಪ್ಪೂವಿಗೆ ಅದರಲ್ಲಿ ಜಾಗ ಇಲ್ಲ ಅಂತೀರಾ?

ನೀವು ಟಿಪ್ಪುವನ್ನು ದ್ವೇಷಿಸಿದಷ್ಟೂ ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ. ನೀವು ಆತನ ಇತಿಹಾಸ ಅಡಗಿಸಿಟ್ಟಷ್ಟೂ ಜನ ಅದನ್ನು ಹೊರತೆಗೆದು ಕುತೂಹಲದಿಂದ ಓದಲಾರಂಭಿಸುತ್ತಾರೆ.

ಹೋಗಲಿಬಿಡಿ, ಗೋಡ್ಸೆ ಈ ದೇಶದ ರಾಷ್ಟ್ರಪಿತ, ಗಾಂಧಿ ದೇಶದ್ರೋಹಿ ಎಂಬ ಇತಿಹಾಸ ಮರುಬರೆಯಲು ಸಿದ್ಧರಾಗಿರುವವರಿಗೆ ಇದನ್ನೆಲ್ಲ ಹೇಳಿ ಏನು ಪ್ರಯೋಜನ? ಅದೇನೋ ಗಾದೆಯಿದೆಯಲ್ಲ.. ಕೋಣನ ಮುಂದೆ..” ಎಂದು ಶ್ರೀನಿವಾಸ ಕಾರ್ಕಳರವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನನ್ನು ಶಾಲಾ ಪಠ್ಯದಿಂದ ಕೈ ಬಿಡುವುದು ಅತ್ಯಂತ ಹೀನ ರಾಜಕಾರಣ. ಇತಿಹಾಸ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವುದು ಕ್ಷಮಿಸಲಾಗದ ನಡೆ. ಯಡಿಯೂರಪ್ಪ ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಖಳನಾಯಕರಾಗಿ ದಾಖಲಾಗುತ್ತಾರೆ ಎಂದು ಅಬ್ದುಲ್ ಮುನೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಲಿ ಟಿಪ್ಪುನೇನೋ ರಬ್ಬರಿನಿಂದ ಉಜ್ಜಿಯೋ, ಪೇಜು ಹರಿದೋ ಪಠ್ಯ ಪುಸ್ತಕದಿಂದ ತೆಗೆಯಬಹುದು… ಆದರೆ, ಗೂಗಲ್ ಪಠ್ಯದಿಂದ ಈ ನಕಲಿ ಟಿಪ್ಪುಗಳನ್ನು ತೆಗೆಯುವುದು ಹ್ಯಾಂಗೆ ಮಾರ್ರೆ?! ಎಂದು ಬಿಜೆಪಿಗರು ಟಿಪ್ಪು ಸುಲ್ತಾನ್‌ ದಿನಾಚರಣೆ ಆಚರಿಸಿದ ಫೋಟೊ ಹಾಕಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಂಜು ಗಂಗೊಳ್ಳಿಯವರು ವ್ಯಂಗ್ಯವಾಡಿದ್ದಾರೆ.

ನೆರೆ ಸಮಸ್ಯೆಯನ್ನು ಟಿಪ್ಪು ಸುಲ್ತಾನ್ ಪಠ್ಯ ನುಂಗಿತ್ತಾ… ಬೋಲೋ ಭಾರತ್ ಮಾತಾಕೀ… ಎಂದು ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿಯವರು ನಿಜ ಸಮಸ್ಯೆ ಬಿಟ್ಟು ಬಿಜೆಪಿ ಟಿಪ್ಪು ಕಡೆ ನೋಡುತ್ತಿದೆ ಎಂದು ಟೀಕಿಸಿದ್ದಾರೆ.

“ಇತಿಹಾಸವನ್ನು ಅರಿಯುವುದು ಎಂದರೆ, ಅದು ಹೀಗಿತ್ತು ಎಂದು ಅರ್ಥ ಮಾಡಿಕೊಳ್ಳುವುದು,ಅದನ್ನು ವರ್ತಮಾನಕ್ಕೆ ತಂದು ಚಟ್ನಿ ಅರೆಯುವುದಲ್ಲ” ಎಂದು ಪ್ರಸಾದ್‌ ರಕ್ಷಿದಿಯವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

“ಟಿಪ್ಪು ಸಮಕಾಲೀನರು ಬೇರೆ ಯಾರೂ ಬ್ರಿಟಿಷರಿಗೆ ಪ್ರತಿರೋಧ ತೋರಲಿಲ್ಲ. ಅದನ್ನು ನೆನಪಿಸಿಕೊಳ್ಳಲು ಬಯಸದವರು ಚರಿತ್ರೆಯಲ್ಲಿ ಟಿಪ್ಪು ಮರೆಯಾಗಲು ಬಯಸುವುದು ಸಹಜ” ಎಂದು ಪಂಡಿತಾರಾದ್ಯರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...