Homeಮುಖಪುಟ21 ದಿನದ ಲಾಕ್‌ಡೌನ್‌ ಜನ ಹೀಗೆಂದರೆ, ಸತತ 6 ತಿಂಗಳ ಕಾಶ್ಮೀರಿಗಳ ಕಥೆ ಏನಾಗಿರಬೇಡ?

21 ದಿನದ ಲಾಕ್‌ಡೌನ್‌ ಜನ ಹೀಗೆಂದರೆ, ಸತತ 6 ತಿಂಗಳ ಕಾಶ್ಮೀರಿಗಳ ಕಥೆ ಏನಾಗಿರಬೇಡ?

“ಲಾಕ್‌ಡೌನ್‌ ” ಭಾಗಶಃ ಈ ಪದವನ್ನು ಈ ಹಿಂದೆ ಭಾರತೀಯರು ಎಂದಿಗೂ ಕೇಳಿರಲಿಕ್ಕಿಲ್ಲವೇನೋ? ಆದರೆ ಕಳೆದ 10 ದಿನಗಳಿಂದ ಈ ಪದವನ್ನು ಕೇಳುವುದಿರಲಿ, ಲಾಕ್‌ಡೌನ್‌ ನೀಡುತ್ತಿರುವ ಎಫೆಕ್ಟ್‌ಗೆ ಅಕ್ಷರಶಃ ನಲುಗಿ ಹೋಗಿದ್ದಾರೆ. ನಿನ್ನೆ ಮೊನ್ನೆವರೆಗೆ ಆಫೀಸು, ಕೆಲಸ, ಮೋಜು ಮಸ್ತಿ ಎಂದು ಕೈಲಿ ಬೈಕ್-ಕಾರು ಹಿಡಿದು ಜಾಲಿ ರೌಂಡ್ ಹೊಡೆಯುತ್ತಿದ್ದವರು ಇಂದು ಮೈ ಮುದುಡಿ ಮನೆಯಲ್ಲೇ ಕೂರುವಂತಾಗಿದೆ.

- Advertisement -
- Advertisement -

ಮನೆಯಲ್ಲಿ ಇದ್ದು ಬೇಸರವಾಗಿ ರೌಂಡ್ ಹೊಡೆಯಲು ಹೊರ ಬಂದವರಿಗೆ ಪೊಲೀಸರು ಬೀಸುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 176. ಆದರೆ ಕಳೆದ 10 ದಿನದ ಅವಧಿಯಲ್ಲಿ ಪೊಲೀಸರ ಲಾಠಿ ರುಚಿ ಕಂಡವರ ಸಂಖ್ಯೆ 5600 ನ್ನೂ ಮೀರುತ್ತಿದೆ. ಅಲ್ಲದೆ ಸಿಎಂ ಸ್ವಕ್ಷೇತ್ರ ಶೀಕಾರಿಪುರದಲ್ಲಿ ಪೊಲೀಸರ ಏಟು ತಾಳಲಾರದೆ ಸುರೇಶ್ ನಾಯ್ಕ ಎಂಬ ಓರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.

