Homeಚಳವಳಿಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

ಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

- Advertisement -
- Advertisement -

ಹಸಿವಿನಿಂದ ಕಂಗಾಲಾಗಿರುವ ಮಕ್ಕಳು, ಬೆಂಬಿಡದೇ ಸುರಿಯುತ್ತಿರುವ ಮಳೆ, ನಿದ್ರೆಯಿಲ್ಲದ ರಾತ್ರಿಗಳು.. ಇಂತಹದ್ದೊಂದು ಪರಿಸ್ಥಿತಿಯನ್ನು ನಾವು ಕಲ್ಪಿಸಿಕೊಳ್ಳಲು ಸಾಧ್ಯವೇ…?

ಕಳೆದ ಹದಿನೈದು ವರ್ಷಗಳ ಹಿಂದೆಯೇ ಉತ್ತರ ಕರ್ನಾಟಕದ ವಿವಿಧ ಭಾಗಗಳಿಂದ ವಲಸೆ ಬಂದು ತಿಪಟೂರಿನಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಾ ಜೀವನ ಕಟ್ಟಿಕೊಂಡಿದ್ದ 28 ಕುಟುಂಬಗಳು ಇಂದು ಬೀದಿಗೆ ಬಿದ್ದಿವೆ. ಸರ್ಕಾರಿ ಜಮೀನಿನಲ್ಲಿ ಟೆಂಟ್ ಹಾಕಿಕೊಳ್ಳುವಂತಿಲ್ಲ ಎಂದು ಪೊಲೀಸರು ರಾತ್ರೋರಾತ್ರಿ ಮಕ್ಕಳು, ಬಸರಿ ಹೆಂಗಸರು ಎಂಬುದನ್ನು ನೋಡದೇ ಎತ್ತಂಗಡಿ ಮಾಡಿಸಿದ್ದಾರೆ.

ಹದಿನೆಂಟು ಮುಸ್ಲಿಂ ಸಮುದಾಯ ಹಾಗೂ ಹತ್ತು ಸುಡುಗಾಡು ಸಿದ್ಧರ ಸಮುದಾಯದ ಕುಟುಂಬಗಳು ತಿಪಟೂರಿನ ನಗರ ಸಭೆಯ ಸರ್ಕಾರಿ ಜಾಗದಲ್ಲಿ ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿದ್ದರು. ಈ ಅಲೆಮಾರಿ ಸಮುದಾಯಗಳು ಒಂದು ಕಡೆ ನೆಲೆನಿಂತು, ವ್ಯಾಪಾರ ಮಾಡುತ್ತಿದ್ದದ್ದು ಮಾತ್ರವಲ್ಲದೇ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದರು. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಸಮುದಾಯದ ಯುವತಿ ಇಡೀ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ಅಂಕ ಪಡೆದಿದ್ದಾಳೆ.

ವಿಡಿಯೋ ನೋಡಿ

ನಾನು ತುಂಬಾ ಚೆನ್ನಾಗಿ ಓದಬೇಕು. ಸರ್ಕಾರಿ ಅಧಿಕಾರಿಯಾಗಿ ಕೆಲಸ ಪಡೆದುಕೊಳ್ಳಬೇಕು ಎಂಬ ಕನಸಿದೆ ಎನ್ನುವ ಯುವತಿ ತನ್ನ ಈಗಿನ ತನ್ನ ದುಸ್ಥಿತಿ ನೆನೆದು ಬೇಸರಿಸಿಕೊಳ್ಳುತ್ತಾಳೆ..

