Homeಕರ್ನಾಟಕತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ತುಮಕೂರಿನ ಕಾರ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಪಬ್ಲಿಕ್ ಟಿವಿ ಕನ್ನಡದ ವರದಿಗಾರ ಮಂಜುನಾಥ್ ತಾಳಮಕ್ಕಿ ಹಲ್ಲೆಯನ್ನ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟವು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದೆ. ತಿಪಟೂರು | ದಲಿತ ಪತ್ರಕರ್ತನ

ದಲಿತವಿರೋದಿ ಕೋಮುವಾದಿ ಪತ್ರಕರ್ತನ ಮೇಲೆ ಗುಂಡಾಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿರುವ ದಸಂಸ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಪವನ್ ಕುಮಾರ್ ಅವರು ಮನವಿ ಪತ್ರ ಸ್ವೀಕರಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಾಂತಪ್ಪ, “ತುಮಕೂರಿನಲ್ಲಿ ಝೀ ಟಿ.ವಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ಸಮಯ ಮಂಜುನಾಥ್ ಎಂಬುವವರ ಮೇಲೆ ಪಬ್ಲಿಕ್ ಟಿ.ವಿ. ವರದಿಗಾರ ಮಂಜುನಾಥ್ ತಾಳಮಕ್ಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿನಿಂದನೆ ಮಾಡಿದ್ದ. ಕೋಮುವಾದಿ ಮಂಜುನಾಥ್ ತಾಳಮಕ್ಕಿ ಕೊಳಕು ಜಾತಿಮನಸ್ಥಿತಿಯ ವ್ಯಕ್ತಿಯಾಗಿದ್ದು, ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವುದು, ಜಾತಿ ಧರ್ಮಗಳ ಮಧ್ಯೆ ಕೋಮು ವೈಷ್ಯಮ್ಯ ಬಿತ್ತಿ, ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುವ ಕೆಲಸ ಮಾಡುತ್ತಿದ್ದಾನೆ.” ಎಂದು ಹೇಳಿದ್ದಾರೆ.

“ಕಾರವಾರ ತಾಳಮಕ್ಕಿ ಮೂಲದ ಈ ವ್ಯಕ್ತಿ ಈ ಹಿಂದೆ ಮಂಗಳೂರು ಮತ್ತು ಕಾರವಾರದಲ್ಲಿ ಕೋಮುವಾದಿ ಸಂಘಟನೆಗಳಲ್ಲಿ ಕೆಲಸ ಮಾಡುತ್ತಾ, ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಬ್ಲಿಕ್ ಟಿ.ವಿ ಮಾಧ್ಯಮವನ್ನು ಕೇವಲ ನೆಪಮಾತ್ರಕ್ಕೆ ಇಟ್ಟುಕೊಂಡು ಕೆಲಸ ಮಾಡುತ್ತಿರುವ ಮಂಜುನಾಥ್ ತಾಳಮಕ್ಕಿ ಅಥವಾ ಮಂಜುನಾಥ್ ನಾಯ್ಕ ವರದಿಗಾರನಾಗಿ ಮಂಡ್ಯದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ದಲಿತವರದಿಗಾರರ ಮೇಲೆ ಜಾತಿನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಸಹ ಇದೆ” ಎಂದು ಅವರು ಹೇಳಿದ್ದಾರೆ.

