Homeಕರ್ನಾಟಕಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ಕೇಂದ್ರ ಗ್ರಂಥ ಭಂಡಾರವಲ್ಲದೇ ರಾಜ್ಯದ ವಿವಿಧೆಡೆ ಚಿಕ್ಕ ಪುಸ್ತಕ ಭಂಡಾರಗಳನ್ನೂ ಟಿಪ್ಪು ಸ್ಥಾಪಿಸಿದ್ದರು. ಓದುವುದು ಉಸಿರಾಡುವಷ್ಟೇ ಸುಲಭವಾಗಿರಬೇಕು ಎಂದು ಟಿಪ್ಪು ಪ್ರತಿಪಾದಿಸುತ್ತಿದ್ದರು.

- Advertisement -
- Advertisement -

ಮೈಸೂರು ಹುಲಿ ಟಿಪ್ಪುವಿನ ಮದುವೆಗೆ ಮುಂಚೆ ತಂದೆ ಹೈದರ್ ಅಲಿ, ಮಗನೇ ನನ್ನದೆಲ್ಲವೂ ನಿನ್ನದೇ ಆದರೂ ನಿನ್ನ ಮದುವೆಯ ಸಂದರ್ಭದಲ್ಲಿ ನಿನ್ನ ಖುಷಿಯನ್ನು ಇಮ್ಮಡಿಗೊಳಿಸಲು ನಿನಗೇನಾದರೂ ಕೊಡಬೇಕೆಂದಿದ್ದೇನೆ ಎಂದು ಟಿಪ್ಪುವಿನಲ್ಲಿ ಕೇಳಿದರು. ಅದಕ್ಕೆ ಟಿಪ್ಪು ನೀವು ಈಗಾಗಲೇ ಬಹಳಷ್ಟನ್ನು ಕೊಟ್ಟಿದ್ದೀರಿ, ನನಗೆ ಇನ್ನೇನು ಬೇಡ ಎಂದಾಗ ಅಪ್ಪ ಹೈದರ್ ಪಟ್ಟು ಬಿಡದೇ ಒತ್ತಾಯಿಸಿದರು.

ತಂದೆಯ ಒತ್ತಾಯಕ್ಕೆ ಮಣಿದ ಟಿಪ್ಪು, ಹಾಗಾದರೆ ನನಗೊಂದು ಗ್ರಂಥ ಭಂಡಾರ ನಿರ್ಮಿಸಿ ಕೊಡಿ ಎಂದರು. ಅನಕ್ಷರಸ್ಥರಾಗಿದ್ದ ಹೈದರ್ ಅಲಿಗೆ ಸೋಜಿಗವೆನಿಸಿತ್ತು. ಅವರಿಗೆ ಲೆಕ್ಕ ಮಾತ್ರ ಗೊತ್ತಿತ್ತು. ಲೆಕ್ಕ ಬರೆದಿಡುವ ಪುಸ್ತಕಗಳ ಮಹತ್ವ ಮಾತ್ರ ತಿಳಿದಿತ್ತು. ಅದರಲ್ಲೂ ಬರಬೇಕಾಗಿದ್ದ ತೆರಿಗೆಗಳ ವಿವರಗಳಿದ್ದ ಪುಸ್ತಕಗಳ ಪ್ರಾಶಸ್ತ್ಯ ಮಾತ್ರ ತಿಳಿದಿತ್ತು. ಖುರಾನ್, ಗೀತಾ, ತಾಲ್ಮಡ್, ಬೈಬಲ್, ಗುರು ಗ್ರಂಥ್ ಸಾಹಿಬ್ ಮುಂತಾದ ಪವಿತ್ರ ಗ್ರಂಥಗಳನ್ನು ಓದುತ್ತಿದ್ದವರನ್ನು ಹೈದರ್ ಅಲಿ ಗೌರವಿಸುತ್ತಿದ್ದರು. ಅಂತಹ ಪುಸ್ತಕಗಳು ಮನುಷ್ಯ ಕೆಡುಕು ಮಾಡುವುದರಿಂದ ದೂರವಿರಿಸುತ್ತದೆಂದು ಹೈದರ್ ನಂಬಿದ್ದರು.

