Homeಕರ್ನಾಟಕಇತಿಹಾಸ ಮರೆತ 'ಟಿಪ್ಪುವಿನ ಹಿಂದೂ ವೀರಸಂಗಾತಿಗಳು'

ಇತಿಹಾಸ ಮರೆತ ‘ಟಿಪ್ಪುವಿನ ಹಿಂದೂ ವೀರಸಂಗಾತಿಗಳು’

- Advertisement -
- Advertisement -
| ಇಸ್ಮತ್ ಪಜೀರ್ |
ಮೇ 04, 1799 ರಂದು ಕನ್ನಡ ನಾಡಿನ ಅಪ್ರತಿಮ ವೀರ, ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಹುತಾತ್ಮನಾದ ದಿನ.

ಟಿಪ್ಪು ಸುಲ್ತಾನನ ಕೊನೆಯ ಯುದ್ಧ ಅರ್ಥಾತ್ ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದ ಇಂಚಿಂಚೂ ಬಿಡದೆ ಬ್ರಿಟಿಷ್ ಮತ್ತು ಫ್ರೆಂಚ್ ಇತಿಹಾಸಕಾರರು ಪ್ರತಿಯೊಂದನ್ನೂ ದಾಖಲಿಸಿದ್ದಾರೆ. ಟಿಪ್ಪುವಿನ ಬಗ್ಗೆ ಅತ್ಯಂತ ಮಹತ್ವದ ಚಾರಿತ್ರಿಕ ಕಾದಂಬರಿ ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್ ಬರೆದ ಭಗವಾನ್ ಶ್ಯಾಮದಾಸ್ ಗಿದ್ವಾನಿ ಅದಕ್ಕಾಗಿ ಅತೀ ಹೆಚ್ಚು ಅಧ್ಯಯನ ನಡೆಸಿದ್ದು ಫ್ರೆಂಚ್ ಮತ್ತು ಬ್ರಿಟಿಷ್ ಇತಿಹಾಸ ಗ್ರಂಥಗಳನ್ನಾಗಿದೆ. ಗಿದ್ವಾನಿ ಬರೆದಿದ್ದು ಒಂದು ಚಾರಿತ್ರಿಕ ಕಾದಂಬರಿಯಾದರೂ  ಅವರು ಅದಕ್ಕೆ ಮಸಾಲೆ ತುಂಬಿಸುವ ಕೆಲಸ ಮಾಡಿಲ್ಲ ಎಂಬುವುದಕ್ಕೆ ಅವರು ಬಳಸಿದ ದಾಖಲೆಗಳೇ ಸಾಕ್ಷ್ಯ ಒದಗಿಸುತ್ತವೆ.

ನಮ್ಮಲ್ಲಿ ಒಂದೋ ಟಿಪ್ಪುವನ್ನು ಅತಿಯಾಗಿ ವೈಭವೀಕರಿಸಲಾಗುತ್ತದೆ ಅಥವಾ ಅತಿಯಾಗಿ ದೂಷಿಸಲಾಗುತ್ತದೆ. ಇವೆರಡರ ಮಧ್ಯೆ ಹುದುಗಿರುವ ಸತ್ಯಗಳು ಅನೇಕ ಸಂದರ್ಭಗಳಲ್ಲಿ ಮಸುಕಾಗಿಬಿಡುವ ಸಾಧ್ಯತೆಗಳಿವೆ. ನಾವು ಟಿಪ್ಪುವಿಗೆ ದ್ರೋಹ ಬಗೆದ ಪೂರ್ಣಯ್ಯ ಮತ್ತು ಮೀರ್ ಸಾದಿಖರನ್ನು ಋಣಾತ್ಮಕ ಕಾರಣಗಳಿಗಾಗಿಯಾದರೂ ಆಗಾಗ ನೆನಪಿಸಿಕೊಳ್ಳುತ್ತೇವೆ‌ ಆದರೆ ಟಿಪ್ಪುವಿಗಾಗಿ ಮತ್ತು ನಾಡಿಗಾಗಿ ಹೋರಾಡಿ ವೀರಮರಣವನ್ನಪ್ಪಿದ  ಅದೆಷ್ಟೋ ಮಂದಿಗಳ ಹೆಸರು ಇತಿಹಾಸ ಗರ್ಭದಲ್ಲಿ ಹೂತು ಹೋಗಿವೆ. ಹಾಗೆ ಹುತಾತ್ಮರಾದ ಇಬ್ಬರು ವೀರಯೋಧರ ಕೊನೆಯ ಕ್ಷಣದ ಹೋರಾಟದ ಝಲಕ್ ಗಳನ್ನು ಇಲ್ಲಿ ದಾಖಲಿಸುತ್ತೇನೆ.