ಕುಟುಂಬಗಳಿದ್ದ ಜಾಗದಿಂದ ಎತ್ತಂಗಡಿ ಮಾಡಿಸಿರುವ ಪೊಲೀಸರು ಅವರು ಬೇರೆ ಕಡೆ ತಾತ್ಕಾಲಿಕ ಟೆಂಟ್ ಹಾಕಿಕೊಂಡರೆ ಅಲ್ಲಿಂದಲೂ ಎತ್ತಂಗಡಿ ಮಾಡಿಸುತ್ತಿದ್ದು ಲಾಠಿಚಾರ್ಜ್ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾರೆ ಎನ್ನಲಾಗುತ್ತಿದೆ. ಪ್ರಸ್ತುತ ತಿಪಟೂರಿನಿಂದ ಐದಾರು ಕಿ.ಮೀ ಅಂತರದಲ್ಲಿ ತಾತ್ಕಾಲಿಕ ಟೆಂಟ್ ಹಾಕಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬಗಳು ಭಯದಿಂದಲೇ ದಿನ ಕಳೆಯುವಂತಾಗಿದೆ. ಅಲ್ಲಿ ಅವರಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಯಾವುದೇ ವ್ಯವಸ್ಥೆಯಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ತಹಶೀಲ್ದಾರರು ಆ ಎಲ್ಲಾ ಕುಟುಂಬಗಳಿಗೆ ವಸತಿ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ತಿಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುಟುಂಬಗಳಿಗೆ ಸರ್ಕಾರಿ ಜಾಗದಲ್ಲಿಯೇ ಟೆಂಟ್ ಹಾಕಿಕೊಳ್ಳಲು ವ್ಯವಸ್ಥೆ ಮಾಡಿಕೊಡಬೇಕು. ಸರ್ಕಾರವೇ ಈ ಕುಟುಂಬಗಳಿಗೆ ಮನೆ ನೀಡಬೇಕು ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ. ಸೂರು ಕಳೆದುಕೊಂಡವರ ನಿಯೋಗ ತುಮಕೂರು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ವಸತಿ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದೆ.

ಈ ಕುಟುಂಬಗಳಿಗೆ ಸೂರಿನ ವ್ಯವಸ್ಥೆ ಮಾಡಬೇಕು ಇಲ್ಲದಿದ್ದಲ್ಲಿ ಹೋರಾಟ ಆರಂಭಿಸಲಾಗುವುದು ಎಂದಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ಅವರು ಸರ್ಕಾರದ ಜಾಗದಲ್ಲಿಯೇ ಇವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಬರಿ ತಿಪಟೂರಿನ ಕಥೆಯಲ್ಲ… ಇದೇ ರೀತಿ ರಾಜ್ಯದ ನಾನಾ ಭಾಗಗಳಲ್ಲಿ ಅಲೆಮಾರಿ ಕುಟುಂಬಗಳು ಸ್ವಂತ ಸೂರಿಲ್ಲದೇ, ಮೂಲಭೂತ ವ್ಯವಸ್ಥೆಗಳಿಲ್ಲದೇ ಬದುಕುತ್ತಿದ್ದಾರೆ. ಕುಡಿಯುವ ನೀರಿಗೂ ಹೋರಾಟ ಮಾಡುವಂತಹ ಪರಿಸ್ಥಿತಿಯಲ್ಲಿದ್ದಾರೆ. ಈ ಎಲ್ಲಾ ಕುಟುಂಬಗಳ ಬದುಕು ಹಸನಾಗುವುದು ಯಾವಾಗಾ…?


ಇದನ್ನೂ ಓದಿ: ಏಕಾಏಕಿ ಒಕ್ಕಲೆಬ್ಬಿಸುವಿಕೆ: ಮನೆ ಕಳೆದುಕೊಂಡು ದಾರಿ ಕಾಣದೆ ಪರಿತಪಿಸುತ್ತಿರುವ 86 ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರ ಈ ಕ್ರೌರ್ಯ ಕಂಡನಾರ್ಹ.
    ಈ ೨೮ ಕುಟುಂಬಗಳಿಗೆ ಸರ್ಕಾರ ಈ ಕೂಡಲೇ ತಾತ್ಕಾಲಿಕ ವಸತಿಯನ್ನು ಕಲ್ಪಿಸಬೇಕು.ಆನಂತರ ಇವರಿಗೆ ಆಶ್ರಯ ಯೋಜನೆಯ ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...