Homeಕರ್ನಾಟಕತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ತುಮಕೂರಿನ ಕಾರ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಪಬ್ಲಿಕ್ ಟಿವಿ ಕನ್ನಡದ ವರದಿಗಾರ ಮಂಜುನಾಥ್ ತಾಳಮಕ್ಕಿ ಹಲ್ಲೆಯನ್ನ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟವು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದೆ. ತಿಪಟೂರು | ದಲಿತ ಪತ್ರಕರ್ತನ

ದಲಿತವಿರೋದಿ ಕೋಮುವಾದಿ ಪತ್ರಕರ್ತನ ಮೇಲೆ ಗುಂಡಾಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿರುವ ದಸಂಸ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಪವನ್ ಕುಮಾರ್ ಅವರು ಮನವಿ ಪತ್ರ ಸ್ವೀಕರಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಾಂತಪ್ಪ, “ತುಮಕೂರಿನಲ್ಲಿ ಝೀ ಟಿ.ವಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ಸಮಯ ಮಂಜುನಾಥ್ ಎಂಬುವವರ ಮೇಲೆ ಪಬ್ಲಿಕ್ ಟಿ.ವಿ. ವರದಿಗಾರ ಮಂಜುನಾಥ್ ತಾಳಮಕ್ಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿನಿಂದನೆ ಮಾಡಿದ್ದ. ಕೋಮುವಾದಿ ಮಂಜುನಾಥ್ ತಾಳಮಕ್ಕಿ ಕೊಳಕು ಜಾತಿಮನಸ್ಥಿತಿಯ ವ್ಯಕ್ತಿಯಾಗಿದ್ದು, ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವುದು, ಜಾತಿ ಧರ್ಮಗಳ ಮಧ್ಯೆ ಕೋಮು ವೈಷ್ಯಮ್ಯ ಬಿತ್ತಿ, ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುವ ಕೆಲಸ ಮಾಡುತ್ತಿದ್ದಾನೆ.” ಎಂದು ಹೇಳಿದ್ದಾರೆ.

“ಕಾರವಾರ ತಾಳಮಕ್ಕಿ ಮೂಲದ ಈ ವ್ಯಕ್ತಿ ಈ ಹಿಂದೆ ಮಂಗಳೂರು ಮತ್ತು ಕಾರವಾರದಲ್ಲಿ ಕೋಮುವಾದಿ ಸಂಘಟನೆಗಳಲ್ಲಿ ಕೆಲಸ ಮಾಡುತ್ತಾ, ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಬ್ಲಿಕ್ ಟಿ.ವಿ ಮಾಧ್ಯಮವನ್ನು ಕೇವಲ ನೆಪಮಾತ್ರಕ್ಕೆ ಇಟ್ಟುಕೊಂಡು ಕೆಲಸ ಮಾಡುತ್ತಿರುವ ಮಂಜುನಾಥ್ ತಾಳಮಕ್ಕಿ ಅಥವಾ ಮಂಜುನಾಥ್ ನಾಯ್ಕ ವರದಿಗಾರನಾಗಿ ಮಂಡ್ಯದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ದಲಿತವರದಿಗಾರರ ಮೇಲೆ ಜಾತಿನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಸಹ ಇದೆ” ಎಂದು ಅವರು ಹೇಳಿದ್ದಾರೆ.

