Homeಕರ್ನಾಟಕಟಿಪ್ಪು ಹಾಸನಕ್ಕೆ ''ಕೈಮಾಬಾದ್'' ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

- Advertisement -
- Advertisement -

”ಟಿಪ್ಪು ಹಾಸನಕ್ಕೆ ‘ಕೈಮಾಬಾದ್’ ಅಂತ ಹೆಸರು ಇಟ್ಟಿದ್ದನು” ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮತ್ತೊಂದು ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಇಂದು (ಮಾರ್ಚ್ 17) ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಸಿಟಿ ರವಿ, ”ಉರಿಗೌಡ, ನಂಜೇಗೌಡರು ಟಿಪ್ಪುನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ”ಕೈಮಾಬಾದ್”, ಹಾಸನಕ್ಕೆ ಕೈಮಾಬಾತ್ ಎಂದು ಕರೆಯುವುದಕ್ಕೆ ಕುಮಾರಸ್ವಾಮಿಗೆ ಇಷ್ಟ ಇರಬಹುದು” ಎಂದು ಟಾಂಗ್​ ಕೊಟ್ಟಿದ್ದಾರೆ.

”ಉರಿಗೌಡ ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಟಿಪ್ಪುವನ್ನು ಉರಿಗೌಡ ನಂಜೇಗೌಡ ಕೊಂದಿದ್ದು ಐತಿಹಾಸಿಕ ಸತ್ಯ. ಟಿಪ್ಪು ಹಾಸನವನ್ನ ಕೈಮಾಬಾದ್ ಎಂದು ಕರೆದಿದ್ದನು. ಕುಮಾರಸ್ವಾಮಿಗೂ ಹಾಸನವನ್ನು ಕೈಮಾಬಾದ್ ಎಂದು ಕರೆಯಲು ಇಷ್ಟವೇನು…?” ಎಂದು ಪ್ರಶ್ನೆ ಮಾಡಿದ್ದಾರೆ.

”ಈಗ ಒಂದುವೇಳೆ ಟಿಪ್ಪು ಮತ್ತು ಆತನ ಸಿದ್ದಾಂತ ಬದುಕಿದ್ದರೆ ಹಾಸನ ಕೈಮಾಬಾತ್ ಆಗಿರುತ್ತಿತ್ತು. ಟಿಪ್ಪು ಬದುಕಿದ್ದರೇ ಯಾರ್ಯಾರ ಕತೆ ಏನಾಗುತ್ತಿತ್ತೋ ಏನೋ..? ಎಂದು ಸಿ.ಟಿ ರವಿ ಹೇಳಿದ್ದಾರೆ.

ಟಿಪ್ಪು ಸುಲ್ತಾನ್​ನನ್ನು ಮಂಡ್ಯದ ಒಕ್ಕಲಿಗ ಸಮುದಾಯದ ಉರಿಗೌಡ, ನಂಜೇಗೌಡ‌ ಎನ್ನುವವರು ಕೊಂದಿದ್ದಾರೆ ಎಂದು ಸಿಟಿ ರವಿ ಅವರು ಈ ಹಿಂದೆ ಒಂದು ಸುಳ್ಳು ಹರಿಬಿಟ್ಟಿದ್ದರು. ಆ ಸುಳ್ಳನ್ನು ಬಿಜೆಪಿಯ ಅನೇಕ ನಾಯಕರು ಸತ್ಯ ಎಂದು ವಾದಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಭಾರೀ ಚರ್ಚಗೆ ಗ್ರಾಸವಾಗಿದ್ದು, ರಾಜಕೀಯ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ

ಅಷ್ಟೇ ಅಲ್ಲದೇ ಮೋದಿ ಮಂಡ್ಯಕ್ಕೆ ಬರುವ ಸಂದರ್ಭದಲ್ಲಿ ತಮಿಳುನಾಡಿನ ಹೋರಾಟಗಾರ ಚಿತ್ರ ಬಳಸಿಕೊಂಡು ಅವರೇ ಉರಿಗೌಡ, ನಂಜೇಗೌಡ  ಎಂದು ಸೂಚಿಸಿ ಅವರ ಹೆಸರಲ್ಲೇ ಮಹಾದ್ವಾರವನ್ನೇ ನಿರ್ಮಾಣ ಮಾಡಿದ್ದರು. ಇದಕ್ಕೆ ಮಂಡ್ಯದ ಜನರೇ ವಿರೋಧ ವ್ಯಕ್ತಪಡಿಸಿದ ನಂತರ ರಾತ್ರೋರಾತ್ರಿ ಮಹಾದ್ವಾರ ತೆರುವು ಮಾಡಿ ಬೇರೆ ಹೆಸರಿನ ಮಹಾದ್ವಾರ ನಿರ್ಮಾಣ ಮಾಡಿದ್ದರು.

ಈ ವಿಚಾರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ”ಟಿಪ್ಪು ಕೊಂದವರು ಉರಿಗೌಡ ನಂಜೇಗೌಡ ಎಂದು ಪ್ರಚಾರ ಮಾಡುವ ಮೂಲಕ ಬಿಜೆಪಿಯವರು ಒಕ್ಕಲಿಗ ಸಮಾಜದ ಗೌರವ ಹಾಳು ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

”ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬುದಕ್ಕೆ ಇತಿಹಾಸದಲ್ಲಿ ಯಾವುದೇ ರೀತಿಯ ದಾಖಲೆಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎನ್ನುವುದಕ್ಕೆ ಇತಿಹಾಸ ಇದೆ. ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬ ಇತಿಹಾಸವನ್ನು ನಿರ್ಮಿಸಿದವರು ಬಿಜೆಪಿಯವರು. ಈ ಇತಿಹಾಸ ಸೃಷ್ಟಿ ಮಾಡಿ ಅದಕ್ಕೆ ನಮ್ಮ ಸಮುದಾಯದ ಇಬ್ಬರ ಹೆಸರು ಇಟ್ಟಿದ್ದಾರೆ. ಆ ಮೂಲಕ ಒಕ್ಕಲಿಗರ ಸಮುದಾಯಕ್ಕೆ ಇವರು ಅಗೌರವ ತೋರಿದ್ದಾರೆ. ಹೀಗಾಗಿ ಒಕ್ಕಲಿಗರು ಇದರ ವಿರುದ್ಧ ಹೋರಾಟ ಮಾಡಿ ದಿಕ್ಕರಿಸಬೇಕು. ಬಿಜೆಪಿ ಪಕ್ಷದವರನ್ನ ಎಚ್ಚರಿಸಬೇಕು” ಎಂದು ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಸಿಟಿ ರವಿ ಅವರು, ಮತ್ತೊಂದು ಹೊಸ ವಿಷಯವನ್ನು ತೇಲಿಬಿಟ್ಟಿದ್ದಾರೆ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ ಎಂದು ಸಿಟಿ ರವಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...