Homeಚಳವಳಿಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

ಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

- Advertisement -
- Advertisement -

ಹಸಿವಿನಿಂದ ಕಂಗಾಲಾಗಿರುವ ಮಕ್ಕಳು, ಬೆಂಬಿಡದೇ ಸುರಿಯುತ್ತಿರುವ ಮಳೆ, ನಿದ್ರೆಯಿಲ್ಲದ ರಾತ್ರಿಗಳು.. ಇಂತಹದ್ದೊಂದು ಪರಿಸ್ಥಿತಿಯನ್ನು ನಾವು ಕಲ್ಪಿಸಿಕೊಳ್ಳಲು ಸಾಧ್ಯವೇ…?

ಕಳೆದ ಹದಿನೈದು ವರ್ಷಗಳ ಹಿಂದೆಯೇ ಉತ್ತರ ಕರ್ನಾಟಕದ ವಿವಿಧ ಭಾಗಗಳಿಂದ ವಲಸೆ ಬಂದು ತಿಪಟೂರಿನಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಾ ಜೀವನ ಕಟ್ಟಿಕೊಂಡಿದ್ದ 28 ಕುಟುಂಬಗಳು ಇಂದು ಬೀದಿಗೆ ಬಿದ್ದಿವೆ. ಸರ್ಕಾರಿ ಜಮೀನಿನಲ್ಲಿ ಟೆಂಟ್ ಹಾಕಿಕೊಳ್ಳುವಂತಿಲ್ಲ ಎಂದು ಪೊಲೀಸರು ರಾತ್ರೋರಾತ್ರಿ ಮಕ್ಕಳು, ಬಸರಿ ಹೆಂಗಸರು ಎಂಬುದನ್ನು ನೋಡದೇ ಎತ್ತಂಗಡಿ ಮಾಡಿಸಿದ್ದಾರೆ.

ಹದಿನೆಂಟು ಮುಸ್ಲಿಂ ಸಮುದಾಯ ಹಾಗೂ ಹತ್ತು ಸುಡುಗಾಡು ಸಿದ್ಧರ ಸಮುದಾಯದ ಕುಟುಂಬಗಳು ತಿಪಟೂರಿನ ನಗರ ಸಭೆಯ ಸರ್ಕಾರಿ ಜಾಗದಲ್ಲಿ ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿದ್ದರು. ಈ ಅಲೆಮಾರಿ ಸಮುದಾಯಗಳು ಒಂದು ಕಡೆ ನೆಲೆನಿಂತು, ವ್ಯಾಪಾರ ಮಾಡುತ್ತಿದ್ದದ್ದು ಮಾತ್ರವಲ್ಲದೇ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದರು. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಸಮುದಾಯದ ಯುವತಿ ಇಡೀ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ಅಂಕ ಪಡೆದಿದ್ದಾಳೆ.

ವಿಡಿಯೋ ನೋಡಿ

ನಾನು ತುಂಬಾ ಚೆನ್ನಾಗಿ ಓದಬೇಕು. ಸರ್ಕಾರಿ ಅಧಿಕಾರಿಯಾಗಿ ಕೆಲಸ ಪಡೆದುಕೊಳ್ಳಬೇಕು ಎಂಬ ಕನಸಿದೆ ಎನ್ನುವ ಯುವತಿ ತನ್ನ ಈಗಿನ ತನ್ನ ದುಸ್ಥಿತಿ ನೆನೆದು ಬೇಸರಿಸಿಕೊಳ್ಳುತ್ತಾಳೆ..

