Homeಕರ್ನಾಟಕಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಪಠ್ಯದಿಂದ ಟಿಪ್ಪು ತೆಗೆಯಲು ಹೊರಟ ಬಿಜೆಪಿಗೆ ಇತಿಹಾಸದ ಪಾಠ ಮಾಡಿದ ನೆಟ್ಟಿಗರು...

- Advertisement -
- Advertisement -

“ಟಿಪ್ಪು ಕುರಿತ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುತ್ತೇವೆ. ಅಂತಹ ಯಾವುದೇ ವಿಚಾರ ಪಠ್ಯಪುಸ್ತಕದಲ್ಲಿ ಇರಕೂಡದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ರಾಜ್ಯದೆಲ್ಲಡೆ ಭಾರೀ ವಿರೋಧ ವ್ಯಕ್ತವಾಗಿದೆ.

“ಅದು ಸರಿ ಯಡಿಯೂರಪ್ಪನೋರೇ. ನೀವು ಪಠ್ಯಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದು ( ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು ಆತ ನಿಮ್ಮಲ್ಲಿ ವಿನಂತಿ ಮಾಡಿಲ್ಲ). ಆದರೆ ಇತಿಹಾಸದಿಂದ ಟಿಪ್ಪುವನ್ನು ತೆಗೆಯಲು ಸಾಧ್ಯವೇ? ಜನಮಾನಸದಿಂದ ತೆಗೆಯಲು ಸಾಧ್ಯವೇ?

ಇತಿಹಾಸ ಅಂದರೆ ಏನು ಅಂತ ನಿಮಗೆ ಗೊತ್ತಾ? ಜಗತ್ತೇ ದ್ವೇಷಿಸುವ ಹಿಟ್ಲರ್ ಕೂಡಾ ಇತಿಹಾಸದ ಭಾಗ ಗೊತ್ತಾ? ಅಂಥದ್ದರಲ್ಲಿ 200 ವರ್ಷ ದೇಶವನ್ನು ಲೂಟಿ ಮಾಡಿದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಿ, ಬೇರೆ ಅರಸರಿಗೆ ಭಿನ್ನವಾಗಿ ಯುದ್ಧ ಭೂಮಿಯಲ್ಲೇ ಮಡಿದ ಕನ್ನಡನಾಡಿನ ಹೆಮ್ಮೆಯ ಟಿಪ್ಪೂವಿಗೆ ಅದರಲ್ಲಿ ಜಾಗ ಇಲ್ಲ ಅಂತೀರಾ?

ನೀವು ಟಿಪ್ಪುವನ್ನು ದ್ವೇಷಿಸಿದಷ್ಟೂ ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ. ನೀವು ಆತನ ಇತಿಹಾಸ ಅಡಗಿಸಿಟ್ಟಷ್ಟೂ ಜನ ಅದನ್ನು ಹೊರತೆಗೆದು ಕುತೂಹಲದಿಂದ ಓದಲಾರಂಭಿಸುತ್ತಾರೆ.

