Homeಕರ್ನಾಟಕತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ತುಮಕೂರಿನ ಕಾರ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಪಬ್ಲಿಕ್ ಟಿವಿ ಕನ್ನಡದ ವರದಿಗಾರ ಮಂಜುನಾಥ್ ತಾಳಮಕ್ಕಿ ಹಲ್ಲೆಯನ್ನ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟವು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದೆ. ತಿಪಟೂರು | ದಲಿತ ಪತ್ರಕರ್ತನ

ದಲಿತವಿರೋದಿ ಕೋಮುವಾದಿ ಪತ್ರಕರ್ತನ ಮೇಲೆ ಗುಂಡಾಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿರುವ ದಸಂಸ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಪವನ್ ಕುಮಾರ್ ಅವರು ಮನವಿ ಪತ್ರ ಸ್ವೀಕರಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಾಂತಪ್ಪ, “ತುಮಕೂರಿನಲ್ಲಿ ಝೀ ಟಿ.ವಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ಸಮಯ ಮಂಜುನಾಥ್ ಎಂಬುವವರ ಮೇಲೆ ಪಬ್ಲಿಕ್ ಟಿ.ವಿ. ವರದಿಗಾರ ಮಂಜುನಾಥ್ ತಾಳಮಕ್ಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿನಿಂದನೆ ಮಾಡಿದ್ದ. ಕೋಮುವಾದಿ ಮಂಜುನಾಥ್ ತಾಳಮಕ್ಕಿ ಕೊಳಕು ಜಾತಿಮನಸ್ಥಿತಿಯ ವ್ಯಕ್ತಿಯಾಗಿದ್ದು, ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವುದು, ಜಾತಿ ಧರ್ಮಗಳ ಮಧ್ಯೆ ಕೋಮು ವೈಷ್ಯಮ್ಯ ಬಿತ್ತಿ, ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುವ ಕೆಲಸ ಮಾಡುತ್ತಿದ್ದಾನೆ.” ಎಂದು ಹೇಳಿದ್ದಾರೆ.

“ಕಾರವಾರ ತಾಳಮಕ್ಕಿ ಮೂಲದ ಈ ವ್ಯಕ್ತಿ ಈ ಹಿಂದೆ ಮಂಗಳೂರು ಮತ್ತು ಕಾರವಾರದಲ್ಲಿ ಕೋಮುವಾದಿ ಸಂಘಟನೆಗಳಲ್ಲಿ ಕೆಲಸ ಮಾಡುತ್ತಾ, ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಬ್ಲಿಕ್ ಟಿ.ವಿ ಮಾಧ್ಯಮವನ್ನು ಕೇವಲ ನೆಪಮಾತ್ರಕ್ಕೆ ಇಟ್ಟುಕೊಂಡು ಕೆಲಸ ಮಾಡುತ್ತಿರುವ ಮಂಜುನಾಥ್ ತಾಳಮಕ್ಕಿ ಅಥವಾ ಮಂಜುನಾಥ್ ನಾಯ್ಕ ವರದಿಗಾರನಾಗಿ ಮಂಡ್ಯದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ದಲಿತವರದಿಗಾರರ ಮೇಲೆ ಜಾತಿನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಸಹ ಇದೆ” ಎಂದು ಅವರು ಹೇಳಿದ್ದಾರೆ.

