Homeಕರ್ನಾಟಕತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ತುಮಕೂರಿನ ಕಾರ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಪಬ್ಲಿಕ್ ಟಿವಿ ಕನ್ನಡದ ವರದಿಗಾರ ಮಂಜುನಾಥ್ ತಾಳಮಕ್ಕಿ ಹಲ್ಲೆಯನ್ನ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟವು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದೆ. ತಿಪಟೂರು | ದಲಿತ ಪತ್ರಕರ್ತನ

ದಲಿತವಿರೋದಿ ಕೋಮುವಾದಿ ಪತ್ರಕರ್ತನ ಮೇಲೆ ಗುಂಡಾಕಾಯ್ದೆ ದಾಖಲಿಸಬೇಕು ಎಂದು ಒತ್ತಾಯಿಸಿರುವ ದಸಂಸ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಪವನ್ ಕುಮಾರ್ ಅವರು ಮನವಿ ಪತ್ರ ಸ್ವೀಕರಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಾಂತಪ್ಪ, “ತುಮಕೂರಿನಲ್ಲಿ ಝೀ ಟಿ.ವಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ಸಮಯ ಮಂಜುನಾಥ್ ಎಂಬುವವರ ಮೇಲೆ ಪಬ್ಲಿಕ್ ಟಿ.ವಿ. ವರದಿಗಾರ ಮಂಜುನಾಥ್ ತಾಳಮಕ್ಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿನಿಂದನೆ ಮಾಡಿದ್ದ. ಕೋಮುವಾದಿ ಮಂಜುನಾಥ್ ತಾಳಮಕ್ಕಿ ಕೊಳಕು ಜಾತಿಮನಸ್ಥಿತಿಯ ವ್ಯಕ್ತಿಯಾಗಿದ್ದು, ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವುದು, ಜಾತಿ ಧರ್ಮಗಳ ಮಧ್ಯೆ ಕೋಮು ವೈಷ್ಯಮ್ಯ ಬಿತ್ತಿ, ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುವ ಕೆಲಸ ಮಾಡುತ್ತಿದ್ದಾನೆ.” ಎಂದು ಹೇಳಿದ್ದಾರೆ.

“ಕಾರವಾರ ತಾಳಮಕ್ಕಿ ಮೂಲದ ಈ ವ್ಯಕ್ತಿ ಈ ಹಿಂದೆ ಮಂಗಳೂರು ಮತ್ತು ಕಾರವಾರದಲ್ಲಿ ಕೋಮುವಾದಿ ಸಂಘಟನೆಗಳಲ್ಲಿ ಕೆಲಸ ಮಾಡುತ್ತಾ, ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಬ್ಲಿಕ್ ಟಿ.ವಿ ಮಾಧ್ಯಮವನ್ನು ಕೇವಲ ನೆಪಮಾತ್ರಕ್ಕೆ ಇಟ್ಟುಕೊಂಡು ಕೆಲಸ ಮಾಡುತ್ತಿರುವ ಮಂಜುನಾಥ್ ತಾಳಮಕ್ಕಿ ಅಥವಾ ಮಂಜುನಾಥ್ ನಾಯ್ಕ ವರದಿಗಾರನಾಗಿ ಮಂಡ್ಯದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ದಲಿತವರದಿಗಾರರ ಮೇಲೆ ಜಾತಿನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಸಹ ಇದೆ” ಎಂದು ಅವರು ಹೇಳಿದ್ದಾರೆ.

