Homeಕರ್ನಾಟಕಟಿಪ್ಪು ಹಾಸನಕ್ಕೆ ''ಕೈಮಾಬಾದ್'' ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

- Advertisement -
- Advertisement -

”ಟಿಪ್ಪು ಹಾಸನಕ್ಕೆ ‘ಕೈಮಾಬಾದ್’ ಅಂತ ಹೆಸರು ಇಟ್ಟಿದ್ದನು” ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮತ್ತೊಂದು ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಇಂದು (ಮಾರ್ಚ್ 17) ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಸಿಟಿ ರವಿ, ”ಉರಿಗೌಡ, ನಂಜೇಗೌಡರು ಟಿಪ್ಪುನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ”ಕೈಮಾಬಾದ್”, ಹಾಸನಕ್ಕೆ ಕೈಮಾಬಾತ್ ಎಂದು ಕರೆಯುವುದಕ್ಕೆ ಕುಮಾರಸ್ವಾಮಿಗೆ ಇಷ್ಟ ಇರಬಹುದು” ಎಂದು ಟಾಂಗ್​ ಕೊಟ್ಟಿದ್ದಾರೆ.

”ಉರಿಗೌಡ ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಟಿಪ್ಪುವನ್ನು ಉರಿಗೌಡ ನಂಜೇಗೌಡ ಕೊಂದಿದ್ದು ಐತಿಹಾಸಿಕ ಸತ್ಯ. ಟಿಪ್ಪು ಹಾಸನವನ್ನ ಕೈಮಾಬಾದ್ ಎಂದು ಕರೆದಿದ್ದನು. ಕುಮಾರಸ್ವಾಮಿಗೂ ಹಾಸನವನ್ನು ಕೈಮಾಬಾದ್ ಎಂದು ಕರೆಯಲು ಇಷ್ಟವೇನು…?” ಎಂದು ಪ್ರಶ್ನೆ ಮಾಡಿದ್ದಾರೆ.

”ಈಗ ಒಂದುವೇಳೆ ಟಿಪ್ಪು ಮತ್ತು ಆತನ ಸಿದ್ದಾಂತ ಬದುಕಿದ್ದರೆ ಹಾಸನ ಕೈಮಾಬಾತ್ ಆಗಿರುತ್ತಿತ್ತು. ಟಿಪ್ಪು ಬದುಕಿದ್ದರೇ ಯಾರ್ಯಾರ ಕತೆ ಏನಾಗುತ್ತಿತ್ತೋ ಏನೋ..? ಎಂದು ಸಿ.ಟಿ ರವಿ ಹೇಳಿದ್ದಾರೆ.

ಟಿಪ್ಪು ಸುಲ್ತಾನ್​ನನ್ನು ಮಂಡ್ಯದ ಒಕ್ಕಲಿಗ ಸಮುದಾಯದ ಉರಿಗೌಡ, ನಂಜೇಗೌಡ‌ ಎನ್ನುವವರು ಕೊಂದಿದ್ದಾರೆ ಎಂದು ಸಿಟಿ ರವಿ ಅವರು ಈ ಹಿಂದೆ ಒಂದು ಸುಳ್ಳು ಹರಿಬಿಟ್ಟಿದ್ದರು. ಆ ಸುಳ್ಳನ್ನು ಬಿಜೆಪಿಯ ಅನೇಕ ನಾಯಕರು ಸತ್ಯ ಎಂದು ವಾದಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಭಾರೀ ಚರ್ಚಗೆ ಗ್ರಾಸವಾಗಿದ್ದು, ರಾಜಕೀಯ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ

ಅಷ್ಟೇ ಅಲ್ಲದೇ ಮೋದಿ ಮಂಡ್ಯಕ್ಕೆ ಬರುವ ಸಂದರ್ಭದಲ್ಲಿ ತಮಿಳುನಾಡಿನ ಹೋರಾಟಗಾರ ಚಿತ್ರ ಬಳಸಿಕೊಂಡು ಅವರೇ ಉರಿಗೌಡ, ನಂಜೇಗೌಡ  ಎಂದು ಸೂಚಿಸಿ ಅವರ ಹೆಸರಲ್ಲೇ ಮಹಾದ್ವಾರವನ್ನೇ ನಿರ್ಮಾಣ ಮಾಡಿದ್ದರು. ಇದಕ್ಕೆ ಮಂಡ್ಯದ ಜನರೇ ವಿರೋಧ ವ್ಯಕ್ತಪಡಿಸಿದ ನಂತರ ರಾತ್ರೋರಾತ್ರಿ ಮಹಾದ್ವಾರ ತೆರುವು ಮಾಡಿ ಬೇರೆ ಹೆಸರಿನ ಮಹಾದ್ವಾರ ನಿರ್ಮಾಣ ಮಾಡಿದ್ದರು.

ಈ ವಿಚಾರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ”ಟಿಪ್ಪು ಕೊಂದವರು ಉರಿಗೌಡ ನಂಜೇಗೌಡ ಎಂದು ಪ್ರಚಾರ ಮಾಡುವ ಮೂಲಕ ಬಿಜೆಪಿಯವರು ಒಕ್ಕಲಿಗ ಸಮಾಜದ ಗೌರವ ಹಾಳು ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

”ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬುದಕ್ಕೆ ಇತಿಹಾಸದಲ್ಲಿ ಯಾವುದೇ ರೀತಿಯ ದಾಖಲೆಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎನ್ನುವುದಕ್ಕೆ ಇತಿಹಾಸ ಇದೆ. ಉರಿಗೌಡ ಮತ್ತು ನಂಜೇಗೌಡ ಅವರೇ ಟಿಪ್ಪುವನ್ನು ಕೊಂದಿದ್ದಾರೆ ಎಂಬ ಇತಿಹಾಸವನ್ನು ನಿರ್ಮಿಸಿದವರು ಬಿಜೆಪಿಯವರು. ಈ ಇತಿಹಾಸ ಸೃಷ್ಟಿ ಮಾಡಿ ಅದಕ್ಕೆ ನಮ್ಮ ಸಮುದಾಯದ ಇಬ್ಬರ ಹೆಸರು ಇಟ್ಟಿದ್ದಾರೆ. ಆ ಮೂಲಕ ಒಕ್ಕಲಿಗರ ಸಮುದಾಯಕ್ಕೆ ಇವರು ಅಗೌರವ ತೋರಿದ್ದಾರೆ. ಹೀಗಾಗಿ ಒಕ್ಕಲಿಗರು ಇದರ ವಿರುದ್ಧ ಹೋರಾಟ ಮಾಡಿ ದಿಕ್ಕರಿಸಬೇಕು. ಬಿಜೆಪಿ ಪಕ್ಷದವರನ್ನ ಎಚ್ಚರಿಸಬೇಕು” ಎಂದು ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಸಿಟಿ ರವಿ ಅವರು, ಮತ್ತೊಂದು ಹೊಸ ವಿಷಯವನ್ನು ತೇಲಿಬಿಟ್ಟಿದ್ದಾರೆ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ ಎಂದು ಸಿಟಿ ರವಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...