Homeಕರ್ನಾಟಕಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಪಠ್ಯದಿಂದ ಟಿಪ್ಪು ತೆಗೆಯಲು ಹೊರಟ ಬಿಜೆಪಿಗೆ ಇತಿಹಾಸದ ಪಾಠ ಮಾಡಿದ ನೆಟ್ಟಿಗರು...

- Advertisement -
- Advertisement -

“ಟಿಪ್ಪು ಕುರಿತ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುತ್ತೇವೆ. ಅಂತಹ ಯಾವುದೇ ವಿಚಾರ ಪಠ್ಯಪುಸ್ತಕದಲ್ಲಿ ಇರಕೂಡದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ರಾಜ್ಯದೆಲ್ಲಡೆ ಭಾರೀ ವಿರೋಧ ವ್ಯಕ್ತವಾಗಿದೆ.

“ಅದು ಸರಿ ಯಡಿಯೂರಪ್ಪನೋರೇ. ನೀವು ಪಠ್ಯಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದು ( ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು ಆತ ನಿಮ್ಮಲ್ಲಿ ವಿನಂತಿ ಮಾಡಿಲ್ಲ). ಆದರೆ ಇತಿಹಾಸದಿಂದ ಟಿಪ್ಪುವನ್ನು ತೆಗೆಯಲು ಸಾಧ್ಯವೇ? ಜನಮಾನಸದಿಂದ ತೆಗೆಯಲು ಸಾಧ್ಯವೇ?

ಇತಿಹಾಸ ಅಂದರೆ ಏನು ಅಂತ ನಿಮಗೆ ಗೊತ್ತಾ? ಜಗತ್ತೇ ದ್ವೇಷಿಸುವ ಹಿಟ್ಲರ್ ಕೂಡಾ ಇತಿಹಾಸದ ಭಾಗ ಗೊತ್ತಾ? ಅಂಥದ್ದರಲ್ಲಿ 200 ವರ್ಷ ದೇಶವನ್ನು ಲೂಟಿ ಮಾಡಿದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಿ, ಬೇರೆ ಅರಸರಿಗೆ ಭಿನ್ನವಾಗಿ ಯುದ್ಧ ಭೂಮಿಯಲ್ಲೇ ಮಡಿದ ಕನ್ನಡನಾಡಿನ ಹೆಮ್ಮೆಯ ಟಿಪ್ಪೂವಿಗೆ ಅದರಲ್ಲಿ ಜಾಗ ಇಲ್ಲ ಅಂತೀರಾ?

ನೀವು ಟಿಪ್ಪುವನ್ನು ದ್ವೇಷಿಸಿದಷ್ಟೂ ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ. ನೀವು ಆತನ ಇತಿಹಾಸ ಅಡಗಿಸಿಟ್ಟಷ್ಟೂ ಜನ ಅದನ್ನು ಹೊರತೆಗೆದು ಕುತೂಹಲದಿಂದ ಓದಲಾರಂಭಿಸುತ್ತಾರೆ.

ಹೋಗಲಿಬಿಡಿ, ಗೋಡ್ಸೆ ಈ ದೇಶದ ರಾಷ್ಟ್ರಪಿತ, ಗಾಂಧಿ ದೇಶದ್ರೋಹಿ ಎಂಬ ಇತಿಹಾಸ ಮರುಬರೆಯಲು ಸಿದ್ಧರಾಗಿರುವವರಿಗೆ ಇದನ್ನೆಲ್ಲ ಹೇಳಿ ಏನು ಪ್ರಯೋಜನ? ಅದೇನೋ ಗಾದೆಯಿದೆಯಲ್ಲ.. ಕೋಣನ ಮುಂದೆ..” ಎಂದು ಶ್ರೀನಿವಾಸ ಕಾರ್ಕಳರವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನನ್ನು ಶಾಲಾ ಪಠ್ಯದಿಂದ ಕೈ ಬಿಡುವುದು ಅತ್ಯಂತ ಹೀನ ರಾಜಕಾರಣ. ಇತಿಹಾಸ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವುದು ಕ್ಷಮಿಸಲಾಗದ ನಡೆ. ಯಡಿಯೂರಪ್ಪ ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಖಳನಾಯಕರಾಗಿ ದಾಖಲಾಗುತ್ತಾರೆ ಎಂದು ಅಬ್ದುಲ್ ಮುನೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಲಿ ಟಿಪ್ಪುನೇನೋ ರಬ್ಬರಿನಿಂದ ಉಜ್ಜಿಯೋ, ಪೇಜು ಹರಿದೋ ಪಠ್ಯ ಪುಸ್ತಕದಿಂದ ತೆಗೆಯಬಹುದು… ಆದರೆ, ಗೂಗಲ್ ಪಠ್ಯದಿಂದ ಈ ನಕಲಿ ಟಿಪ್ಪುಗಳನ್ನು ತೆಗೆಯುವುದು ಹ್ಯಾಂಗೆ ಮಾರ್ರೆ?! ಎಂದು ಬಿಜೆಪಿಗರು ಟಿಪ್ಪು ಸುಲ್ತಾನ್‌ ದಿನಾಚರಣೆ ಆಚರಿಸಿದ ಫೋಟೊ ಹಾಕಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಂಜು ಗಂಗೊಳ್ಳಿಯವರು ವ್ಯಂಗ್ಯವಾಡಿದ್ದಾರೆ.

ನೆರೆ ಸಮಸ್ಯೆಯನ್ನು ಟಿಪ್ಪು ಸುಲ್ತಾನ್ ಪಠ್ಯ ನುಂಗಿತ್ತಾ… ಬೋಲೋ ಭಾರತ್ ಮಾತಾಕೀ… ಎಂದು ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿಯವರು ನಿಜ ಸಮಸ್ಯೆ ಬಿಟ್ಟು ಬಿಜೆಪಿ ಟಿಪ್ಪು ಕಡೆ ನೋಡುತ್ತಿದೆ ಎಂದು ಟೀಕಿಸಿದ್ದಾರೆ.

“ಇತಿಹಾಸವನ್ನು ಅರಿಯುವುದು ಎಂದರೆ, ಅದು ಹೀಗಿತ್ತು ಎಂದು ಅರ್ಥ ಮಾಡಿಕೊಳ್ಳುವುದು,ಅದನ್ನು ವರ್ತಮಾನಕ್ಕೆ ತಂದು ಚಟ್ನಿ ಅರೆಯುವುದಲ್ಲ” ಎಂದು ಪ್ರಸಾದ್‌ ರಕ್ಷಿದಿಯವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

“ಟಿಪ್ಪು ಸಮಕಾಲೀನರು ಬೇರೆ ಯಾರೂ ಬ್ರಿಟಿಷರಿಗೆ ಪ್ರತಿರೋಧ ತೋರಲಿಲ್ಲ. ಅದನ್ನು ನೆನಪಿಸಿಕೊಳ್ಳಲು ಬಯಸದವರು ಚರಿತ್ರೆಯಲ್ಲಿ ಟಿಪ್ಪು ಮರೆಯಾಗಲು ಬಯಸುವುದು ಸಹಜ” ಎಂದು ಪಂಡಿತಾರಾದ್ಯರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...