ಟಿಪ್ಪುವಿನ ಗುರುಗಳಾದ ಮೌಲವಿ ಉಬೇದುಲ್ಲಾ ಮತ್ತು ಗೋವರ್ಧನ ಪಂಡಿತರು ಟಿಪ್ಪುವಿಗೆ ಸಾಕಷ್ಟು ಪುಸ್ತಕಗಳನ್ನು ಉಡುಗೊರೆಯಾಗಿ ಕೊಟ್ಟು ಹೋಗಿದ್ದರು. ಟಿಪ್ಪುವಿನ ದೊಡ್ಡ ಅಭ್ಯಾಸದ ಕೋಣೆಯ ತುಂಬಾ ಪುಸ್ತಕಗಳೇ ತುಂಬಿದ್ದವು. ಟಿಪ್ಪು ಇನ್ನೂ ಪುಸ್ತಕಗಳು ಬೇಕೆನ್ನುವುದಾದರೆ ಹೈದರ್ ಬೇಡವೆನ್ನಲಾರರು.
ಹೈದರ್ ರಾಜ್ಯದಲ್ಲಿರುವ ಎಲ್ಲಾ ಪುಸ್ತಕಗಳನ್ನು ಖರೀದಿಸಿ ಟಿಪ್ಪುವಿಗೆ ಕೊಡಲು ಪ್ರಧಾನಿ ಪೂರ್ಣಯ್ಯನಿಗೆ ಆಜ್ಞೆ ಮಾಡಿದರು. ಟಿಪ್ಪು ತನ್ನ ಮನಸ್ಸಿನಲ್ಲಿರುವ ದೊಡ್ಡ ಯೋಜನೆಯನ್ನು ಹೇಳಿದರು.

ಟಿಪ್ಪು ಸುಲ್ತಾನ್, ನಾನು ಎಲ್ಲಾ ಸಂಸ್ಕೃತಿಗಳ, ಎಲ್ಲಾ ರಾಷ್ಟ್ರಗಳ ಪುಸ್ತಕಗಳನ್ನು ಸಂಗ್ರಹಿಸಬೇಕೆಂದಿದ್ದೇನೆ ಎಂದು ತಂದೆಯ ಬಳಿ ಹೇಳಿದ್ದರು. ಆಗ ನಿನ್ನ ಕುರಿತೂ ಮುಂದೊಂದು ದಿನ ಜನರು ಓದಬಹುದು ಎಂದು ಹೈದರ್ ಭವಿಷ್ಯ ನುಡಿದಿದ್ದರು. ಜೊತೆಗೆ ಬೇರೆ ದೇಶಗಳ ಪುಸ್ತಕಗಳು ಬೇರೆ ಭಾಷೆಯಲ್ಲಿರುತ್ತವಲ್ಲವೇ ಎಂದು ಹೈದರ್ ಪ್ರಶ್ನಿಸಿದರು. ಅವುಗಳನ್ನು ಭಾಷಾಂತರ ಮಾಡಿಸಬೇಕು ಎಂದು ಟಿಪ್ಪು ಹೇಳಿದರು.

ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ವಿಧಾನ ಪರಿಷತ್‌ ಬಿಜೆಪಿ ಸದಸ್ಯ

ಟಿಪ್ಪುವಿಗೆ ಪರ್ಷಿಯನ್ ಭಾಷೆ ತುಂಬಾ ಚೆನ್ನಾಗಿ ಗೊತ್ತಿತ್ತು. ಫ್ರೆಂಚ್ ಮತ್ತು ಇಂಗ್ಲಿಷ್ ಭಾಷೆಗಳನ್ನೂ ಟಿಪ್ಪು ಅಭ್ಯಾಸ ಮಾಡಿದ್ದರಾದರೂ ಅವುಗಳ ಮೇಲೆ ಹಿಡಿತ ಸಾಧಿಸಲಾಗಿರಲಿಲ್ಲ. ಟಿಪ್ಪುವಿಗೆ ಕನ್ನಡ, ಹಿಂದಿ ಮತ್ತು ಉರ್ದುವಲ್ಲದೇ ಅಲ್ಪ ಸ್ವಲ್ಪ ಮಲಯಾಳಂ ಮತ್ತು ತಮಿಳು ಗೊತ್ತಿತ್ತು.