“ಕೋಮು ಮನಸ್ಥಿತಿಯ ಈ ವ್ಯಕ್ತಿಯ ವಿರುದ್ದ ಸರ್ಕಾರ ಗೂಂಡಾಕಾಯ್ದೆ ದಾಖಲಿಸಿ, ಆತನ ಪೂರ್ವಾಪರ ತನಿಖೆ ನಡೆಸಬೇಕು. ಮಾಧ್ಯಮ ಕ್ಷೇತ್ರದ ಪಬ್ಲಿಕ್ ಟಿವಿ ಸಮಾಜದ ಮುಖವಾಣಿಯಂತೆ ಕೆಲಸ ಮಾಡುತ್ತಿದೆ. ಆದರೆ ಇಂತಹ ಪೂರ್ವಾಗ್ರಹ ಪೀಡಿತ ಜಾತಿವಾದಿ ಮನಸ್ಥಿತಿಯ ವ್ಯಕ್ತಿಗಳು ಕೆಲಸ ಮಾಡಿದರೆ, ಮಾಧ್ಯಮಸಂಸ್ಥೆಗೂ ಕೆಟ್ಟಹೆಸರು ಬರುತ್ತದೆ. ಕೂಡಲೇ ಪಬ್ಲಿಕ್ ಟಿ.ವಿ.ಯ ಮುಖ್ಯಸ್ಥ ರಂಗನಾಥ್‌ರವರು ಈ ಪತ್ರಕರ್ತನನ್ನು ತಮ್ಮ ಮಾಧ್ಯಮ ಸಂಸ್ಥೆಯಿಂದ ವಜಾಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅಷ್ಟೆ ಅಲ್ಲದೆ, ಪೊಲೀಸರು ಹಾಗೂ ಸರ್ಕಾರ ಕೂಡಲೇ ಕಾನೂನು ಕ್ರಮಕೈಗೊಂಡು ಇಂತಹ ಸಮಾಜದ್ರೋಹಿಗಳನ್ನು ನಿಗ್ರಹಿಸದಿದ್ದರೆ ಉಗ್ರಹೋರಾಟ ಮಾಡಲಾಗುವುದು ಎಂದು ಕೆ.ಎಂ. ಶಾಂತಪ್ಪ ಎಚ್ಚರಿಸಿದ್ದಾರೆ.

ಡಿಎಸ್ಎಸ್ ಜಿಲ್ಲಾಸಂಚಾಲಕ ನಾಗ್ತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ, “ಮಾಧ್ಯಮ ಕ್ಷೇತ್ರ ಸರ್ವ ಸಮಾಜಗಳನ್ನು ಸಮಾನವಾಗಿ ಕಾಣುವ ಮನೋಭಾವನೆ ರೂಡಿಸಿಕೊಳ್ಳಬೇಕು. ಆದರೆ ಮಂಜುನಾಥ್ ತಾಳಮಕ್ಕಿ ಎನ್ನುವ ಅವಿವೇಕಿ ಮಾಧ್ಯಮ ಕ್ಷೇತ್ರಕ್ಕೆ ನಾಲಯಕ್ ವ್ಯಕ್ತಿಯಾಗಿದ್ದು ಕೋಮುವಾದಿ ಮನಸ್ಥಿತಿ ಹೊಂದಿದ್ದಾನೆ. ತುಮಕೂರಿನಲ್ಲಿ ಕೆಲಸ ಮಾಡುತ್ತಿರುವ ಸಮಯ ಮಂಜುನಾಥ್ ಮೇಲೆ ಹಲ್ಲೆ ಮಾಡುವ ಮೂಲಕ ತನ್ನ ಜಾತಿಮನಸ್ಥಿತಿ ತೋರ್ಪಡಿಸಿದ್ದು. ಸರ್ಕಾರ ಕೂಡಲೇ ಆತನ ವಿರುದ್ಧ ಗೂಂಡಾಕಾಯ್ದೆಅಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಡಿಎಸ್ಎಸ್ ಮುಖಂಡ ಕುಪ್ಪಾಳು ರಂಗಸ್ವಾಮಿ ಮಾತನಾಡಿ, “ಮಾಧ್ಯಮಕ್ಷೇತ್ರ ಪವಿತ್ರವಾದ ಕ್ಷೇತ್ರ. ಸಮಾಜದ ಶೋಷಿತ ಸಮುದಾಯಗಳು, ಬಡವ, ದೀನದಲಿತರ ಬಗ್ಗೆ ಕಾಳಜಿಯಿಂದ ಕೆಲಸ ಮಾಡಬೇಕು. ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದ ವರದಿಗಾರ ಅವಿವೇಕದಿಂದ ವರ್ತನೆ ಮಾಡಿರುವುದು ಖಂಡನೀಯ. ಮಂಜುನಾಥ್ ತಾಳಮಕ್ಕಿ ಎನ್ನುವ ವ್ಯಕ್ತಿ ಕೋಮುವಾದಿ ಸಂಘಟನೆಗಳೊಂದಿಗೆ ತೊಡಗಿಕೊಂಡು ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದು ಹಲವಾರು ಭಾರಿ ದಲಿತ-ಅಲ್ಪಸಂಖ್ಯಾತರ ಮೇಲೆ ಪ್ರಚೋದನೆಗಳನ್ನು ಮಾಡಿದ್ದಾರೆ.” ಎಂದು ಹೇಳಿದ್ದಾರೆ.