ಹೋಗಲಿಬಿಡಿ, ಗೋಡ್ಸೆ ಈ ದೇಶದ ರಾಷ್ಟ್ರಪಿತ, ಗಾಂಧಿ ದೇಶದ್ರೋಹಿ ಎಂಬ ಇತಿಹಾಸ ಮರುಬರೆಯಲು ಸಿದ್ಧರಾಗಿರುವವರಿಗೆ ಇದನ್ನೆಲ್ಲ ಹೇಳಿ ಏನು ಪ್ರಯೋಜನ? ಅದೇನೋ ಗಾದೆಯಿದೆಯಲ್ಲ.. ಕೋಣನ ಮುಂದೆ..” ಎಂದು ಶ್ರೀನಿವಾಸ ಕಾರ್ಕಳರವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನನ್ನು ಶಾಲಾ ಪಠ್ಯದಿಂದ ಕೈ ಬಿಡುವುದು ಅತ್ಯಂತ ಹೀನ ರಾಜಕಾರಣ. ಇತಿಹಾಸ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವುದು ಕ್ಷಮಿಸಲಾಗದ ನಡೆ. ಯಡಿಯೂರಪ್ಪ ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಖಳನಾಯಕರಾಗಿ ದಾಖಲಾಗುತ್ತಾರೆ ಎಂದು ಅಬ್ದುಲ್ ಮುನೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಲಿ ಟಿಪ್ಪುನೇನೋ ರಬ್ಬರಿನಿಂದ ಉಜ್ಜಿಯೋ, ಪೇಜು ಹರಿದೋ ಪಠ್ಯ ಪುಸ್ತಕದಿಂದ ತೆಗೆಯಬಹುದು… ಆದರೆ, ಗೂಗಲ್ ಪಠ್ಯದಿಂದ ಈ ನಕಲಿ ಟಿಪ್ಪುಗಳನ್ನು ತೆಗೆಯುವುದು ಹ್ಯಾಂಗೆ ಮಾರ್ರೆ?! ಎಂದು ಬಿಜೆಪಿಗರು ಟಿಪ್ಪು ಸುಲ್ತಾನ್‌ ದಿನಾಚರಣೆ ಆಚರಿಸಿದ ಫೋಟೊ ಹಾಕಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಂಜು ಗಂಗೊಳ್ಳಿಯವರು ವ್ಯಂಗ್ಯವಾಡಿದ್ದಾರೆ.

ನೆರೆ ಸಮಸ್ಯೆಯನ್ನು ಟಿಪ್ಪು ಸುಲ್ತಾನ್ ಪಠ್ಯ ನುಂಗಿತ್ತಾ… ಬೋಲೋ ಭಾರತ್ ಮಾತಾಕೀ… ಎಂದು ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿಯವರು ನಿಜ ಸಮಸ್ಯೆ ಬಿಟ್ಟು ಬಿಜೆಪಿ ಟಿಪ್ಪು ಕಡೆ ನೋಡುತ್ತಿದೆ ಎಂದು ಟೀಕಿಸಿದ್ದಾರೆ.

“ಇತಿಹಾಸವನ್ನು ಅರಿಯುವುದು ಎಂದರೆ, ಅದು ಹೀಗಿತ್ತು ಎಂದು ಅರ್ಥ ಮಾಡಿಕೊಳ್ಳುವುದು,ಅದನ್ನು ವರ್ತಮಾನಕ್ಕೆ ತಂದು ಚಟ್ನಿ ಅರೆಯುವುದಲ್ಲ” ಎಂದು ಪ್ರಸಾದ್‌ ರಕ್ಷಿದಿಯವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

“ಟಿಪ್ಪು ಸಮಕಾಲೀನರು ಬೇರೆ ಯಾರೂ ಬ್ರಿಟಿಷರಿಗೆ ಪ್ರತಿರೋಧ ತೋರಲಿಲ್ಲ. ಅದನ್ನು ನೆನಪಿಸಿಕೊಳ್ಳಲು ಬಯಸದವರು ಚರಿತ್ರೆಯಲ್ಲಿ ಟಿಪ್ಪು ಮರೆಯಾಗಲು ಬಯಸುವುದು ಸಹಜ” ಎಂದು ಪಂಡಿತಾರಾದ್ಯರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಾರ್ವಜನಿಕರ ಮೇಲೆ ಸವಾರಿ ಮಾಡಲು ಬಿಡುವುದಿಲ್ಲ..’; ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಸುಪ್ರೀಂ ಕಿಡಿ

0
"ಸಾರ್ವಜನಿಕರ ಮೇಲೆ ಸವಾರಿ ಮಾಡಲು ನಾವು ಬಿಡುವುದಿಲ್ಲ" ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದ್ದು, ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಎದುರಿಸಲು ತಾವು ಸಕ್ರಿಯರಾಗಿರಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಳಿಗೆ ಸೂಚನೆ ನೀಡಿದೆ. 1945ರ...