Homeಚಳವಳಿಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

ಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

- Advertisement -
- Advertisement -

ಹಸಿವಿನಿಂದ ಕಂಗಾಲಾಗಿರುವ ಮಕ್ಕಳು, ಬೆಂಬಿಡದೇ ಸುರಿಯುತ್ತಿರುವ ಮಳೆ, ನಿದ್ರೆಯಿಲ್ಲದ ರಾತ್ರಿಗಳು.. ಇಂತಹದ್ದೊಂದು ಪರಿಸ್ಥಿತಿಯನ್ನು ನಾವು ಕಲ್ಪಿಸಿಕೊಳ್ಳಲು ಸಾಧ್ಯವೇ…?

ಕಳೆದ ಹದಿನೈದು ವರ್ಷಗಳ ಹಿಂದೆಯೇ ಉತ್ತರ ಕರ್ನಾಟಕದ ವಿವಿಧ ಭಾಗಗಳಿಂದ ವಲಸೆ ಬಂದು ತಿಪಟೂರಿನಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಾ ಜೀವನ ಕಟ್ಟಿಕೊಂಡಿದ್ದ 28 ಕುಟುಂಬಗಳು ಇಂದು ಬೀದಿಗೆ ಬಿದ್ದಿವೆ. ಸರ್ಕಾರಿ ಜಮೀನಿನಲ್ಲಿ ಟೆಂಟ್ ಹಾಕಿಕೊಳ್ಳುವಂತಿಲ್ಲ ಎಂದು ಪೊಲೀಸರು ರಾತ್ರೋರಾತ್ರಿ ಮಕ್ಕಳು, ಬಸರಿ ಹೆಂಗಸರು ಎಂಬುದನ್ನು ನೋಡದೇ ಎತ್ತಂಗಡಿ ಮಾಡಿಸಿದ್ದಾರೆ.

ಹದಿನೆಂಟು ಮುಸ್ಲಿಂ ಸಮುದಾಯ ಹಾಗೂ ಹತ್ತು ಸುಡುಗಾಡು ಸಿದ್ಧರ ಸಮುದಾಯದ ಕುಟುಂಬಗಳು ತಿಪಟೂರಿನ ನಗರ ಸಭೆಯ ಸರ್ಕಾರಿ ಜಾಗದಲ್ಲಿ ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿದ್ದರು. ಈ ಅಲೆಮಾರಿ ಸಮುದಾಯಗಳು ಒಂದು ಕಡೆ ನೆಲೆನಿಂತು, ವ್ಯಾಪಾರ ಮಾಡುತ್ತಿದ್ದದ್ದು ಮಾತ್ರವಲ್ಲದೇ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದರು. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಸಮುದಾಯದ ಯುವತಿ ಇಡೀ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ಅಂಕ ಪಡೆದಿದ್ದಾಳೆ.

ವಿಡಿಯೋ ನೋಡಿ

ನಾನು ತುಂಬಾ ಚೆನ್ನಾಗಿ ಓದಬೇಕು. ಸರ್ಕಾರಿ ಅಧಿಕಾರಿಯಾಗಿ ಕೆಲಸ ಪಡೆದುಕೊಳ್ಳಬೇಕು ಎಂಬ ಕನಸಿದೆ ಎನ್ನುವ ಯುವತಿ ತನ್ನ ಈಗಿನ ತನ್ನ ದುಸ್ಥಿತಿ ನೆನೆದು ಬೇಸರಿಸಿಕೊಳ್ಳುತ್ತಾಳೆ..