130 ಕೋಟಿ ಜನ ಸಂಖ್ಯೆ ಹೊಂದಿರುವ ಭಾರತದಂತಹ ದೇಶದಲ್ಲಿ ದಿಢೀರನೆ ಲಾಕ್ಡೌನ್ ಘೋಷಣೆ ಮಾಡಿದರೆ ಜನ ಹೇಗೆ ನಲುಗಬಹುದು ಎಂಬುದು ಭಾರತೀಯರಿಗೆ ಈಗ  ಅರ್ಥವಾಗಿರಬೇಕು. ಆದರೆ ಕಳೆದ 70 ವರ್ಷಗಳಲ್ಲಿ ಕಾಶ್ಮೀರದಲ್ಲಿ ಎಷ್ಟು ಬಾರಿ ಲಾಕ್‌ಡೌನ್‌ ಮಾಡಲಾಗಿದೆ. ಕಳೆದ ವರ್ಷ ಕಲಂ 370 ರದ್ದು ಪಡಿಸುವ ಸಂದರ್ಭದಲ್ಲಿ ಕಣಿವೆ ರಾಜ್ಯವನ್ನು ಸತತ 6 ತಿಂಗಳ ಕಾಲ ಲಾಕ್‌ಡೌನ್‌ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಅಲ್ಲಿನ ಜನ ಹೇಗೆ ಕಷ್ಟಪಟ್ಟಿರಬೇಕು? ಜನ ಜೀವನ ಎಷ್ಟರ ಮಟ್ಟಿಗೆ ನಲುಗಿರಬೇಕು? ಆ 6 ತಿಂಗಳ ಅವಧಿಯಲ್ಲಿ ಅಲ್ಲಿನ ವ್ಯಾಪಾರ ವಹಿವಾಟು ಎಷ್ಟು ನಷ್ಟ ಅನುಭವಿಸಿರಬೇಕು? ಇದ್ಯಾವುದರ ಬಗ್ಗೆಯಾದರೂ ನಮಗೆ ಮಾಹಿತಿ ಇದೆಯಾ? ಈ ಕುರಿತು ಯೋಚಿಸುವ ಗೋಜಿಗೂ ನಾವು ಹೋಗಿರಲಿಕ್ಕಿಲ್ಲವೇನೋ? ಆದರೆ ಈಗ ಆ ಸಂದರ್ಭ ಎದುರಾಗಿದೆ. ಕಾಶ್ಮೀರದ ಆ 180 ದಿನದ ಲಾಕ್‌ಡೌನ್‌ ಎಂಬ ಕಪ್ಪು ದಿನದ ಕತೆಗಳನ್ನು ಹಾಗೂ ಅಲ್ಲಿನ ಬದುಕನ್ನು ಯೋಚಿಸಬೇಕಿದೆ.

6 ತಿಂಗಳು ಮನೆಯಲ್ಲೇ ಬಂದಿ

ಕೊರೋನಾ ಕಾರಣಕ್ಕೆ ಭಾರತದಲ್ಲಿ 21 ದಿನಗಳ ಲಾಕ್‌ಡೌನ್‌ ಘೋಷಿಸಲಾಗಿದೆ. ಈ 21 ದಿನಗಳ ಕಾಲ ನಾವು ಮನೆಯಲ್ಲಿ ಕೂರುವುದೇ ನಮಗೆ ಕಷ್ಟವಾಗಿದೆ. ಆದರೆ, ಕಾಶ್ಮೀರಕ್ಕೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿಶೇಷ ಸ್ಥಾನಮಾನ ಕಲಂ 370ನ್ನು ರದ್ದುಗೊಳಿಸಿದ ನಂತರ ಕಳೆದ ಆಗಸ್ಟ್ 05ರ ನಂತರ 6 ತಿಂಗಳು ಕಣಿವೆ ರಾಜ್ಯದ ಜನ ಮನೆಯಲ್ಲೇ ಕಳೆಯಬೇಕಾದ ಪರಿಸ್ಥಿತಿ ಎದುರಾಯಿತು.

ಅಗತ್ಯ ವಸ್ತುಗಳ ಖರೀದಿ ಹೊರತಾಗಿ ಬೇರೆ ಯಾವುದೇ ವಿಚಾರಕ್ಕೆ ಅವರು ಮನೆಯಿಂದ ಹೊರ ಬರುವಂತಿರಲಿಲ್ಲ. ರಾಜ್ಯದಲ್ಲಾದರೂ ಲಾಕ್‌ಡೌನ್‌ ಪಾಲನೆಗೆ ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ, ಕಾಶ್ಮೀರದಲ್ಲಿ ಮಿಲಿಟರಿಯನ್ನೇ ನೇಮಕ ಮಾಡಲಾಗಿತ್ತು ಎಂದರೆ ಮನೆಯಿಂದ ಹೊರ ಬಂದವರಿಗೆ ಶಿಕ್ಷೆ ಹೇಗಿರುತ್ತಿತ್ತು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ.

ಕಣಿವೆ ರೈತರ ಗೋಳು ಕೇಳುವರ್ಯಾರು?

