Homeಚಳವಳಿಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

ಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

- Advertisement -
- Advertisement -

ಹಸಿವಿನಿಂದ ಕಂಗಾಲಾಗಿರುವ ಮಕ್ಕಳು, ಬೆಂಬಿಡದೇ ಸುರಿಯುತ್ತಿರುವ ಮಳೆ, ನಿದ್ರೆಯಿಲ್ಲದ ರಾತ್ರಿಗಳು.. ಇಂತಹದ್ದೊಂದು ಪರಿಸ್ಥಿತಿಯನ್ನು ನಾವು ಕಲ್ಪಿಸಿಕೊಳ್ಳಲು ಸಾಧ್ಯವೇ…?

ಕಳೆದ ಹದಿನೈದು ವರ್ಷಗಳ ಹಿಂದೆಯೇ ಉತ್ತರ ಕರ್ನಾಟಕದ ವಿವಿಧ ಭಾಗಗಳಿಂದ ವಲಸೆ ಬಂದು ತಿಪಟೂರಿನಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಾ ಜೀವನ ಕಟ್ಟಿಕೊಂಡಿದ್ದ 28 ಕುಟುಂಬಗಳು ಇಂದು ಬೀದಿಗೆ ಬಿದ್ದಿವೆ. ಸರ್ಕಾರಿ ಜಮೀನಿನಲ್ಲಿ ಟೆಂಟ್ ಹಾಕಿಕೊಳ್ಳುವಂತಿಲ್ಲ ಎಂದು ಪೊಲೀಸರು ರಾತ್ರೋರಾತ್ರಿ ಮಕ್ಕಳು, ಬಸರಿ ಹೆಂಗಸರು ಎಂಬುದನ್ನು ನೋಡದೇ ಎತ್ತಂಗಡಿ ಮಾಡಿಸಿದ್ದಾರೆ.

ಹದಿನೆಂಟು ಮುಸ್ಲಿಂ ಸಮುದಾಯ ಹಾಗೂ ಹತ್ತು ಸುಡುಗಾಡು ಸಿದ್ಧರ ಸಮುದಾಯದ ಕುಟುಂಬಗಳು ತಿಪಟೂರಿನ ನಗರ ಸಭೆಯ ಸರ್ಕಾರಿ ಜಾಗದಲ್ಲಿ ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿದ್ದರು. ಈ ಅಲೆಮಾರಿ ಸಮುದಾಯಗಳು ಒಂದು ಕಡೆ ನೆಲೆನಿಂತು, ವ್ಯಾಪಾರ ಮಾಡುತ್ತಿದ್ದದ್ದು ಮಾತ್ರವಲ್ಲದೇ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದರು. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಸಮುದಾಯದ ಯುವತಿ ಇಡೀ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ಅಂಕ ಪಡೆದಿದ್ದಾಳೆ.

ವಿಡಿಯೋ ನೋಡಿ

ನಾನು ತುಂಬಾ ಚೆನ್ನಾಗಿ ಓದಬೇಕು. ಸರ್ಕಾರಿ ಅಧಿಕಾರಿಯಾಗಿ ಕೆಲಸ ಪಡೆದುಕೊಳ್ಳಬೇಕು ಎಂಬ ಕನಸಿದೆ ಎನ್ನುವ ಯುವತಿ ತನ್ನ ಈಗಿನ ತನ್ನ ದುಸ್ಥಿತಿ ನೆನೆದು ಬೇಸರಿಸಿಕೊಳ್ಳುತ್ತಾಳೆ..

