Homeಕರ್ನಾಟಕಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಪಠ್ಯದಿಂದ ಟಿಪ್ಪು ತೆಗೆಯಲು ಹೊರಟ ಬಿಜೆಪಿಗೆ ಇತಿಹಾಸದ ಪಾಠ ಮಾಡಿದ ನೆಟ್ಟಿಗರು...

- Advertisement -
- Advertisement -

“ಟಿಪ್ಪು ಕುರಿತ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುತ್ತೇವೆ. ಅಂತಹ ಯಾವುದೇ ವಿಚಾರ ಪಠ್ಯಪುಸ್ತಕದಲ್ಲಿ ಇರಕೂಡದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ರಾಜ್ಯದೆಲ್ಲಡೆ ಭಾರೀ ವಿರೋಧ ವ್ಯಕ್ತವಾಗಿದೆ.

“ಅದು ಸರಿ ಯಡಿಯೂರಪ್ಪನೋರೇ. ನೀವು ಪಠ್ಯಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದು ( ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು ಆತ ನಿಮ್ಮಲ್ಲಿ ವಿನಂತಿ ಮಾಡಿಲ್ಲ). ಆದರೆ ಇತಿಹಾಸದಿಂದ ಟಿಪ್ಪುವನ್ನು ತೆಗೆಯಲು ಸಾಧ್ಯವೇ? ಜನಮಾನಸದಿಂದ ತೆಗೆಯಲು ಸಾಧ್ಯವೇ?

ಇತಿಹಾಸ ಅಂದರೆ ಏನು ಅಂತ ನಿಮಗೆ ಗೊತ್ತಾ? ಜಗತ್ತೇ ದ್ವೇಷಿಸುವ ಹಿಟ್ಲರ್ ಕೂಡಾ ಇತಿಹಾಸದ ಭಾಗ ಗೊತ್ತಾ? ಅಂಥದ್ದರಲ್ಲಿ 200 ವರ್ಷ ದೇಶವನ್ನು ಲೂಟಿ ಮಾಡಿದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಿ, ಬೇರೆ ಅರಸರಿಗೆ ಭಿನ್ನವಾಗಿ ಯುದ್ಧ ಭೂಮಿಯಲ್ಲೇ ಮಡಿದ ಕನ್ನಡನಾಡಿನ ಹೆಮ್ಮೆಯ ಟಿಪ್ಪೂವಿಗೆ ಅದರಲ್ಲಿ ಜಾಗ ಇಲ್ಲ ಅಂತೀರಾ?

ನೀವು ಟಿಪ್ಪುವನ್ನು ದ್ವೇಷಿಸಿದಷ್ಟೂ ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ. ನೀವು ಆತನ ಇತಿಹಾಸ ಅಡಗಿಸಿಟ್ಟಷ್ಟೂ ಜನ ಅದನ್ನು ಹೊರತೆಗೆದು ಕುತೂಹಲದಿಂದ ಓದಲಾರಂಭಿಸುತ್ತಾರೆ.

ಹೋಗಲಿಬಿಡಿ, ಗೋಡ್ಸೆ ಈ ದೇಶದ ರಾಷ್ಟ್ರಪಿತ, ಗಾಂಧಿ ದೇಶದ್ರೋಹಿ ಎಂಬ ಇತಿಹಾಸ ಮರುಬರೆಯಲು ಸಿದ್ಧರಾಗಿರುವವರಿಗೆ ಇದನ್ನೆಲ್ಲ ಹೇಳಿ ಏನು ಪ್ರಯೋಜನ? ಅದೇನೋ ಗಾದೆಯಿದೆಯಲ್ಲ.. ಕೋಣನ ಮುಂದೆ..” ಎಂದು ಶ್ರೀನಿವಾಸ ಕಾರ್ಕಳರವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನನ್ನು ಶಾಲಾ ಪಠ್ಯದಿಂದ ಕೈ ಬಿಡುವುದು ಅತ್ಯಂತ ಹೀನ ರಾಜಕಾರಣ. ಇತಿಹಾಸ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವುದು ಕ್ಷಮಿಸಲಾಗದ ನಡೆ. ಯಡಿಯೂರಪ್ಪ ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಖಳನಾಯಕರಾಗಿ ದಾಖಲಾಗುತ್ತಾರೆ ಎಂದು ಅಬ್ದುಲ್ ಮುನೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಲಿ ಟಿಪ್ಪುನೇನೋ ರಬ್ಬರಿನಿಂದ ಉಜ್ಜಿಯೋ, ಪೇಜು ಹರಿದೋ ಪಠ್ಯ ಪುಸ್ತಕದಿಂದ ತೆಗೆಯಬಹುದು… ಆದರೆ, ಗೂಗಲ್ ಪಠ್ಯದಿಂದ ಈ ನಕಲಿ ಟಿಪ್ಪುಗಳನ್ನು ತೆಗೆಯುವುದು ಹ್ಯಾಂಗೆ ಮಾರ್ರೆ?! ಎಂದು ಬಿಜೆಪಿಗರು ಟಿಪ್ಪು ಸುಲ್ತಾನ್‌ ದಿನಾಚರಣೆ ಆಚರಿಸಿದ ಫೋಟೊ ಹಾಕಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಂಜು ಗಂಗೊಳ್ಳಿಯವರು ವ್ಯಂಗ್ಯವಾಡಿದ್ದಾರೆ.

ನೆರೆ ಸಮಸ್ಯೆಯನ್ನು ಟಿಪ್ಪು ಸುಲ್ತಾನ್ ಪಠ್ಯ ನುಂಗಿತ್ತಾ… ಬೋಲೋ ಭಾರತ್ ಮಾತಾಕೀ… ಎಂದು ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿಯವರು ನಿಜ ಸಮಸ್ಯೆ ಬಿಟ್ಟು ಬಿಜೆಪಿ ಟಿಪ್ಪು ಕಡೆ ನೋಡುತ್ತಿದೆ ಎಂದು ಟೀಕಿಸಿದ್ದಾರೆ.

“ಇತಿಹಾಸವನ್ನು ಅರಿಯುವುದು ಎಂದರೆ, ಅದು ಹೀಗಿತ್ತು ಎಂದು ಅರ್ಥ ಮಾಡಿಕೊಳ್ಳುವುದು,ಅದನ್ನು ವರ್ತಮಾನಕ್ಕೆ ತಂದು ಚಟ್ನಿ ಅರೆಯುವುದಲ್ಲ” ಎಂದು ಪ್ರಸಾದ್‌ ರಕ್ಷಿದಿಯವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

“ಟಿಪ್ಪು ಸಮಕಾಲೀನರು ಬೇರೆ ಯಾರೂ ಬ್ರಿಟಿಷರಿಗೆ ಪ್ರತಿರೋಧ ತೋರಲಿಲ್ಲ. ಅದನ್ನು ನೆನಪಿಸಿಕೊಳ್ಳಲು ಬಯಸದವರು ಚರಿತ್ರೆಯಲ್ಲಿ ಟಿಪ್ಪು ಮರೆಯಾಗಲು ಬಯಸುವುದು ಸಹಜ” ಎಂದು ಪಂಡಿತಾರಾದ್ಯರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...