Homeಕರ್ನಾಟಕಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಪಠ್ಯದಿಂದ ಟಿಪ್ಪು ತೆಗೆಯಲು ಹೊರಟ ಬಿಜೆಪಿಗೆ ಇತಿಹಾಸದ ಪಾಠ ಮಾಡಿದ ನೆಟ್ಟಿಗರು...

- Advertisement -
- Advertisement -

“ಟಿಪ್ಪು ಕುರಿತ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುತ್ತೇವೆ. ಅಂತಹ ಯಾವುದೇ ವಿಚಾರ ಪಠ್ಯಪುಸ್ತಕದಲ್ಲಿ ಇರಕೂಡದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ರಾಜ್ಯದೆಲ್ಲಡೆ ಭಾರೀ ವಿರೋಧ ವ್ಯಕ್ತವಾಗಿದೆ.

“ಅದು ಸರಿ ಯಡಿಯೂರಪ್ಪನೋರೇ. ನೀವು ಪಠ್ಯಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದು ( ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು ಆತ ನಿಮ್ಮಲ್ಲಿ ವಿನಂತಿ ಮಾಡಿಲ್ಲ). ಆದರೆ ಇತಿಹಾಸದಿಂದ ಟಿಪ್ಪುವನ್ನು ತೆಗೆಯಲು ಸಾಧ್ಯವೇ? ಜನಮಾನಸದಿಂದ ತೆಗೆಯಲು ಸಾಧ್ಯವೇ?

ಇತಿಹಾಸ ಅಂದರೆ ಏನು ಅಂತ ನಿಮಗೆ ಗೊತ್ತಾ? ಜಗತ್ತೇ ದ್ವೇಷಿಸುವ ಹಿಟ್ಲರ್ ಕೂಡಾ ಇತಿಹಾಸದ ಭಾಗ ಗೊತ್ತಾ? ಅಂಥದ್ದರಲ್ಲಿ 200 ವರ್ಷ ದೇಶವನ್ನು ಲೂಟಿ ಮಾಡಿದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಿ, ಬೇರೆ ಅರಸರಿಗೆ ಭಿನ್ನವಾಗಿ ಯುದ್ಧ ಭೂಮಿಯಲ್ಲೇ ಮಡಿದ ಕನ್ನಡನಾಡಿನ ಹೆಮ್ಮೆಯ ಟಿಪ್ಪೂವಿಗೆ ಅದರಲ್ಲಿ ಜಾಗ ಇಲ್ಲ ಅಂತೀರಾ?

ನೀವು ಟಿಪ್ಪುವನ್ನು ದ್ವೇಷಿಸಿದಷ್ಟೂ ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ. ನೀವು ಆತನ ಇತಿಹಾಸ ಅಡಗಿಸಿಟ್ಟಷ್ಟೂ ಜನ ಅದನ್ನು ಹೊರತೆಗೆದು ಕುತೂಹಲದಿಂದ ಓದಲಾರಂಭಿಸುತ್ತಾರೆ.

ಹೋಗಲಿಬಿಡಿ, ಗೋಡ್ಸೆ ಈ ದೇಶದ ರಾಷ್ಟ್ರಪಿತ, ಗಾಂಧಿ ದೇಶದ್ರೋಹಿ ಎಂಬ ಇತಿಹಾಸ ಮರುಬರೆಯಲು ಸಿದ್ಧರಾಗಿರುವವರಿಗೆ ಇದನ್ನೆಲ್ಲ ಹೇಳಿ ಏನು ಪ್ರಯೋಜನ? ಅದೇನೋ ಗಾದೆಯಿದೆಯಲ್ಲ.. ಕೋಣನ ಮುಂದೆ..” ಎಂದು ಶ್ರೀನಿವಾಸ ಕಾರ್ಕಳರವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನನ್ನು ಶಾಲಾ ಪಠ್ಯದಿಂದ ಕೈ ಬಿಡುವುದು ಅತ್ಯಂತ ಹೀನ ರಾಜಕಾರಣ. ಇತಿಹಾಸ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವುದು ಕ್ಷಮಿಸಲಾಗದ ನಡೆ. ಯಡಿಯೂರಪ್ಪ ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಖಳನಾಯಕರಾಗಿ ದಾಖಲಾಗುತ್ತಾರೆ ಎಂದು ಅಬ್ದುಲ್ ಮುನೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಲಿ ಟಿಪ್ಪುನೇನೋ ರಬ್ಬರಿನಿಂದ ಉಜ್ಜಿಯೋ, ಪೇಜು ಹರಿದೋ ಪಠ್ಯ ಪುಸ್ತಕದಿಂದ ತೆಗೆಯಬಹುದು… ಆದರೆ, ಗೂಗಲ್ ಪಠ್ಯದಿಂದ ಈ ನಕಲಿ ಟಿಪ್ಪುಗಳನ್ನು ತೆಗೆಯುವುದು ಹ್ಯಾಂಗೆ ಮಾರ್ರೆ?! ಎಂದು ಬಿಜೆಪಿಗರು ಟಿಪ್ಪು ಸುಲ್ತಾನ್‌ ದಿನಾಚರಣೆ ಆಚರಿಸಿದ ಫೋಟೊ ಹಾಕಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಂಜು ಗಂಗೊಳ್ಳಿಯವರು ವ್ಯಂಗ್ಯವಾಡಿದ್ದಾರೆ.

ನೆರೆ ಸಮಸ್ಯೆಯನ್ನು ಟಿಪ್ಪು ಸುಲ್ತಾನ್ ಪಠ್ಯ ನುಂಗಿತ್ತಾ… ಬೋಲೋ ಭಾರತ್ ಮಾತಾಕೀ… ಎಂದು ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿಯವರು ನಿಜ ಸಮಸ್ಯೆ ಬಿಟ್ಟು ಬಿಜೆಪಿ ಟಿಪ್ಪು ಕಡೆ ನೋಡುತ್ತಿದೆ ಎಂದು ಟೀಕಿಸಿದ್ದಾರೆ.

“ಇತಿಹಾಸವನ್ನು ಅರಿಯುವುದು ಎಂದರೆ, ಅದು ಹೀಗಿತ್ತು ಎಂದು ಅರ್ಥ ಮಾಡಿಕೊಳ್ಳುವುದು,ಅದನ್ನು ವರ್ತಮಾನಕ್ಕೆ ತಂದು ಚಟ್ನಿ ಅರೆಯುವುದಲ್ಲ” ಎಂದು ಪ್ರಸಾದ್‌ ರಕ್ಷಿದಿಯವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

“ಟಿಪ್ಪು ಸಮಕಾಲೀನರು ಬೇರೆ ಯಾರೂ ಬ್ರಿಟಿಷರಿಗೆ ಪ್ರತಿರೋಧ ತೋರಲಿಲ್ಲ. ಅದನ್ನು ನೆನಪಿಸಿಕೊಳ್ಳಲು ಬಯಸದವರು ಚರಿತ್ರೆಯಲ್ಲಿ ಟಿಪ್ಪು ಮರೆಯಾಗಲು ಬಯಸುವುದು ಸಹಜ” ಎಂದು ಪಂಡಿತಾರಾದ್ಯರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....