ದೇಶದಲ್ಲಿ ಯಾವುದೇ ಮೂಲೆಯಲ್ಲಿ ಓರ್ವ ರೈತ ಸಾಲದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರೆ ಅದು ರಾಷ್ಟ್ರೀಯ ಸುದ್ದಿ. ಇನ್ನು ರಾಜ್ಯದಲ್ಲಿ ಓರ್ವ ರೈತ ಸತ್ತರೆ ಆಡಳಿತ ಪಕ್ಷದ ಕಾಲೆಳೆಯಲು ಟೀಕಿಸಲು ವಿರೋಧ ಪಕ್ಷಕ್ಕೆ ಸಿಕ್ಕ ದೊಡ್ಡ ಆಯುಧ. ಇನ್ನು ಮಾಧ್ಯಮಗಳಿಗೆ ಅದು ಹಾಟ್ ಬ್ರೇಕಿಂಗ್ ನ್ಯೂಸ್.

ಆದರೆ, ಕಾಶ್ಮೀರದಲ್ಲಿ ರೈತರು ಇಲ್ಲವೇ? ಅವರಿಗೆ ಸಾಲ ಇಲ್ಲವೇ? ಅಲ್ಲಿನ ರೈತರೂ ಮನುಷ್ಯರಲ್ಲವೇ? ಕಾಶ್ಮೀರದಲ್ಲಿ ಸಾಲದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗುವ ರೈತರ ಕುರಿತು ನಾವು ಮರುಗುವುದು ಬೇಡ, ಎಂದಾದರೂ ಈ ಕುರಿತು ಕನಿಷ್ಟ ಯೋಚನೆ ಮಾಡಿದ್ದೇವೆಯೇ ಎಂದು ನಮ್ಮ ಆತ್ಮಸಾಕ್ಷಿಯನ್ನು ನಾವು ಪ್ರಶ್ನೆ ಮಾಡಿಕೊಂಡರೆ ಉತ್ತರ ದಕ್ಕುತ್ತದೆ.

ಅಸಲಿಗೆ ಕಾಶ್ಮೀರದ ಪ್ರಮುಖ ಬೆಳೆ ಸೇಬು ಮತ್ತು ಕೇಸರಿ. ಭಾರತಕ್ಕೆ ಶೇ.90 ರಷ್ಟು ಸೇಬಿನ ಹಣ್ಣು ಕಣಿವೆ ರಾಜ್ಯ ಕಾಶ್ಮೀರದಿಂದಲೇ ಲಭ್ಯವಾಗುತ್ತದೆ. ಇನ್ನು ಶೇ.100 ರಷ್ಟು ಕೇಸರಿ ಇಲ್ಲಿಂದಲೇ ಪೂರೈಕೆಯಾಗುತ್ತಿದೆ. ಕಾಶ್ಮೀರದ ಕೇಸರಿಗೆ ವಿಶ್ವದಾದ್ಯಂತ ಡಿಮ್ಯಾಂಡ್ ಇದೆ. ವಿಶ್ವದ ಕೇಸರಿ ಉತ್ಪಾದನೆಯಲ್ಲಿ ಕಾಶ್ಮೀರದ ಪಾಲು ಶೇ.07 ರಷ್ಟು. ಕಾಶ್ಮೀರದ ಸೇಬು ಸಹ ಸಾಕಷ್ಟು ಪ್ರಮಾಣದಲ್ಲಿ ವಿದೇಶಗಳಿಗೆ ರಫ್ತಾಗುತ್ತದೆ.

