Homeಕರ್ನಾಟಕತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ತುಮಕೂರಿನ ಕಾರ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಪಬ್ಲಿಕ್ ಟಿವಿ ಕನ್ನಡದ ವರದಿಗಾರ ಮಂಜುನಾಥ್ ತಾಳಮಕ್ಕಿ ಹಲ್ಲೆಯನ್ನ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟವು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದೆ. ತಿಪಟೂರು | ದಲಿತ ಪತ್ರಕರ್ತನ

ದಲಿತವಿರೋದಿ ಕೋಮುವಾದಿ ಪತ್ರಕರ್ತನ ಮೇಲೆ ಗುಂಡಾಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿರುವ ದಸಂಸ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಪವನ್ ಕುಮಾರ್ ಅವರು ಮನವಿ ಪತ್ರ ಸ್ವೀಕರಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಾಂತಪ್ಪ, “ತುಮಕೂರಿನಲ್ಲಿ ಝೀ ಟಿ.ವಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ಸಮಯ ಮಂಜುನಾಥ್ ಎಂಬುವವರ ಮೇಲೆ ಪಬ್ಲಿಕ್ ಟಿ.ವಿ. ವರದಿಗಾರ ಮಂಜುನಾಥ್ ತಾಳಮಕ್ಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿನಿಂದನೆ ಮಾಡಿದ್ದ. ಕೋಮುವಾದಿ ಮಂಜುನಾಥ್ ತಾಳಮಕ್ಕಿ ಕೊಳಕು ಜಾತಿಮನಸ್ಥಿತಿಯ ವ್ಯಕ್ತಿಯಾಗಿದ್ದು, ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವುದು, ಜಾತಿ ಧರ್ಮಗಳ ಮಧ್ಯೆ ಕೋಮು ವೈಷ್ಯಮ್ಯ ಬಿತ್ತಿ, ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುವ ಕೆಲಸ ಮಾಡುತ್ತಿದ್ದಾನೆ.” ಎಂದು ಹೇಳಿದ್ದಾರೆ.

“ಕಾರವಾರ ತಾಳಮಕ್ಕಿ ಮೂಲದ ಈ ವ್ಯಕ್ತಿ ಈ ಹಿಂದೆ ಮಂಗಳೂರು ಮತ್ತು ಕಾರವಾರದಲ್ಲಿ ಕೋಮುವಾದಿ ಸಂಘಟನೆಗಳಲ್ಲಿ ಕೆಲಸ ಮಾಡುತ್ತಾ, ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಬ್ಲಿಕ್ ಟಿ.ವಿ ಮಾಧ್ಯಮವನ್ನು ಕೇವಲ ನೆಪಮಾತ್ರಕ್ಕೆ ಇಟ್ಟುಕೊಂಡು ಕೆಲಸ ಮಾಡುತ್ತಿರುವ ಮಂಜುನಾಥ್ ತಾಳಮಕ್ಕಿ ಅಥವಾ ಮಂಜುನಾಥ್ ನಾಯ್ಕ ವರದಿಗಾರನಾಗಿ ಮಂಡ್ಯದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ದಲಿತವರದಿಗಾರರ ಮೇಲೆ ಜಾತಿನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಸಹ ಇದೆ” ಎಂದು ಅವರು ಹೇಳಿದ್ದಾರೆ.