“ಕೋಮು ಮನಸ್ಥಿತಿಯ ಈ ವ್ಯಕ್ತಿಯ ವಿರುದ್ದ ಸರ್ಕಾರ ಗೂಂಡಾಕಾಯ್ದೆ ದಾಖಲಿಸಿ, ಆತನ ಪೂರ್ವಾಪರ ತನಿಖೆ ನಡೆಸಬೇಕು. ಮಾಧ್ಯಮ ಕ್ಷೇತ್ರದ ಪಬ್ಲಿಕ್ ಟಿವಿ ಸಮಾಜದ ಮುಖವಾಣಿಯಂತೆ ಕೆಲಸ ಮಾಡುತ್ತಿದೆ. ಆದರೆ ಇಂತಹ ಪೂರ್ವಾಗ್ರಹ ಪೀಡಿತ ಜಾತಿವಾದಿ ಮನಸ್ಥಿತಿಯ ವ್ಯಕ್ತಿಗಳು ಕೆಲಸ ಮಾಡಿದರೆ, ಮಾಧ್ಯಮಸಂಸ್ಥೆಗೂ ಕೆಟ್ಟಹೆಸರು ಬರುತ್ತದೆ. ಕೂಡಲೇ ಪಬ್ಲಿಕ್ ಟಿ.ವಿ.ಯ ಮುಖ್ಯಸ್ಥ ರಂಗನಾಥ್‌ರವರು ಈ ಪತ್ರಕರ್ತನನ್ನು ತಮ್ಮ ಮಾಧ್ಯಮ ಸಂಸ್ಥೆಯಿಂದ ವಜಾಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅಷ್ಟೆ ಅಲ್ಲದೆ, ಪೊಲೀಸರು ಹಾಗೂ ಸರ್ಕಾರ ಕೂಡಲೇ ಕಾನೂನು ಕ್ರಮಕೈಗೊಂಡು ಇಂತಹ ಸಮಾಜದ್ರೋಹಿಗಳನ್ನು ನಿಗ್ರಹಿಸದಿದ್ದರೆ ಉಗ್ರಹೋರಾಟ ಮಾಡಲಾಗುವುದು ಎಂದು ಕೆ.ಎಂ. ಶಾಂತಪ್ಪ ಎಚ್ಚರಿಸಿದ್ದಾರೆ.

ಡಿಎಸ್ಎಸ್ ಜಿಲ್ಲಾಸಂಚಾಲಕ ನಾಗ್ತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ, “ಮಾಧ್ಯಮ ಕ್ಷೇತ್ರ ಸರ್ವ ಸಮಾಜಗಳನ್ನು ಸಮಾನವಾಗಿ ಕಾಣುವ ಮನೋಭಾವನೆ ರೂಡಿಸಿಕೊಳ್ಳಬೇಕು. ಆದರೆ ಮಂಜುನಾಥ್ ತಾಳಮಕ್ಕಿ ಎನ್ನುವ ಅವಿವೇಕಿ ಮಾಧ್ಯಮ ಕ್ಷೇತ್ರಕ್ಕೆ ನಾಲಯಕ್ ವ್ಯಕ್ತಿಯಾಗಿದ್ದು ಕೋಮುವಾದಿ ಮನಸ್ಥಿತಿ ಹೊಂದಿದ್ದಾನೆ. ತುಮಕೂರಿನಲ್ಲಿ ಕೆಲಸ ಮಾಡುತ್ತಿರುವ ಸಮಯ ಮಂಜುನಾಥ್ ಮೇಲೆ ಹಲ್ಲೆ ಮಾಡುವ ಮೂಲಕ ತನ್ನ ಜಾತಿಮನಸ್ಥಿತಿ ತೋರ್ಪಡಿಸಿದ್ದು. ಸರ್ಕಾರ ಕೂಡಲೇ ಆತನ ವಿರುದ್ಧ ಗೂಂಡಾಕಾಯ್ದೆಅಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಡಿಎಸ್ಎಸ್ ಮುಖಂಡ ಕುಪ್ಪಾಳು ರಂಗಸ್ವಾಮಿ ಮಾತನಾಡಿ, “ಮಾಧ್ಯಮಕ್ಷೇತ್ರ ಪವಿತ್ರವಾದ ಕ್ಷೇತ್ರ. ಸಮಾಜದ ಶೋಷಿತ ಸಮುದಾಯಗಳು, ಬಡವ, ದೀನದಲಿತರ ಬಗ್ಗೆ ಕಾಳಜಿಯಿಂದ ಕೆಲಸ ಮಾಡಬೇಕು. ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದ ವರದಿಗಾರ ಅವಿವೇಕದಿಂದ ವರ್ತನೆ ಮಾಡಿರುವುದು ಖಂಡನೀಯ. ಮಂಜುನಾಥ್ ತಾಳಮಕ್ಕಿ ಎನ್ನುವ ವ್ಯಕ್ತಿ ಕೋಮುವಾದಿ ಸಂಘಟನೆಗಳೊಂದಿಗೆ ತೊಡಗಿಕೊಂಡು ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದು ಹಲವಾರು ಭಾರಿ ದಲಿತ-ಅಲ್ಪಸಂಖ್ಯಾತರ ಮೇಲೆ ಪ್ರಚೋದನೆಗಳನ್ನು ಮಾಡಿದ್ದಾರೆ.” ಎಂದು ಹೇಳಿದ್ದಾರೆ.