2019ರಲ್ಲಿ ಕೇಸರಿ ಮತ್ತು ಸೇಬಿನ ಬೆಳೆ ಕಾಶ್ಮೀರಿ ರೈತರಿಗೆ ಉತ್ತಮವಾಗಿಯೇ ಕೈಸೇರಿತ್ತು. ಆದರೆ ಈ ಬೆಳೆ ಮಾರುಕಟ್ಟೆಗೆ ಸೇರುವ ಹೊತ್ತಿಗೆ ಲಾಕ್‌ಡೌನ್‌ ಘೋಷಿಸಿಯಾಗಿತ್ತು. ಪರಿಣಾಮ ಕಾಶ್ಮೀರ ಸೇಬು ಉದ್ಯಮ ಆಗಸ್ಟ್‌ನಿಂದ ಅಕ್ಟೋಬರ್ ವರೆಗಿನ ಕೇವಲ ಎರಡು ತಿಂಗಳಿನಲ್ಲಿ ಅನುಭವಿಸಿದ ನಷ್ಟ ಬರೋಬ್ಬರಿ 12,000 ಕೋಟಿ ಎನ್ನುತ್ತಿವೆ ಆರ್ಥಿಕ ವಿಶ್ಲೇಷಣೆಗಳು.

ಅಕ್ಟೋಬರ್ ನಂತರ ಕೇಂದ್ರ ಸರ್ಕಾರವೇ ನೇರ ಸೇಬು ಕೊಳ್ಳಲು ಮುಂದಾದರೂ ಅಷ್ಟರೊಳಗಾಗಲೇ ಶೇ. 60ಕ್ಕೂ ಹೆಚ್ಚು ಸೇಬು ಕೊಳೆತು ಅನುಪಯುಕ್ತವಾಗಿ ಹೋಗಿತ್ತು. ಆಕ್ಟೋಬರ್ ನಂತರವೂ ಅಲ್ಲಿನ ರೈತನ ಪರಿಸ್ಥಿತಿ ಸುಧಾರಿಸಿರಲಿಲ್ಲ.

ಇನ್ನೂ ಕುರಿ ಸಾಕಾಣಕೆ ಮತ್ತು ಉತ್ಕೃಷ್ಟ ಉಣ್ಣೆ ತಯಾರಿಕೆ ಇಲ್ಲಿನ ಉಪ ಕಸುಬು. ವರ್ಷಕ್ಕೆ ಸಾವಿರಾರು ಕೋಟಿ ಹಣ ಸಂಚಯಿಸುವ ಮತ್ತೊಂದು ದೊಡ್ಡ ಉದ್ಯಮವೇ ಸರಿ. ಆದರೆ, ಸತತ 6 ತಿಂಗಳ ಲಾಕ್‌ಡೌನ್‌ ಇಲ್ಲಿನ ಉಣ್ಣೆ ಉದ್ಯಮವನ್ನೂ ಇನ್ನಿಲ್ಲದಂತೆ ಕಾಡಿತ್ತು, ಅತ್ತ ಪ್ರಮುಖ ಉದ್ಯಮವಾದ ಸೇಬು ಕೇಸರಿಯೂ ಕೈಕೊಟ್ಟಿತ್ತು, ಇತ್ತ ಉಪ ಕಸುಬು ಇಲ್ಲದೆ ಇಲ್ಲಿನ ರೈತ ಸಂಕಷ್ಟಕ್ಕೆ ಒಳಗಾದದ್ದು ಹೊರ ಜಗತ್ತಿಗೆ ತಿಳಿಯಲೇ ಇಲ್ಲ.

ಪ್ರವಾಸೋದ್ಯಮವೂ ಮಕಾಡೆ ಮಲಗಿತ್ತು

ಪ್ರವಾಸೋದ್ಯಮ ಕಣಿವೆ ರಾಜ್ಯದ ಪ್ರಮುಖ ಉದ್ಯಮಗಳಲ್ಲೊಂದು. ಇಲ್ಲಿನ ಜನ ಅತಿಹೆಚ್ಚು ಅವಲಂಬಿತವಾಗಿರುವುದು ಪ್ರವಾಸೋದ್ಯಮವನ್ನೆ. ಪ್ರವಾಸೋದ್ಯಮ ಈ ಭಾಗದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆಮ್ಲ ಜನಕ ಎಂದರೂ ತಪ್ಪಾಗಲಾರದು. ಪ್ರವಾಸೋದ್ಯಮವನ್ನೇ ನಂಬಿ ಇಲ್ಲಿ ಸಾವಿರಾರು ಕುಟುಂಬಗಳು ಬದುಕುತ್ತಿವೆ.