“ಕೋಮು ಮನಸ್ಥಿತಿಯ ಈ ವ್ಯಕ್ತಿಯ ವಿರುದ್ದ ಸರ್ಕಾರ ಗೂಂಡಾಕಾಯ್ದೆ ದಾಖಲಿಸಿ, ಆತನ ಪೂರ್ವಾಪರ ತನಿಖೆ ನಡೆಸಬೇಕು. ಮಾಧ್ಯಮ ಕ್ಷೇತ್ರದ ಪಬ್ಲಿಕ್ ಟಿವಿ ಸಮಾಜದ ಮುಖವಾಣಿಯಂತೆ ಕೆಲಸ ಮಾಡುತ್ತಿದೆ. ಆದರೆ ಇಂತಹ ಪೂರ್ವಾಗ್ರಹ ಪೀಡಿತ ಜಾತಿವಾದಿ ಮನಸ್ಥಿತಿಯ ವ್ಯಕ್ತಿಗಳು ಕೆಲಸ ಮಾಡಿದರೆ, ಮಾಧ್ಯಮಸಂಸ್ಥೆಗೂ ಕೆಟ್ಟಹೆಸರು ಬರುತ್ತದೆ. ಕೂಡಲೇ ಪಬ್ಲಿಕ್ ಟಿ.ವಿ.ಯ ಮುಖ್ಯಸ್ಥ ರಂಗನಾಥ್‌ರವರು ಈ ಪತ್ರಕರ್ತನನ್ನು ತಮ್ಮ ಮಾಧ್ಯಮ ಸಂಸ್ಥೆಯಿಂದ ವಜಾಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅಷ್ಟೆ ಅಲ್ಲದೆ, ಪೊಲೀಸರು ಹಾಗೂ ಸರ್ಕಾರ ಕೂಡಲೇ ಕಾನೂನು ಕ್ರಮಕೈಗೊಂಡು ಇಂತಹ ಸಮಾಜದ್ರೋಹಿಗಳನ್ನು ನಿಗ್ರಹಿಸದಿದ್ದರೆ ಉಗ್ರಹೋರಾಟ ಮಾಡಲಾಗುವುದು ಎಂದು ಕೆ.ಎಂ. ಶಾಂತಪ್ಪ ಎಚ್ಚರಿಸಿದ್ದಾರೆ.

ಡಿಎಸ್ಎಸ್ ಜಿಲ್ಲಾಸಂಚಾಲಕ ನಾಗ್ತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ, “ಮಾಧ್ಯಮ ಕ್ಷೇತ್ರ ಸರ್ವ ಸಮಾಜಗಳನ್ನು ಸಮಾನವಾಗಿ ಕಾಣುವ ಮನೋಭಾವನೆ ರೂಡಿಸಿಕೊಳ್ಳಬೇಕು. ಆದರೆ ಮಂಜುನಾಥ್ ತಾಳಮಕ್ಕಿ ಎನ್ನುವ ಅವಿವೇಕಿ ಮಾಧ್ಯಮ ಕ್ಷೇತ್ರಕ್ಕೆ ನಾಲಯಕ್ ವ್ಯಕ್ತಿಯಾಗಿದ್ದು ಕೋಮುವಾದಿ ಮನಸ್ಥಿತಿ ಹೊಂದಿದ್ದಾನೆ. ತುಮಕೂರಿನಲ್ಲಿ ಕೆಲಸ ಮಾಡುತ್ತಿರುವ ಸಮಯ ಮಂಜುನಾಥ್ ಮೇಲೆ ಹಲ್ಲೆ ಮಾಡುವ ಮೂಲಕ ತನ್ನ ಜಾತಿಮನಸ್ಥಿತಿ ತೋರ್ಪಡಿಸಿದ್ದು. ಸರ್ಕಾರ ಕೂಡಲೇ ಆತನ ವಿರುದ್ಧ ಗೂಂಡಾಕಾಯ್ದೆಅಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಡಿಎಸ್ಎಸ್ ಮುಖಂಡ ಕುಪ್ಪಾಳು ರಂಗಸ್ವಾಮಿ ಮಾತನಾಡಿ, “ಮಾಧ್ಯಮಕ್ಷೇತ್ರ ಪವಿತ್ರವಾದ ಕ್ಷೇತ್ರ. ಸಮಾಜದ ಶೋಷಿತ ಸಮುದಾಯಗಳು, ಬಡವ, ದೀನದಲಿತರ ಬಗ್ಗೆ ಕಾಳಜಿಯಿಂದ ಕೆಲಸ ಮಾಡಬೇಕು. ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದ ವರದಿಗಾರ ಅವಿವೇಕದಿಂದ ವರ್ತನೆ ಮಾಡಿರುವುದು ಖಂಡನೀಯ. ಮಂಜುನಾಥ್ ತಾಳಮಕ್ಕಿ ಎನ್ನುವ ವ್ಯಕ್ತಿ ಕೋಮುವಾದಿ ಸಂಘಟನೆಗಳೊಂದಿಗೆ ತೊಡಗಿಕೊಂಡು ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದು ಹಲವಾರು ಭಾರಿ ದಲಿತ-ಅಲ್ಪಸಂಖ್ಯಾತರ ಮೇಲೆ ಪ್ರಚೋದನೆಗಳನ್ನು ಮಾಡಿದ್ದಾರೆ.” ಎಂದು ಹೇಳಿದ್ದಾರೆ.