“ಕೋಮು ಮನಸ್ಥಿತಿಯ ಈ ವ್ಯಕ್ತಿಯ ವಿರುದ್ದ ಸರ್ಕಾರ ಗೂಂಡಾಕಾಯ್ದೆ ದಾಖಲಿಸಿ, ಆತನ ಪೂರ್ವಾಪರ ತನಿಖೆ ನಡೆಸಬೇಕು. ಮಾಧ್ಯಮ ಕ್ಷೇತ್ರದ ಪಬ್ಲಿಕ್ ಟಿವಿ ಸಮಾಜದ ಮುಖವಾಣಿಯಂತೆ ಕೆಲಸ ಮಾಡುತ್ತಿದೆ. ಆದರೆ ಇಂತಹ ಪೂರ್ವಾಗ್ರಹ ಪೀಡಿತ ಜಾತಿವಾದಿ ಮನಸ್ಥಿತಿಯ ವ್ಯಕ್ತಿಗಳು ಕೆಲಸ ಮಾಡಿದರೆ, ಮಾಧ್ಯಮಸಂಸ್ಥೆಗೂ ಕೆಟ್ಟಹೆಸರು ಬರುತ್ತದೆ. ಕೂಡಲೇ ಪಬ್ಲಿಕ್ ಟಿ.ವಿ.ಯ ಮುಖ್ಯಸ್ಥ ರಂಗನಾಥ್‌ರವರು ಈ ಪತ್ರಕರ್ತನನ್ನು ತಮ್ಮ ಮಾಧ್ಯಮ ಸಂಸ್ಥೆಯಿಂದ ವಜಾಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅಷ್ಟೆ ಅಲ್ಲದೆ, ಪೊಲೀಸರು ಹಾಗೂ ಸರ್ಕಾರ ಕೂಡಲೇ ಕಾನೂನು ಕ್ರಮಕೈಗೊಂಡು ಇಂತಹ ಸಮಾಜದ್ರೋಹಿಗಳನ್ನು ನಿಗ್ರಹಿಸದಿದ್ದರೆ ಉಗ್ರಹೋರಾಟ ಮಾಡಲಾಗುವುದು ಎಂದು ಕೆ.ಎಂ. ಶಾಂತಪ್ಪ ಎಚ್ಚರಿಸಿದ್ದಾರೆ.

ಡಿಎಸ್ಎಸ್ ಜಿಲ್ಲಾಸಂಚಾಲಕ ನಾಗ್ತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ, “ಮಾಧ್ಯಮ ಕ್ಷೇತ್ರ ಸರ್ವ ಸಮಾಜಗಳನ್ನು ಸಮಾನವಾಗಿ ಕಾಣುವ ಮನೋಭಾವನೆ ರೂಡಿಸಿಕೊಳ್ಳಬೇಕು. ಆದರೆ ಮಂಜುನಾಥ್ ತಾಳಮಕ್ಕಿ ಎನ್ನುವ ಅವಿವೇಕಿ ಮಾಧ್ಯಮ ಕ್ಷೇತ್ರಕ್ಕೆ ನಾಲಯಕ್ ವ್ಯಕ್ತಿಯಾಗಿದ್ದು ಕೋಮುವಾದಿ ಮನಸ್ಥಿತಿ ಹೊಂದಿದ್ದಾನೆ. ತುಮಕೂರಿನಲ್ಲಿ ಕೆಲಸ ಮಾಡುತ್ತಿರುವ ಸಮಯ ಮಂಜುನಾಥ್ ಮೇಲೆ ಹಲ್ಲೆ ಮಾಡುವ ಮೂಲಕ ತನ್ನ ಜಾತಿಮನಸ್ಥಿತಿ ತೋರ್ಪಡಿಸಿದ್ದು. ಸರ್ಕಾರ ಕೂಡಲೇ ಆತನ ವಿರುದ್ಧ ಗೂಂಡಾಕಾಯ್ದೆಅಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಡಿಎಸ್ಎಸ್ ಮುಖಂಡ ಕುಪ್ಪಾಳು ರಂಗಸ್ವಾಮಿ ಮಾತನಾಡಿ, “ಮಾಧ್ಯಮಕ್ಷೇತ್ರ ಪವಿತ್ರವಾದ ಕ್ಷೇತ್ರ. ಸಮಾಜದ ಶೋಷಿತ ಸಮುದಾಯಗಳು, ಬಡವ, ದೀನದಲಿತರ ಬಗ್ಗೆ ಕಾಳಜಿಯಿಂದ ಕೆಲಸ ಮಾಡಬೇಕು. ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದ ವರದಿಗಾರ ಅವಿವೇಕದಿಂದ ವರ್ತನೆ ಮಾಡಿರುವುದು ಖಂಡನೀಯ. ಮಂಜುನಾಥ್ ತಾಳಮಕ್ಕಿ ಎನ್ನುವ ವ್ಯಕ್ತಿ ಕೋಮುವಾದಿ ಸಂಘಟನೆಗಳೊಂದಿಗೆ ತೊಡಗಿಕೊಂಡು ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದು ಹಲವಾರು ಭಾರಿ ದಲಿತ-ಅಲ್ಪಸಂಖ್ಯಾತರ ಮೇಲೆ ಪ್ರಚೋದನೆಗಳನ್ನು ಮಾಡಿದ್ದಾರೆ.” ಎಂದು ಹೇಳಿದ್ದಾರೆ.