ಆದರೆ, ದಿಢೀರನೆ ಬಂದೆರಗಿದ ಲಾಕ್ಡೌನ್ ಈ ಭಾಗದಲ್ಲಿ ಪ್ರವಾಸೋದ್ಯಮವನ್ನೇ ನಂಬಿ ಬದುಕುತ್ತಿದ್ದವರ ಬದುಕನ್ನೇ ಕಸಿದಿತ್ತು. ಭಾರತದಲ್ಲೇ ಅತಿಹೆಚ್ಚು ನಿರುದ್ಯೋಗಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕಾಶ್ಮೀರವೂ ಒಂದು. ನಿರುದ್ಯೋಗದ ಜೊತೆಗೆ ಲಾಕ್‌ಡೌನ್‌‌ನಿಂದ ಪ್ರವಾಸೋದ್ಯಮವನ್ನೇ ನಂಬಿ ಬದುಕಿದ್ದವರ ಬದುಕು ಬೀದಿಗೆ ಬಂದದ್ದು ಈ ಕಾಲಾವಧಿಯಲ್ಲಿ, ಅಲ್ಲಿನ ಬಡತನ ರೇಖೆಗಿಂತ ಕೆಳಗಿದ್ದ ಶೇ.21.63 ರಷ್ಟು ಜನ ಅನುಭವಿಸಿದ ಕಷ್ಟವನ್ನು ಯಾವ ಅಂತಾರಾಷ್ಟ್ರೀಯ ಮಾಧ್ಯಮಗಳೂ ಸೆರೆ ಹಿಡಿಯಲೇ ಇಲ್ಲ.

ಲಾಕ್‌ಡೌನ್‌ ನೆಪದಲ್ಲಿ ಇಂಟರ್ನೆಟ್ ತಡೆ

ಭಾರತದಲ್ಲಿ ಇದೀಗ 21 ದಿನಗಳ ಲಾಕ್‌ಡೌನ್‌ ಘೋಷಿಸಲಾಗಿದೆ. ಲಾಕ್‌ಡೌನ್‌ ನಡುವೆಯೂ ಎಲ್ಲಾ ಜನರಿಗೆ 4ಜಿ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಜನ ಮನೆಯಲ್ಲೇ ಇದ್ದೂ ವಿಶ್ವದ ಆಗುಹೋಗುಗಳನ್ನು ತಿಳಿದುಕೊಳ್ಳಲು ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಆದರೆ ಲಾಕ್‌ಡೌನ್‌ ಸಮಯದಲ್ಲಿ ಕಾಶ್ಮೀರದಲ್ಲಿ ಇಂಟರ್ನೆಟ್ ಮತ್ತು ಟೆಲಿಫೋನ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿತ್ತು. ಪರಿಣಾಮ ಕಣಿವೆ ರಾಜ್ಯ 50 ವರ್ಷಗಳಷ್ಟು ಹಿಂದುಳಿಯುವಂತಾಗಿತ್ತು.

ಶಾಲಾ ಕಾಲೇಜುಗಳನ್ನು ಸತತ 6 ತಿಂಗಳು ಬಂದ್ ಮಾಡಲಾಗಿತ್ತು. ಮಕ್ಕಳಿಗೆ ಶಿಕ್ಷಣವೂ ದೂರ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಲಾಕ್ಡೌನ್ ತೆರವಾದ ನಂತರವೂ ಕಾಶ್ಮೀರಕ್ಕೆ ಸಮರ್ಪಕ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲಾಗಿರಲಿಲ್ಲ. ಪರಿಣಾಮ ಅಲ್ಲಿನ ಶಾಲಾ ಬಾಲಕನೊಬ್ಬ ದಯವಿಟ್ಟು ಇಂಟರ್ನೆಟ್ ಕೊಡಿ ಇಲ್ಲಿ ಶಾಲೆಯೂ ಇಲ್ಲ ಇಂಟರ್ನೆಟ್ ಸಹ ಇಲ್ಲದೆ ನಾವು ಏನನ್ನೂ ಕಲಿಯಲಾಗುತ್ತಿಲ್ಲ. ದಶಕಗಳಷ್ಟು ಹಿಂದುಳಿದಂತೆ ಭಾಸವಾಗುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದನ್ನು ಭಾಗಶಃ ಯಾರೂ ಮರೆತಿರಲು ಸಾಧ್ಯವಿಲ್ಲ.