ಕುಟುಂಬಗಳಿದ್ದ ಜಾಗದಿಂದ ಎತ್ತಂಗಡಿ ಮಾಡಿಸಿರುವ ಪೊಲೀಸರು ಅವರು ಬೇರೆ ಕಡೆ ತಾತ್ಕಾಲಿಕ ಟೆಂಟ್ ಹಾಕಿಕೊಂಡರೆ ಅಲ್ಲಿಂದಲೂ ಎತ್ತಂಗಡಿ ಮಾಡಿಸುತ್ತಿದ್ದು ಲಾಠಿಚಾರ್ಜ್ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾರೆ ಎನ್ನಲಾಗುತ್ತಿದೆ. ಪ್ರಸ್ತುತ ತಿಪಟೂರಿನಿಂದ ಐದಾರು ಕಿ.ಮೀ ಅಂತರದಲ್ಲಿ ತಾತ್ಕಾಲಿಕ ಟೆಂಟ್ ಹಾಕಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬಗಳು ಭಯದಿಂದಲೇ ದಿನ ಕಳೆಯುವಂತಾಗಿದೆ. ಅಲ್ಲಿ ಅವರಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಯಾವುದೇ ವ್ಯವಸ್ಥೆಯಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ತಹಶೀಲ್ದಾರರು ಆ ಎಲ್ಲಾ ಕುಟುಂಬಗಳಿಗೆ ವಸತಿ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ತಿಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುಟುಂಬಗಳಿಗೆ ಸರ್ಕಾರಿ ಜಾಗದಲ್ಲಿಯೇ ಟೆಂಟ್ ಹಾಕಿಕೊಳ್ಳಲು ವ್ಯವಸ್ಥೆ ಮಾಡಿಕೊಡಬೇಕು. ಸರ್ಕಾರವೇ ಈ ಕುಟುಂಬಗಳಿಗೆ ಮನೆ ನೀಡಬೇಕು ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ. ಸೂರು ಕಳೆದುಕೊಂಡವರ ನಿಯೋಗ ತುಮಕೂರು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ವಸತಿ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದೆ.

ಈ ಕುಟುಂಬಗಳಿಗೆ ಸೂರಿನ ವ್ಯವಸ್ಥೆ ಮಾಡಬೇಕು ಇಲ್ಲದಿದ್ದಲ್ಲಿ ಹೋರಾಟ ಆರಂಭಿಸಲಾಗುವುದು ಎಂದಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ಅವರು ಸರ್ಕಾರದ ಜಾಗದಲ್ಲಿಯೇ ಇವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಬರಿ ತಿಪಟೂರಿನ ಕಥೆಯಲ್ಲ… ಇದೇ ರೀತಿ ರಾಜ್ಯದ ನಾನಾ ಭಾಗಗಳಲ್ಲಿ ಅಲೆಮಾರಿ ಕುಟುಂಬಗಳು ಸ್ವಂತ ಸೂರಿಲ್ಲದೇ, ಮೂಲಭೂತ ವ್ಯವಸ್ಥೆಗಳಿಲ್ಲದೇ ಬದುಕುತ್ತಿದ್ದಾರೆ. ಕುಡಿಯುವ ನೀರಿಗೂ ಹೋರಾಟ ಮಾಡುವಂತಹ ಪರಿಸ್ಥಿತಿಯಲ್ಲಿದ್ದಾರೆ. ಈ ಎಲ್ಲಾ ಕುಟುಂಬಗಳ ಬದುಕು ಹಸನಾಗುವುದು ಯಾವಾಗಾ…?


ಇದನ್ನೂ ಓದಿ: ಏಕಾಏಕಿ ಒಕ್ಕಲೆಬ್ಬಿಸುವಿಕೆ: ಮನೆ ಕಳೆದುಕೊಂಡು ದಾರಿ ಕಾಣದೆ ಪರಿತಪಿಸುತ್ತಿರುವ 86 ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರ ಈ ಕ್ರೌರ್ಯ ಕಂಡನಾರ್ಹ.
    ಈ ೨೮ ಕುಟುಂಬಗಳಿಗೆ ಸರ್ಕಾರ ಈ ಕೂಡಲೇ ತಾತ್ಕಾಲಿಕ ವಸತಿಯನ್ನು ಕಲ್ಪಿಸಬೇಕು.ಆನಂತರ ಇವರಿಗೆ ಆಶ್ರಯ ಯೋಜನೆಯ ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...