ದಿವಾನ್ ಪೂರ್ಣಯ್ಯನವರ ಉಸ್ತುವಾರಿಯಲ್ಲಿ ಹೈದರ್ ಅಲಿಯ ಆಜ್ಞೆ ಮೇರೆಗೆ ಟಿಪ್ಪುವಿಗಾಗಿ ಸ್ಥಾಪಿಸಿದ ಗ್ರಂಥಾಲಯಕ್ಕೆ ನೂರುಲ್ ಅಮೀನ್ ಎಂಬವನನ್ನು ಮುಖ್ಯ ಗ್ರಂಥಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಅವರ ಸಹಾಯಕ ಗ್ರಂಥಾಧಿಕಾರಿಗಳು, ಪುಸ್ತಕ ಪಟ್ಟಿ ತಯಾರಕರು, ಸಂಶೋಧನಾ ಸಹಾಯಕರು, ಪರಿಶೀಲಕರು ಮುಂತಾದ ಹುದ್ದೆಗಳಿಗೆ ದೇಶ ವಿದೇಶಗಳ ವಿಷಯ ತಜ್ಞರನ್ನು ನೇಮಿಸಲಾಗಿತ್ತು. ಫ್ರೆಂಚ್, ಜರ್ಮನ್, ಇಂಗ್ಲಿಷ್, ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳ ಅನುವಾದಕರನ್ನೂ ನೇಮಿಸಲಾಗಿತ್ತು.

ಕೇಂದ್ರ ಗ್ರಂಥ ಭಂಡಾರವಲ್ಲದೇ ರಾಜ್ಯದ ವಿವಿಧೆಡೆ ಚಿಕ್ಕ ಪುಸ್ತಕ ಭಂಡಾರಗಳನ್ನೂ ಟಿಪ್ಪು ಸ್ಥಾಪಿಸಿದ್ದರು. ಓದುವುದು ಉಸಿರಾಡುವಷ್ಟೇ ಸುಲಭವಾಗಿರಬೇಕು ಎಂದು ಟಿಪ್ಪು ಪ್ರತಿಪಾದಿಸುತ್ತಿದ್ದರು. ಆ ಕಾಲದಲ್ಲೇ ಗ್ರಂಥ ಭಂಡಾರಗಳಿಗೆ ಹೋಗಿ ಓದಲು ಬಾಲಕ-ಬಾಲಕಿಯರಿಗೆ ಪ್ರೋತ್ಸಾಹ ನೀಡಬೇಕೆಂದು ಟಿಪ್ಪು ಆದೇಶಿಸಿದ್ದರು.
ಟಿಪ್ಪುವಿನ ಗ್ರಂಥಾಲಯದಲ್ಲಿ ಖಗೋಳ ಶಾಸ್ತ್ರ, ವೈದ್ಯಶಾಸ್ತ್ರ, ಕಲೆ, ತತ್ವಶಾಸ್ತ್ರ, ತಸವ್ವುಫ್ (ಸೂಫಿ ತತ್ವಜ್ಞಾನದ ಗ್ರಂಥಗಳು), ಆಧ್ಯಾತ, ಕಾನೂನು, ಖುರ್‌ಆನ್ ವ್ಯಾಖ್ಯಾನ ಗ್ರಂಥಗಳೆಲ್ಲಾ ಇದ್ದವು. ಕನ್ನಡ, ಉರ್ದು, ಪರ್ಶ್ಯನ್, ಫ್ರೆಂಚ್, ತುರ್ಕಿ, ದಖನಿ ಜರ್ಮನ್, ಇಂಗ್ಲೀಷ್, ಸಂಸ್ಕೃತ, ಅರಬಿಕ್ ಹೀಗೆ ಜಗತ್ತಿನ ಹಲವು ಭಾಷೆಗಳ ಗ್ರಂಥಗಳು ಗ್ರಂಥಾಲಯದಲ್ಲಿದ್ದವು.