“ಕೋಮು ಮನಸ್ಥಿತಿಯ ಈ ವ್ಯಕ್ತಿಯ ವಿರುದ್ದ ಸರ್ಕಾರ ಗೂಂಡಾಕಾಯ್ದೆ ದಾಖಲಿಸಿ, ಆತನ ಪೂರ್ವಾಪರ ತನಿಖೆ ನಡೆಸಬೇಕು. ಮಾಧ್ಯಮ ಕ್ಷೇತ್ರದ ಪಬ್ಲಿಕ್ ಟಿವಿ ಸಮಾಜದ ಮುಖವಾಣಿಯಂತೆ ಕೆಲಸ ಮಾಡುತ್ತಿದೆ. ಆದರೆ ಇಂತಹ ಪೂರ್ವಾಗ್ರಹ ಪೀಡಿತ ಜಾತಿವಾದಿ ಮನಸ್ಥಿತಿಯ ವ್ಯಕ್ತಿಗಳು ಕೆಲಸ ಮಾಡಿದರೆ, ಮಾಧ್ಯಮಸಂಸ್ಥೆಗೂ ಕೆಟ್ಟಹೆಸರು ಬರುತ್ತದೆ. ಕೂಡಲೇ ಪಬ್ಲಿಕ್ ಟಿ.ವಿ.ಯ ಮುಖ್ಯಸ್ಥ ರಂಗನಾಥ್‌ರವರು ಈ ಪತ್ರಕರ್ತನನ್ನು ತಮ್ಮ ಮಾಧ್ಯಮ ಸಂಸ್ಥೆಯಿಂದ ವಜಾಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅಷ್ಟೆ ಅಲ್ಲದೆ, ಪೊಲೀಸರು ಹಾಗೂ ಸರ್ಕಾರ ಕೂಡಲೇ ಕಾನೂನು ಕ್ರಮಕೈಗೊಂಡು ಇಂತಹ ಸಮಾಜದ್ರೋಹಿಗಳನ್ನು ನಿಗ್ರಹಿಸದಿದ್ದರೆ ಉಗ್ರಹೋರಾಟ ಮಾಡಲಾಗುವುದು ಎಂದು ಕೆ.ಎಂ. ಶಾಂತಪ್ಪ ಎಚ್ಚರಿಸಿದ್ದಾರೆ.

ಡಿಎಸ್ಎಸ್ ಜಿಲ್ಲಾಸಂಚಾಲಕ ನಾಗ್ತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ, “ಮಾಧ್ಯಮ ಕ್ಷೇತ್ರ ಸರ್ವ ಸಮಾಜಗಳನ್ನು ಸಮಾನವಾಗಿ ಕಾಣುವ ಮನೋಭಾವನೆ ರೂಡಿಸಿಕೊಳ್ಳಬೇಕು. ಆದರೆ ಮಂಜುನಾಥ್ ತಾಳಮಕ್ಕಿ ಎನ್ನುವ ಅವಿವೇಕಿ ಮಾಧ್ಯಮ ಕ್ಷೇತ್ರಕ್ಕೆ ನಾಲಯಕ್ ವ್ಯಕ್ತಿಯಾಗಿದ್ದು ಕೋಮುವಾದಿ ಮನಸ್ಥಿತಿ ಹೊಂದಿದ್ದಾನೆ. ತುಮಕೂರಿನಲ್ಲಿ ಕೆಲಸ ಮಾಡುತ್ತಿರುವ ಸಮಯ ಮಂಜುನಾಥ್ ಮೇಲೆ ಹಲ್ಲೆ ಮಾಡುವ ಮೂಲಕ ತನ್ನ ಜಾತಿಮನಸ್ಥಿತಿ ತೋರ್ಪಡಿಸಿದ್ದು. ಸರ್ಕಾರ ಕೂಡಲೇ ಆತನ ವಿರುದ್ಧ ಗೂಂಡಾಕಾಯ್ದೆಅಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಡಿಎಸ್ಎಸ್ ಮುಖಂಡ ಕುಪ್ಪಾಳು ರಂಗಸ್ವಾಮಿ ಮಾತನಾಡಿ, “ಮಾಧ್ಯಮಕ್ಷೇತ್ರ ಪವಿತ್ರವಾದ ಕ್ಷೇತ್ರ. ಸಮಾಜದ ಶೋಷಿತ ಸಮುದಾಯಗಳು, ಬಡವ, ದೀನದಲಿತರ ಬಗ್ಗೆ ಕಾಳಜಿಯಿಂದ ಕೆಲಸ ಮಾಡಬೇಕು. ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದ ವರದಿಗಾರ ಅವಿವೇಕದಿಂದ ವರ್ತನೆ ಮಾಡಿರುವುದು ಖಂಡನೀಯ. ಮಂಜುನಾಥ್ ತಾಳಮಕ್ಕಿ ಎನ್ನುವ ವ್ಯಕ್ತಿ ಕೋಮುವಾದಿ ಸಂಘಟನೆಗಳೊಂದಿಗೆ ತೊಡಗಿಕೊಂಡು ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದು ಹಲವಾರು ಭಾರಿ ದಲಿತ-ಅಲ್ಪಸಂಖ್ಯಾತರ ಮೇಲೆ ಪ್ರಚೋದನೆಗಳನ್ನು ಮಾಡಿದ್ದಾರೆ.” ಎಂದು ಹೇಳಿದ್ದಾರೆ.