ಕುಟುಂಬಗಳಿದ್ದ ಜಾಗದಿಂದ ಎತ್ತಂಗಡಿ ಮಾಡಿಸಿರುವ ಪೊಲೀಸರು ಅವರು ಬೇರೆ ಕಡೆ ತಾತ್ಕಾಲಿಕ ಟೆಂಟ್ ಹಾಕಿಕೊಂಡರೆ ಅಲ್ಲಿಂದಲೂ ಎತ್ತಂಗಡಿ ಮಾಡಿಸುತ್ತಿದ್ದು ಲಾಠಿಚಾರ್ಜ್ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾರೆ ಎನ್ನಲಾಗುತ್ತಿದೆ. ಪ್ರಸ್ತುತ ತಿಪಟೂರಿನಿಂದ ಐದಾರು ಕಿ.ಮೀ ಅಂತರದಲ್ಲಿ ತಾತ್ಕಾಲಿಕ ಟೆಂಟ್ ಹಾಕಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬಗಳು ಭಯದಿಂದಲೇ ದಿನ ಕಳೆಯುವಂತಾಗಿದೆ. ಅಲ್ಲಿ ಅವರಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಯಾವುದೇ ವ್ಯವಸ್ಥೆಯಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ತಹಶೀಲ್ದಾರರು ಆ ಎಲ್ಲಾ ಕುಟುಂಬಗಳಿಗೆ ವಸತಿ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ತಿಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುಟುಂಬಗಳಿಗೆ ಸರ್ಕಾರಿ ಜಾಗದಲ್ಲಿಯೇ ಟೆಂಟ್ ಹಾಕಿಕೊಳ್ಳಲು ವ್ಯವಸ್ಥೆ ಮಾಡಿಕೊಡಬೇಕು. ಸರ್ಕಾರವೇ ಈ ಕುಟುಂಬಗಳಿಗೆ ಮನೆ ನೀಡಬೇಕು ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ. ಸೂರು ಕಳೆದುಕೊಂಡವರ ನಿಯೋಗ ತುಮಕೂರು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ವಸತಿ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದೆ.

ಈ ಕುಟುಂಬಗಳಿಗೆ ಸೂರಿನ ವ್ಯವಸ್ಥೆ ಮಾಡಬೇಕು ಇಲ್ಲದಿದ್ದಲ್ಲಿ ಹೋರಾಟ ಆರಂಭಿಸಲಾಗುವುದು ಎಂದಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ಅವರು ಸರ್ಕಾರದ ಜಾಗದಲ್ಲಿಯೇ ಇವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಬರಿ ತಿಪಟೂರಿನ ಕಥೆಯಲ್ಲ… ಇದೇ ರೀತಿ ರಾಜ್ಯದ ನಾನಾ ಭಾಗಗಳಲ್ಲಿ ಅಲೆಮಾರಿ ಕುಟುಂಬಗಳು ಸ್ವಂತ ಸೂರಿಲ್ಲದೇ, ಮೂಲಭೂತ ವ್ಯವಸ್ಥೆಗಳಿಲ್ಲದೇ ಬದುಕುತ್ತಿದ್ದಾರೆ. ಕುಡಿಯುವ ನೀರಿಗೂ ಹೋರಾಟ ಮಾಡುವಂತಹ ಪರಿಸ್ಥಿತಿಯಲ್ಲಿದ್ದಾರೆ. ಈ ಎಲ್ಲಾ ಕುಟುಂಬಗಳ ಬದುಕು ಹಸನಾಗುವುದು ಯಾವಾಗಾ…?


ಇದನ್ನೂ ಓದಿ: ಏಕಾಏಕಿ ಒಕ್ಕಲೆಬ್ಬಿಸುವಿಕೆ: ಮನೆ ಕಳೆದುಕೊಂಡು ದಾರಿ ಕಾಣದೆ ಪರಿತಪಿಸುತ್ತಿರುವ 86 ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರ ಈ ಕ್ರೌರ್ಯ ಕಂಡನಾರ್ಹ.
    ಈ ೨೮ ಕುಟುಂಬಗಳಿಗೆ ಸರ್ಕಾರ ಈ ಕೂಡಲೇ ತಾತ್ಕಾಲಿಕ ವಸತಿಯನ್ನು ಕಲ್ಪಿಸಬೇಕು.ಆನಂತರ ಇವರಿಗೆ ಆಶ್ರಯ ಯೋಜನೆಯ ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...