ಟಿಪ್ಪು ತನ್ನ ಹದಿನೇಳು ವರ್ಷಗಳ ಆಡಳಿತಾವಧಿಯಲ್ಲಿ ನಲ್ವತ್ತೈದು ಗ್ರಂಥಗಳನ್ನು ಬರೆಸಿದ್ದರು. ಉರ್ದು, ತುರ್ಕಿ, ಪರ್ಶ್ಯನ್, ಅರೆಬಿಕ್, ದಖನಿ ಭಾಷೆಗಳ ನೂರ ತೊಂಬತ್ತು ಹಸ್ತಪ್ರತಿಗಳಿದ್ದವು. ಇತರೆಲ್ಲಾ ಭಾಷೆಗಳ ಎರಡು ಸಾವಿರಕ್ಕೂ ಮಿಕ್ಕಿದ ಗ್ರಂಥಗಳು ಟಿಪ್ಪುವಿನ ಗ್ರಂಥಾಲಯದಲ್ಲಿದ್ದವು.

ಟಿಪ್ಪುವಿನ ಗ್ರಂಥ ಭಂಡಾರಕ್ಕೆ ಪುಸ್ತಕಗಳನ್ನು ಆಯ್ಕೆ ಮಾಡಲು ವಿದ್ವಾಂಸರ ಸಲಹೆಗಳನ್ನು ಆಗಾಗ ಕೇಳಲಾಗುತ್ತಿತ್ತು. ಅಂತಹ ವಿದ್ವಾಂಸರಲ್ಲಿ ಬಹುಮುಖ ಪ್ರತಿಭೆಯ ಫ್ರೆಂಚ್ ವಿದ್ವಾಂಸ ಫಿಯರಿ ಕೆರನ್ ಡ ಬ್ಯೂಮಾರ್ಕೆಸ್ ಕೂಡಾ ಒಬ್ಬನಾಗಿದ್ದ. ಆತ ಸುಪ್ರಸಿದ್ಧ ಬಾರ್ಬರ್ ಆಫ್ ಸೆವಿಲೆ ಹಾಗೂ ಫಿಗಾರೋ ಎಂಬ ಗ್ರಂಥಗಳನ್ನು ಬರೆದಿದ್ದ. ಆತ ಫ್ರೆಂಚ್ ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತು ತತ್ವಶಾಸ್ತ್ರಗಳ ಕುರಿತ ಶ್ರೇಷ್ಠ ಪುಸ್ತಕಗಳು ಟಿಪ್ಪುವಿನ ಗ್ರಂಥ ಭಂಡಾರ ಸೇರಲು ಕಾರಣಕರ್ತನಾಗಿದ್ದ.

ಬ್ಯೂಮಾರ್ಕೆಸ್ ಸೂಚಿಸಿದ ಪುಸ್ತಕಗಳಲ್ಲಿ ಟಿಪ್ಪುವಿನ ಮೇಲೆ ಅತ್ಯಂತ ಪ್ರಭಾವ ಬೀರಿದ ಗ್ರಂಥ ಥಾಮಸ್ ಜೆಪರ್ಸನ್ ಬರೆದಿದ್ದ ಅಮೆರಿಕಾ ಸ್ವಾತಂತ್ರ್ಯ ಘೋಷಣೆ. ಅದು ಮಾನವ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಕುರಿತ ಶ್ರೇಷ್ಠ ಕೃತಿಯಾಗಿತ್ತು. ಟಿಪ್ಪು ಅದನ್ನು ಆಗಾಗ ಓದುತ್ತಿದ್ದರು. ಅದು ಟಿಪ್ಪುವಿನ ಮನ ಕಲಕಿತ್ತು. ಅದು ಬ್ರಿಟಿಷರ ವಿರುದ್ಧದ ಅವರ ಹೋರಾಟದ ಕೆಚ್ಚನ್ನು ಇಮ್ಮಡಿಗೊಳಿಸಿತ್ತು.