ಮೀರ್ ಸಾದಿಖ್ ಮತ್ತು ಆತನ ರಾಜದ್ರೋಹಿ ಬಂಟರು ಮೈಸೂರಿನ ಸೈನಿಕರಿಗೆ ” ಸುಲ್ತಾನರು ಬ್ರಿಟಿಷರೊಂದಿಗೆ ಸಂಧಾನ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ” ಎಂದು ಸುಳ್ಳು ಹೇಳಿ ಅವರನ್ನು ಯುದ್ಧದಿಂದ ಹಿಂದೆ ಸರಿಸಿದರು.

ಅದಾಗಲೇ ಟಿಪ್ಪುವಿಗೆ ಮೀರ್ ಸಾದಿಖನ ರಾಜದ್ರೋಹದ ವರ್ತಮಾನ ಸಿಕ್ಕಿತ್ತು. ಮೀರ್ ಸಾದಿಖ ಬ್ರಿಟೀಷರು ಟಿಪ್ಪುವಿನ  ಕೋಟೆಯೊಳಗಡೆ ಸುಲಭವಾಗಿ ನುಸುಳಿ ಬರಲು ಅನುವಾಗುವಂತೆ ಮಾಡಿಕೊಟ್ಟಿದ್ದ.(ಕೋಟೆಯೆಂದರೆ ಒಂದು ‍ಚಿಕ್ಕ ಆವರಣ ಗೋಡೆಯಲ್ಲ, ಅದು ಬೃಹತ್ ವಿಸ್ತೀರ್ಣದ ಆವರಣ ಕೋಟೆ) ಬ್ರಿಟೀಷರು ಕೋಟೆಯೊಳಗೆ ನುಗ್ಗಿ ಬರುವ ಹೊತ್ತಿಗೆ ಟಿಪ್ಪುವಿನ ಸನಿಹ ಇದ್ದದ್ದು ಆತನ ವೈದ್ಯ ರಾಜಾ ಖಾನ್ ಮತ್ತು ಓರ್ವ ಯುವ ಯೋಧ ಮಾತ್ರ. ಇದ್ದಕ್ಕಿದ್ದಂತೆ ಟಿಪ್ಪುವಿನ ಸನಿಹಕ್ಕೆ ತಲಪಿದ ಕೆಲವು ಬ್ರಿಟಿಷ್ ಯೋಧರು ಟಿಪ್ಪುವನ್ನು ನೇರವಾಗಿ ಕೊಚ್ಚಿ ಕೊಲ್ಲಬಯಸಿದ್ದರು. ಅವರು ಇನ್ನೇನು ಟಿಪ್ಪುವಿನ ಮೇಲೆರಗಬೇಕು ಎನ್ನುವಷ್ಟರಲ್ಲಿ ಮೈಸೂರಿನ ಆ ವೀರ ಯುವ ಯೋಧ ಮಿಂಚಿನ ವೇಗದಲ್ಲಿ ತಲವಾರು ಬೀಸಿ ಇಬ್ಬರು ಬ್ರಿಟಿಷ್ ಸೈನಿಕರ ರುಂಡ ಚೆಂಡಾಡಿಯೇ ಬಿಟ್ಟ. ಅಲ್ಲಿಗೆ ಬಂದಿದ್ದ ಉಳಿದ ಬ್ರಿಟಿಷ್ ಸೈನಿಕರು ಆ ಇಬ್ಬರನ್ನು ಅಲ್ಲೇ ಬಿಟ್ಟು ಓಟಕಿತ್ತರು. ಶಹಭಾಸ್ ಮಗನೇ, ಇಂದು ನನ್ನ ಇಡೀ ಸೈನ್ಯವೆಂದರೆ ನೀನೇ.. ನಿನ್ನ ಹೆಸರೇನು ಮಗನೇ ಎಂದು ಟಿಪ್ಪು ಪ್ರಶ್ನಿಸಿದ. ಅಷ್ಟರಲ್ಲಿ ದೂರದಿಂದ ಹಾರಿ ಬಂದ ಗುಂಡೊಂದು ಆ ವೀರಯೋಧನ ಎದೆ ಸೀಳಿತು. ಟಿಪ್ಪು ಉರುಳಿ ಬಿದ್ದ ಯೋಧನನ್ನು ತಬ್ಬಿಕೊಂಡ. ಆತ ಟಿಪ್ಪುವಿನ ಬಾಹುಗಳಲ್ಲೇ ಹುತಾತ್ಮನಾದ. ಆ ವೀರಯೋಧ ಟಿಪ್ಪುವಿಗೆ ದ್ರೋಹ ಬಗೆದಿದ್ದ ಅಂಚೆಮಂತ್ರಿ ಶ್ಯಾಮಯ್ಯನ ಮಗ.