“ಇಂತಹ ವ್ಯಕ್ತಿಯನ್ನು ಗೃಹ ಸಚಿವರು ಹೆಚ್ಚಿನ ತನಿಖೆಗೆ ಒಳಪಡಿಸಬೇಕು. ಅವರ ವಿರುದ್ಧ ಗೂಂಡಾಕಾಯ್ದೆ ದಾಖಲು ಮಾಡಬೇಕು. ಇಂತಹ ಕೋಮುವಾದಿಗಳನ್ನು ಆರಂಭದಲ್ಲೇ ಮಟ್ಟಹಾಕದಿದ್ದರೆ ಸಮಾಜಘಾತುಕ ಶಕ್ತಿಗಳಾಗಿ ಅವರು ಸಮಾಜ ಹಾಗೂ ದೇಶಕ್ಕೆ ಮಾರಕವಾಗುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಉಪಸ್ಥಿತರಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಕೆ ಕುಮಾರ್ ಮಾತನಾಡಿ, “ಮಂಜುನಾಥ್ ಮೇಲಿನ ಹಲ್ಲೆ ಪ್ರಕರಣ ವಿಶೇಷ ತನಿಖೆಗೆ ಒಳಪಡಿಸಬೇಕು. ಪಬ್ಲಿಕ್ ಟಿ.ವಿ. ಮುಖ್ಯಸ್ಥರು ಮಂಜುನಾಥ್ ತಾಳಮಕ್ಕಿಯನ್ನು ಕೂಡಲೆ ವಜಾಗೊಳಿಸಬೇಕು. ಈ ವ್ಯಕ್ತಿ ಹಿಂದೆಯೂ ದಲಿತ ಸಂಘಟನೆಗಳು ಹಾಗೂ ದಲಿತರ ಪ್ರತಿಭಟನೆಗಳನ್ನು ವರದಿ ಮಾಡದೇ ಜಾತಿವಾದಿ ಮನಸ್ಥಿತಿ ಪ್ರದರ್ಶನ ಮಾಡಿದ್ದಾನೆ” ಎಮದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಜಕ್ಕನಹಳ್ಳಿ ಮೋಹನ್, ಮುಖಂಡರಾದ ಹರೀಶ್ ಯಗಚೀಕಟ್ಟೆ, ಸತೀಶ್ ಮಾರನಗೆರೆ, ಇರ್ಫಾನ್, ಮಹಿಳಾ ಸಂಚಾಲಕಿ ಕವಿತಾ ಮಹೇಶ್, ಸೀಮಾ, ಮತ್ತಿಘಟ್ಟ ಶಿಮಕುಮಾರ್, ಕಿರಣ್ ರಾಜ್ ಅರ್ಚನಹಳ್ಳಿ, ಡಿ.ಆರ್ ಬಸವರಾಜು, ಕಾರ್ಮಿಕ ಮುಖಂಡ ಹೊನ್ನಪ್ಪ, ಗ್ಯಾರಘಟ್ಟ ಗ್ರಾ.ಪಂ ಅಧ್ಯಕ್ಷ‌ ಉದಯ್ ಕುಮಾರ್ ಕೊಪ್ಪ, ಆನಂದ್ ಕುಮಾರ್, ಬಸವರಾಜು ಗಾಂಧಿನಗರ, ರಮೇಶ್ ಮಾರನಗೆರೆ, ವೆಂಕಟೇಶ್ ಕರಡಾಳು ಮುಂತ್ತಾದವರು ಉಪಸ್ಥಿತರಿದ್ದರು. ತಿಪಟೂರು | ದಲಿತ ಪತ್ರಕರ್ತನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...