ಇದನ್ನೂ ಓದಿ:ಟಿಪ್ಪು ಈ ದೇಶದ ಇತಿಹಾಸದ ಭಾಗ, ಪಠ್ಯದಿಂದ ಕೈಬಿಡುವುದು ಸರಿಯಲ್ಲ: ಡಿಕೆಶಿ

ಅಮೆರಿಕಾ ಸ್ವಾತಂತ್ರ್ಯ ಘೋಷಣೆ ಪುಸ್ತಕದ ಒಂದು ಅಂಶವು ಟಿಪ್ಪುವಿನ ವ್ಯಕ್ತಿತ್ವದ ಮೇಲೆಯೂ ಅಪಾರ ಪ್ರಭಾವ ಬೀರಿದ್ದನ್ನು ನಾವು ಟಿಪ್ಪುವಿನ ಮಾನವ ಹಕ್ಕುಗಳ ಪರ ಮತ್ತು ಮತೀಯ ಸೌಹಾರ್ದತೆಯ ಕಾನೂನಿನಲ್ಲಿ ಕಾಣಲು ಸಾಧ್ಯ.

ಟಿಪ್ಪುವಿನ ಮೇಲೆ ಅಪಾರ ಪ್ರಭಾವ ಬೀರಿದ ಥಾಮಸ್ ಜೆಫರ್ಸನ್ ಅವರ ಅಮೆರಿಕಾ ಸ್ವಾತಂತ್ರ್ಯ ಘೋಷಣೆ ಗ್ರಂಥದ ಆ ಪ್ಯಾರಾ ಇಂತಿದೆ. “ನಾವು ಈ ಸ್ವಯಂ ವೇದ್ಯ ಸತ್ಯಗಳನ್ನು ಎತ್ತಿ ಹಿಡಿಯುತ್ತೇವೆ. ಎಲ್ಲಾ ಮಾನವರು ಸಮಾನರಾಗಿಯೇ ಸೃಷ್ಟಿಯಾದವರು. ಅವರ ಸೃಷ್ಟಿಕರ್ತ ಅವರಿಗೆ ಅವರಿಂದ ಬೇರ್ಪಡಿಸಲಾಗದಂತಹ ಹಕ್ಕುಗಳನ್ನು ಕೊಟ್ಟಿದ್ದಾನೆ. ಆ ಹಕ್ಕುಗಳಲ್ಲಿ ಜೀವನ, ಸ್ವಾತಂತ್ರ್ಯ ಮತ್ತು ಸಂತೋಷದ ಅನ್ವೇಷಣೆಗಳೂ ಸೇರಿವೆ. ಈ ಹಕ್ಕುಗಳ ರಕ್ಷಣೆಗಾಗಿ ಪ್ರಜೆಗಳು ಸರ್ಕಾರವನ್ನು ರಚಿಸಿಕೊಳ್ಳುತ್ತಾರೆ. ಸರ್ಕಾರಗಳಿಗೆ ನ್ಯಾಯಬದ್ಧ ಅಧಿಕಾರ ದೊರಕುವುದು ಅವುಗಳ ಪ್ರಜೆಗಳ ಒಪ್ಪಿಗೆಯಿಂದಾಗಿದೆ. ಯಾವ ಸರ್ಕಾರವಾದರೂ ಈ ಉದ್ದೇಶಗಳಿಗೆ ಭಂಗ ತಂದರೆ ಆ ಸರ್ಕಾರವನ್ನು ಮಾರ್ಪಡಿಸುವ ಅಥವಾ ತೆಗೆದು ಹಾಕುವ ಅಧಿಕಾರ ಆ ಪ್ರಜೆಗಳಿಗೆ ಇದೆ. ಹಾಗೂ ತಮ್ಮ ಸುರಕ್ಷತೆ ಮತ್ತು ಸಂತೋಷಗಳನ್ನು ಕಾಪಾಡಬಹುದಾದಂತಹ ಸಿದ್ಧಾಂತಗಳ ತಳಹದಿಯ ಮೇಲೆ ಅಧಿಕಾರ ಬಳಸಿ ಕಾರ್ಯನಿರ್ವಹಿಸುವಂತಹ ಹೊಸ ಸರ್ಕಾರವನ್ನು ಅವರು ಸ್ಥಾಪಿಸಿಕೊಳ್ಳಬಹುದು”.