“ಇಂತಹ ವ್ಯಕ್ತಿಯನ್ನು ಗೃಹ ಸಚಿವರು ಹೆಚ್ಚಿನ ತನಿಖೆಗೆ ಒಳಪಡಿಸಬೇಕು. ಅವರ ವಿರುದ್ಧ ಗೂಂಡಾಕಾಯ್ದೆ ದಾಖಲು ಮಾಡಬೇಕು. ಇಂತಹ ಕೋಮುವಾದಿಗಳನ್ನು ಆರಂಭದಲ್ಲೇ ಮಟ್ಟಹಾಕದಿದ್ದರೆ ಸಮಾಜಘಾತುಕ ಶಕ್ತಿಗಳಾಗಿ ಅವರು ಸಮಾಜ ಹಾಗೂ ದೇಶಕ್ಕೆ ಮಾರಕವಾಗುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಉಪಸ್ಥಿತರಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಕೆ ಕುಮಾರ್ ಮಾತನಾಡಿ, “ಮಂಜುನಾಥ್ ಮೇಲಿನ ಹಲ್ಲೆ ಪ್ರಕರಣ ವಿಶೇಷ ತನಿಖೆಗೆ ಒಳಪಡಿಸಬೇಕು. ಪಬ್ಲಿಕ್ ಟಿ.ವಿ. ಮುಖ್ಯಸ್ಥರು ಮಂಜುನಾಥ್ ತಾಳಮಕ್ಕಿಯನ್ನು ಕೂಡಲೆ ವಜಾಗೊಳಿಸಬೇಕು. ಈ ವ್ಯಕ್ತಿ ಹಿಂದೆಯೂ ದಲಿತ ಸಂಘಟನೆಗಳು ಹಾಗೂ ದಲಿತರ ಪ್ರತಿಭಟನೆಗಳನ್ನು ವರದಿ ಮಾಡದೇ ಜಾತಿವಾದಿ ಮನಸ್ಥಿತಿ ಪ್ರದರ್ಶನ ಮಾಡಿದ್ದಾನೆ” ಎಮದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಜಕ್ಕನಹಳ್ಳಿ ಮೋಹನ್, ಮುಖಂಡರಾದ ಹರೀಶ್ ಯಗಚೀಕಟ್ಟೆ, ಸತೀಶ್ ಮಾರನಗೆರೆ, ಇರ್ಫಾನ್, ಮಹಿಳಾ ಸಂಚಾಲಕಿ ಕವಿತಾ ಮಹೇಶ್, ಸೀಮಾ, ಮತ್ತಿಘಟ್ಟ ಶಿಮಕುಮಾರ್, ಕಿರಣ್ ರಾಜ್ ಅರ್ಚನಹಳ್ಳಿ, ಡಿ.ಆರ್ ಬಸವರಾಜು, ಕಾರ್ಮಿಕ ಮುಖಂಡ ಹೊನ್ನಪ್ಪ, ಗ್ಯಾರಘಟ್ಟ ಗ್ರಾ.ಪಂ ಅಧ್ಯಕ್ಷ‌ ಉದಯ್ ಕುಮಾರ್ ಕೊಪ್ಪ, ಆನಂದ್ ಕುಮಾರ್, ಬಸವರಾಜು ಗಾಂಧಿನಗರ, ರಮೇಶ್ ಮಾರನಗೆರೆ, ವೆಂಕಟೇಶ್ ಕರಡಾಳು ಮುಂತ್ತಾದವರು ಉಪಸ್ಥಿತರಿದ್ದರು. ತಿಪಟೂರು | ದಲಿತ ಪತ್ರಕರ್ತನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....