“ಇಂತಹ ವ್ಯಕ್ತಿಯನ್ನು ಗೃಹ ಸಚಿವರು ಹೆಚ್ಚಿನ ತನಿಖೆಗೆ ಒಳಪಡಿಸಬೇಕು. ಅವರ ವಿರುದ್ಧ ಗೂಂಡಾಕಾಯ್ದೆ ದಾಖಲು ಮಾಡಬೇಕು. ಇಂತಹ ಕೋಮುವಾದಿಗಳನ್ನು ಆರಂಭದಲ್ಲೇ ಮಟ್ಟಹಾಕದಿದ್ದರೆ ಸಮಾಜಘಾತುಕ ಶಕ್ತಿಗಳಾಗಿ ಅವರು ಸಮಾಜ ಹಾಗೂ ದೇಶಕ್ಕೆ ಮಾರಕವಾಗುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಉಪಸ್ಥಿತರಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಕೆ ಕುಮಾರ್ ಮಾತನಾಡಿ, “ಮಂಜುನಾಥ್ ಮೇಲಿನ ಹಲ್ಲೆ ಪ್ರಕರಣ ವಿಶೇಷ ತನಿಖೆಗೆ ಒಳಪಡಿಸಬೇಕು. ಪಬ್ಲಿಕ್ ಟಿ.ವಿ. ಮುಖ್ಯಸ್ಥರು ಮಂಜುನಾಥ್ ತಾಳಮಕ್ಕಿಯನ್ನು ಕೂಡಲೆ ವಜಾಗೊಳಿಸಬೇಕು. ಈ ವ್ಯಕ್ತಿ ಹಿಂದೆಯೂ ದಲಿತ ಸಂಘಟನೆಗಳು ಹಾಗೂ ದಲಿತರ ಪ್ರತಿಭಟನೆಗಳನ್ನು ವರದಿ ಮಾಡದೇ ಜಾತಿವಾದಿ ಮನಸ್ಥಿತಿ ಪ್ರದರ್ಶನ ಮಾಡಿದ್ದಾನೆ” ಎಮದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಜಕ್ಕನಹಳ್ಳಿ ಮೋಹನ್, ಮುಖಂಡರಾದ ಹರೀಶ್ ಯಗಚೀಕಟ್ಟೆ, ಸತೀಶ್ ಮಾರನಗೆರೆ, ಇರ್ಫಾನ್, ಮಹಿಳಾ ಸಂಚಾಲಕಿ ಕವಿತಾ ಮಹೇಶ್, ಸೀಮಾ, ಮತ್ತಿಘಟ್ಟ ಶಿಮಕುಮಾರ್, ಕಿರಣ್ ರಾಜ್ ಅರ್ಚನಹಳ್ಳಿ, ಡಿ.ಆರ್ ಬಸವರಾಜು, ಕಾರ್ಮಿಕ ಮುಖಂಡ ಹೊನ್ನಪ್ಪ, ಗ್ಯಾರಘಟ್ಟ ಗ್ರಾ.ಪಂ ಅಧ್ಯಕ್ಷ‌ ಉದಯ್ ಕುಮಾರ್ ಕೊಪ್ಪ, ಆನಂದ್ ಕುಮಾರ್, ಬಸವರಾಜು ಗಾಂಧಿನಗರ, ರಮೇಶ್ ಮಾರನಗೆರೆ, ವೆಂಕಟೇಶ್ ಕರಡಾಳು ಮುಂತ್ತಾದವರು ಉಪಸ್ಥಿತರಿದ್ದರು. ತಿಪಟೂರು | ದಲಿತ ಪತ್ರಕರ್ತನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...