Homeಕರ್ನಾಟಕಟಿಪ್ಪು ಹಾಸನಕ್ಕೆ ''ಕೈಮಾಬಾದ್'' ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

- Advertisement -
- Advertisement -

”ಟಿಪ್ಪು ಹಾಸನಕ್ಕೆ ‘ಕೈಮಾಬಾದ್’ ಅಂತ ಹೆಸರು ಇಟ್ಟಿದ್ದನು” ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮತ್ತೊಂದು ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಇಂದು (ಮಾರ್ಚ್ 17) ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಸಿಟಿ ರವಿ, ”ಉರಿಗೌಡ, ನಂಜೇಗೌಡರು ಟಿಪ್ಪುನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ”ಕೈಮಾಬಾದ್”, ಹಾಸನಕ್ಕೆ ಕೈಮಾಬಾತ್ ಎಂದು ಕರೆಯುವುದಕ್ಕೆ ಕುಮಾರಸ್ವಾಮಿಗೆ ಇಷ್ಟ ಇರಬಹುದು” ಎಂದು ಟಾಂಗ್​ ಕೊಟ್ಟಿದ್ದಾರೆ.

”ಉರಿಗೌಡ ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಟಿಪ್ಪುವನ್ನು ಉರಿಗೌಡ ನಂಜೇಗೌಡ ಕೊಂದಿದ್ದು ಐತಿಹಾಸಿಕ ಸತ್ಯ. ಟಿಪ್ಪು ಹಾಸನವನ್ನ ಕೈಮಾಬಾದ್ ಎಂದು ಕರೆದಿದ್ದನು. ಕುಮಾರಸ್ವಾಮಿಗೂ ಹಾಸನವನ್ನು ಕೈಮಾಬಾದ್ ಎಂದು ಕರೆಯಲು ಇಷ್ಟವೇನು…?” ಎಂದು ಪ್ರಶ್ನೆ ಮಾಡಿದ್ದಾರೆ.

”ಈಗ ಒಂದುವೇಳೆ ಟಿಪ್ಪು ಮತ್ತು ಆತನ ಸಿದ್ದಾಂತ ಬದುಕಿದ್ದರೆ ಹಾಸನ ಕೈಮಾಬಾತ್ ಆಗಿರುತ್ತಿತ್ತು. ಟಿಪ್ಪು ಬದುಕಿದ್ದರೇ ಯಾರ್ಯಾರ ಕತೆ ಏನಾಗುತ್ತಿತ್ತೋ ಏನೋ..? ಎಂದು ಸಿ.ಟಿ ರವಿ ಹೇಳಿದ್ದಾರೆ.

ಟಿಪ್ಪು ಸುಲ್ತಾನ್​ನನ್ನು ಮಂಡ್ಯದ ಒಕ್ಕಲಿಗ ಸಮುದಾಯದ ಉರಿಗೌಡ, ನಂಜೇಗೌಡ‌ ಎನ್ನುವವರು ಕೊಂದಿದ್ದಾರೆ ಎಂದು ಸಿಟಿ ರವಿ ಅವರು ಈ ಹಿಂದೆ ಒಂದು ಸುಳ್ಳು ಹರಿಬಿಟ್ಟಿದ್ದರು. ಆ ಸುಳ್ಳನ್ನು ಬಿಜೆಪಿಯ ಅನೇಕ ನಾಯಕರು ಸತ್ಯ ಎಂದು ವಾದಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಭಾರೀ ಚರ್ಚಗೆ ಗ್ರಾಸವಾಗಿದ್ದು, ರಾಜಕೀಯ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ

ಅಷ್ಟೇ ಅಲ್ಲದೇ ಮೋದಿ ಮಂಡ್ಯಕ್ಕೆ ಬರುವ ಸಂದರ್ಭದಲ್ಲಿ ತಮಿಳುನಾಡಿನ ಹೋರಾಟಗಾರ ಚಿತ್ರ ಬಳಸಿಕೊಂಡು ಅವರೇ ಉರಿಗೌಡ, ನಂಜೇಗೌಡ  ಎಂದು ಸೂಚಿಸಿ ಅವರ ಹೆಸರಲ್ಲೇ ಮಹಾದ್ವಾರವನ್ನೇ ನಿರ್ಮಾಣ ಮಾಡಿದ್ದರು. ಇದಕ್ಕೆ ಮಂಡ್ಯದ ಜನರೇ ವಿರೋಧ ವ್ಯಕ್ತಪಡಿಸಿದ ನಂತರ ರಾತ್ರೋರಾತ್ರಿ ಮಹಾದ್ವಾರ ತೆರುವು ಮಾಡಿ ಬೇರೆ ಹೆಸರಿನ ಮಹಾದ್ವಾರ ನಿರ್ಮಾಣ ಮಾಡಿದ್ದರು.

ಈ ವಿಚಾರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ”ಟಿಪ್ಪು ಕೊಂದವರು ಉರಿಗೌಡ ನಂಜೇಗೌಡ ಎಂದು ಪ್ರಚಾರ ಮಾಡುವ ಮೂಲಕ ಬಿಜೆಪಿಯವರು ಒಕ್ಕಲಿಗ ಸಮಾಜದ ಗೌರವ ಹಾಳು ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

”ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬುದಕ್ಕೆ ಇತಿಹಾಸದಲ್ಲಿ ಯಾವುದೇ ರೀತಿಯ ದಾಖಲೆಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎನ್ನುವುದಕ್ಕೆ ಇತಿಹಾಸ ಇದೆ. ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬ ಇತಿಹಾಸವನ್ನು ನಿರ್ಮಿಸಿದವರು ಬಿಜೆಪಿಯವರು. ಈ ಇತಿಹಾಸ ಸೃಷ್ಟಿ ಮಾಡಿ ಅದಕ್ಕೆ ನಮ್ಮ ಸಮುದಾಯದ ಇಬ್ಬರ ಹೆಸರು ಇಟ್ಟಿದ್ದಾರೆ. ಆ ಮೂಲಕ ಒಕ್ಕಲಿಗರ ಸಮುದಾಯಕ್ಕೆ ಇವರು ಅಗೌರವ ತೋರಿದ್ದಾರೆ. ಹೀಗಾಗಿ ಒಕ್ಕಲಿಗರು ಇದರ ವಿರುದ್ಧ ಹೋರಾಟ ಮಾಡಿ ದಿಕ್ಕರಿಸಬೇಕು. ಬಿಜೆಪಿ ಪಕ್ಷದವರನ್ನ ಎಚ್ಚರಿಸಬೇಕು” ಎಂದು ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಸಿಟಿ ರವಿ ಅವರು, ಮತ್ತೊಂದು ಹೊಸ ವಿಷಯವನ್ನು ತೇಲಿಬಿಟ್ಟಿದ್ದಾರೆ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ ಎಂದು ಸಿಟಿ ರವಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...