Homeಕರ್ನಾಟಕತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ತುಮಕೂರಿನ ಕಾರ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಪಬ್ಲಿಕ್ ಟಿವಿ ಕನ್ನಡದ ವರದಿಗಾರ ಮಂಜುನಾಥ್ ತಾಳಮಕ್ಕಿ ಹಲ್ಲೆಯನ್ನ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟವು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದೆ. ತಿಪಟೂರು | ದಲಿತ ಪತ್ರಕರ್ತನ

ದಲಿತವಿರೋದಿ ಕೋಮುವಾದಿ ಪತ್ರಕರ್ತನ ಮೇಲೆ ಗುಂಡಾಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿರುವ ದಸಂಸ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಪವನ್ ಕುಮಾರ್ ಅವರು ಮನವಿ ಪತ್ರ ಸ್ವೀಕರಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಾಂತಪ್ಪ, “ತುಮಕೂರಿನಲ್ಲಿ ಝೀ ಟಿ.ವಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ಸಮಯ ಮಂಜುನಾಥ್ ಎಂಬುವವರ ಮೇಲೆ ಪಬ್ಲಿಕ್ ಟಿ.ವಿ. ವರದಿಗಾರ ಮಂಜುನಾಥ್ ತಾಳಮಕ್ಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿನಿಂದನೆ ಮಾಡಿದ್ದ. ಕೋಮುವಾದಿ ಮಂಜುನಾಥ್ ತಾಳಮಕ್ಕಿ ಕೊಳಕು ಜಾತಿಮನಸ್ಥಿತಿಯ ವ್ಯಕ್ತಿಯಾಗಿದ್ದು, ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವುದು, ಜಾತಿ ಧರ್ಮಗಳ ಮಧ್ಯೆ ಕೋಮು ವೈಷ್ಯಮ್ಯ ಬಿತ್ತಿ, ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುವ ಕೆಲಸ ಮಾಡುತ್ತಿದ್ದಾನೆ.” ಎಂದು ಹೇಳಿದ್ದಾರೆ.

“ಕಾರವಾರ ತಾಳಮಕ್ಕಿ ಮೂಲದ ಈ ವ್ಯಕ್ತಿ ಈ ಹಿಂದೆ ಮಂಗಳೂರು ಮತ್ತು ಕಾರವಾರದಲ್ಲಿ ಕೋಮುವಾದಿ ಸಂಘಟನೆಗಳಲ್ಲಿ ಕೆಲಸ ಮಾಡುತ್ತಾ, ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಬ್ಲಿಕ್ ಟಿ.ವಿ ಮಾಧ್ಯಮವನ್ನು ಕೇವಲ ನೆಪಮಾತ್ರಕ್ಕೆ ಇಟ್ಟುಕೊಂಡು ಕೆಲಸ ಮಾಡುತ್ತಿರುವ ಮಂಜುನಾಥ್ ತಾಳಮಕ್ಕಿ ಅಥವಾ ಮಂಜುನಾಥ್ ನಾಯ್ಕ ವರದಿಗಾರನಾಗಿ ಮಂಡ್ಯದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ದಲಿತವರದಿಗಾರರ ಮೇಲೆ ಜಾತಿನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಸಹ ಇದೆ” ಎಂದು ಅವರು ಹೇಳಿದ್ದಾರೆ.

