Homeಕರ್ನಾಟಕಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಪಠ್ಯದಿಂದ ಟಿಪ್ಪು ತೆಗೆಯಲು ಹೊರಟ ಬಿಜೆಪಿಗೆ ಇತಿಹಾಸದ ಪಾಠ ಮಾಡಿದ ನೆಟ್ಟಿಗರು...

- Advertisement -
- Advertisement -

“ಟಿಪ್ಪು ಕುರಿತ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುತ್ತೇವೆ. ಅಂತಹ ಯಾವುದೇ ವಿಚಾರ ಪಠ್ಯಪುಸ್ತಕದಲ್ಲಿ ಇರಕೂಡದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ರಾಜ್ಯದೆಲ್ಲಡೆ ಭಾರೀ ವಿರೋಧ ವ್ಯಕ್ತವಾಗಿದೆ.

“ಅದು ಸರಿ ಯಡಿಯೂರಪ್ಪನೋರೇ. ನೀವು ಪಠ್ಯಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದು ( ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು ಆತ ನಿಮ್ಮಲ್ಲಿ ವಿನಂತಿ ಮಾಡಿಲ್ಲ). ಆದರೆ ಇತಿಹಾಸದಿಂದ ಟಿಪ್ಪುವನ್ನು ತೆಗೆಯಲು ಸಾಧ್ಯವೇ? ಜನಮಾನಸದಿಂದ ತೆಗೆಯಲು ಸಾಧ್ಯವೇ?

ಇತಿಹಾಸ ಅಂದರೆ ಏನು ಅಂತ ನಿಮಗೆ ಗೊತ್ತಾ? ಜಗತ್ತೇ ದ್ವೇಷಿಸುವ ಹಿಟ್ಲರ್ ಕೂಡಾ ಇತಿಹಾಸದ ಭಾಗ ಗೊತ್ತಾ? ಅಂಥದ್ದರಲ್ಲಿ 200 ವರ್ಷ ದೇಶವನ್ನು ಲೂಟಿ ಮಾಡಿದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಿ, ಬೇರೆ ಅರಸರಿಗೆ ಭಿನ್ನವಾಗಿ ಯುದ್ಧ ಭೂಮಿಯಲ್ಲೇ ಮಡಿದ ಕನ್ನಡನಾಡಿನ ಹೆಮ್ಮೆಯ ಟಿಪ್ಪೂವಿಗೆ ಅದರಲ್ಲಿ ಜಾಗ ಇಲ್ಲ ಅಂತೀರಾ?

ನೀವು ಟಿಪ್ಪುವನ್ನು ದ್ವೇಷಿಸಿದಷ್ಟೂ ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ. ನೀವು ಆತನ ಇತಿಹಾಸ ಅಡಗಿಸಿಟ್ಟಷ್ಟೂ ಜನ ಅದನ್ನು ಹೊರತೆಗೆದು ಕುತೂಹಲದಿಂದ ಓದಲಾರಂಭಿಸುತ್ತಾರೆ.

ಹೋಗಲಿಬಿಡಿ, ಗೋಡ್ಸೆ ಈ ದೇಶದ ರಾಷ್ಟ್ರಪಿತ, ಗಾಂಧಿ ದೇಶದ್ರೋಹಿ ಎಂಬ ಇತಿಹಾಸ ಮರುಬರೆಯಲು ಸಿದ್ಧರಾಗಿರುವವರಿಗೆ ಇದನ್ನೆಲ್ಲ ಹೇಳಿ ಏನು ಪ್ರಯೋಜನ? ಅದೇನೋ ಗಾದೆಯಿದೆಯಲ್ಲ.. ಕೋಣನ ಮುಂದೆ..” ಎಂದು ಶ್ರೀನಿವಾಸ ಕಾರ್ಕಳರವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನನ್ನು ಶಾಲಾ ಪಠ್ಯದಿಂದ ಕೈ ಬಿಡುವುದು ಅತ್ಯಂತ ಹೀನ ರಾಜಕಾರಣ. ಇತಿಹಾಸ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವುದು ಕ್ಷಮಿಸಲಾಗದ ನಡೆ. ಯಡಿಯೂರಪ್ಪ ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಖಳನಾಯಕರಾಗಿ ದಾಖಲಾಗುತ್ತಾರೆ ಎಂದು ಅಬ್ದುಲ್ ಮುನೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಲಿ ಟಿಪ್ಪುನೇನೋ ರಬ್ಬರಿನಿಂದ ಉಜ್ಜಿಯೋ, ಪೇಜು ಹರಿದೋ ಪಠ್ಯ ಪುಸ್ತಕದಿಂದ ತೆಗೆಯಬಹುದು… ಆದರೆ, ಗೂಗಲ್ ಪಠ್ಯದಿಂದ ಈ ನಕಲಿ ಟಿಪ್ಪುಗಳನ್ನು ತೆಗೆಯುವುದು ಹ್ಯಾಂಗೆ ಮಾರ್ರೆ?! ಎಂದು ಬಿಜೆಪಿಗರು ಟಿಪ್ಪು ಸುಲ್ತಾನ್‌ ದಿನಾಚರಣೆ ಆಚರಿಸಿದ ಫೋಟೊ ಹಾಕಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಂಜು ಗಂಗೊಳ್ಳಿಯವರು ವ್ಯಂಗ್ಯವಾಡಿದ್ದಾರೆ.

ನೆರೆ ಸಮಸ್ಯೆಯನ್ನು ಟಿಪ್ಪು ಸುಲ್ತಾನ್ ಪಠ್ಯ ನುಂಗಿತ್ತಾ… ಬೋಲೋ ಭಾರತ್ ಮಾತಾಕೀ… ಎಂದು ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿಯವರು ನಿಜ ಸಮಸ್ಯೆ ಬಿಟ್ಟು ಬಿಜೆಪಿ ಟಿಪ್ಪು ಕಡೆ ನೋಡುತ್ತಿದೆ ಎಂದು ಟೀಕಿಸಿದ್ದಾರೆ.

“ಇತಿಹಾಸವನ್ನು ಅರಿಯುವುದು ಎಂದರೆ, ಅದು ಹೀಗಿತ್ತು ಎಂದು ಅರ್ಥ ಮಾಡಿಕೊಳ್ಳುವುದು,ಅದನ್ನು ವರ್ತಮಾನಕ್ಕೆ ತಂದು ಚಟ್ನಿ ಅರೆಯುವುದಲ್ಲ” ಎಂದು ಪ್ರಸಾದ್‌ ರಕ್ಷಿದಿಯವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

“ಟಿಪ್ಪು ಸಮಕಾಲೀನರು ಬೇರೆ ಯಾರೂ ಬ್ರಿಟಿಷರಿಗೆ ಪ್ರತಿರೋಧ ತೋರಲಿಲ್ಲ. ಅದನ್ನು ನೆನಪಿಸಿಕೊಳ್ಳಲು ಬಯಸದವರು ಚರಿತ್ರೆಯಲ್ಲಿ ಟಿಪ್ಪು ಮರೆಯಾಗಲು ಬಯಸುವುದು ಸಹಜ” ಎಂದು ಪಂಡಿತಾರಾದ್ಯರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...