ಮೀರ್ ಸಾದಿಖನ ಕೊರಳ್ ಕೊಯ್ದ ವೀರಯೋಧ ಶೇಖರ:
ಕೋಟೆಯ ತುಂಬಾ ಹಾಲಾಹಲವೆದ್ದಿತ್ತು. ಒಂದೆಡೆ ಯುದ್ಧದಲ್ಲಿ ಗಾಯಗೊಂಡ ವೀರಯೋಧ ಶೇಖರ ಮರಣಶಯ್ಯೆಯಲ್ಲಿದ್ದ. ಅಲ್ಲಿಗೆ ದ್ರೋಹಿ ಮೀರ್ ಸಾದಿಖ ದ್ರೋಹಿಗಳು ಮತ್ತು ಬ್ರಿಟಿಷ್ ಸೈನಿಕರೊಂದಿಗೆ ಬಂದ. ಯೋಧ ಶೇಖರನ್ನುದ್ದೇಶಿಸಿ ಮೀರ್ ಸಾದಿಖ ಪ್ರಶ್ನಿಸಿದ “ಸುಲ್ತಾನರೆಲ್ಲಿ”?
ಆತ ನೆಲದಲ್ಲಿ ಬಿದ್ದಲ್ಲಿಂದಲೇ ಕೈ ಸನ್ನೆಮಾಡಿ ಮೀರ್ ಸಾದಿಕನನ್ನು ಬಳಿ ಕರೆದ. ಶೇಖರ್ ಸುಲ್ತಾನರ ಸಂದೇಶ ನನ್ನ ಜೇಬಲ್ಲಿದೆ ತೆಗೆಯಿರಿ ಎಂದ. ಮೀರ್ ಸಾಧಿಕ್ ಶೇಖರನ ಜೇಬಿಗೆ ಕೈ ಹಾಕಲು ಬಾಗಿದ. ಆತ ತಡಮಾಡದೇ ಕೈಯಲ್ಲಿ ಬಿಗಿಯಾಗಿ ಹಿಡಿದಿದ್ದ ಖಡ್ಗದಿಂದ ದ್ರೋಹಿ ಮೀರ್ ಸಾದಿಖನ ಕೊರಳು ಕೊಯ್ದೇ ಬಿಟ್ಟ. ಮೀರ್ ಸಾದಿಕ್ ನಾಯಿಯಂತೆ ಸತ್ತು ಬಿದ್ದರೆ ವೀರಯೋಧ ಶೇಖರ್ ನೆಮ್ಮದಿಯಿಂದ ಕೊನೆಯುಸಿರೆಳೆದ.
ಇಂತಹ ಇನ್ನೂ ಅನೇಕ ಹಿಂದೂ ಯೋಧರು  ಕೊನೆಯುಸಿರಿನವರೆಗೂ ಹೋರಾಡಿ ರಣರಂಗದಲ್ಲಿ ವೀರಮರಣವನ್ನಪ್ಪಿದ್ದಾರೆ. ಸಂಘ ಪರಿವಾರ ಅಪಪ್ರಚಾರ ಮಾಡುತ್ತಿರುವಂತೆ ಆತ ‘ಹಿಂದೂ ವಿರೋಧಿ, ಮತಾಂಧ, ದೇವಾಲಯ ಭಂಜಕ, ಮತಾಂತರಿ ಟಿಪ್ಪು’ವೇ ಆಗಿದ್ದರೆ, ಅದು ಸಾಧ್ಯವಿರುತ್ತಿರಲಿಲ್ಲ. ಇಂತಹ ವೀರಯೋಧರ ಸಾಹಸಗಳು ಇತಿಹಾಸದ  ಪುಟಗಳಿಂದ ಮಾಸಿಹೋಗಿರುವುದು ಇತಿಹಾಸದ ಕ್ರೂರ ವ್ಯಂಗ್ಯವೇ ಸರಿ.

ಆಧಾರ : ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...