Homeಕರ್ನಾಟಕಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಬಿಜೆಪಿಯವರು ಟಿಪ್ಪುವನ್ನು ದ್ವೇಷಿಸಿದಷ್ಟೂ, ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ..

ಪಠ್ಯದಿಂದ ಟಿಪ್ಪು ತೆಗೆಯಲು ಹೊರಟ ಬಿಜೆಪಿಗೆ ಇತಿಹಾಸದ ಪಾಠ ಮಾಡಿದ ನೆಟ್ಟಿಗರು...

- Advertisement -
- Advertisement -

“ಟಿಪ್ಪು ಕುರಿತ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುತ್ತೇವೆ. ಅಂತಹ ಯಾವುದೇ ವಿಚಾರ ಪಠ್ಯಪುಸ್ತಕದಲ್ಲಿ ಇರಕೂಡದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ರಾಜ್ಯದೆಲ್ಲಡೆ ಭಾರೀ ವಿರೋಧ ವ್ಯಕ್ತವಾಗಿದೆ.

“ಅದು ಸರಿ ಯಡಿಯೂರಪ್ಪನೋರೇ. ನೀವು ಪಠ್ಯಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದು ( ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು ಆತ ನಿಮ್ಮಲ್ಲಿ ವಿನಂತಿ ಮಾಡಿಲ್ಲ). ಆದರೆ ಇತಿಹಾಸದಿಂದ ಟಿಪ್ಪುವನ್ನು ತೆಗೆಯಲು ಸಾಧ್ಯವೇ? ಜನಮಾನಸದಿಂದ ತೆಗೆಯಲು ಸಾಧ್ಯವೇ?

ಇತಿಹಾಸ ಅಂದರೆ ಏನು ಅಂತ ನಿಮಗೆ ಗೊತ್ತಾ? ಜಗತ್ತೇ ದ್ವೇಷಿಸುವ ಹಿಟ್ಲರ್ ಕೂಡಾ ಇತಿಹಾಸದ ಭಾಗ ಗೊತ್ತಾ? ಅಂಥದ್ದರಲ್ಲಿ 200 ವರ್ಷ ದೇಶವನ್ನು ಲೂಟಿ ಮಾಡಿದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಿ, ಬೇರೆ ಅರಸರಿಗೆ ಭಿನ್ನವಾಗಿ ಯುದ್ಧ ಭೂಮಿಯಲ್ಲೇ ಮಡಿದ ಕನ್ನಡನಾಡಿನ ಹೆಮ್ಮೆಯ ಟಿಪ್ಪೂವಿಗೆ ಅದರಲ್ಲಿ ಜಾಗ ಇಲ್ಲ ಅಂತೀರಾ?

ನೀವು ಟಿಪ್ಪುವನ್ನು ದ್ವೇಷಿಸಿದಷ್ಟೂ ಜನ ಟಿಪ್ಪುವನ್ನು ಪ್ರೀತಿಸಲಾರಂಭಿಸುತ್ತಾರೆ. ನೀವು ಆತನ ಇತಿಹಾಸ ಅಡಗಿಸಿಟ್ಟಷ್ಟೂ ಜನ ಅದನ್ನು ಹೊರತೆಗೆದು ಕುತೂಹಲದಿಂದ ಓದಲಾರಂಭಿಸುತ್ತಾರೆ.

ಹೋಗಲಿಬಿಡಿ, ಗೋಡ್ಸೆ ಈ ದೇಶದ ರಾಷ್ಟ್ರಪಿತ, ಗಾಂಧಿ ದೇಶದ್ರೋಹಿ ಎಂಬ ಇತಿಹಾಸ ಮರುಬರೆಯಲು ಸಿದ್ಧರಾಗಿರುವವರಿಗೆ ಇದನ್ನೆಲ್ಲ ಹೇಳಿ ಏನು ಪ್ರಯೋಜನ? ಅದೇನೋ ಗಾದೆಯಿದೆಯಲ್ಲ.. ಕೋಣನ ಮುಂದೆ..” ಎಂದು ಶ್ರೀನಿವಾಸ ಕಾರ್ಕಳರವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನನ್ನು ಶಾಲಾ ಪಠ್ಯದಿಂದ ಕೈ ಬಿಡುವುದು ಅತ್ಯಂತ ಹೀನ ರಾಜಕಾರಣ. ಇತಿಹಾಸ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವುದು ಕ್ಷಮಿಸಲಾಗದ ನಡೆ. ಯಡಿಯೂರಪ್ಪ ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಖಳನಾಯಕರಾಗಿ ದಾಖಲಾಗುತ್ತಾರೆ ಎಂದು ಅಬ್ದುಲ್ ಮುನೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಲಿ ಟಿಪ್ಪುನೇನೋ ರಬ್ಬರಿನಿಂದ ಉಜ್ಜಿಯೋ, ಪೇಜು ಹರಿದೋ ಪಠ್ಯ ಪುಸ್ತಕದಿಂದ ತೆಗೆಯಬಹುದು… ಆದರೆ, ಗೂಗಲ್ ಪಠ್ಯದಿಂದ ಈ ನಕಲಿ ಟಿಪ್ಪುಗಳನ್ನು ತೆಗೆಯುವುದು ಹ್ಯಾಂಗೆ ಮಾರ್ರೆ?! ಎಂದು ಬಿಜೆಪಿಗರು ಟಿಪ್ಪು ಸುಲ್ತಾನ್‌ ದಿನಾಚರಣೆ ಆಚರಿಸಿದ ಫೋಟೊ ಹಾಕಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಪಂಜು ಗಂಗೊಳ್ಳಿಯವರು ವ್ಯಂಗ್ಯವಾಡಿದ್ದಾರೆ.

ನೆರೆ ಸಮಸ್ಯೆಯನ್ನು ಟಿಪ್ಪು ಸುಲ್ತಾನ್ ಪಠ್ಯ ನುಂಗಿತ್ತಾ… ಬೋಲೋ ಭಾರತ್ ಮಾತಾಕೀ… ಎಂದು ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿಯವರು ನಿಜ ಸಮಸ್ಯೆ ಬಿಟ್ಟು ಬಿಜೆಪಿ ಟಿಪ್ಪು ಕಡೆ ನೋಡುತ್ತಿದೆ ಎಂದು ಟೀಕಿಸಿದ್ದಾರೆ.

“ಇತಿಹಾಸವನ್ನು ಅರಿಯುವುದು ಎಂದರೆ, ಅದು ಹೀಗಿತ್ತು ಎಂದು ಅರ್ಥ ಮಾಡಿಕೊಳ್ಳುವುದು,ಅದನ್ನು ವರ್ತಮಾನಕ್ಕೆ ತಂದು ಚಟ್ನಿ ಅರೆಯುವುದಲ್ಲ” ಎಂದು ಪ್ರಸಾದ್‌ ರಕ್ಷಿದಿಯವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

“ಟಿಪ್ಪು ಸಮಕಾಲೀನರು ಬೇರೆ ಯಾರೂ ಬ್ರಿಟಿಷರಿಗೆ ಪ್ರತಿರೋಧ ತೋರಲಿಲ್ಲ. ಅದನ್ನು ನೆನಪಿಸಿಕೊಳ್ಳಲು ಬಯಸದವರು ಚರಿತ್ರೆಯಲ್ಲಿ ಟಿಪ್ಪು ಮರೆಯಾಗಲು ಬಯಸುವುದು ಸಹಜ” ಎಂದು ಪಂಡಿತಾರಾದ್ಯರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....