Homeಕರ್ನಾಟಕಟಿಪ್ಪು ಹಾಸನಕ್ಕೆ ''ಕೈಮಾಬಾದ್'' ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

- Advertisement -
- Advertisement -

”ಟಿಪ್ಪು ಹಾಸನಕ್ಕೆ ‘ಕೈಮಾಬಾದ್’ ಅಂತ ಹೆಸರು ಇಟ್ಟಿದ್ದನು” ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮತ್ತೊಂದು ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಇಂದು (ಮಾರ್ಚ್ 17) ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಸಿಟಿ ರವಿ, ”ಉರಿಗೌಡ, ನಂಜೇಗೌಡರು ಟಿಪ್ಪುನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ”ಕೈಮಾಬಾದ್”, ಹಾಸನಕ್ಕೆ ಕೈಮಾಬಾತ್ ಎಂದು ಕರೆಯುವುದಕ್ಕೆ ಕುಮಾರಸ್ವಾಮಿಗೆ ಇಷ್ಟ ಇರಬಹುದು” ಎಂದು ಟಾಂಗ್​ ಕೊಟ್ಟಿದ್ದಾರೆ.

”ಉರಿಗೌಡ ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಟಿಪ್ಪುವನ್ನು ಉರಿಗೌಡ ನಂಜೇಗೌಡ ಕೊಂದಿದ್ದು ಐತಿಹಾಸಿಕ ಸತ್ಯ. ಟಿಪ್ಪು ಹಾಸನವನ್ನ ಕೈಮಾಬಾದ್ ಎಂದು ಕರೆದಿದ್ದನು. ಕುಮಾರಸ್ವಾಮಿಗೂ ಹಾಸನವನ್ನು ಕೈಮಾಬಾದ್ ಎಂದು ಕರೆಯಲು ಇಷ್ಟವೇನು…?” ಎಂದು ಪ್ರಶ್ನೆ ಮಾಡಿದ್ದಾರೆ.

”ಈಗ ಒಂದುವೇಳೆ ಟಿಪ್ಪು ಮತ್ತು ಆತನ ಸಿದ್ದಾಂತ ಬದುಕಿದ್ದರೆ ಹಾಸನ ಕೈಮಾಬಾತ್ ಆಗಿರುತ್ತಿತ್ತು. ಟಿಪ್ಪು ಬದುಕಿದ್ದರೇ ಯಾರ್ಯಾರ ಕತೆ ಏನಾಗುತ್ತಿತ್ತೋ ಏನೋ..? ಎಂದು ಸಿ.ಟಿ ರವಿ ಹೇಳಿದ್ದಾರೆ.

ಟಿಪ್ಪು ಸುಲ್ತಾನ್​ನನ್ನು ಮಂಡ್ಯದ ಒಕ್ಕಲಿಗ ಸಮುದಾಯದ ಉರಿಗೌಡ, ನಂಜೇಗೌಡ‌ ಎನ್ನುವವರು ಕೊಂದಿದ್ದಾರೆ ಎಂದು ಸಿಟಿ ರವಿ ಅವರು ಈ ಹಿಂದೆ ಒಂದು ಸುಳ್ಳು ಹರಿಬಿಟ್ಟಿದ್ದರು. ಆ ಸುಳ್ಳನ್ನು ಬಿಜೆಪಿಯ ಅನೇಕ ನಾಯಕರು ಸತ್ಯ ಎಂದು ವಾದಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಭಾರೀ ಚರ್ಚಗೆ ಗ್ರಾಸವಾಗಿದ್ದು, ರಾಜಕೀಯ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ

ಅಷ್ಟೇ ಅಲ್ಲದೇ ಮೋದಿ ಮಂಡ್ಯಕ್ಕೆ ಬರುವ ಸಂದರ್ಭದಲ್ಲಿ ತಮಿಳುನಾಡಿನ ಹೋರಾಟಗಾರ ಚಿತ್ರ ಬಳಸಿಕೊಂಡು ಅವರೇ ಉರಿಗೌಡ, ನಂಜೇಗೌಡ  ಎಂದು ಸೂಚಿಸಿ ಅವರ ಹೆಸರಲ್ಲೇ ಮಹಾದ್ವಾರವನ್ನೇ ನಿರ್ಮಾಣ ಮಾಡಿದ್ದರು. ಇದಕ್ಕೆ ಮಂಡ್ಯದ ಜನರೇ ವಿರೋಧ ವ್ಯಕ್ತಪಡಿಸಿದ ನಂತರ ರಾತ್ರೋರಾತ್ರಿ ಮಹಾದ್ವಾರ ತೆರುವು ಮಾಡಿ ಬೇರೆ ಹೆಸರಿನ ಮಹಾದ್ವಾರ ನಿರ್ಮಾಣ ಮಾಡಿದ್ದರು.

ಈ ವಿಚಾರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ”ಟಿಪ್ಪು ಕೊಂದವರು ಉರಿಗೌಡ ನಂಜೇಗೌಡ ಎಂದು ಪ್ರಚಾರ ಮಾಡುವ ಮೂಲಕ ಬಿಜೆಪಿಯವರು ಒಕ್ಕಲಿಗ ಸಮಾಜದ ಗೌರವ ಹಾಳು ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

”ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬುದಕ್ಕೆ ಇತಿಹಾಸದಲ್ಲಿ ಯಾವುದೇ ರೀತಿಯ ದಾಖಲೆಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎನ್ನುವುದಕ್ಕೆ ಇತಿಹಾಸ ಇದೆ. ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬ ಇತಿಹಾಸವನ್ನು ನಿರ್ಮಿಸಿದವರು ಬಿಜೆಪಿಯವರು. ಈ ಇತಿಹಾಸ ಸೃಷ್ಟಿ ಮಾಡಿ ಅದಕ್ಕೆ ನಮ್ಮ ಸಮುದಾಯದ ಇಬ್ಬರ ಹೆಸರು ಇಟ್ಟಿದ್ದಾರೆ. ಆ ಮೂಲಕ ಒಕ್ಕಲಿಗರ ಸಮುದಾಯಕ್ಕೆ ಇವರು ಅಗೌರವ ತೋರಿದ್ದಾರೆ. ಹೀಗಾಗಿ ಒಕ್ಕಲಿಗರು ಇದರ ವಿರುದ್ಧ ಹೋರಾಟ ಮಾಡಿ ದಿಕ್ಕರಿಸಬೇಕು. ಬಿಜೆಪಿ ಪಕ್ಷದವರನ್ನ ಎಚ್ಚರಿಸಬೇಕು” ಎಂದು ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಸಿಟಿ ರವಿ ಅವರು, ಮತ್ತೊಂದು ಹೊಸ ವಿಷಯವನ್ನು ತೇಲಿಬಿಟ್ಟಿದ್ದಾರೆ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ ಎಂದು ಸಿಟಿ ರವಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....