Homeಕರ್ನಾಟಕಟಿಪ್ಪು ಹಾಸನಕ್ಕೆ ''ಕೈಮಾಬಾದ್'' ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

- Advertisement -
- Advertisement -

”ಟಿಪ್ಪು ಹಾಸನಕ್ಕೆ ‘ಕೈಮಾಬಾದ್’ ಅಂತ ಹೆಸರು ಇಟ್ಟಿದ್ದನು” ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮತ್ತೊಂದು ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಇಂದು (ಮಾರ್ಚ್ 17) ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಸಿಟಿ ರವಿ, ”ಉರಿಗೌಡ, ನಂಜೇಗೌಡರು ಟಿಪ್ಪುನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ”ಕೈಮಾಬಾದ್”, ಹಾಸನಕ್ಕೆ ಕೈಮಾಬಾತ್ ಎಂದು ಕರೆಯುವುದಕ್ಕೆ ಕುಮಾರಸ್ವಾಮಿಗೆ ಇಷ್ಟ ಇರಬಹುದು” ಎಂದು ಟಾಂಗ್​ ಕೊಟ್ಟಿದ್ದಾರೆ.

”ಉರಿಗೌಡ ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಟಿಪ್ಪುವನ್ನು ಉರಿಗೌಡ ನಂಜೇಗೌಡ ಕೊಂದಿದ್ದು ಐತಿಹಾಸಿಕ ಸತ್ಯ. ಟಿಪ್ಪು ಹಾಸನವನ್ನ ಕೈಮಾಬಾದ್ ಎಂದು ಕರೆದಿದ್ದನು. ಕುಮಾರಸ್ವಾಮಿಗೂ ಹಾಸನವನ್ನು ಕೈಮಾಬಾದ್ ಎಂದು ಕರೆಯಲು ಇಷ್ಟವೇನು…?” ಎಂದು ಪ್ರಶ್ನೆ ಮಾಡಿದ್ದಾರೆ.

”ಈಗ ಒಂದುವೇಳೆ ಟಿಪ್ಪು ಮತ್ತು ಆತನ ಸಿದ್ದಾಂತ ಬದುಕಿದ್ದರೆ ಹಾಸನ ಕೈಮಾಬಾತ್ ಆಗಿರುತ್ತಿತ್ತು. ಟಿಪ್ಪು ಬದುಕಿದ್ದರೇ ಯಾರ್ಯಾರ ಕತೆ ಏನಾಗುತ್ತಿತ್ತೋ ಏನೋ..? ಎಂದು ಸಿ.ಟಿ ರವಿ ಹೇಳಿದ್ದಾರೆ.

ಟಿಪ್ಪು ಸುಲ್ತಾನ್​ನನ್ನು ಮಂಡ್ಯದ ಒಕ್ಕಲಿಗ ಸಮುದಾಯದ ಉರಿಗೌಡ, ನಂಜೇಗೌಡ‌ ಎನ್ನುವವರು ಕೊಂದಿದ್ದಾರೆ ಎಂದು ಸಿಟಿ ರವಿ ಅವರು ಈ ಹಿಂದೆ ಒಂದು ಸುಳ್ಳು ಹರಿಬಿಟ್ಟಿದ್ದರು. ಆ ಸುಳ್ಳನ್ನು ಬಿಜೆಪಿಯ ಅನೇಕ ನಾಯಕರು ಸತ್ಯ ಎಂದು ವಾದಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಭಾರೀ ಚರ್ಚಗೆ ಗ್ರಾಸವಾಗಿದ್ದು, ರಾಜಕೀಯ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ

ಅಷ್ಟೇ ಅಲ್ಲದೇ ಮೋದಿ ಮಂಡ್ಯಕ್ಕೆ ಬರುವ ಸಂದರ್ಭದಲ್ಲಿ ತಮಿಳುನಾಡಿನ ಹೋರಾಟಗಾರ ಚಿತ್ರ ಬಳಸಿಕೊಂಡು ಅವರೇ ಉರಿಗೌಡ, ನಂಜೇಗೌಡ  ಎಂದು ಸೂಚಿಸಿ ಅವರ ಹೆಸರಲ್ಲೇ ಮಹಾದ್ವಾರವನ್ನೇ ನಿರ್ಮಾಣ ಮಾಡಿದ್ದರು. ಇದಕ್ಕೆ ಮಂಡ್ಯದ ಜನರೇ ವಿರೋಧ ವ್ಯಕ್ತಪಡಿಸಿದ ನಂತರ ರಾತ್ರೋರಾತ್ರಿ ಮಹಾದ್ವಾರ ತೆರುವು ಮಾಡಿ ಬೇರೆ ಹೆಸರಿನ ಮಹಾದ್ವಾರ ನಿರ್ಮಾಣ ಮಾಡಿದ್ದರು.

ಈ ವಿಚಾರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ”ಟಿಪ್ಪು ಕೊಂದವರು ಉರಿಗೌಡ ನಂಜೇಗೌಡ ಎಂದು ಪ್ರಚಾರ ಮಾಡುವ ಮೂಲಕ ಬಿಜೆಪಿಯವರು ಒಕ್ಕಲಿಗ ಸಮಾಜದ ಗೌರವ ಹಾಳು ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

”ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬುದಕ್ಕೆ ಇತಿಹಾಸದಲ್ಲಿ ಯಾವುದೇ ರೀತಿಯ ದಾಖಲೆಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎನ್ನುವುದಕ್ಕೆ ಇತಿಹಾಸ ಇದೆ. ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬ ಇತಿಹಾಸವನ್ನು ನಿರ್ಮಿಸಿದವರು ಬಿಜೆಪಿಯವರು. ಈ ಇತಿಹಾಸ ಸೃಷ್ಟಿ ಮಾಡಿ ಅದಕ್ಕೆ ನಮ್ಮ ಸಮುದಾಯದ ಇಬ್ಬರ ಹೆಸರು ಇಟ್ಟಿದ್ದಾರೆ. ಆ ಮೂಲಕ ಒಕ್ಕಲಿಗರ ಸಮುದಾಯಕ್ಕೆ ಇವರು ಅಗೌರವ ತೋರಿದ್ದಾರೆ. ಹೀಗಾಗಿ ಒಕ್ಕಲಿಗರು ಇದರ ವಿರುದ್ಧ ಹೋರಾಟ ಮಾಡಿ ದಿಕ್ಕರಿಸಬೇಕು. ಬಿಜೆಪಿ ಪಕ್ಷದವರನ್ನ ಎಚ್ಚರಿಸಬೇಕು” ಎಂದು ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಸಿಟಿ ರವಿ ಅವರು, ಮತ್ತೊಂದು ಹೊಸ ವಿಷಯವನ್ನು ತೇಲಿಬಿಟ್ಟಿದ್ದಾರೆ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ ಎಂದು ಸಿಟಿ ರವಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...