ಹಾಗೆಯೇ ದೇಶ ವಿದೇಶಗಳ ಅತ್ಯಂತ ಮೌಲ್ಯಯುತ ಪುಸ್ತಕಗಳನ್ನು ಟಿಪ್ಪು ಸಂಗ್ರಹಿಸಿದ್ದರು. ಅವರು ಅದೆಂತಹ ಪುಸ್ತಕ ಪ್ರೇಮಿಯಾಗಿದ್ದರೆಂದರೆ ಇವೇ ನನ್ನ ಸಂಪತ್ತು. ಈ ಸಂಪತ್ತು ಬೆಳ್ಳಿ-ಬಂಗಾರಗಳಿಗಿಂತಲೂ ಮೌಲ್ಯಯುತವಾದವುಗಳು ಮತ್ತು ಹೆಚ್ಚು ಶಾಶ್ವತವಾದವುಗಳು. ಇವುಗಳನ್ನು ಯಾರೂ ಕದಿಯಲಾರರು ಮತ್ತು ನಾಶಪಡಿಸಲಾರರು ಎಂದು ಮೈಸೂರು ಹುಲಿ ಹೇಳುತ್ತಿದ್ದರು.

ಆದರೆ ಅವರ ಲೆಕ್ಕಾಚಾರ ತಪ್ಪಾಗಿತ್ತು. ಬ್ರಿಟಿಷರು ಶ್ರೀರಂಗಪಟ್ಟಣವನ್ನು ಕೈ ವಶಪಡಿಸಿಕೊಂಡಾಗ ಮೊದಲು ದಾಳಿಗೀಡಾದವುಗಳಲ್ಲಿ ಟಿಪ್ಪುವಿನ ಗ್ರಂಥ ಭಂಡಾರವೂ ಒಂದಾಗಿತ್ತು. ಅವರು ಆ ಬಳಿಕ ಅಂದರೆ 1800ರಲ್ಲಿ ಟಿಪ್ಪುವಿನ ಗ್ರಂಥಾಲಯದಲ್ಲಿದ್ದ ಗ್ರಂಥಗಳನ್ನು ಕೊಲ್ಕತ್ತಾಗೆ ಸಾಗಿಸಿ, ಅಲ್ಲಿಂದ ಇಂಗ್ಲೆಂಡಿಗೆ ಕೊಂಡೊಯ್ದರು.

ಉರ್ದು ಭಾಷೆಯಲ್ಲಿ ಮೊಟ್ಟ ಮೊದಲು ಪತ್ರಿಕೆಯೊಂದನ್ನು ಹೊರತಂದವರು ಮೈಸೂರು ಹುಲಿ ಟಿಪ್ಪು ಸುಲ್ತಾನ್. ಅದೊಂದು ವಾರಪತ್ರಿಕೆಯಾಗಿತ್ತು. ಅದು ಟಿಪ್ಪುವಿನ ಸೇನಾ ಚಟುವಟಿಕೆಗಳ ಮುಖಾವಾಣಿಯಾಗಿತ್ತು. ಆ ವಾರಪತ್ರಿಕೆಯನ್ನು ಒಂದು ದೊಡ್ಡ ಹಾಳೆಯಲ್ಲಿ ಮುದ್ರಿಸಲಾಗುತ್ತಿತ್ತು. ಟಿಪ್ಪುವಿನ ಪತನದ ನಂತರ ಆ ಪತ್ರಿಕೆ ನಿಂತು ಹೋಯಿತು ಮತ್ತು ಬ್ರಿಟಿಷರು ಟಿಪ್ಪುವಿನ ಮುದ್ರಣಾಲಯವನ್ನು ನಾಶಪಡಿಸಿದರು.


ಇದನ್ನೂ ಓದಿ: ಆರ್‌.ಆರ್‌.ನಗರ- ಮೊದಲ ಹಂತದ ಎಣಿಕೆಯಲ್ಲಿ ಮುನಿರತ್ನಗೆ 3000 ಮತಗಳ ಮುನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...