ಕುಟುಂಬಗಳಿದ್ದ ಜಾಗದಿಂದ ಎತ್ತಂಗಡಿ ಮಾಡಿಸಿರುವ ಪೊಲೀಸರು ಅವರು ಬೇರೆ ಕಡೆ ತಾತ್ಕಾಲಿಕ ಟೆಂಟ್ ಹಾಕಿಕೊಂಡರೆ ಅಲ್ಲಿಂದಲೂ ಎತ್ತಂಗಡಿ ಮಾಡಿಸುತ್ತಿದ್ದು ಲಾಠಿಚಾರ್ಜ್ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾರೆ ಎನ್ನಲಾಗುತ್ತಿದೆ. ಪ್ರಸ್ತುತ ತಿಪಟೂರಿನಿಂದ ಐದಾರು ಕಿ.ಮೀ ಅಂತರದಲ್ಲಿ ತಾತ್ಕಾಲಿಕ ಟೆಂಟ್ ಹಾಕಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬಗಳು ಭಯದಿಂದಲೇ ದಿನ ಕಳೆಯುವಂತಾಗಿದೆ. ಅಲ್ಲಿ ಅವರಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಯಾವುದೇ ವ್ಯವಸ್ಥೆಯಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ತಹಶೀಲ್ದಾರರು ಆ ಎಲ್ಲಾ ಕುಟುಂಬಗಳಿಗೆ ವಸತಿ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ತಿಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುಟುಂಬಗಳಿಗೆ ಸರ್ಕಾರಿ ಜಾಗದಲ್ಲಿಯೇ ಟೆಂಟ್ ಹಾಕಿಕೊಳ್ಳಲು ವ್ಯವಸ್ಥೆ ಮಾಡಿಕೊಡಬೇಕು. ಸರ್ಕಾರವೇ ಈ ಕುಟುಂಬಗಳಿಗೆ ಮನೆ ನೀಡಬೇಕು ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ. ಸೂರು ಕಳೆದುಕೊಂಡವರ ನಿಯೋಗ ತುಮಕೂರು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ವಸತಿ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದೆ.

ಈ ಕುಟುಂಬಗಳಿಗೆ ಸೂರಿನ ವ್ಯವಸ್ಥೆ ಮಾಡಬೇಕು ಇಲ್ಲದಿದ್ದಲ್ಲಿ ಹೋರಾಟ ಆರಂಭಿಸಲಾಗುವುದು ಎಂದಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ಅವರು ಸರ್ಕಾರದ ಜಾಗದಲ್ಲಿಯೇ ಇವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಬರಿ ತಿಪಟೂರಿನ ಕಥೆಯಲ್ಲ… ಇದೇ ರೀತಿ ರಾಜ್ಯದ ನಾನಾ ಭಾಗಗಳಲ್ಲಿ ಅಲೆಮಾರಿ ಕುಟುಂಬಗಳು ಸ್ವಂತ ಸೂರಿಲ್ಲದೇ, ಮೂಲಭೂತ ವ್ಯವಸ್ಥೆಗಳಿಲ್ಲದೇ ಬದುಕುತ್ತಿದ್ದಾರೆ. ಕುಡಿಯುವ ನೀರಿಗೂ ಹೋರಾಟ ಮಾಡುವಂತಹ ಪರಿಸ್ಥಿತಿಯಲ್ಲಿದ್ದಾರೆ. ಈ ಎಲ್ಲಾ ಕುಟುಂಬಗಳ ಬದುಕು ಹಸನಾಗುವುದು ಯಾವಾಗಾ…?


ಇದನ್ನೂ ಓದಿ: ಏಕಾಏಕಿ ಒಕ್ಕಲೆಬ್ಬಿಸುವಿಕೆ: ಮನೆ ಕಳೆದುಕೊಂಡು ದಾರಿ ಕಾಣದೆ ಪರಿತಪಿಸುತ್ತಿರುವ 86 ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರ ಈ ಕ್ರೌರ್ಯ ಕಂಡನಾರ್ಹ.
    ಈ ೨೮ ಕುಟುಂಬಗಳಿಗೆ ಸರ್ಕಾರ ಈ ಕೂಡಲೇ ತಾತ್ಕಾಲಿಕ ವಸತಿಯನ್ನು ಕಲ್ಪಿಸಬೇಕು.ಆನಂತರ ಇವರಿಗೆ ಆಶ್ರಯ ಯೋಜನೆಯ ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...