“ಇಂತಹ ವ್ಯಕ್ತಿಯನ್ನು ಗೃಹ ಸಚಿವರು ಹೆಚ್ಚಿನ ತನಿಖೆಗೆ ಒಳಪಡಿಸಬೇಕು. ಅವರ ವಿರುದ್ಧ ಗೂಂಡಾಕಾಯ್ದೆ ದಾಖಲು ಮಾಡಬೇಕು. ಇಂತಹ ಕೋಮುವಾದಿಗಳನ್ನು ಆರಂಭದಲ್ಲೇ ಮಟ್ಟಹಾಕದಿದ್ದರೆ ಸಮಾಜಘಾತುಕ ಶಕ್ತಿಗಳಾಗಿ ಅವರು ಸಮಾಜ ಹಾಗೂ ದೇಶಕ್ಕೆ ಮಾರಕವಾಗುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಉಪಸ್ಥಿತರಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಕೆ ಕುಮಾರ್ ಮಾತನಾಡಿ, “ಮಂಜುನಾಥ್ ಮೇಲಿನ ಹಲ್ಲೆ ಪ್ರಕರಣ ವಿಶೇಷ ತನಿಖೆಗೆ ಒಳಪಡಿಸಬೇಕು. ಪಬ್ಲಿಕ್ ಟಿ.ವಿ. ಮುಖ್ಯಸ್ಥರು ಮಂಜುನಾಥ್ ತಾಳಮಕ್ಕಿಯನ್ನು ಕೂಡಲೆ ವಜಾಗೊಳಿಸಬೇಕು. ಈ ವ್ಯಕ್ತಿ ಹಿಂದೆಯೂ ದಲಿತ ಸಂಘಟನೆಗಳು ಹಾಗೂ ದಲಿತರ ಪ್ರತಿಭಟನೆಗಳನ್ನು ವರದಿ ಮಾಡದೇ ಜಾತಿವಾದಿ ಮನಸ್ಥಿತಿ ಪ್ರದರ್ಶನ ಮಾಡಿದ್ದಾನೆ” ಎಮದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಜಕ್ಕನಹಳ್ಳಿ ಮೋಹನ್, ಮುಖಂಡರಾದ ಹರೀಶ್ ಯಗಚೀಕಟ್ಟೆ, ಸತೀಶ್ ಮಾರನಗೆರೆ, ಇರ್ಫಾನ್, ಮಹಿಳಾ ಸಂಚಾಲಕಿ ಕವಿತಾ ಮಹೇಶ್, ಸೀಮಾ, ಮತ್ತಿಘಟ್ಟ ಶಿಮಕುಮಾರ್, ಕಿರಣ್ ರಾಜ್ ಅರ್ಚನಹಳ್ಳಿ, ಡಿ.ಆರ್ ಬಸವರಾಜು, ಕಾರ್ಮಿಕ ಮುಖಂಡ ಹೊನ್ನಪ್ಪ, ಗ್ಯಾರಘಟ್ಟ ಗ್ರಾ.ಪಂ ಅಧ್ಯಕ್ಷ‌ ಉದಯ್ ಕುಮಾರ್ ಕೊಪ್ಪ, ಆನಂದ್ ಕುಮಾರ್, ಬಸವರಾಜು ಗಾಂಧಿನಗರ, ರಮೇಶ್ ಮಾರನಗೆರೆ, ವೆಂಕಟೇಶ್ ಕರಡಾಳು ಮುಂತ್ತಾದವರು ಉಪಸ್ಥಿತರಿದ್ದರು. ತಿಪಟೂರು | ದಲಿತ ಪತ್ರಕರ್ತನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...