“ಕೋಮು ಮನಸ್ಥಿತಿಯ ಈ ವ್ಯಕ್ತಿಯ ವಿರುದ್ದ ಸರ್ಕಾರ ಗೂಂಡಾಕಾಯ್ದೆ ದಾಖಲಿಸಿ, ಆತನ ಪೂರ್ವಾಪರ ತನಿಖೆ ನಡೆಸಬೇಕು. ಮಾಧ್ಯಮ ಕ್ಷೇತ್ರದ ಪಬ್ಲಿಕ್ ಟಿವಿ ಸಮಾಜದ ಮುಖವಾಣಿಯಂತೆ ಕೆಲಸ ಮಾಡುತ್ತಿದೆ. ಆದರೆ ಇಂತಹ ಪೂರ್ವಾಗ್ರಹ ಪೀಡಿತ ಜಾತಿವಾದಿ ಮನಸ್ಥಿತಿಯ ವ್ಯಕ್ತಿಗಳು ಕೆಲಸ ಮಾಡಿದರೆ, ಮಾಧ್ಯಮಸಂಸ್ಥೆಗೂ ಕೆಟ್ಟಹೆಸರು ಬರುತ್ತದೆ. ಕೂಡಲೇ ಪಬ್ಲಿಕ್ ಟಿ.ವಿ.ಯ ಮುಖ್ಯಸ್ಥ ರಂಗನಾಥ್‌ರವರು ಈ ಪತ್ರಕರ್ತನನ್ನು ತಮ್ಮ ಮಾಧ್ಯಮ ಸಂಸ್ಥೆಯಿಂದ ವಜಾಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅಷ್ಟೆ ಅಲ್ಲದೆ, ಪೊಲೀಸರು ಹಾಗೂ ಸರ್ಕಾರ ಕೂಡಲೇ ಕಾನೂನು ಕ್ರಮಕೈಗೊಂಡು ಇಂತಹ ಸಮಾಜದ್ರೋಹಿಗಳನ್ನು ನಿಗ್ರಹಿಸದಿದ್ದರೆ ಉಗ್ರಹೋರಾಟ ಮಾಡಲಾಗುವುದು ಎಂದು ಕೆ.ಎಂ. ಶಾಂತಪ್ಪ ಎಚ್ಚರಿಸಿದ್ದಾರೆ.

ಡಿಎಸ್ಎಸ್ ಜಿಲ್ಲಾಸಂಚಾಲಕ ನಾಗ್ತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ, “ಮಾಧ್ಯಮ ಕ್ಷೇತ್ರ ಸರ್ವ ಸಮಾಜಗಳನ್ನು ಸಮಾನವಾಗಿ ಕಾಣುವ ಮನೋಭಾವನೆ ರೂಡಿಸಿಕೊಳ್ಳಬೇಕು. ಆದರೆ ಮಂಜುನಾಥ್ ತಾಳಮಕ್ಕಿ ಎನ್ನುವ ಅವಿವೇಕಿ ಮಾಧ್ಯಮ ಕ್ಷೇತ್ರಕ್ಕೆ ನಾಲಯಕ್ ವ್ಯಕ್ತಿಯಾಗಿದ್ದು ಕೋಮುವಾದಿ ಮನಸ್ಥಿತಿ ಹೊಂದಿದ್ದಾನೆ. ತುಮಕೂರಿನಲ್ಲಿ ಕೆಲಸ ಮಾಡುತ್ತಿರುವ ಸಮಯ ಮಂಜುನಾಥ್ ಮೇಲೆ ಹಲ್ಲೆ ಮಾಡುವ ಮೂಲಕ ತನ್ನ ಜಾತಿಮನಸ್ಥಿತಿ ತೋರ್ಪಡಿಸಿದ್ದು. ಸರ್ಕಾರ ಕೂಡಲೇ ಆತನ ವಿರುದ್ಧ ಗೂಂಡಾಕಾಯ್ದೆಅಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಡಿಎಸ್ಎಸ್ ಮುಖಂಡ ಕುಪ್ಪಾಳು ರಂಗಸ್ವಾಮಿ ಮಾತನಾಡಿ, “ಮಾಧ್ಯಮಕ್ಷೇತ್ರ ಪವಿತ್ರವಾದ ಕ್ಷೇತ್ರ. ಸಮಾಜದ ಶೋಷಿತ ಸಮುದಾಯಗಳು, ಬಡವ, ದೀನದಲಿತರ ಬಗ್ಗೆ ಕಾಳಜಿಯಿಂದ ಕೆಲಸ ಮಾಡಬೇಕು. ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದ ವರದಿಗಾರ ಅವಿವೇಕದಿಂದ ವರ್ತನೆ ಮಾಡಿರುವುದು ಖಂಡನೀಯ. ಮಂಜುನಾಥ್ ತಾಳಮಕ್ಕಿ ಎನ್ನುವ ವ್ಯಕ್ತಿ ಕೋಮುವಾದಿ ಸಂಘಟನೆಗಳೊಂದಿಗೆ ತೊಡಗಿಕೊಂಡು ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದು ಹಲವಾರು ಭಾರಿ ದಲಿತ-ಅಲ್ಪಸಂಖ್ಯಾತರ ಮೇಲೆ ಪ್ರಚೋದನೆಗಳನ್ನು ಮಾಡಿದ್ದಾರೆ.” ಎಂದು ಹೇಳಿದ್ದಾರೆ.