ಕಳೆದ 70 ವರ್ಷಗಳ ಅವಧಿಯಲ್ಲಿ ಎರಡು ರಾಷ್ಟ್ರಗಳ ರಾಜಕೀಯ ಲಾಭಕ್ಕೆ ಇಲ್ಲಿನ ಜನ ಬಲಿಯಾಗಿದ್ದಾರೆ, ಇಲ್ಲಿನ ಜನರ ಬದುಕು ಹರಿದು ಮೂರಾಬಟ್ಟೆಯಾಗಿದೆ ಎಂಬುದೂ ಎಷ್ಟು ಸತ್ಯವೋ, ಅಲ್ಲಿನ ಜನರ ಬದುಕಿನ ಕುರಿತು ದೇಶದ ಯಾವ ಭಾಗದ ಜನರಿಗೂ ಅಷ್ಟಾಗಿ ಆಸಕ್ತಿ ಇಲ್ಲ ಎಂಬುದು ಅದಕ್ಕಿಂತ ದೊಡ್ಡ ಸತ್ಯ.

ಭಾರತದ 21 ದಿನಗಳ ಲಾಕ್‌ಡೌನ್‌ ನೆಪದಲ್ಲಿ ಈಗಲೂ ನಾವು ಕಾಶ್ಮೀರದ ವ್ಯಥೆಯನ್ನು, ಕಪ್ಪು ಇತಿಹಾಸವನ್ನು, ಇಲ್ಲಿನ ಜನರ ಬದುಕಿನೊಳಗೆ ನುಸುಳಿ ಬದುಕನ್ನೇ ಹರಿದು ಹಾಕಿದ ಸ್ವಾರ್ಥ ರಾಜಕಾರಣದ ಕುರಿತು ಅವಲೋಕಿಸದಿದ್ದರೆ ಇನ್ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಶ್ಟೊ ಇಶ್ಟೋ ಪ್ಯಾಕೇಜ್ ಕರೋನಾ ಪ್ಯಾಕೇಜ್ ಸಾರಲಾಗಿದೆ.
    ಅಲ್ಲಿ!

LEAVE A REPLY

Please enter your comment!
Please enter your name here

- Advertisment -

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...

ಬಂಗಾಳ ಎಸ್‌ಐಆರ್‌: 5 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್; 60 ಲಕ್ಷಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್‌) ಪ್ರಕ್ರಿಯೆ ನಂತರ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ 5.46 ಲಕ್ಷ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಅನುಮಾನಾಸ್ಪದ ಎಂಬ ಕಾರಣಕ್ಕೆ 60,06,675 ಹೆಸರುಗಳು...

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com...

ವಯನಾಡ್ ಭೂಕುಸಿತ; ಪುನರ್ವಸತಿ ಕಾರ್ಯದಲ್ಲಿ ಸಂತ್ರಸ್ತರಿಗೆ 229 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರ್ಕಾರ, ಐಯುಎಂಎಲ್

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಸುಮಾರು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವು ಭಾನುವಾರ ಕಲ್ಪೆಟ್ಟಾದ ಪುನರ್ವಸತಿ ಪಟ್ಟಣದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ₹299...

ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ...

ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ

ಇಸ್ರೇಲ್ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯು ಟೆಹ್ರಾನ್‌ನ ಈಶಾನ್ಯ ನರ್ಮಕ್ ಜಿಲ್ಲೆಯಲ್ಲಿರುವ ಅಹ್ಮದಿನೆಜಾದ್...

ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ. ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್...

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ 'ಅಘೋಷಿತ ಯುದ್ದ'ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು. ಕಲಬುರಗಿ...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...