Homeಕರ್ನಾಟಕಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಪಠ್ಯದಿಂದ ಟಿಪ್ಪು ತೆಗೆಯಲು ಹೊರಟ ಬಿಜೆಪಿಗೆ ಇತಿಹಾಸದ ಪಾಠ ಮಾಡಿದ ನೆಟ್ಟಿಗರು...

- Advertisement -
- Advertisement -

“ಟಿಪ್ಪು ಕುರಿತ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುತ್ತೇವೆ. ಅಂತಹ ಯಾವುದೇ ವಿಚಾರ ಪಠ್ಯಪುಸ್ತಕದಲ್ಲಿ ಇರಕೂಡದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ರಾಜ್ಯದೆಲ್ಲಡೆ ಭಾರೀ ವಿರೋಧ ವ್ಯಕ್ತವಾಗಿದೆ.

“ಅದು ಸರಿ ಯಡಿಯೂರಪ್ಪನೋರೇ. ನೀವು ಪಠ್ಯಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದು ( ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು ಆತ ನಿಮ್ಮಲ್ಲಿ ವಿನಂತಿ ಮಾಡಿಲ್ಲ). ಆದರೆ ಇತಿಹಾಸದಿಂದ ಟಿಪ್ಪುವನ್ನು ತೆಗೆಯಲು ಸಾಧ್ಯವೇ? ಜನಮಾನಸದಿಂದ ತೆಗೆಯಲು ಸಾಧ್ಯವೇ?

ಇತಿಹಾಸ ಅಂದರೆ ಏನು ಅಂತ ನಿಮಗೆ ಗೊತ್ತಾ? ಜಗತ್ತೇ ದ್ವೇಷಿಸುವ ಹಿಟ್ಲರ್ ಕೂಡಾ ಇತಿಹಾಸದ ಭಾಗ ಗೊತ್ತಾ? ಅಂಥದ್ದರಲ್ಲಿ 200 ವರ್ಷ ದೇಶವನ್ನು ಲೂಟಿ ಮಾಡಿದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಿ, ಬೇರೆ ಅರಸರಿಗೆ ಭಿನ್ನವಾಗಿ ಯುದ್ಧ ಭೂಮಿಯಲ್ಲೇ ಮಡಿದ ಕನ್ನಡನಾಡಿನ ಹೆಮ್ಮೆಯ ಟಿಪ್ಪೂವಿಗೆ ಅದರಲ್ಲಿ ಜಾಗ ಇಲ್ಲ ಅಂತೀರಾ?

ನೀವು ಟಿಪ್ಪುವನ್ನು ದ್ವೇಷಿಸಿದಷ್ಟೂ ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ. ನೀವು ಆತನ ಇತಿಹಾಸ ಅಡಗಿಸಿಟ್ಟಷ್ಟೂ ಜನ ಅದನ್ನು ಹೊರತೆಗೆದು ಕುತೂಹಲದಿಂದ ಓದಲಾರಂಭಿಸುತ್ತಾರೆ.

ಹೋಗಲಿಬಿಡಿ, ಗೋಡ್ಸೆ ಈ ದೇಶದ ರಾಷ್ಟ್ರಪಿತ, ಗಾಂಧಿ ದೇಶದ್ರೋಹಿ ಎಂಬ ಇತಿಹಾಸ ಮರುಬರೆಯಲು ಸಿದ್ಧರಾಗಿರುವವರಿಗೆ ಇದನ್ನೆಲ್ಲ ಹೇಳಿ ಏನು ಪ್ರಯೋಜನ? ಅದೇನೋ ಗಾದೆಯಿದೆಯಲ್ಲ.. ಕೋಣನ ಮುಂದೆ..” ಎಂದು ಶ್ರೀನಿವಾಸ ಕಾರ್ಕಳರವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನನ್ನು ಶಾಲಾ ಪಠ್ಯದಿಂದ ಕೈ ಬಿಡುವುದು ಅತ್ಯಂತ ಹೀನ ರಾಜಕಾರಣ. ಇತಿಹಾಸ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವುದು ಕ್ಷಮಿಸಲಾಗದ ನಡೆ. ಯಡಿಯೂರಪ್ಪ ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಖಳನಾಯಕರಾಗಿ ದಾಖಲಾಗುತ್ತಾರೆ ಎಂದು ಅಬ್ದುಲ್ ಮುನೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಲಿ ಟಿಪ್ಪುನೇನೋ ರಬ್ಬರಿನಿಂದ ಉಜ್ಜಿಯೋ, ಪೇಜು ಹರಿದೋ ಪಠ್ಯ ಪುಸ್ತಕದಿಂದ ತೆಗೆಯಬಹುದು… ಆದರೆ, ಗೂಗಲ್ ಪಠ್ಯದಿಂದ ಈ ನಕಲಿ ಟಿಪ್ಪುಗಳನ್ನು ತೆಗೆಯುವುದು ಹ್ಯಾಂಗೆ ಮಾರ್ರೆ?! ಎಂದು ಬಿಜೆಪಿಗರು ಟಿಪ್ಪು ಸುಲ್ತಾನ್‌ ದಿನಾಚರಣೆ ಆಚರಿಸಿದ ಫೋಟೊ ಹಾಕಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಂಜು ಗಂಗೊಳ್ಳಿಯವರು ವ್ಯಂಗ್ಯವಾಡಿದ್ದಾರೆ.

ನೆರೆ ಸಮಸ್ಯೆಯನ್ನು ಟಿಪ್ಪು ಸುಲ್ತಾನ್ ಪಠ್ಯ ನುಂಗಿತ್ತಾ… ಬೋಲೋ ಭಾರತ್ ಮಾತಾಕೀ… ಎಂದು ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿಯವರು ನಿಜ ಸಮಸ್ಯೆ ಬಿಟ್ಟು ಬಿಜೆಪಿ ಟಿಪ್ಪು ಕಡೆ ನೋಡುತ್ತಿದೆ ಎಂದು ಟೀಕಿಸಿದ್ದಾರೆ.

“ಇತಿಹಾಸವನ್ನು ಅರಿಯುವುದು ಎಂದರೆ, ಅದು ಹೀಗಿತ್ತು ಎಂದು ಅರ್ಥ ಮಾಡಿಕೊಳ್ಳುವುದು,ಅದನ್ನು ವರ್ತಮಾನಕ್ಕೆ ತಂದು ಚಟ್ನಿ ಅರೆಯುವುದಲ್ಲ” ಎಂದು ಪ್ರಸಾದ್‌ ರಕ್ಷಿದಿಯವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

“ಟಿಪ್ಪು ಸಮಕಾಲೀನರು ಬೇರೆ ಯಾರೂ ಬ್ರಿಟಿಷರಿಗೆ ಪ್ರತಿರೋಧ ತೋರಲಿಲ್ಲ. ಅದನ್ನು ನೆನಪಿಸಿಕೊಳ್ಳಲು ಬಯಸದವರು ಚರಿತ್ರೆಯಲ್ಲಿ ಟಿಪ್ಪು ಮರೆಯಾಗಲು ಬಯಸುವುದು ಸಹಜ” ಎಂದು ಪಂಡಿತಾರಾದ್ಯರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....