“ಇಂತಹ ವ್ಯಕ್ತಿಯನ್ನು ಗೃಹ ಸಚಿವರು ಹೆಚ್ಚಿನ ತನಿಖೆಗೆ ಒಳಪಡಿಸಬೇಕು. ಅವರ ವಿರುದ್ಧ ಗೂಂಡಾಕಾಯ್ದೆ ದಾಖಲು ಮಾಡಬೇಕು. ಇಂತಹ ಕೋಮುವಾದಿಗಳನ್ನು ಆರಂಭದಲ್ಲೇ ಮಟ್ಟಹಾಕದಿದ್ದರೆ ಸಮಾಜಘಾತುಕ ಶಕ್ತಿಗಳಾಗಿ ಅವರು ಸಮಾಜ ಹಾಗೂ ದೇಶಕ್ಕೆ ಮಾರಕವಾಗುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಉಪಸ್ಥಿತರಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಕೆ ಕುಮಾರ್ ಮಾತನಾಡಿ, “ಮಂಜುನಾಥ್ ಮೇಲಿನ ಹಲ್ಲೆ ಪ್ರಕರಣ ವಿಶೇಷ ತನಿಖೆಗೆ ಒಳಪಡಿಸಬೇಕು. ಪಬ್ಲಿಕ್ ಟಿ.ವಿ. ಮುಖ್ಯಸ್ಥರು ಮಂಜುನಾಥ್ ತಾಳಮಕ್ಕಿಯನ್ನು ಕೂಡಲೆ ವಜಾಗೊಳಿಸಬೇಕು. ಈ ವ್ಯಕ್ತಿ ಹಿಂದೆಯೂ ದಲಿತ ಸಂಘಟನೆಗಳು ಹಾಗೂ ದಲಿತರ ಪ್ರತಿಭಟನೆಗಳನ್ನು ವರದಿ ಮಾಡದೇ ಜಾತಿವಾದಿ ಮನಸ್ಥಿತಿ ಪ್ರದರ್ಶನ ಮಾಡಿದ್ದಾನೆ” ಎಮದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಜಕ್ಕನಹಳ್ಳಿ ಮೋಹನ್, ಮುಖಂಡರಾದ ಹರೀಶ್ ಯಗಚೀಕಟ್ಟೆ, ಸತೀಶ್ ಮಾರನಗೆರೆ, ಇರ್ಫಾನ್, ಮಹಿಳಾ ಸಂಚಾಲಕಿ ಕವಿತಾ ಮಹೇಶ್, ಸೀಮಾ, ಮತ್ತಿಘಟ್ಟ ಶಿಮಕುಮಾರ್, ಕಿರಣ್ ರಾಜ್ ಅರ್ಚನಹಳ್ಳಿ, ಡಿ.ಆರ್ ಬಸವರಾಜು, ಕಾರ್ಮಿಕ ಮುಖಂಡ ಹೊನ್ನಪ್ಪ, ಗ್ಯಾರಘಟ್ಟ ಗ್ರಾ.ಪಂ ಅಧ್ಯಕ್ಷ‌ ಉದಯ್ ಕುಮಾರ್ ಕೊಪ್ಪ, ಆನಂದ್ ಕುಮಾರ್, ಬಸವರಾಜು ಗಾಂಧಿನಗರ, ರಮೇಶ್ ಮಾರನಗೆರೆ, ವೆಂಕಟೇಶ್ ಕರಡಾಳು ಮುಂತ್ತಾದವರು ಉಪಸ್ಥಿತರಿದ್ದರು. ತಿಪಟೂರು | ದಲಿತ ಪತ್ರಕರ್ತನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...