“ಇಂತಹ ವ್ಯಕ್ತಿಯನ್ನು ಗೃಹ ಸಚಿವರು ಹೆಚ್ಚಿನ ತನಿಖೆಗೆ ಒಳಪಡಿಸಬೇಕು. ಅವರ ವಿರುದ್ಧ ಗೂಂಡಾಕಾಯ್ದೆ ದಾಖಲು ಮಾಡಬೇಕು. ಇಂತಹ ಕೋಮುವಾದಿಗಳನ್ನು ಆರಂಭದಲ್ಲೇ ಮಟ್ಟಹಾಕದಿದ್ದರೆ ಸಮಾಜಘಾತುಕ ಶಕ್ತಿಗಳಾಗಿ ಅವರು ಸಮಾಜ ಹಾಗೂ ದೇಶಕ್ಕೆ ಮಾರಕವಾಗುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಉಪಸ್ಥಿತರಿದ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಕೆ ಕುಮಾರ್ ಮಾತನಾಡಿ, “ಮಂಜುನಾಥ್ ಮೇಲಿನ ಹಲ್ಲೆ ಪ್ರಕರಣ ವಿಶೇಷ ತನಿಖೆಗೆ ಒಳಪಡಿಸಬೇಕು. ಪಬ್ಲಿಕ್ ಟಿ.ವಿ. ಮುಖ್ಯಸ್ಥರು ಮಂಜುನಾಥ್ ತಾಳಮಕ್ಕಿಯನ್ನು ಕೂಡಲೆ ವಜಾಗೊಳಿಸಬೇಕು. ಈ ವ್ಯಕ್ತಿ ಹಿಂದೆಯೂ ದಲಿತ ಸಂಘಟನೆಗಳು ಹಾಗೂ ದಲಿತರ ಪ್ರತಿಭಟನೆಗಳನ್ನು ವರದಿ ಮಾಡದೇ ಜಾತಿವಾದಿ ಮನಸ್ಥಿತಿ ಪ್ರದರ್ಶನ ಮಾಡಿದ್ದಾನೆ” ಎಮದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಜಕ್ಕನಹಳ್ಳಿ ಮೋಹನ್, ಮುಖಂಡರಾದ ಹರೀಶ್ ಯಗಚೀಕಟ್ಟೆ, ಸತೀಶ್ ಮಾರನಗೆರೆ, ಇರ್ಫಾನ್, ಮಹಿಳಾ ಸಂಚಾಲಕಿ ಕವಿತಾ ಮಹೇಶ್, ಸೀಮಾ, ಮತ್ತಿಘಟ್ಟ ಶಿಮಕುಮಾರ್, ಕಿರಣ್ ರಾಜ್ ಅರ್ಚನಹಳ್ಳಿ, ಡಿ.ಆರ್ ಬಸವರಾಜು, ಕಾರ್ಮಿಕ ಮುಖಂಡ ಹೊನ್ನಪ್ಪ, ಗ್ಯಾರಘಟ್ಟ ಗ್ರಾ.ಪಂ ಅಧ್ಯಕ್ಷ‌ ಉದಯ್ ಕುಮಾರ್ ಕೊಪ್ಪ, ಆನಂದ್ ಕುಮಾರ್, ಬಸವರಾಜು ಗಾಂಧಿನಗರ, ರಮೇಶ್ ಮಾರನಗೆರೆ, ವೆಂಕಟೇಶ್ ಕರಡಾಳು ಮುಂತ್ತಾದವರು ಉಪಸ್ಥಿತರಿದ್ದರು. ತಿಪಟೂರು | ದಲಿತ ಪತ್ರಕರ್ತನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...